ದಿನದ ಸುದ್ದಿ
ಮರಿ ಕೋಗಿಲೆ ‘ಜೀವಿತಾ’ಳ ಕುಹೂ ಕುಹೂ!
“ಹಾಡು ಎಂದ ಕೂಡಲೇ ಹಾಡದು ಯಾವ ಕೋಗಿಲೆ” ಅಂತ ನಾದ ಬ್ರಹ್ಮ ಹಂಸಲೇಖ ಹೇಳ್ತಾರೆ. ಆದರೆ ಈ ಮರಿ ಕೋಗಿಲೆಯೊಂದು ಹಾಡು ಎಂದರೆ ಸಾಕು ಪರಮೋತ್ಸಾಹದೊಂದಿಗೆ ಒಂದರ ಮೇಲೊಂದರಂತೆ ಹಾಡಲು ಶುರು ಮಾಡುತ್ತೆ. ಹಾಡು ಕೇಳಿದವರಂತೂ ‘ನಿಲ್ಲಿಸು’ ಎಂಬ ಮಾತೇ ಮರೆತು ತಲೆತೂಗಿ, ಮುತ್ತಿಕ್ಕಿಸಿಕೊಂಡು ಹಾರೈಸಿಕೊಂಡುಬಿಡುತ್ತೆ ಈ ಮರಿ ಕೋಗಿಲೆ.
ಅಂದಹಾಗೆ ಯಾರೀ ಮರಿ ಕೋಗಿಲೆ ಎಂಬ ಕುತೂಹಲದ ಪ್ರಶ್ನೆ ನಿಮ್ಮಲ್ಲೀಗ ಮೂಡಿರ ಬಹುದು. ಅವರೇ ಬೆಣ್ಣೆ ನಗರಿಯ ಬೆಣ್ಣೆಯಂತಹ ದಾವಣಗೆರೆಯ ಜೀವಿತಾ ಮೌನೇಶ್.
ಆಡಿಕೊಂಡು ತುಂಟಾಟ ಮಾಡಿಕೊಂಡು, ಅಪ್ಪ ಅಮ್ಮಂದಿರಿಗೆ ಪ್ರೀತಿಯಿಂದ ಕಾಡುತ್ತಾ ಕುಣಿಯುವ ಈ ಚಿನಕುರುಳಿ ಮರಿಕೋಗಿಲೆಗಿನ್ನೂ ವಯಸ್ಸು ಐದು. ಇಲ್ಲಿನ ತರಳಬಾಳು ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಾಳೆ.ಆಡುವುದರ ಜೊತೆಗೆ ಹಾಡುವ ಪ್ರತಿಭೆಯಾಗಿ, ಭವಿಷ್ಯದ ಭರವಸೆಯ ಗಾಯಕಿಯಾಗುವ ಎಲ್ಲ ಲಕ್ಷಣಗಳೂ ಈ ಮರಿ ಕೋಗಿಲೆಗಿವೆ.
“ ಈಕೆ ತನ್ನ ಎರಡು-ಮೂರನೇ ವಯಸ್ಸಿನಲ್ಲೇ ನಾವು ಹೇಳಿಕೊಡುವ, ಟಿವಿ, ಮೊಬೈಲ್ಗಳಲ್ಲಿ ಕೇಳುವ ಹಾಡುಗಳನ್ನು ತನಗಿಷ್ಟ ಬಂದಂತೆ ಮುದ್ದಾಗಿ ಹಾಡುವ ಗೀಳೊಂದನ್ನು ಬೆಳೆಸಿಕೊಂಡಳು. ಅದನ್ನು ಗುರುತಿಸಿ ನಾವು ಸಂಗೀತದ ಜಾಡಿನಲ್ಲಿಯೇ ಬೆಳೆಸುವ ಪ್ರಯತ್ನ ಮಾಡುತ್ತಿದ್ದೇವೆ.” ಎಂಬುದು ಜೀವಿತಾ ಮೌನೇಶ ಅವರ ತಾಯಿ ಶ್ವೇತಾ ಮೌನೇಶ್ ಹಾಗೂ ತಂದೆ ಡಾ.ಮೌನೇಶ್ ಆಚಾರ್ ಅವರ ಮನದ ಮಾತು.
ಈ ಮರಿಕೋಗಿಲೆಗೆ ಶಾಸ್ರ್ತೀಯ ಸಂಗೀತದ ಅಭ್ಯಾಸ ಬಹುಮುಖ್ಯವಾದ್ದರಿಂದ ‘ಮಾನಸ’ ಎಂಬ ಸಂಗೀತ ಗುರುಗಳಿಂದ ಕರ್ನಾಟಕ ಸಂಗೀತದ ಪಾಠ ಈಗಾಗಲೇ ಶುರುವಾಗಿದ್ದು, ಶ್ರದ್ಧೆಯಿಂದ ದಿನಕ್ಕೊಂದು ಗಂಟೆ ಅಭ್ಯಾಸ ಮಾಡುತ್ತಾಳಂತೆ ಜೀವಿತಾ.
ಜೀ ಟಿವಿಯ ಸರಿಗಮಪ ಲಿಟ್ಲ್ ಚಾಂಪ್ಸ್ 14 ನೇ ಸೀಸನ್ ನಲ್ಲಿ ಸಾವಿರಾರು ಅಭ್ಯರ್ಥಿಗಳೊಟ್ಟಿಗೆ ಸ್ಪರ್ಧಿಸಿ, ಟಾಪ್ 30ರವರೆಗೆ ಟಾಕು ಟೀಕಾಗಿ ಪ್ರವೇಶ ಮಾಡಿದ್ದಳು ಈ ಮರಿ ಕೋಗಿಲೆ ಜೀವಿತಾ ಮೌನೇಶ್.
ಇನ್ನೇನು ಸ್ಪರ್ಧೆ ಆಯ್ಕೆಯಾಗಬೇಕು ಅನ್ನುವಷ್ಟರಲ್ಲಿ ದಿಢೀರನೆ ಕಾಡಿದ ಜ್ವರದಿಂದ ಕರ್ನಾಟಕದ ಮರಿಕೋಗಿಲೆ ಎಂದು ಜನರ ಬಾಯ್ಮಾತಾಗುವಲ್ಲಿ ಸುವರ್ಣ ಅವಕಾಶವೊಂದು ತಪ್ಪಿ ಹೋಯಿತು. ಈ ಮರಿಕೋಗಿಲೆಯು ‘ಕನ್ನಡವೇ ನಮ್ಮಮ್ಮ’, ‘ಅಮ್ಮಾನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’ ಹೇಳುವ ಹಾಡುಗಳಂತೂ ಕೇಳುಗರ ಕೈಕಾಲುಗಳು ತಮಗರಿವಿಲ್ಲದೇ ತಾಳ ಹಾಕಲು ಶುರುಮಾಡುತ್ತವೆ. ಅಂತಹದೊಂದು ತಾಕತ್ತು ಈ ಮರಿ ಕೋಗಿಲೆ ಜೀವಿತಾಳ ಧ್ವನಿಯಲ್ಲಿದೆ.
ದಾವಣಗೆರೆಯಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳಲ್ಲಿ ಈ ಮರಿ ಕೋಗಿಲೆ ಭಾಗವಹಿಸಿ ಹಾಡಲಿಲ್ಲವೆಂದರೆ ಆ ಕಾರ್ಯಕ್ರಮ ಅಪೂರ್ಣವೇ ಸರಿ. ನಗರದಲ್ಲಿ ಸುರೇಶ್ ಬಾಬು ಎಂಬುವವರು ಆಯೋಜಿಸಿದ್ದ, ‘ಕುಹೂ ಕುಹೂ’ ಕ್ಯಾರಿಯೋಕೆ ಸ್ಪರ್ಧೆಯಲ್ಲಿ ಮಧುರವಾಗಿ ಹಾಡಿ ಎರಡನೇ ಬಹುಮಾನಗಿಟ್ಟಿಸಿದ್ದಳು. ಜೀ ಟಿವಿ ಆಯೀಜಿಸಿದ್ದ ‘ದಸರಾ ವಿಶೇಷ’ ಕಾರ್ಯಕ್ರಮದಲ್ಲಿ ಈ ಮರಿ ಬೊಂಬೆ “ ಬೊಂಬೆ ಹೇಳುತೈತೆ” ಎಂಬ ಹಾಡೇಳಿ ಎದುರಿದ್ದವರನ್ನು ವೇದಿಕೆಮೇಲಿದ್ದವರನ್ನು ಮಂತ್ರ ಮುಗ್ಧಗೊಳಿಸಿ ಅವರೆನ್ನೆಲ್ಲಾ ಗಾನಲೋಕಕ್ಕೆ ಕರೆದ್ಯೊಯ್ದಿದ್ದಳು ಎಂದು ಜೀವಿತಾ ಆಭಿಮಾನಿಯೊಬ್ಬರು ಹೇಳುತ್ತಾರೆ.
ಹಾಗೇ, ಶಂಕರ ಹಾಗೂ ಆಯುಶ್ ಟಿವಿಯ ‘ಪ್ಲಾಟ್ ಫಾರಂ ಟು ಪರ್ಪಾರ್ಮ್’ ಎಂಬ ಕಾರ್ಯಕ್ರಮದಲ್ಲಿ ‘ಬಾನಿಗೊಂದು ಎಲ್ಲೆ ಎಲ್ಲಿದೆ’ ಹಾಡ ಹೇಳಿ ರಂಜಿಸಿದ್ದಾಳೆ. ನಂತರ ಚಿತ್ರದುರ್ಗದಲ್ಲಿ ನಡೆದಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಮರಿ ಕೋಗಿಲೆ ಭಾಗವಹಿಸಿದ್ದಾಳೆ. ಅವೆಂದರೆ, ಪಿ.ಬಿ. ಶ್ರೀವಾಸ್ ಹಿಟ್ಸ್, ಕನ್ನಡ ರಾಜ್ಯೋತ್ಸವದ ಹಲವು ಕಾರ್ಯಕ್ರಮಗಳು, ಸಾಹಿತಿ ಚಂಪಾ ಹಾಗೂ ಮುರುಘಾ ಶರಣರ ಎದುರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರ ಪ್ರೀತಿಯ ಮೆಚ್ಚುಗೆ ಪಡೆದವಳಾಗಿದ್ದಾಳೆ ಈ ಮರಿ ಕೋಗಿಲೆ ಜೀವಿತಾ.
ಒಟ್ಟಾರೆ ದಾವಣಗೆರೆಯ ಈ ಮರಿಕೋಗಿಲೆ ಜೀವಿತಾ ಮೌನೇಶ್ ಹಾಡಿಗೊಂದು ಹಾಡ ಹೇಳಿ, ಶೃತಿ, ತಾಳದೊಂದಿಗೆ ಬೆರೆತು ಭಾರತದ ಬಹುದೊಡ್ಡ ಗಾಯಕಿಯಾಗಲಿ ಎಂಬುದೇ ಈ ಕ್ಷಣದ ಅಂಬೋಣ.
ಜೀವಿತಾಳ ಹಾಡು ಮತ್ತು ನಟನೆಯ ವೀಡಿಯೋಗಳನ್ನು ಯೂಟ್ಯೂಬಿನಲ್ಲಿ ನೋಡಲು | jeevitha mounesh ಎಂದು type ಮಾಡಿ.
ಇದುವರೆಗೆ ಜೀವಿತಾ ನೀಡಿರುವ ಕಾರ್ಯಕ್ರಮಗಳು
- Zee Kannadaದಲ್ಲಿ ಬರುವ Sa Re Ga Ma Pa Season – 14 ರಲ್ಲಿ ದಾವಣಗೆರೆಯಲ್ಲಿ ನಡೆದ Audition ನಲ್ಲಿ ಸುಮಾರು 250 ಸ್ಪರ್ದಿಗಳೊಂದಿಗೆ ಭಾಗವಹಿಸಿ select ಆಗಿ, ಕರ್ನಾಟಕದಾದ್ಯಂತ 2.5 ಲಕ್ಷ ಸ್ಪರ್ದಿಗಳಲ್ಲಿ Top30 ವರೆಗೆ select ಆಗಿದ್ದರು.
- 16.6.2017 ರಲ್ಲಿ ನಡೆದ ಜಿಲ್ಲಾ ಮಟ್ಟದ “ಕುಹೂ ಕುಹೂ ದಾವಣಗೆರೆ ಕೋಗಿಲೆ” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
- 2.3.2018 ರಂದು ನಡೆದ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 61ನೇ ಸ್ಮರಣೋತ್ಸವ 2018 ಹಾಗೂ ಶರಣ ಸಂಸ್ಕøತಿ ಉತ್ಸವದಲ್ಲಿ ಹಾಡಿ, ಡಾ|| ಶ್ರೀ ಶಿವಮೂರ್ತಿ ಮುರಘಾಶರಣರಿಂದ ಆಶಿರ್ವಾದ ಮತ್ತು ಗೌರವ ಸಮರ್ಪಣೆಯನ್ನು ಸ್ವೀಕರಿಸಿರುತ್ತಾರೆ.
- 20.11.2017 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ಇವರು ನಡೆಸಿದ “ಚಿಗುರು” ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾವಗೀತೆ ಹಾಗೂ ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
- 1.12.2017 ರಂದು ದಾವಣಗೆರೆ ಜಿಲ್ಲೆ ಹೆಬ್ಬಾಳ ಮಠದಲ್ಲಿ ನಡೆದ 330ನೇ ಕಾರ್ತಿಕ ಮಹೋತ್ಸವದಲ್ಲಿ ವಚನ, ಭಾವಗೀತೆ ಹಾಗು ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
- 28.11.2017 ರಂದು ದಾವಣಗೆರೆ ಮಹಾನಗರ ಪಾಲಿಕೆ ಇವರು ನಡೆಸಿದ 62ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
- 12.8.2017 ರಂದು ಶಂಕರ ಹಾಗು ಆಯುಷ್ ಟಿವಿ ಯವರು ನಡೆಸಿದ Platform to Perform ನಲ್ಲಿ ಭಾಗವಹಿಸಿ ಚಿತ್ರಗೀತೆ ಹಾಡಿರುತ್ತಾರೆ.
- 21.9.2017 ರಂದು Zee Kannada ನಡೆಸಿದ ದಸರ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
- 2.2.2018 ರಂದು ವನಿತಾ ಸಮಾಜ ಪ್ರೇರಣಾ ರವರು ನಡೆಸಿದ ಕಾರ್ಯಕ್ರಮದಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
- 7.1.2018 ರಂದು “Davangere Expo 2018” ರಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
- 21.1.2018 ರಲ್ಲಿ Vasavi Cultural Academy, Chitradurga ಇವರು ಎರ್ಪಡಿಸಿದ ಪಿ.ಬಿ. ಶ್ರಿನಿವಾಸ್ ಹಿಟ್ಸ್ ಅಲ್ಲಿ ಹಾಡಿ ಜನರ ಮೆಚ್ಚುಗೆಯನ್ನ ಪಡೆದಿರುತ್ತಾರೆ.
- 28.12.2017 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
- 26.11.2017 ರಂದು GMIT ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ “ನಂದಿತ” ರವರೊಂದಿಗೆ ಸ್ಟೆಜ್ ಶೇರ್ ಮಾಡಿ ಚಿತ್ರಗೀತೆಯನ್ನು ಹಾಡಿ ಅವರ ಮೆಚ್ಚುಗೆ ಪಡೆದಿರುತ್ತಾರೆ.
- ಶಾಲೆಯಲ್ಲಿ ನಡೆಯುವ ಎಲ್ಲಾ ಸಿಂಗಿಂಗ್ Competition ನಲ್ಲಿ ಪ್ರತೀ ಬಾರಿಯು ಮೊದಲ ಬಹುಮಾನ ಗಳಿಸಿರುತ್ತಾರೆ.
- 28.12.2016 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
- ಇವರು ಹಾಡಿರುವ ಗೀತೆಗಳು facebook ನಲ್ಲಿ 1.7 ಸಾವಿರಕ್ಕೂ ಹೆಚ್ಚು view ಗಳು ಹಾಗು ಮೆಚ್ಚುಗೆಗಳು ಸಿಕ್ಕಿವೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ |9986715401

ಅಂತರಂಗ
ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ
ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.
ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.
ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.
ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

ದಿನದ ಸುದ್ದಿ
ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.
ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.
ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.
“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.
ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.
“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.
ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.
ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.
ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.
ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್ನ ‘ಯೂನಿವರ್ಸಿಟಿ ಆಫ್ ಸ್ಯಾಲ್ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.
ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ2 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

