Connect with us

ರಾಜಕೀಯ

ಅತೃಪ್ತ ಶಾಸಕರಿಗೆ ಬುದ್ಧಿಮಾತು ಹೇಳಿದ ಸಿದ್ದು

Published

on

ಸುದ್ದಿದಿನ,ಬಾದಾಮಿ : ಕಾಂಗ್ರೆಸ್ ಪಕ್ಷದ ಬಗ್ಗೆ ಹೈಕಮಾಂಡ್ ತೆಗೆದುಕೊಳ್ಳಬಹುದಾತಂಹ ನಿರ್ಧಾರಗಳಿಗೆ ನಮಗೆಲ್ಲ ಒಮ್ಮತವಿದ್ದು, ಪಕ್ಷದೊಳಗಿನ ವಿಚಾರಗಳನ್ನು ಬಹಿರಂಗವಾಗಿ ಚರ್ಚಿಸುವ ಗೋಜಿಗೆ ಹೋಗುವುದಿಲ್ಲ. ಹಾಗೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಯಾರ ಹೆಸರನ್ನೂ ಸೂಚಿಸಿರುವುದಿಲ್ಲ. ಈ ಬಗ್ಗೆ ಎಐಸಿಸಿಯು ಯಾವ ರೀತಿ ಹೇಳುತ್ತದೆಯೋ ಹಾಗೆ ನಡೆದುಕೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಬಾದಾಮಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಮಾತನಾಡಿದ ಅವರು, ಸಧ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಸ್ಥಾನ ಸೃಷ್ಟಿಸಲು ಯಾವ ಚರ್ಚೆಗಳೂ ನಡೆದಿಲ್ಲ. ಆದರೆ ಇದರ ಬಗ್ಗೆ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿಯವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಅತೃಪ್ತ ಶಾಸಕರ ಮನವೊಲಿಸಲು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರು ಮಾತನಾಡಿದ್ದಾರೆ. ನಾನೂ ಕೆಲ ಶಾಸಕರೊಂದಿಗೆ ಈ ವಿಚಾರವಾಗಿ ಚರ್ಚಿಸಿದ್ದೇನೆ. ಶಾಸಕ ಎಂ.ಬಿ.ಪಾಟೀಲ್ ಜತೆಗೆ ಸ್ವತಃ ರಾಹುಲ್ ಗಾಂಧಿಯವರೇ ಮಾತನಾಡಿದ್ದು, ಅಸಾಮಾಧಾನ ಹೊಂದಿರುವ ಶಾಸಕರಿಗೆ ಸಮಾಧಾನ ಪಡಿಸಿದ್ದಾರೆಯೇ ವಿನಃ, ಭರವಸೆಯ ಮಾತುಗಳನ್ನಾಡಿರುವುದಿಲ್ಲ.

ಸಂದರ್ಭಕ್ಕೆ ತಕ್ಕಂತೆ ಪಕ್ಷ ಕೈಗೊಂಡಿರುವ ನಿರ್ಧಾರವನ್ನು ಎಲ್ಲರೂ ಒಪ್ಪಬೇಕಾಗುತ್ತದೆ. ರಾಜಕೀಯ ಪರಿಸ್ಥಿತಿಯ ಆಳ ಅಗಲ ನೋಡಿಕೊಂಡೇ ಹೈಕಮಾಂಡ್ ನಿರ್ಧಾರ ಮಾಡಿರುತ್ತದೆ. ಅದೆಲ್ಲವನ್ನೂ ನಾವು ಪಕ್ಷದ ನಿಷ್ಠಾವಂತನಾಯಕರಾಗಿ ಕೆಲಸ ಮಾಡಬೇಕಾಗುತ್ತದೆ ಎಂದು ಅತೃಪ್ತ ಶಾಸಕರಿಗೆ ಪರೋಕ್ಷವಾಗಿ ಬುದ್ಧಿಮಾತು ಹೇಳಿದರು.

ಪ್ರಸ್ತುತ ಸಂದರ್ಭವನ್ನಿರಿತು ಪಕ್ಷದ ನಿರ್ಧಾರವನ್ನು ಎಲ್ಲರೂ ಗೌರವಿಸ ಬೇಕು. ಈಗಿನ ರಾಜಕೀಯ ಸ್ಥಿತಿಗತಿಗಳನ್ನು ಅರಿತುಕೊಂಡೇ ಹೈಕಮಾಂಡ್ ನಿರ್ಧಾರ ತೆಗೆದುಕೊಂಡಿದ್ದು, ನಾವೆಲ್ಲರೂ ಪಕ್ಷದ ಮುಂದಿನ ಬೆಳವಣಿಗೆಯ ಬಗೆಗೆ ಕೆಲಸ ಮಾಡಬೇಕಿದೆ ಎಂದು ಅತೃಪ್ತ ಶಾಸಕರಿಗೆ ಬುದ್ಧಿಮಾತು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

Published

on

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.

ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿ ವಿವಿಧ ತಾಲ್ಲೂಕುಗಳಲ್ಲಿನ ಕಾಮಗಾರಿಯ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ನವಂಬರ್ 15 ರಂದು ಆಯೋಜಿಸಲಾಗಿದೆ.

ಶಿಬಿರ ನಡೆಯುವ ಸ್ಥಳಗಳು

ಚನ್ನಗಿರಿ ತಾಲ್ಲೂಕು – ದಾಗಿನಕಟ್ಟೆ ಗ್ರಾಮ ಪಂಚಾಯಿತಿ, ದಾವಣಗೆರೆ ತಾಲ್ಲೂಕು – ಕಾಡಜ್ಜಿ ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕು – ಕಡರನಾಯಕನಹಳ್ಳಿ ಗ್ರಾಮ ಪಂಚಾಯಿತಿ, ಹೊನ್ನಾಳಿ ತಾಲ್ಲೂಕು – ತಿಮ್ಲಾಪುರ ಗ್ರಾಮ ಪಂಚಾಯಿತಿ, ಜಗಳೂರು ತಾಲ್ಲೂಕು – ತೋರಣಗಟ್ಟೆ ಗ್ರಾಮ ಪಂಚಾಯಿತಿ, ನ್ಯಾಮತಿ ತಾಲ್ಲೂಕು – ಕುಂಕೋವಾ ಗ್ರಾಮ ಪಂಚಾಯಿತಿ.

ತಪಾಸಣೆಯ ಅಂಶಗಳು

ರಕ್ತದ ಒತ್ತಡ, ರಕ್ತದಲ್ಲಿನ ಸಕ್ಕರೆ, ಕ್ಷಯರೋಗ, ಪರೀಕ್ಷೆ, ಕುಷ್ಟರೋಗ ಪರೀಕ್ಷೆ, ಜ್ವರದ ಪ್ರಕರಣಗಳಲ್ಲಿ ರಕ್ತದ ಮಾದರಿ ಸಂಗ್ರಹ ಹಾಗೂ ಅಗತ್ಯವಿದ್ದರೆ ಇತರೆ ತಪಾಸಣೆಗಳನ್ನೂ ನಡೆಸಲಾಗುತ್ತದೆ. ಈ ಶಿಬಿರಗಳ ಮೂಲಕ ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯನ್ನು ಬಲಪಡಿಸುವ ಜೊತೆಗೆ, ಸಮಯೋಚಿತ ವೈದ್ಯಕೀಯ ನೆರವು ಮತ್ತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿದು ಜೀವನ ಸಾಗಿಸುತ್ತಿರುವ ಕೂಲಿಕಾರರ ಆರೋಗ್ಯ ನಮ್ಮ ಪ್ರಮುಖ ಆದ್ಯತೆ. ಶ್ರಮದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಈ ಶ್ರಮಜೀವಿಗಳ ದೈಹಿಕ ಕ್ಷೇಮತೆ ಖಚಿತಪಡಿಸಿಕೊಳ್ಳುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿರುತ್ತದೆ.

ಈ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯ ಪ್ರತೀಕವಾಗಿದೆ. ಈ ಶಿಬಿರಗಳ ಮೂಲಕ ಪ್ರತಿ ಕೆಲಸಗಾರರು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆಯಬೇಕು, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಅಗತ್ಯ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲ ಇಲಾಖಾ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಪಂಚಾಯತ್ ನೌಕರರು ಈ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಬೇಕೆಂದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ಗಿರೀಶ್ ಕುಮಾರ್.ಜಿ ಅವರಿಗೆ ಪಿಎಚ್.ಡಿ ಪದವಿ

ಬಳ್ಳಾರಿ/ ವಿಜಯನಗರ:ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್...

ದಿನದ ಸುದ್ದಿ5 hours ago

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ...

ದಿನದ ಸುದ್ದಿ7 hours ago

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ...

ದಿನದ ಸುದ್ದಿ7 hours ago

ಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ...

ದಿನದ ಸುದ್ದಿ8 hours ago

ದಾವಣಗೆರೆ | ಇಂದಿನಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಸುದ್ದಿದಿನ,ದಾವಣಗೆರೆ: ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು...

ದಿನದ ಸುದ್ದಿ9 hours ago

ಯುವನಿಧಿ ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ

ಸುದ್ದಿದಿನ,ದಾವಣಗೆರೆ:ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ...

ದಿನದ ಸುದ್ದಿ1 day ago

ಜಿಲ್ಲಾ ಯೋಜನಾ ಸಮಿತಿ ಚುನಾವಣೆ ವೇಳಾಪಟ್ಟಿ ಪ್ರಕಟ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳ ಮೇರೆಗೆ ಪುರಸಭಾ, ಪಟ್ಟಣ ಪಂಚಾಯಿತಿ ಮತ ಕ್ಷೇತ್ರದಿಂದ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ...

ದಿನದ ಸುದ್ದಿ1 day ago

ಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ

ಸುದ್ದಿದಿನ,ದಾವಣಗೆರೆ: ಜಿಲ್ಲಾ ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ್ ಅವರನ್ನು ಬೇರೆ ಜಿಲ್ಲೆಗೆ ವರ್ಗಾಹಿಸುವಂತೆ ಸಿ.ಎಂ. ಸಿದ್ಧರಾಮಯ್ಯ ಆದೇಶ ನೀಡಿದ್ದರೂ, ಅಧಿಕಾರಿಗಳು ವರ್ಗಾಹಿಸದ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ದಿನದ ಸುದ್ದಿ1 day ago

ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸುದ್ದಿದಿನ,ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇಲ್ಲಿ 2014-15ನೇ ಸಾಲಿನಿಂದ 2024-25ನೇ ಸಾಲಿನ ಅವಧಿಯಲ್ಲಿ ಸಂಗ್ರಹಿಸಿರುವ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯನ್ನು ನಿಯಮಾನುಸಾರ ಬಳಸದೆ ವಂಚಿಸಿರುವ 8...

ದಿನದ ಸುದ್ದಿ1 day ago

ಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು

ಸುದ್ದಿದಿನ,ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನುಬಾಹಿರವಾಗಿ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿಯಾಗಿರುವ ಪ್ರಾಂಶುಪಾಲ ಡಾ.ರವಿ ಎಸ್.ಪಿ...

Trending