Connect with us

ದಿನದ ಸುದ್ದಿ

ಮರಿ ಕೋಗಿಲೆ ‘ಜೀವಿತಾ’ಳ ಕುಹೂ ಕುಹೂ!

Published

on

ಹಾಡು ಎಂದ ಕೂಡಲೇ ಹಾಡದು ಯಾವ ಕೋಗಿಲೆ” ಅಂತ ನಾದ ಬ್ರಹ್ಮ ಹಂಸಲೇಖ ಹೇಳ್ತಾರೆ. ಆದರೆ ಈ ಮರಿ ಕೋಗಿಲೆಯೊಂದು ಹಾಡು ಎಂದರೆ ಸಾಕು ಪರಮೋತ್ಸಾಹದೊಂದಿಗೆ ಒಂದರ ಮೇಲೊಂದರಂತೆ ಹಾಡಲು ಶುರು ಮಾಡುತ್ತೆ. ಹಾಡು ಕೇಳಿದವರಂತೂ ‘ನಿಲ್ಲಿಸು’ ಎಂಬ ಮಾತೇ ಮರೆತು ತಲೆತೂಗಿ, ಮುತ್ತಿಕ್ಕಿಸಿಕೊಂಡು ಹಾರೈಸಿಕೊಂಡುಬಿಡುತ್ತೆ ಈ ಮರಿ ಕೋಗಿಲೆ.

ಅಂದಹಾಗೆ ಯಾರೀ ಮರಿ ಕೋಗಿಲೆ ಎಂಬ ಕುತೂಹಲದ ಪ್ರಶ್ನೆ ನಿಮ್ಮಲ್ಲೀಗ ಮೂಡಿರ ಬಹುದು. ಅವರೇ ಬೆಣ್ಣೆ ನಗರಿಯ ಬೆಣ್ಣೆಯಂತಹ ದಾವಣಗೆರೆಯ ಜೀವಿತಾ ಮೌನೇಶ್.
ಆಡಿಕೊಂಡು ತುಂಟಾಟ ಮಾಡಿಕೊಂಡು, ಅಪ್ಪ ಅಮ್ಮಂದಿರಿಗೆ ಪ್ರೀತಿಯಿಂದ ಕಾಡುತ್ತಾ ಕುಣಿಯುವ ಈ ಚಿನಕುರುಳಿ ಮರಿಕೋಗಿಲೆಗಿನ್ನೂ ವಯಸ್ಸು ಐದು. ಇಲ್ಲಿನ ತರಳಬಾಳು ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಾಳೆ.ಆಡುವುದರ ಜೊತೆಗೆ ಹಾಡುವ ಪ್ರತಿಭೆಯಾಗಿ, ಭವಿಷ್ಯದ ಭರವಸೆಯ ಗಾಯಕಿಯಾಗುವ ಎಲ್ಲ ಲಕ್ಷಣಗಳೂ ಈ ಮರಿ ಕೋಗಿಲೆಗಿವೆ.

“ ಈಕೆ ತನ್ನ ಎರಡು-ಮೂರನೇ ವಯಸ್ಸಿನಲ್ಲೇ ನಾವು ಹೇಳಿಕೊಡುವ, ಟಿವಿ, ಮೊಬೈಲ್‍ಗಳಲ್ಲಿ ಕೇಳುವ ಹಾಡುಗಳನ್ನು ತನಗಿಷ್ಟ ಬಂದಂತೆ ಮುದ್ದಾಗಿ ಹಾಡುವ ಗೀಳೊಂದನ್ನು ಬೆಳೆಸಿಕೊಂಡಳು. ಅದನ್ನು ಗುರುತಿಸಿ ನಾವು ಸಂಗೀತದ ಜಾಡಿನಲ್ಲಿಯೇ ಬೆಳೆಸುವ ಪ್ರಯತ್ನ ಮಾಡುತ್ತಿದ್ದೇವೆ.” ಎಂಬುದು ಜೀವಿತಾ ಮೌನೇಶ ಅವರ ತಾಯಿ ಶ್ವೇತಾ ಮೌನೇಶ್ ಹಾಗೂ ತಂದೆ ಡಾ.ಮೌನೇಶ್ ಆಚಾರ್ ಅವರ ಮನದ ಮಾತು.

ಈ ಮರಿಕೋಗಿಲೆಗೆ ಶಾಸ್ರ್ತೀಯ ಸಂಗೀತದ ಅಭ್ಯಾಸ ಬಹುಮುಖ್ಯವಾದ್ದರಿಂದ ‘ಮಾನಸ’ ಎಂಬ ಸಂಗೀತ ಗುರುಗಳಿಂದ ಕರ್ನಾಟಕ ಸಂಗೀತದ ಪಾಠ ಈಗಾಗಲೇ ಶುರುವಾಗಿದ್ದು, ಶ್ರದ್ಧೆಯಿಂದ ದಿನಕ್ಕೊಂದು ಗಂಟೆ ಅಭ್ಯಾಸ ಮಾಡುತ್ತಾಳಂತೆ ಜೀವಿತಾ.
ಜೀ ಟಿವಿಯ ಸರಿಗಮಪ ಲಿಟ್ಲ್ ಚಾಂಪ್ಸ್ 14 ನೇ ಸೀಸನ್ ನಲ್ಲಿ ಸಾವಿರಾರು ಅಭ್ಯರ್ಥಿಗಳೊಟ್ಟಿಗೆ ಸ್ಪರ್ಧಿಸಿ, ಟಾಪ್ 30ರವರೆಗೆ ಟಾಕು ಟೀಕಾಗಿ ಪ್ರವೇಶ ಮಾಡಿದ್ದಳು ಈ ಮರಿ ಕೋಗಿಲೆ ಜೀವಿತಾ ಮೌನೇಶ್.

ಇನ್ನೇನು ಸ್ಪರ್ಧೆ ಆಯ್ಕೆಯಾಗಬೇಕು ಅನ್ನುವಷ್ಟರಲ್ಲಿ ದಿಢೀರನೆ ಕಾಡಿದ ಜ್ವರದಿಂದ ಕರ್ನಾಟಕದ ಮರಿಕೋಗಿಲೆ ಎಂದು ಜನರ ಬಾಯ್ಮಾತಾಗುವಲ್ಲಿ ಸುವರ್ಣ ಅವಕಾಶವೊಂದು ತಪ್ಪಿ ಹೋಯಿತು. ಈ ಮರಿಕೋಗಿಲೆಯು ‘ಕನ್ನಡವೇ ನಮ್ಮಮ್ಮ’, ‘ಅಮ್ಮಾನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’ ಹೇಳುವ ಹಾಡುಗಳಂತೂ ಕೇಳುಗರ ಕೈಕಾಲುಗಳು ತಮಗರಿವಿಲ್ಲದೇ ತಾಳ ಹಾಕಲು ಶುರುಮಾಡುತ್ತವೆ. ಅಂತಹದೊಂದು ತಾಕತ್ತು ಈ ಮರಿ ಕೋಗಿಲೆ ಜೀವಿತಾಳ ಧ್ವನಿಯಲ್ಲಿದೆ.

ದಾವಣಗೆರೆಯಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳಲ್ಲಿ ಈ ಮರಿ ಕೋಗಿಲೆ ಭಾಗವಹಿಸಿ ಹಾಡಲಿಲ್ಲವೆಂದರೆ ಆ ಕಾರ್ಯಕ್ರಮ ಅಪೂರ್ಣವೇ ಸರಿ. ನಗರದಲ್ಲಿ ಸುರೇಶ್ ಬಾಬು ಎಂಬುವವರು ಆಯೋಜಿಸಿದ್ದ, ‘ಕುಹೂ ಕುಹೂ’ ಕ್ಯಾರಿಯೋಕೆ ಸ್ಪರ್ಧೆಯಲ್ಲಿ ಮಧುರವಾಗಿ ಹಾಡಿ ಎರಡನೇ ಬಹುಮಾನಗಿಟ್ಟಿಸಿದ್ದಳು. ಜೀ ಟಿವಿ ಆಯೀಜಿಸಿದ್ದ ‘ದಸರಾ ವಿಶೇಷ’ ಕಾರ್ಯಕ್ರಮದಲ್ಲಿ ಈ ಮರಿ ಬೊಂಬೆ “ ಬೊಂಬೆ ಹೇಳುತೈತೆ” ಎಂಬ ಹಾಡೇಳಿ ಎದುರಿದ್ದವರನ್ನು ವೇದಿಕೆಮೇಲಿದ್ದವರನ್ನು ಮಂತ್ರ ಮುಗ್ಧಗೊಳಿಸಿ ಅವರೆನ್ನೆಲ್ಲಾ ಗಾನಲೋಕಕ್ಕೆ ಕರೆದ್ಯೊಯ್ದಿದ್ದಳು ಎಂದು ಜೀವಿತಾ ಆಭಿಮಾನಿಯೊಬ್ಬರು ಹೇಳುತ್ತಾರೆ.

ಹಾಗೇ, ಶಂಕರ ಹಾಗೂ ಆಯುಶ್ ಟಿವಿಯ ‘ಪ್ಲಾಟ್ ಫಾರಂ ಟು ಪರ್‍ಪಾರ್ಮ್’ ಎಂಬ ಕಾರ್ಯಕ್ರಮದಲ್ಲಿ ‘ಬಾನಿಗೊಂದು ಎಲ್ಲೆ ಎಲ್ಲಿದೆ’ ಹಾಡ ಹೇಳಿ ರಂಜಿಸಿದ್ದಾಳೆ. ನಂತರ ಚಿತ್ರದುರ್ಗದಲ್ಲಿ ನಡೆದಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಮರಿ ಕೋಗಿಲೆ ಭಾಗವಹಿಸಿದ್ದಾಳೆ. ಅವೆಂದರೆ, ಪಿ.ಬಿ. ಶ್ರೀವಾಸ್ ಹಿಟ್ಸ್, ಕನ್ನಡ ರಾಜ್ಯೋತ್ಸವದ ಹಲವು ಕಾರ್ಯಕ್ರಮಗಳು, ಸಾಹಿತಿ ಚಂಪಾ ಹಾಗೂ ಮುರುಘಾ ಶರಣರ ಎದುರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರ ಪ್ರೀತಿಯ ಮೆಚ್ಚುಗೆ ಪಡೆದವಳಾಗಿದ್ದಾಳೆ ಈ ಮರಿ ಕೋಗಿಲೆ ಜೀವಿತಾ.

ಒಟ್ಟಾರೆ ದಾವಣಗೆರೆಯ ಈ ಮರಿಕೋಗಿಲೆ ಜೀವಿತಾ ಮೌನೇಶ್ ಹಾಡಿಗೊಂದು ಹಾಡ ಹೇಳಿ, ಶೃತಿ, ತಾಳದೊಂದಿಗೆ ಬೆರೆತು ಭಾರತದ ಬಹುದೊಡ್ಡ ಗಾಯಕಿಯಾಗಲಿ ಎಂಬುದೇ ಈ ಕ್ಷಣದ ಅಂಬೋಣ.

ಜೀವಿತಾಳ ಹಾಡು ಮತ್ತು ನಟನೆಯ ವೀಡಿಯೋಗಳನ್ನು ಯೂಟ್ಯೂಬಿನಲ್ಲಿ ನೋಡಲು |    jeevitha mounesh ಎಂದು type ಮಾಡಿ.

ಇದುವರೆಗೆ ಜೀವಿತಾ ನೀಡಿರುವ  ಕಾರ್ಯಕ್ರಮಗಳು

  • Zee Kannadaದಲ್ಲಿ ಬರುವ Sa Re Ga Ma Pa Season – 14 ರಲ್ಲಿ ದಾವಣಗೆರೆಯಲ್ಲಿ ನಡೆದ Audition ನಲ್ಲಿ ಸುಮಾರು 250 ಸ್ಪರ್ದಿಗಳೊಂದಿಗೆ ಭಾಗವಹಿಸಿ select ಆಗಿ, ಕರ್ನಾಟಕದಾದ್ಯಂತ 2.5 ಲಕ್ಷ ಸ್ಪರ್ದಿಗಳಲ್ಲಿ Top30 ವರೆಗೆ select ಆಗಿದ್ದರು.
  • 16.6.2017 ರಲ್ಲಿ ನಡೆದ ಜಿಲ್ಲಾ ಮಟ್ಟದ “ಕುಹೂ ಕುಹೂ ದಾವಣಗೆರೆ ಕೋಗಿಲೆ” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
  • 2.3.2018 ರಂದು ನಡೆದ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 61ನೇ ಸ್ಮರಣೋತ್ಸವ 2018 ಹಾಗೂ ಶರಣ ಸಂಸ್ಕøತಿ ಉತ್ಸವದಲ್ಲಿ ಹಾಡಿ, ಡಾ|| ಶ್ರೀ ಶಿವಮೂರ್ತಿ ಮುರಘಾಶರಣರಿಂದ ಆಶಿರ್ವಾದ ಮತ್ತು ಗೌರವ ಸಮರ್ಪಣೆಯನ್ನು ಸ್ವೀಕರಿಸಿರುತ್ತಾರೆ.
  • 20.11.2017 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ಇವರು ನಡೆಸಿದ “ಚಿಗುರು” ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾವಗೀತೆ ಹಾಗೂ ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
  • 1.12.2017 ರಂದು ದಾವಣಗೆರೆ ಜಿಲ್ಲೆ ಹೆಬ್ಬಾಳ ಮಠದಲ್ಲಿ ನಡೆದ 330ನೇ ಕಾರ್ತಿಕ ಮಹೋತ್ಸವದಲ್ಲಿ ವಚನ, ಭಾವಗೀತೆ ಹಾಗು ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
  • 28.11.2017 ರಂದು ದಾವಣಗೆರೆ ಮಹಾನಗರ ಪಾಲಿಕೆ ಇವರು ನಡೆಸಿದ 62ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
  • 12.8.2017 ರಂದು ಶಂಕರ ಹಾಗು ಆಯುಷ್ ಟಿವಿ ಯವರು ನಡೆಸಿದ Platform to Perform ನಲ್ಲಿ ಭಾಗವಹಿಸಿ ಚಿತ್ರಗೀತೆ ಹಾಡಿರುತ್ತಾರೆ.
  • 21.9.2017 ರಂದು Zee Kannada ನಡೆಸಿದ ದಸರ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
  • 2.2.2018 ರಂದು ವನಿತಾ ಸಮಾಜ ಪ್ರೇರಣಾ ರವರು ನಡೆಸಿದ ಕಾರ್ಯಕ್ರಮದಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
  • 7.1.2018 ರಂದು “Davangere Expo 2018” ರಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
  • 21.1.2018 ರಲ್ಲಿ Vasavi Cultural Academy, Chitradurga ಇವರು ಎರ್ಪಡಿಸಿದ ಪಿ.ಬಿ. ಶ್ರಿನಿವಾಸ್ ಹಿಟ್ಸ್ ಅಲ್ಲಿ ಹಾಡಿ ಜನರ ಮೆಚ್ಚುಗೆಯನ್ನ ಪಡೆದಿರುತ್ತಾರೆ.
  • 28.12.2017 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
  • 26.11.2017 ರಂದು GMIT ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ “ನಂದಿತ” ರವರೊಂದಿಗೆ ಸ್ಟೆಜ್ ಶೇರ್ ಮಾಡಿ ಚಿತ್ರಗೀತೆಯನ್ನು ಹಾಡಿ ಅವರ ಮೆಚ್ಚುಗೆ ಪಡೆದಿರುತ್ತಾರೆ.
  • ಶಾಲೆಯಲ್ಲಿ ನಡೆಯುವ ಎಲ್ಲಾ ಸಿಂಗಿಂಗ್ Competition ನಲ್ಲಿ ಪ್ರತೀ ಬಾರಿಯು ಮೊದಲ ಬಹುಮಾನ ಗಳಿಸಿರುತ್ತಾರೆ.
  • 28.12.2016 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
  • ಇವರು ಹಾಡಿರುವ ಗೀತೆಗಳು facebook ನಲ್ಲಿ 1.7 ಸಾವಿರಕ್ಕೂ ಹೆಚ್ಚು view ಗಳು ಹಾಗು ಮೆಚ್ಚುಗೆಗಳು ಸಿಕ್ಕಿವೆ.

 

ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ |9986715401

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ6 days ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ6 days ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ6 days ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ6 days ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

ದಿನದ ಸುದ್ದಿ2 weeks ago

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ....

ದಿನದ ಸುದ್ದಿ2 weeks ago

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು...

ದಿನದ ಸುದ್ದಿ2 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

Trending