ದಿನದ ಸುದ್ದಿ
ಸಿಲ್ವರ್ ಸ್ಟಾರ್ ಇಂಡಿಯಾ ಪ್ರೆಸೆಂಟ್ಸ್ ಮಿಸ್ಟರ್ ಅಂಡ್ ಮಿಸ್ ಇಂಡಿಯಾ ಸೂಪರ್ ಮಾಡೆಲ್-2019 ಸೀಸನ್-8
![](https://suddidina.com/wp-content/uploads/2019/01/Fashion-show-suddidina6.jpg)
ಸುದ್ದಿದಿನ, ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಸಿಲ್ವರ್ ಸ್ಟಾರ್ ಇಂಡಿಯಾ ಪ್ರತಿ ವರ್ಷವೂ ಫ್ಯಾಷನ್ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದೆ. ಈ ಬಾರಿಯೂ ನವಯುಗದ 2019ರ ಮೊದಲನೇ ಬೆಂಗಳೂರಿನ ಫ್ಯಾಷನ್ ಶೋ ಇದಾಗಿದ್ದೂ ಇದರಲ್ಲಿ 16 ಯುವತಿಯರು 13 ಯುವಕರು ಸ್ಪರ್ಧಿಯಾಗಿದ್ದಾರೆ.
ಈ 29ರಲ್ಲಿ ಸ್ಪರ್ಧಿಗಳಲ್ಲಿ ಯುವತಿಯರ ತಂಡದಿಂದ 3 ಹಾಗೂ ಯುವಕರ ತಂಡದಿಂದ 3 ಸೂಪರ್ ಮಾಡೆಲ್ಗಳು ತಮ್ಮ ಮುಡಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರ ಜೊತೆ ಸ್ಯಾಂಡಲ್ವುಡ್ನ ಹೆಸರಾಂತ ನಾಯಕ ಹಾಗೂ ನಾಯಕಿಯರು ಪಾಲ್ಗೊಂಡಿದ್ದರು.
ಪಾಲ್ಗೊಂಡಿದ್ದ ಚಲನಚಿತ್ರರಂಗದ ನಟ ನಟಿಯರಿವರು : ನಟ ಯಶಸ್ ಸೂರ್ಯ, ನಟಿ ಸಾಕ್ಷಿ, ನಟ ಸಂಚಾರಿ ವಿಜಯ್, ನಟ ಧನು ಗೌಡ, ನಟಿ ನಿಮಿಕಾ ರತ್ನಾಕರ್, ಶುಭಾ ರಕ್ಷಾ, ನಿರ್ದೇಶಕಿ ರಿಶಿಕಾ ಶರ್ಮ, ನಟ ನಿಹಾಲ್ , ಕಲಾವಿದ ರವಿ ರೆಡ್ಡಿ ಹಾಗೂ ರಾಣಿ ರಿಯಾ, ಸೇರಿದಂತೆ ಮುಂತಾದವರು ಭಾಗವಹಿಸಿದರು.
ಈ ಬಾರಿಯ ಫ್ಯಾಷನ್ ಶೋ ಗೋಕುಲ ಎಕ್ಸ್ಟೆಕ್ಷನ್ನಲ್ಲಿರುವ ಗೋಕುಲ ಗ್ರ್ಯಾಂಡ್ ಹೋಟೆಲ್ ಮತ್ತಿಕೆರೆ(ಯಶವಂತಪುರ) ಆಯೋಜಿಸಲಾಗಿತ್ತು. ಸಂಜೆ 6 ಗಂಟೆಯಿಂದ ಪ್ರಾರಂಭವಾದ ಫ್ಯಾಷನ್ ಶೋ ಅದ್ಧೂರಿಯಾಗಿ ಮೆರಗು ಮೂಡಿತ್ತು. ಇದರ ಬಗ್ಗೆ ಮಾತನಾಡಿದ ಆಯೋಜಕ ರವಿ “ಸತತವಾಗಿ ಹತ್ತು ವರ್ಷಗಳಿಂದ ಸಿಲ್ವರ್ ಸ್ಟಾರ್ಸ್ ಸಂಸ್ಥೆಯೂ ಚಿತ್ರರಂಗಕ್ಕೆ ಹಾಗೂ ಫ್ಯಾಷನ್ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. 2019ರ ಮೊದಲ ಫ್ಯಾಷನ್ ಶೋ ಇದಾಗಿದ್ದೂ, ವರ್ಷಾಂತ್ಯದ ಒಳಗೆ ನಾಲ್ಕಕ್ಕೂ ಅಧಿಕ ಫ್ಯಾಷನ್ ಶೋಗಳನ್ನು ಆಯೋಜಿಸಲಿದ್ದೇವೆ ನಮ್ಮಲ್ಲಿ ಗೆದ್ದಂತಹ ಮಾಡೆಲ್ಗಳಿಗೆ ಸಿನಿಮಾ ಮಾಡುವ ಯೋಜನೆಯನ್ನು ಹೊಂದಿದ್ದೇವೆ.
ಯುವತಿಯರು
ವಿನ್ನರ್: ಅಸ್ಮಿತಾ ಸಿಂಗ್-ಮಿಸ್ ಇಂಡಿಯಾ ಸೂಪರ್ ಮಾಡೆಲ್-2019 ಆಗಿ ಕಿರೀಟವನ್ನು ಮುಡಿಗೇರಿಸಿಕೊಂಡರು.
ರಿಮ್ಜಿಂಮ್ ಗುಪ್ತ- ಫಸ್ಟ್ ರನ್ನರ್ ಅಪ್
ಸಪ್ನ ಸಿಂಗ್ -ಸೆಕೆಂಡ್ ರನ್ನರ್ ಅಪ್
ಯುವಕರು
ಜಗದೀಶ್-ಮಿಸ್ಟರ್ ಇಂಡಿಯಾ ಸೂಪರ್ ಮಾಡೆಲ್-2019 ಆಗಿ ಕಿರೀಟವನ್ನು ಮುಡಿಗೇರಿಸಿಕೊಂಡರು.
ಅಭಿಷೇಕ್ -ಫಸ್ಟ್ ರನ್ನರ್ ಅಪ್
ವಿಕ್ರಮ್-ಸೆಕೆಂಡ್ ರನ್ನರ್ ಅಪ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9035313303
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!