ದಿನದ ಸುದ್ದಿ
ಶಾಸಕರಿಗೆ ಖರೀದಿಗೆ ಹಣವಿದೆ,ಸಂತ್ರಸ್ತರ ನೆರವಿಗೆ ಹಣವಿಲ್ಲ : ಯಡಿಯೂರಪ್ಪ ಗೆ ಸಿದ್ದರಾಮಯ್ಯ ಟಾಂಗ್
ಸುದ್ದಿದಿನ,ಬೆಂಗಳೂರು: ಸಂತ್ರಸ್ತರ ಪರಿಹಾರಕ್ಕೆ ಹಣ ನೀಡಲು ನೋಟ್ ಪ್ರಿಂಟಿಂಗ್ ಮೆಷಿನ್ ಇಲ್ಲ ಎನ್ನುವ ಮುಖ್ಯಮಂತ್ರಿಗಳಿಗೆ, ಅತೃಪ್ತ ಶಾಸಕರಿಗೆ ಕೊಡಲು ಅಕ್ಷಯಪಾತ್ರೆ ಫಂಡ್ ಇದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ. 8-10 ದಿನ ಸಮಯ ತೆಗೆದುಕೊಂಡು, ನಿಖರ ವರದಿ ನೀಡಿ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಶಿವಮೊಗ್ಗದಲ್ಲಿ ಕೃಷಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ಈ ಕುರಿತು ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪರಿಪೂರ್ಣ ಸ್ವಾತಂತ್ರ್ಯ ಎಂದರೆ ಕೇವಲ ರಾಜಕೀಯ ಸ್ವಾತಂತ್ರ್ಯ ಅಲ್ಲ.
ಸಾಮಾಜಿಕ ಸಮಾನತೆ, ಸಂಪತ್ತಿನ ಸಮಾನ ಹಂಚಿಕೆ, ಜಾತೀಯತೆ ನಿರ್ಮೂಲನೆ, ಕೋಮುವಾದ ಮತ್ತು ಧಾರ್ಮಿಕ ಅಸಹಿಷ್ಣುತೆಯ ಅಂತ್ಯವಷ್ಟೆ ನಿಜ ಸ್ವಾತಂತ್ರ್ಯ.ನಾಡ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.#IndependenceDayIndia
— Siddaramaiah (@siddaramaiah) August 15, 2019
ಸುದ್ದಿದಿನ. ಕಾಂ|ವಾಟ್ಸಾಪ್|9980346243