ದಿನದ ಸುದ್ದಿ
ಸಿದ್ದಾರ್ಥ್ ಮೃತದೇಹ ಪತ್ತೆ
ಸುದ್ದಿದಿನ, ಮಂಗಳೂರು : ನೇತ್ರಾವತಿ ಸೇತುವೆಯ ಬಳಿಯಿಂದ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರತಿಷ್ಠಿತ ಕಾಫಿಡೇ ಸಂಸ್ಥೆಯ ಮಾಲೀಕ ಹಾಗೂ ಎಸ್.ಎಂ.ಕೃಷ್ಣ ಅವರ ಅಳಿಯ ಸಿದ್ದಾರ್ಥ ಅವರ ಮೃತದೇಹ ಪತ್ತೆಯಾಗಿದೆ.
ಸೋಮವಾರ ರಾತ್ರಿ ಸಿದ್ದಾರ್ಥ್ ನಾಪತ್ತೆಯಾಗಿದ್ದರು. ಸತತ 36 ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ ಬಳಿಕ ಬುಧವಾರ ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್ ಮಂಜುಗಡ್ಡೆ ಸ್ಥಾವರದ ಬಳಿ ಮೃತದೇಹ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಪೊಲೀಸರು ಮತ್ತು ಎನ್ಡಿಆರ್ಎಫ್ ಪಡೆ ಶೋಧಕಾರ್ಯಾಚರಣೆಯನ್ನು ಆರಂಭಿಸಿದ್ದವು.
ಸುದ್ದಿದಿನ.ಕಾಂ|ವಾಟ್ಸಾಪ್|9980346243