ದಿನದ ಸುದ್ದಿ
ಜಗಳೂರು | ಸಿಡಿಲು ಬಡಿದು ಇಬ್ಬರು ರೈತರು ಸಾವು
ಸುದ್ದಿದಿನ, ದಾವಣಗೆರೆ : ಸಿಡಿಲು ಬಡಿದು, ಇಬ್ಬರು ರೈತರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ನಿನ್ನೆ ಸಂಜೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆಬಂದ ಕಾರಣ ರಕ್ಷಣೆ ಪಡೆಯಲು ಮರದ ಕೆಳಗೆ ನಿಂತಿದ್ದಾಗ ಈ ದುರಂತ ಸಂಭವಿಸಿದೆ. ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಜಿಲ್ಲಾಡಳಿತ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243