Connect with us

ದಿನದ ಸುದ್ದಿ

ಬೊಮ್ಮಾಯಿ ಅವರೇ,ಮುಕ್ತ ಚರ್ಚೆಗೆ ನಾನು ಸಿದ್ಧ ; ನೀವು ಖರೀದಿಸಿರುವ ‘’ಟ್ರೋಲ್ ಗ್ಯಾಂಗ್’’ ಮೂಲಕ ಉತ್ತರ ಕೊಡಿಸಲು ಹೋಗಬೇಡಿ : ಸಿದ್ದರಾಮಯ್ಯ ಸವಾಲು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ, ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ.

ಬೇಗ “ಘರ್ ವಾಪಸಿ”’ ಆಗಿಬಿಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಹರೂ ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧ ಇದ್ದರೆ ನಾನೂ ಸಿದ್ಧನಿದ್ದೇನೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ‘’ಟ್ರೋಲ್ ಗ್ಯಾಂಗ್’’ ಮೂಲಕ ಉತ್ತರ ಕೊಡಿಸಲು ಹೋಗಬೇಡಿ.
‘’ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದಿ ಬಿದ್ದಿದೆ’’ -ಹೀಗೆಂದು ನೆಹರೂ ಸಾವಿಗೆ ಎ.ಬಿ.ವಾಜಪೇಯಿ ಕಂಬನಿ ಮಿಡಿದಿದ್ದನ್ನು ಹಿರಿಯ ಬಿಜೆಪಿ ನಾಯಕರಿಂದ ಕೇಳಿ ತಿಳಿದುಕೊಳ್ಳಿ ಎಂದು ಸಲಹೆ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

‘ದೇಶ ವಿಭಜನೆಯ ಗಾಯಕ್ಕೆ ಸೌಹಾರ್ದತೆಯ ಮುಲಾಮು ಹಚ್ಚಿದವರು ಜವಾಹರಲಾಲ ನೆಹರೂ. ಒಣಗಿದ ಗಾಯಗಳನ್ನು ಕೋಮುದ್ವೇಷದ ಮೂಲಕ ಕೆದಕುತ್ತಾ ಸಾಮಾಜಿಕ ಆರೋಗ್ಯವನ್ನು ಕೆಡಿಸುತ್ತಿರುವವರು ನಿಮ್ಮ ನರೇಂದ್ರ ಮೋದಿ ಅವರು. ಭಾಕ್ರಾ ನಂಗಲ್, ಹಿರಾಕುಡ್, ದಾಮೋದರ ಕಣಿವೆ ಯೋಜನೆಗಳ ಮೂಲಕ ಭಾರತವೆಂಬ ಆಧುನಿಕ ದೇವಾಲಯವನ್ನು ನಿರ್ಮಾಣ ಮಾಡಿದ್ದ ಜವಾಹರಲಾಲ ನೆಹರೂ ಅಭಿವೃದ್ದಿಯ ಮುನ್ನೋಟದಿಂದ ದೇಶ ಕಟ್ಟಿದ್ದರು. ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ ನರೇಂದ್ರ ಮೋದಿ ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌

ಎಸ್.ಬಿ.ಐ, ಎಲ್.ಐ.ಸಿ ಯಿಂದ ಹಿಡಿದು ಭಾರತೀಯ ತೈಲ ನಿಗಮ, ಏರ್ ಇಂಡಿಯಾದ ವರೆಗೆ ನೂರಾರು ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದವರು ಪಂಡಿತ ಜವಾಹರಲಾಲ ನೆಹರೂ. ಅದನ್ನು ಮಾರಾಟಕ್ಕಿಟ್ಟವರು ಯಾರೆಂದು ಬಿಡಿಸಿ ಹೇಳಬೇಕೇ?
ಉಕ್ಕಿನ ಕಾರ್ಖಾನೆ, ರೈಲ್ವೆ ಎಂಜಿನ್-ಕೋಚ್ ನಿರ್ಮಾಣ ಘಟಕಗಳು, ಯುದ್ಧ ವಿಮಾನ-ಟ್ಯಾಂಕ್ ಗಳು, ಉಷ್ಣವಿದ್ಯುತ್ ಉತ್ಪಾದನಾ ಸಲಕರಣೆಗಳು ಹೀಗೆ ಸರ್ಕಾರಿ ಸ್ವಾಮ್ಯದಲ್ಲಿ ಸಾಲು ಸಾಲು ಉದ್ಯಮಗಳನ್ನು ಕಟ್ಟಿ ಬೆಳೆಸಿದ್ದವರು ಜವಾಹರಲಾಲ ನೆಹರೂ. ಮೋದಿಯವರು ಕಟ್ಟಿದೆಷ್ಟು, ಕೆಡವಿದೆಷ್ಟು?

ಆಧುನಿಕ ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಮೂಲಕ ಸಂವಿಧಾನದ ಆಶಯವಾದ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶ್ರಮಿಸಿದವರು ಪಂಡಿತ ನೆಹರೂ. ಪ್ಲಾಸ್ಟಿಕ್ ಸರ್ಜರಿ, ಚರಂಡಿ ನೀರಿನಿಂದ ಗ್ಯಾಸ್, ಪೆನ್ ಡ್ರೈವ್ ಗಳ ಹೇಳಿಕೆಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ನಗೆಪಾಟಲಿಗೀಡಾದವರು ಯಾರೆಂದು ನಿಮಗೆ ಗೊತ್ತಿಲ್ಲವೇ?

ಬೊಮ್ಮಾಯಿವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ. ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ?
ಭಾರತ ಚೀನಾ ಗಡಿಯನ್ನು ಆ ದೇಶದ ಬೇಡಿಕೆಯಂತೆ 1959ರ ಗಡಿರೇಖೆಗೆ ಒಪ್ಪಿಕೊಂಡು ರಾಜಿ ಮಾಡಿಕೊಂಡಿದ್ದು ಇತ್ತೀಚಿನ ಇತಿಹಾಸ. ಗಾಲ್ವಾನ್ ಕಣಿವೆಯಲ್ಲಿ ನಮ್ಮ ಸೈನಿಕರನ್ನು ಲಾಠಿ, ದೊಣ್ಣೆಗಳಿಂದ ಕಾದಾಡುವಂತೆ ಮಾಡಿದ್ದನ್ನು ಕೂಡಾ ದೇಶದ ಜನ ಮರೆತಿಲ್ಲ.

ಪಾಕಿಸ್ಥಾನ ಎಂಬ ದುರ್ಬಲ ದೇಶದ ಎದುರು ವೀರಾವೇಶ ಮೆರೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ಪಾಕಿಸ್ಥಾನಕ್ಕಿಂತ ದೊಡ್ಡ ಶತ್ರುವಾದ ಚೀನಾದ ಹೆಸರನ್ನು ಉಚ್ಚರಿಸಲು ಕೂಡಾ ಅಂಜುವುದು ಯಾಕೆ ಎಂದು ಹೇಳಬಲ್ಲಿರಾ ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending