Connect with us

ದಿನದ ಸುದ್ದಿ

ಬೊಮ್ಮಾಯಿ ಅವರೇ,ಮುಕ್ತ ಚರ್ಚೆಗೆ ನಾನು ಸಿದ್ಧ ; ನೀವು ಖರೀದಿಸಿರುವ ‘’ಟ್ರೋಲ್ ಗ್ಯಾಂಗ್’’ ಮೂಲಕ ಉತ್ತರ ಕೊಡಿಸಲು ಹೋಗಬೇಡಿ : ಸಿದ್ದರಾಮಯ್ಯ ಸವಾಲು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಬಸವರಾಜ ಬೊಮ್ಮಾಯಿಯವರೇ, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ, ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ.

ಬೇಗ “ಘರ್ ವಾಪಸಿ”’ ಆಗಿಬಿಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಹರೂ ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧ ಇದ್ದರೆ ನಾನೂ ಸಿದ್ಧನಿದ್ದೇನೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ‘’ಟ್ರೋಲ್ ಗ್ಯಾಂಗ್’’ ಮೂಲಕ ಉತ್ತರ ಕೊಡಿಸಲು ಹೋಗಬೇಡಿ.
‘’ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದಿ ಬಿದ್ದಿದೆ’’ -ಹೀಗೆಂದು ನೆಹರೂ ಸಾವಿಗೆ ಎ.ಬಿ.ವಾಜಪೇಯಿ ಕಂಬನಿ ಮಿಡಿದಿದ್ದನ್ನು ಹಿರಿಯ ಬಿಜೆಪಿ ನಾಯಕರಿಂದ ಕೇಳಿ ತಿಳಿದುಕೊಳ್ಳಿ ಎಂದು ಸಲಹೆ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದಾರೆ.

‘ದೇಶ ವಿಭಜನೆಯ ಗಾಯಕ್ಕೆ ಸೌಹಾರ್ದತೆಯ ಮುಲಾಮು ಹಚ್ಚಿದವರು ಜವಾಹರಲಾಲ ನೆಹರೂ. ಒಣಗಿದ ಗಾಯಗಳನ್ನು ಕೋಮುದ್ವೇಷದ ಮೂಲಕ ಕೆದಕುತ್ತಾ ಸಾಮಾಜಿಕ ಆರೋಗ್ಯವನ್ನು ಕೆಡಿಸುತ್ತಿರುವವರು ನಿಮ್ಮ ನರೇಂದ್ರ ಮೋದಿ ಅವರು. ಭಾಕ್ರಾ ನಂಗಲ್, ಹಿರಾಕುಡ್, ದಾಮೋದರ ಕಣಿವೆ ಯೋಜನೆಗಳ ಮೂಲಕ ಭಾರತವೆಂಬ ಆಧುನಿಕ ದೇವಾಲಯವನ್ನು ನಿರ್ಮಾಣ ಮಾಡಿದ್ದ ಜವಾಹರಲಾಲ ನೆಹರೂ ಅಭಿವೃದ್ದಿಯ ಮುನ್ನೋಟದಿಂದ ದೇಶ ಕಟ್ಟಿದ್ದರು. ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ ನರೇಂದ್ರ ಮೋದಿ ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ‌

ಎಸ್.ಬಿ.ಐ, ಎಲ್.ಐ.ಸಿ ಯಿಂದ ಹಿಡಿದು ಭಾರತೀಯ ತೈಲ ನಿಗಮ, ಏರ್ ಇಂಡಿಯಾದ ವರೆಗೆ ನೂರಾರು ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದವರು ಪಂಡಿತ ಜವಾಹರಲಾಲ ನೆಹರೂ. ಅದನ್ನು ಮಾರಾಟಕ್ಕಿಟ್ಟವರು ಯಾರೆಂದು ಬಿಡಿಸಿ ಹೇಳಬೇಕೇ?
ಉಕ್ಕಿನ ಕಾರ್ಖಾನೆ, ರೈಲ್ವೆ ಎಂಜಿನ್-ಕೋಚ್ ನಿರ್ಮಾಣ ಘಟಕಗಳು, ಯುದ್ಧ ವಿಮಾನ-ಟ್ಯಾಂಕ್ ಗಳು, ಉಷ್ಣವಿದ್ಯುತ್ ಉತ್ಪಾದನಾ ಸಲಕರಣೆಗಳು ಹೀಗೆ ಸರ್ಕಾರಿ ಸ್ವಾಮ್ಯದಲ್ಲಿ ಸಾಲು ಸಾಲು ಉದ್ಯಮಗಳನ್ನು ಕಟ್ಟಿ ಬೆಳೆಸಿದ್ದವರು ಜವಾಹರಲಾಲ ನೆಹರೂ. ಮೋದಿಯವರು ಕಟ್ಟಿದೆಷ್ಟು, ಕೆಡವಿದೆಷ್ಟು?

ಆಧುನಿಕ ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಮೂಲಕ ಸಂವಿಧಾನದ ಆಶಯವಾದ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶ್ರಮಿಸಿದವರು ಪಂಡಿತ ನೆಹರೂ. ಪ್ಲಾಸ್ಟಿಕ್ ಸರ್ಜರಿ, ಚರಂಡಿ ನೀರಿನಿಂದ ಗ್ಯಾಸ್, ಪೆನ್ ಡ್ರೈವ್ ಗಳ ಹೇಳಿಕೆಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ನಗೆಪಾಟಲಿಗೀಡಾದವರು ಯಾರೆಂದು ನಿಮಗೆ ಗೊತ್ತಿಲ್ಲವೇ?

ಬೊಮ್ಮಾಯಿವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ. ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ?
ಭಾರತ ಚೀನಾ ಗಡಿಯನ್ನು ಆ ದೇಶದ ಬೇಡಿಕೆಯಂತೆ 1959ರ ಗಡಿರೇಖೆಗೆ ಒಪ್ಪಿಕೊಂಡು ರಾಜಿ ಮಾಡಿಕೊಂಡಿದ್ದು ಇತ್ತೀಚಿನ ಇತಿಹಾಸ. ಗಾಲ್ವಾನ್ ಕಣಿವೆಯಲ್ಲಿ ನಮ್ಮ ಸೈನಿಕರನ್ನು ಲಾಠಿ, ದೊಣ್ಣೆಗಳಿಂದ ಕಾದಾಡುವಂತೆ ಮಾಡಿದ್ದನ್ನು ಕೂಡಾ ದೇಶದ ಜನ ಮರೆತಿಲ್ಲ.

ಪಾಕಿಸ್ಥಾನ ಎಂಬ ದುರ್ಬಲ ದೇಶದ ಎದುರು ವೀರಾವೇಶ ಮೆರೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು, ಪಾಕಿಸ್ಥಾನಕ್ಕಿಂತ ದೊಡ್ಡ ಶತ್ರುವಾದ ಚೀನಾದ ಹೆಸರನ್ನು ಉಚ್ಚರಿಸಲು ಕೂಡಾ ಅಂಜುವುದು ಯಾಕೆ ಎಂದು ಹೇಳಬಲ್ಲಿರಾ ಬೊಮ್ಮಾಯಿ ಅವರೇ? ಎಂದು ಪ್ರಶ್ನಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending