Connect with us

ದಿನದ ಸುದ್ದಿ

ಗಾಯಕ ಕೃಷ್ಣಕುಮಾರ್ ಕುನ್ನತ್ ನಿಧನ : ಗಣ್ಯರ ಸಂತಾಪ

Published

on

ಸುದ್ದಿದಿನ ಡೆಸ್ಕ್ : ಕೆಕೆಎಂದೇ ಹೆಸರುವಾಸಿಯಾಗಿದ್ದ ಜನಪ್ರಿಯ ಹಿನ್ನೆಲೆ ಗಾಯಕ ಕೃಷ್ಣಕುಮಾರ್ ಕುನ್ನತ್ ಕೋಲ್ಕತ್ತಾದಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು.

ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಕುಸಿದು ಬಿದ್ದ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ, ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.

ಕೃಷ್ಣ ಕುಮಾರ್ ಕುನ್ನತ್ ಅವರನ್ನು ತಮಿಳು ಚಲನಚಿತ್ರ ಕಾದಲ್ ದೇಶಂ ಮೂಲಕ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಪರಿಚಯಿಸಿದ್ದರು. ಹಮ್ ದಿಲ್ ದೇ ಚುಕೆ ಸನಮ್ ಚಿತ್ರದ “ತಡಪ್ ತಡಪ್” ಹಾಡಿನ ಮೂಲಕ ಬಾಲಿವುಡ್ ಪ್ರವೇಶಿಸಿದ್ದರು.

ದೆಹಲಿ ಮೂಲದ ಗಾಯಕ, ಹಿಂದಿ, ತಮಿಳು, ತೆಲುಗು, ಕನ್ನಡ, ಮಲಯಾಳಂ, ಮರಾಠಿ, ಬೆಂಗಾಲಿ, ಅಸ್ಸಾಮಿ ಹಾಗೂ ಗುಜರಾತಿ ಭಾಷೆಗಳಲ್ಲಿ ಹಾಡಿದ್ದರು. ಸಂಗೀತದಲ್ಲಿ ಯಾವುದೇ ಔಪಚಾರಿಕ ತರಬೇತಿಪಡೆಯದೆ ಗಾಯಕರಾಗಿದ್ದರು.

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಪ್ರತಿಭಾವಂತ ಗಾಯಕನ ನಿಧನಕ್ಕೆ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ಸಂತಾಪ ಸೂಚಿಸಿದ್ದಾರೆ. ಕೆಕೆ ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಖ್ಯಾತ ಗಾಯಕ ಕೆ ಕೆ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಕೆ ಕೆ ಅವರ ಹಾಡುಗಳು ಎಲ್ಲಾ ವಯೋಮಾನದ ಜನರ ಮನಸೂರೆಗೊಳ್ಳುವ ಮೂಲಕ ಜನಪ್ರಿಯ ಗಾಯಕರಾಗಿದ್ದರು ಎಂದು ಪ್ರಧಾನಿ ಹೇಳಿದ್ದಾರೆ.

ಕೆಕೆ ಅವರು ಅತ್ಯಂತ ಪ್ರತಿಭಾವಂತ ಬಹುಮುಖ ಗಾಯಕರಾಗಿದ್ದರು. ಅವರ ಅಕಾಲಿಕ ನಿಧನದಿಂದ ತಮಗೆ ತುಂಬಾ ದುಃಖಕರವಾಗಿದ್ದು, ಭಾರತೀಯ ಸಂಗೀತಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending