Connect with us

ದಿನದ ಸುದ್ದಿ

ಜಿಡಿಪಿ ಕುಸಿದಿದೆ, ನಿರುದ್ಯೋಗ 45 ವರ್ಷಗಳ ದಾಖಲೆ ಮುರಿದಿದೆ, ಇದು ಯಾವ ಟ್ರಿಲಿಯನ್ ಡಾಲರ್ ಆರ್ಥಿಕತೆ? : ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

Published

on

ಸುದ್ದಿದಿನ, ಬೆಂಗಳೂರು : 15ನೇ ಹಣಕಾಸು ಆಯೋಗದ ವರದಿಯ ಪ್ರಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ರೂ.8,887 ಕೋಟಿ ಮತ್ತು ಜಿ.ಎಸ್.ಟಿ ಪರಿಹಾರ ರೂ.3,000 ಕೋಟಿ ಕಡಿತವಾಗಿದೆ. ಒಟ್ಟು ರೂ.11,887 ಕೋಟಿ ಕೇಂದ್ರದಿಂದ ನಮಗೆ ಬರಬೇಕಾದ ಪಾಲು ಕಡಿಮೆಯಾದ ಮೇಲೆ ಬಜೆಟ್ ಗಾತ್ರವೂ ಕಡಿಮೆಯಾಗಬೇಕಿತ್ತಲ್ಲವೇ? ಏಕೆ ಕಡಿಮೆಯಾಗಿಲ್ಲ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಅವರು, ಸಂಬಳ, ಪಿಂಚಣಿ, ಬಡ್ಡಿ ಪಾವತಿ ಒಳಗೊಂಡ ರಾಜ್ಯದ ಕಮಿಟೆಡ್ ವೆಚ್ಚ ಈಗಾಗಲೇ 88% ಇದೆ, ಈ ಸಾಲಿನಲ್ಲಿ ರಾಜ್ಯದ ತೆರಿಗೆ ಸಂಗ್ರಹದಲ್ಲೂ ರೂ.5000 ಕೋಟಿ ಕೊರತೆಯಾಗುವ ನಿರೀಕ್ಷೆಯಿದೆ. ಹೀಗಾದರೆ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಎಲ್ಲಿದೆ? ಇದೇ ಕಾರಣಕ್ಕೆ ನಾನು ಈ ಸರ್ಕಾರಕ್ಕೆ ದಾರಿದ್ರ್ಯ ಹಿಡಿದಿದೆ ಅಂದದ್ದು. ರಾಜ್ಯದ ತೆರಿಗೆ ಪಾಲು ಈ ವರ್ಷ ರೂ.39,806 ಕೋಟಿ ಬರಬೇಕಿತ್ತು, ಪರಿಷ್ಕರಣೆಯ ನಂತರ ರೂ.30,919 ಕೋಟಿಗೆ ಇಳಿದಿದೆ. ಮುಂದಿನ ವರ್ಷ ರೂ.28,591 ಕೋಟಿ, 2021-22 ರಲ್ಲಿ ರೂ.31,164 ಕೋಟಿ, 2022-23 ರಲ್ಲಿ ರೂ.33,964 ಕೋಟಿ ಹಾಗೂ 2023-24 ರಲ್ಲಿ ರೂ.37,026 ಕೋಟಿ ಆಗಲಿದೆ. ಅಂದರೆ ನಮ್ಮ‌ ಈಗಿನ ಪಾಲಿಗಿಂತ ಕಡಿಮೆ ಎಂದರು.

14ನೇ ಹಣಕಾಸು ಆಯೋಗದ ವರದಿ ಪ್ರಕಾರ 4.7% ಇದ್ದ ರಾಜ್ಯದ ತೆರಿಗೆ ಪಾಲು, 15ನೇ ಹಣಕಾಸು ಆಯೋಗದ ವರದಿಯಂತೆ 3.64% ಗೆ ಇಳಿಕೆಯಾಗಿದೆ. ಆದರೆ ಬಿಹಾರ ರಾಜ್ಯ 10%, ಉತ್ತರ ಪ್ರದೇಶ 17% ರಂತೆ ನಮಗಿಂತ ಹೆಚ್ಚು ತೆರಿಗೆ ಪಾಲು ಪಡೆಯಲಿವೆ. ಸಮರ್ಪಕವಾಗಿ ಆರ್ಥಿಕ ನಿರ್ವಹಣೆ ಮಾಡುವ ನಮ್ಮ ರಾಜ್ಯಕ್ಕೆ ಯಾಕೆ ಈ ಬರೆ? ಜಿಎಸ್‌ಡಿಪಿ ಯ 25% ಗಿಂತ ಕಡಿಮೆ ಸಾಲ ಇರಬೇಕು ಎಂಬ ನಿಯಮವಿದೆ. 2021-22 ನೇ ಸಾಲಿನಿಂದ ಕೇಂದ್ರದಿಂದ ಬರುವ ಜಿ.ಎಸ್.ಟಿ ಪರಿಹಾರವೂ ಸ್ಥಗಿತವಾಗಲಿದೆ, ಇದರಿಂದ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಹೆಚ್ಚು ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಹೇಳಿದರು.

15ನೇ ಹಣಕಾಸು ಆಯೋಗ ನಮ್ಮ ರಾಜ್ಯಕ್ಕೆ ರೂ.5495 ಕೋಟಿ ವಿಶೇಷ ಅನುದಾನ ಶಿಫಾರಸು ಮಾಡಿತ್ತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆ ಶಿಫಾರಸ್ಸನ್ನು ತಿರಸ್ಕರಿಸಿದ್ದಾರೆ. ನಮ್ಮ ಪ್ರತಿನಿಧಿಯಾಗಿ ರಾಜ್ಯಸಭೆಯಲ್ಲಿ ಕೂತಿರುವ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಈ ರೀತಿ ಅನ್ಯಾಯ ಮಾಡಬಹುದೇ? ವಿಶೇಷ ಅನುದಾನ ರೂ.5495 ಕೋಟಿ ಸಿಕ್ಕಿದ್ದರೆ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಎಷ್ಟೊಂದು ನೆರವಾಗುತ್ತಿತ್ತಲ್ಲವೇ? ನಾನು ರಾಜಕೀಯ ಮಾತಾಡುತ್ತಿಲ್ಲ, ನನ್ನ ನೋವು ಹಂಚಿಕೊಳ್ಳುತ್ತಿದ್ದೇನೆ. ಈ ಅನ್ಯಾಯದ ವಿರುದ್ದ ಪ್ರತಿಭಟಿಸುವುದು ಬೇಡವೇ? ಎಂದು ಕಿಡಿಕಾರಿದರು.

15ನೇ ಹಣಕಾಸು ಆಯೋಗ, ತೆರಿಗೆ ಹಂಚಿಕೆ ಮತ್ತು ಜಿಎಸ್‌ಟಿ ಪರಿಹಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟಿಸುವುದು ಬೇಡವೇ? ಬಿಜೆಪಿಯ 25 ಎಂಪಿಗಳಿದ್ದೀರಿ, ದೆಹಲಿಗೆ ಹೋಗಿ ಪ್ರಧಾನಿ ಭೇಟಿ ಮಾಡಿ, ಆಗಿರುವ ಅನ್ಯಾಯ ಹೇಳಿ, ನ್ಯಾಯ ಕೇಳಿ. ಪ್ರಧಾನಿ ಜೊತೆ ಮಾತಾಡಲು ನಿಮಗೆ ಮುಜುಗರವಾದರೆ ನನ್ನನ್ನು ಕರ್ಕೊಂಡು ಹೋಗಿ, ನಾನು ಮಾತಾಡ್ತೇನೆ. ಸರ್ವಪಕ್ಷಗಳ ನಿಯೋಗ ಹೋಗೋಣ. ಹಣಕಾಸು ಆಯೋಗ ಒಂದು ವರ್ಷಕ್ಕೆ ಮಾತ್ರ ಶಿಫಾರಸು ಮಾಡಿದ್ದು. ಅನ್ಯಾಯ ಸರಿಪಡಿಸಲು ಇನ್ನೂ ಅವಕಾಶ ಇದೆ ಎಂದು ನುಡಿದರು.

ಆರ್ಥಿಕ ಕುಸಿತ, ಸಾಮಾಜಿಕ ಸಾಮರಸ್ಯದ ನಾಶ ಮತ್ತು ಕರೋನಾ ವೈರಸ್‌ನಿಂದಾಗಿ ದೇಶ ಕಷ್ಟಕ್ಕೆ ಸಿಲುಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿರುವುದು ಇಂದಿನ ದೇಶದ ದುಸ್ಥಿತಿಯ ಸರಿಯಾದ ವಿಶ್ಲೇಷಣೆ. ಪ್ರಧಾನಿ ಮೋದಿಯವರು ಮಾತೆತ್ತಿದರೆ 5 ಲಕ್ಷ ಕೋಟಿ ಡಾಲರ್ (5 ಟ್ರಿಲಿಯನ್ ಡಾಲರ್) ಆರ್ಥಿಕತೆ ಬಗ್ಗೆ ಮಾತಾಡುತ್ತಾರೆ. ಜಿಡಿಪಿ ಶೇಕಡಾ 4.5ಕ್ಕೆ ಕುಸಿದಿದೆ, ನಿರುದ್ಯೋಗ 45 ವರ್ಷಗಳ ದಾಖಲೆ ಮುರಿದಿದೆ, ಉದ್ಯಮಗಳು ಮುಚ್ಚುತ್ತಿವೆ, ಬ್ಯಾಂಕುಗಳು ದಿವಾಳಿಯಾಗುತ್ತಿವೆ. ಇದು ಯಾವ ಟ್ರಿಲಿಯನ್ ಡಾಲರ್ ಆರ್ಥಿಕತೆ?‌ಎಂದು ಪ್ರಶ್ನಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending