ದಿನದ ಸುದ್ದಿ
ಮರಿ ಕೋಗಿಲೆ ‘ಜೀವಿತಾ’ಳ ಕುಹೂ ಕುಹೂ!
“ಹಾಡು ಎಂದ ಕೂಡಲೇ ಹಾಡದು ಯಾವ ಕೋಗಿಲೆ” ಅಂತ ನಾದ ಬ್ರಹ್ಮ ಹಂಸಲೇಖ ಹೇಳ್ತಾರೆ. ಆದರೆ ಈ ಮರಿ ಕೋಗಿಲೆಯೊಂದು ಹಾಡು ಎಂದರೆ ಸಾಕು ಪರಮೋತ್ಸಾಹದೊಂದಿಗೆ ಒಂದರ ಮೇಲೊಂದರಂತೆ ಹಾಡಲು ಶುರು ಮಾಡುತ್ತೆ. ಹಾಡು ಕೇಳಿದವರಂತೂ ‘ನಿಲ್ಲಿಸು’ ಎಂಬ ಮಾತೇ ಮರೆತು ತಲೆತೂಗಿ, ಮುತ್ತಿಕ್ಕಿಸಿಕೊಂಡು ಹಾರೈಸಿಕೊಂಡುಬಿಡುತ್ತೆ ಈ ಮರಿ ಕೋಗಿಲೆ.
ಅಂದಹಾಗೆ ಯಾರೀ ಮರಿ ಕೋಗಿಲೆ ಎಂಬ ಕುತೂಹಲದ ಪ್ರಶ್ನೆ ನಿಮ್ಮಲ್ಲೀಗ ಮೂಡಿರ ಬಹುದು. ಅವರೇ ಬೆಣ್ಣೆ ನಗರಿಯ ಬೆಣ್ಣೆಯಂತಹ ದಾವಣಗೆರೆಯ ಜೀವಿತಾ ಮೌನೇಶ್.
ಆಡಿಕೊಂಡು ತುಂಟಾಟ ಮಾಡಿಕೊಂಡು, ಅಪ್ಪ ಅಮ್ಮಂದಿರಿಗೆ ಪ್ರೀತಿಯಿಂದ ಕಾಡುತ್ತಾ ಕುಣಿಯುವ ಈ ಚಿನಕುರುಳಿ ಮರಿಕೋಗಿಲೆಗಿನ್ನೂ ವಯಸ್ಸು ಐದು. ಇಲ್ಲಿನ ತರಳಬಾಳು ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಾಳೆ.ಆಡುವುದರ ಜೊತೆಗೆ ಹಾಡುವ ಪ್ರತಿಭೆಯಾಗಿ, ಭವಿಷ್ಯದ ಭರವಸೆಯ ಗಾಯಕಿಯಾಗುವ ಎಲ್ಲ ಲಕ್ಷಣಗಳೂ ಈ ಮರಿ ಕೋಗಿಲೆಗಿವೆ.
“ ಈಕೆ ತನ್ನ ಎರಡು-ಮೂರನೇ ವಯಸ್ಸಿನಲ್ಲೇ ನಾವು ಹೇಳಿಕೊಡುವ, ಟಿವಿ, ಮೊಬೈಲ್ಗಳಲ್ಲಿ ಕೇಳುವ ಹಾಡುಗಳನ್ನು ತನಗಿಷ್ಟ ಬಂದಂತೆ ಮುದ್ದಾಗಿ ಹಾಡುವ ಗೀಳೊಂದನ್ನು ಬೆಳೆಸಿಕೊಂಡಳು. ಅದನ್ನು ಗುರುತಿಸಿ ನಾವು ಸಂಗೀತದ ಜಾಡಿನಲ್ಲಿಯೇ ಬೆಳೆಸುವ ಪ್ರಯತ್ನ ಮಾಡುತ್ತಿದ್ದೇವೆ.” ಎಂಬುದು ಜೀವಿತಾ ಮೌನೇಶ ಅವರ ತಾಯಿ ಶ್ವೇತಾ ಮೌನೇಶ್ ಹಾಗೂ ತಂದೆ ಡಾ.ಮೌನೇಶ್ ಆಚಾರ್ ಅವರ ಮನದ ಮಾತು.
ಈ ಮರಿಕೋಗಿಲೆಗೆ ಶಾಸ್ರ್ತೀಯ ಸಂಗೀತದ ಅಭ್ಯಾಸ ಬಹುಮುಖ್ಯವಾದ್ದರಿಂದ ‘ಮಾನಸ’ ಎಂಬ ಸಂಗೀತ ಗುರುಗಳಿಂದ ಕರ್ನಾಟಕ ಸಂಗೀತದ ಪಾಠ ಈಗಾಗಲೇ ಶುರುವಾಗಿದ್ದು, ಶ್ರದ್ಧೆಯಿಂದ ದಿನಕ್ಕೊಂದು ಗಂಟೆ ಅಭ್ಯಾಸ ಮಾಡುತ್ತಾಳಂತೆ ಜೀವಿತಾ.
ಜೀ ಟಿವಿಯ ಸರಿಗಮಪ ಲಿಟ್ಲ್ ಚಾಂಪ್ಸ್ 14 ನೇ ಸೀಸನ್ ನಲ್ಲಿ ಸಾವಿರಾರು ಅಭ್ಯರ್ಥಿಗಳೊಟ್ಟಿಗೆ ಸ್ಪರ್ಧಿಸಿ, ಟಾಪ್ 30ರವರೆಗೆ ಟಾಕು ಟೀಕಾಗಿ ಪ್ರವೇಶ ಮಾಡಿದ್ದಳು ಈ ಮರಿ ಕೋಗಿಲೆ ಜೀವಿತಾ ಮೌನೇಶ್.
ಇನ್ನೇನು ಸ್ಪರ್ಧೆ ಆಯ್ಕೆಯಾಗಬೇಕು ಅನ್ನುವಷ್ಟರಲ್ಲಿ ದಿಢೀರನೆ ಕಾಡಿದ ಜ್ವರದಿಂದ ಕರ್ನಾಟಕದ ಮರಿಕೋಗಿಲೆ ಎಂದು ಜನರ ಬಾಯ್ಮಾತಾಗುವಲ್ಲಿ ಸುವರ್ಣ ಅವಕಾಶವೊಂದು ತಪ್ಪಿ ಹೋಯಿತು. ಈ ಮರಿಕೋಗಿಲೆಯು ‘ಕನ್ನಡವೇ ನಮ್ಮಮ್ಮ’, ‘ಅಮ್ಮಾನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ’ ಹೇಳುವ ಹಾಡುಗಳಂತೂ ಕೇಳುಗರ ಕೈಕಾಲುಗಳು ತಮಗರಿವಿಲ್ಲದೇ ತಾಳ ಹಾಕಲು ಶುರುಮಾಡುತ್ತವೆ. ಅಂತಹದೊಂದು ತಾಕತ್ತು ಈ ಮರಿ ಕೋಗಿಲೆ ಜೀವಿತಾಳ ಧ್ವನಿಯಲ್ಲಿದೆ.
ದಾವಣಗೆರೆಯಲ್ಲಿ ನಡೆಯುವ ಸಂಗೀತ ಕಾರ್ಯಕ್ರಮಗಳಲ್ಲಿ ಈ ಮರಿ ಕೋಗಿಲೆ ಭಾಗವಹಿಸಿ ಹಾಡಲಿಲ್ಲವೆಂದರೆ ಆ ಕಾರ್ಯಕ್ರಮ ಅಪೂರ್ಣವೇ ಸರಿ. ನಗರದಲ್ಲಿ ಸುರೇಶ್ ಬಾಬು ಎಂಬುವವರು ಆಯೋಜಿಸಿದ್ದ, ‘ಕುಹೂ ಕುಹೂ’ ಕ್ಯಾರಿಯೋಕೆ ಸ್ಪರ್ಧೆಯಲ್ಲಿ ಮಧುರವಾಗಿ ಹಾಡಿ ಎರಡನೇ ಬಹುಮಾನಗಿಟ್ಟಿಸಿದ್ದಳು. ಜೀ ಟಿವಿ ಆಯೀಜಿಸಿದ್ದ ‘ದಸರಾ ವಿಶೇಷ’ ಕಾರ್ಯಕ್ರಮದಲ್ಲಿ ಈ ಮರಿ ಬೊಂಬೆ “ ಬೊಂಬೆ ಹೇಳುತೈತೆ” ಎಂಬ ಹಾಡೇಳಿ ಎದುರಿದ್ದವರನ್ನು ವೇದಿಕೆಮೇಲಿದ್ದವರನ್ನು ಮಂತ್ರ ಮುಗ್ಧಗೊಳಿಸಿ ಅವರೆನ್ನೆಲ್ಲಾ ಗಾನಲೋಕಕ್ಕೆ ಕರೆದ್ಯೊಯ್ದಿದ್ದಳು ಎಂದು ಜೀವಿತಾ ಆಭಿಮಾನಿಯೊಬ್ಬರು ಹೇಳುತ್ತಾರೆ.
ಹಾಗೇ, ಶಂಕರ ಹಾಗೂ ಆಯುಶ್ ಟಿವಿಯ ‘ಪ್ಲಾಟ್ ಫಾರಂ ಟು ಪರ್ಪಾರ್ಮ್’ ಎಂಬ ಕಾರ್ಯಕ್ರಮದಲ್ಲಿ ‘ಬಾನಿಗೊಂದು ಎಲ್ಲೆ ಎಲ್ಲಿದೆ’ ಹಾಡ ಹೇಳಿ ರಂಜಿಸಿದ್ದಾಳೆ. ನಂತರ ಚಿತ್ರದುರ್ಗದಲ್ಲಿ ನಡೆದಹಲವು ಸಂಗೀತ ಕಾರ್ಯಕ್ರಮಗಳಲ್ಲಿ ಮರಿ ಕೋಗಿಲೆ ಭಾಗವಹಿಸಿದ್ದಾಳೆ. ಅವೆಂದರೆ, ಪಿ.ಬಿ. ಶ್ರೀವಾಸ್ ಹಿಟ್ಸ್, ಕನ್ನಡ ರಾಜ್ಯೋತ್ಸವದ ಹಲವು ಕಾರ್ಯಕ್ರಮಗಳು, ಸಾಹಿತಿ ಚಂಪಾ ಹಾಗೂ ಮುರುಘಾ ಶರಣರ ಎದುರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅವರ ಪ್ರೀತಿಯ ಮೆಚ್ಚುಗೆ ಪಡೆದವಳಾಗಿದ್ದಾಳೆ ಈ ಮರಿ ಕೋಗಿಲೆ ಜೀವಿತಾ.
ಒಟ್ಟಾರೆ ದಾವಣಗೆರೆಯ ಈ ಮರಿಕೋಗಿಲೆ ಜೀವಿತಾ ಮೌನೇಶ್ ಹಾಡಿಗೊಂದು ಹಾಡ ಹೇಳಿ, ಶೃತಿ, ತಾಳದೊಂದಿಗೆ ಬೆರೆತು ಭಾರತದ ಬಹುದೊಡ್ಡ ಗಾಯಕಿಯಾಗಲಿ ಎಂಬುದೇ ಈ ಕ್ಷಣದ ಅಂಬೋಣ.
ಜೀವಿತಾಳ ಹಾಡು ಮತ್ತು ನಟನೆಯ ವೀಡಿಯೋಗಳನ್ನು ಯೂಟ್ಯೂಬಿನಲ್ಲಿ ನೋಡಲು | jeevitha mounesh ಎಂದು type ಮಾಡಿ.
ಇದುವರೆಗೆ ಜೀವಿತಾ ನೀಡಿರುವ ಕಾರ್ಯಕ್ರಮಗಳು
- Zee Kannadaದಲ್ಲಿ ಬರುವ Sa Re Ga Ma Pa Season – 14 ರಲ್ಲಿ ದಾವಣಗೆರೆಯಲ್ಲಿ ನಡೆದ Audition ನಲ್ಲಿ ಸುಮಾರು 250 ಸ್ಪರ್ದಿಗಳೊಂದಿಗೆ ಭಾಗವಹಿಸಿ select ಆಗಿ, ಕರ್ನಾಟಕದಾದ್ಯಂತ 2.5 ಲಕ್ಷ ಸ್ಪರ್ದಿಗಳಲ್ಲಿ Top30 ವರೆಗೆ select ಆಗಿದ್ದರು.
- 16.6.2017 ರಲ್ಲಿ ನಡೆದ ಜಿಲ್ಲಾ ಮಟ್ಟದ “ಕುಹೂ ಕುಹೂ ದಾವಣಗೆರೆ ಕೋಗಿಲೆ” ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
- 2.3.2018 ರಂದು ನಡೆದ ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 61ನೇ ಸ್ಮರಣೋತ್ಸವ 2018 ಹಾಗೂ ಶರಣ ಸಂಸ್ಕøತಿ ಉತ್ಸವದಲ್ಲಿ ಹಾಡಿ, ಡಾ|| ಶ್ರೀ ಶಿವಮೂರ್ತಿ ಮುರಘಾಶರಣರಿಂದ ಆಶಿರ್ವಾದ ಮತ್ತು ಗೌರವ ಸಮರ್ಪಣೆಯನ್ನು ಸ್ವೀಕರಿಸಿರುತ್ತಾರೆ.
- 20.11.2017 ರಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದಾವಣಗೆರೆ ಇವರು ನಡೆಸಿದ “ಚಿಗುರು” ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಭಾವಗೀತೆ ಹಾಗೂ ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
- 1.12.2017 ರಂದು ದಾವಣಗೆರೆ ಜಿಲ್ಲೆ ಹೆಬ್ಬಾಳ ಮಠದಲ್ಲಿ ನಡೆದ 330ನೇ ಕಾರ್ತಿಕ ಮಹೋತ್ಸವದಲ್ಲಿ ವಚನ, ಭಾವಗೀತೆ ಹಾಗು ಚಿತ್ರಗೀತೆ ಕಾರ್ಯಕ್ರಮ ನೀಡಿರುತ್ತಾರೆ.
- 28.11.2017 ರಂದು ದಾವಣಗೆರೆ ಮಹಾನಗರ ಪಾಲಿಕೆ ಇವರು ನಡೆಸಿದ 62ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
- 12.8.2017 ರಂದು ಶಂಕರ ಹಾಗು ಆಯುಷ್ ಟಿವಿ ಯವರು ನಡೆಸಿದ Platform to Perform ನಲ್ಲಿ ಭಾಗವಹಿಸಿ ಚಿತ್ರಗೀತೆ ಹಾಡಿರುತ್ತಾರೆ.
- 21.9.2017 ರಂದು Zee Kannada ನಡೆಸಿದ ದಸರ ಪ್ರಯುಕ್ತ ವಿಶೇಷ ಕಾರ್ಯಕ್ರಮದಲ್ಲಿ ಚಿತ್ರಗೀತೆ ಹಾಡಿರುತ್ತಾರೆ.
- 2.2.2018 ರಂದು ವನಿತಾ ಸಮಾಜ ಪ್ರೇರಣಾ ರವರು ನಡೆಸಿದ ಕಾರ್ಯಕ್ರಮದಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
- 7.1.2018 ರಂದು “Davangere Expo 2018” ರಲ್ಲಿ ಚಿತ್ರಗೀತೆಗಳನ್ನು ಹಾಡಿರುತ್ತಾರೆ.
- 21.1.2018 ರಲ್ಲಿ Vasavi Cultural Academy, Chitradurga ಇವರು ಎರ್ಪಡಿಸಿದ ಪಿ.ಬಿ. ಶ್ರಿನಿವಾಸ್ ಹಿಟ್ಸ್ ಅಲ್ಲಿ ಹಾಡಿ ಜನರ ಮೆಚ್ಚುಗೆಯನ್ನ ಪಡೆದಿರುತ್ತಾರೆ.
- 28.12.2017 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
- 26.11.2017 ರಂದು GMIT ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ “ನಂದಿತ” ರವರೊಂದಿಗೆ ಸ್ಟೆಜ್ ಶೇರ್ ಮಾಡಿ ಚಿತ್ರಗೀತೆಯನ್ನು ಹಾಡಿ ಅವರ ಮೆಚ್ಚುಗೆ ಪಡೆದಿರುತ್ತಾರೆ.
- ಶಾಲೆಯಲ್ಲಿ ನಡೆಯುವ ಎಲ್ಲಾ ಸಿಂಗಿಂಗ್ Competition ನಲ್ಲಿ ಪ್ರತೀ ಬಾರಿಯು ಮೊದಲ ಬಹುಮಾನ ಗಳಿಸಿರುತ್ತಾರೆ.
- 28.12.2016 ರಲ್ಲಿ ದಾವಣಗೆರೆಯಲ್ಲಿ ಸಿ.ಅಶ್ವತ್ ಅವರ ಗೌರವಾರ್ಪಣೆ ಕಾರ್ಯಕ್ರಮ ಗುರುನಮನ ದಲ್ಲಿ ಭಾಗವಹಿಸಿದ ಅತೀ ಕಿರಿಯ ಗಾಯಕಿಯಾಗಿರುತ್ತಾರೆ.
- ಇವರು ಹಾಡಿರುವ ಗೀತೆಗಳು facebook ನಲ್ಲಿ 1.7 ಸಾವಿರಕ್ಕೂ ಹೆಚ್ಚು view ಗಳು ಹಾಗು ಮೆಚ್ಚುಗೆಗಳು ಸಿಕ್ಕಿವೆ.
ಸುದ್ದಿಗಾಗಿ ಸುದ್ದಿದಿನ.ಕಾಂ ವಾಟ್ಸಾಪ್ ನಂಬರ್ |9986715401
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ5 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ4 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!
-
ದಿನದ ಸುದ್ದಿ3 days ago
ದಾವಣಗೆರೆ | ರೈತ ಮುಖಂಡರೊಂದಿಗೆ ಸಭೆ ; ಕಾಡಾ ಸಭೆ ಶೀಘ್ರ, ಕಾಲುವೆಗೆ ನೀರು ಬಿಡಲು ದಿನಾಂಕ ನಿಗದಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್