ದಿನದ ಸುದ್ದಿ
ಚನ್ನಗಿರಿಯ ಕಲಾಭಿಮಾನಿಗಳ ಹೃದಯ ಗೆದ್ದ ತರಳಬಾಳು ಜಾನಪದ ಸಿರಿಯ ಪ್ರತಿಭೆಗಳು

ಸುದ್ದಿದಿನ,ಚನ್ನಗಿರಿ( ಪಾಂಡೋಮಟ್ಟಿ ): ನಾಡಿನ ಜಾನಪದ ಶ್ರೀಮಂತಿಕೆಯ ಸಾಂಸ್ಕೃತಿಕ ಕಣಜವನ್ನು ಉಳಿಸುವ ಪ್ರಯತ್ನದಿ ಯಶಸ್ಸು ಸಾಧಿಸಿ ಸಾಂಸ್ಕೃತಿಕ ಕಹಳೆಯನ್ನು ನಾಡಿನಾದ್ಯಂತ ಯಶಸ್ವಿಯಾಗಿ ಊದುತ್ತ ,ಕನ್ನಡದ ಕಲೋಪಾಸಕರ ಮನ ಗೆದ್ದಿರುವ ತರಳಬಾಳು ಜಗದ್ಗುರು ಬೃಹನ್ಮಠದ ಮುಖ್ಯ ವಾಹಿನಿಯಾಗಿ ಸಾಂಸ್ಕೃತಿಕ ರಸದೌತಣದ ಜೊತೆ ಕಲೆಯನ್ನು ಉಳಿಸಿ ಬೆಳೆಸುವ ಸಂದೇಶ ಸಾರುತ್ತಿರುವ ತರಳಬಾಳು ಜಾನಪದ ಸಿರಿ ಸಂಭ್ರಮದ ಯಶೋಗಾಥೆಗೆ ತಲೆದೂಗಿ ಅಹುದಹುದೆನ್ನಲೇಬೇಕು.
ಕೇವಲ ನಾಡು,ನುಡಿ, ಭಾಷೆ, ಸಂಸ್ಕೃತಿಯ ಬಗ್ಗೆ ವೇದಿಕೆಗಳಲ್ಲಿ ಬಡಾಯಿ ಕೊಚ್ಚಿಕೊಳ್ಳುವ ಪ್ರಭೂತಿಗಳಿಗೆ ಅಪವಾದದಂತೆ ಸದ್ದಿಲ್ಲದೆ ಜಾನಪದ ಸಂಸ್ಕೃತಿಯ ಪುನರುಜ್ಜೀವನದ ಕೈಂಕರ್ಯಕ್ಕೆ ಲಕ್ಷಾಂತರ ರೂಪಾಯಿಗಳನ್ನು ವಿನಿಯೋಗಿಸಿ ಯಾವುದೇ ಸರ್ಕಾರದ ಅನುದಾನ ಮತ್ತು ಅನುಮೋದನೆಗೆ ಜೋತು ಬೀಳದೆ ಲೋಕಮುಖಿ ಜಗದ್ಗುರುವೆಂದೇ ವಿಖ್ಯಾತರಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶಯದಂತೆ ತರಳಬಾಳು ಸಂಪದ್ಭರಿತ ಶಿಷ್ಯ ಸಮುದಾಯದ ಅಪೇಕ್ಷೆಯಂತೆ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಜಾನಪದದ ನಿಜ ಸೊಗಡಿನ ಕಂಪನ್ನು ಬೀರುತ್ತಿರುವ ತರಳಬಾಳು ಕಲಾ ಸಂಘದ ಕಲಾ ಜವಾಬ್ದಾರಿಯನ್ನು ನೋಡಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಾಚಿಕೆಪಟ್ಟುಕೊಳ್ಳಬೇಕು.
ಈ ವರ್ಷದ ಮೂರನೆಯ ಅವತರಣಿಕೆಯು ನಿನ್ನೆ ಯಶಸ್ವಿಯಾಗಿ ಚನ್ನಗಿರಿಯ ಪಾಂಡೋಮಟ್ಟಿಯ ಶ್ರೀ ರುದ್ರೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಜರುಗಿತು. ಸುಂದರ ಸಂಜೆಯ ಸಾಂಸ್ಕೃತಿಕ ಸ್ವರ್ಗಕ್ಕೆ ಸಾಕ್ಷಿಯಾದ 5 ಸಾವಿರ ಜನರ ಮನದಲ್ಲಿ ಉಳಿದಿದ್ದು ಕರಗ ನೃತ್ಯ, ಬೀಸು ಕಂಸಾಳೆ, ಡೊಳ್ಳು ಕುಣಿತ, ವೀರಗಾಸೆ, ಲಂಬಾಣಿ ನೃತ್ಯ, ಯಕ್ಷಗಾನ,ಮಲ್ಲಕಂಬ,ಮಲ್ಲಿ ಹಗ್ಗ ಸೇರಿದಂತೆ 25 ಕ್ಕೂ ಹೆಚ್ಚು ಕಲಾ ನೃತ್ಯ ಪ್ರಕಾರಗಳಲ್ಲಿ ಗ್ರಾಮೀಣ ಪ್ರದೇಶದ 350 ಮಕ್ಕಳ ಸಂಪನ್ನವಾದ ಕಲಾ ಪ್ರೌಢಿಮೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತ ಅಧಿಕಾರಿ ಶ್ರೀ ಎಸ್.ಬಿ ರಂಗನಾಥ್ ಕರ್ನಾಟಕದ 14 ಜಿಲ್ಲೆಗಳಲ್ಲಿ ವಿದ್ಯಾಸಂಸ್ಥೆಯ 250 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು ಗುಣಮಟ್ಟದ ಶಿಕ್ಷಣದ ಜೊತೆ ನಾಡು ನುಡಿ ಸಂಸ್ಕೃತಿಯನ್ನು ಮಕ್ಕಳಿಗೆ ಅರ್ಥೈಸುವ ಹೊಣೆಗಾರಿಕೆಯಿಂದ ಶ್ರೀ ಸಂಸ್ಥೆಯು ವಿಭಿನ್ನವಾದ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.
ಸ್ಥಳೀಯ ಬಿಜೆಪಿ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಮಾತನಾಡಿ ಕರ್ನಾಟಕ ರಂಗಭೂಮಿ ಇತಿಹಾಸಲ್ಲಿ ತರಳಬಾಳು ಕಲಾಸಂಘಕ್ಕೆ ಮಹತ್ವದ ಸ್ಥಾನವಿದ್ದು 70 ವರ್ಷಗಳ ಹಿಂದೆ ಪರಮ ಪೂಜ್ಯ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದದಿ ಸ್ಥಾಪಿತವಾದ ಕಲಾಸಂಘ ನೂರಾರು ಶರಣರ ನಾಟಕಗಳನ್ನು ದೇಶದಾದ್ಯಂತ ಪ್ರಯೋಗಿಸಿದ ಕೀರ್ತಿ ಹೊಂದಿದೆ ಎಂದರು .ಪ್ರಸ್ತುತ ಜಗದ್ಗುರುವರ್ಯರಾದ ಪೂಜನೀಯ ಶ್ರೀ ತರಳಬಾಳು ಜಗದ್ಗುರು ೧೧೦೮ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ದಿವ್ಯ ಮಾರ್ಗದರ್ಶನದಿ ಹೊಸ ಆಯಾಮ ಪಡೆದು ಕಲಾ ಸರಸ್ವತಿಯನ್ನು ಉಳಿಸಿ ಬೆಳೆಸುವ ಔಚಿತ್ಯಪೂರ್ಣ ಕಾರ್ಯದಿ ಯಶಸ್ವಿಯಾಗಿ ಸಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಅಭಿಪ್ರಾಯ ಪಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಒಡಿಶಾ ರೈಲು ದುರಂತ; 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮನ

ಸುದ್ದಿದಿನ, ಬೆಂಗಳೂರು: ಒಡಿಶಾದ ರೈಲು ದುರಂತದಲ್ಲಿ ಪಾರಾದ 80ಕ್ಕೂ ಹೆಚ್ಚು ಕನ್ನಡಿಗರು ವಿಮಾನದ ಮೂಲಕ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಒಡಿಶಾಗೆ ತೆರಳಿದ್ದಾರೆ. ಎರಡು ವಿಮಾನಗಳಲ್ಲಿ 80ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದು, ನಂತರ ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ತಮ್ಮ ಊರಿಗೆ ತೆರಳಿದ್ದಾರೆ.
18 ಜನ ಮೈಸೂರಿಗೆ ಉಳಿದವರು ಹಾಸನ, ಚಿಕ್ಕಮಗಳೂರು ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ಒಡಿಶಾ ರೈಲು ದುರಂತದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣಾ ಕಾರ್ಯಾಚರಣೆ ನಿರಂತರವಾಗಿ ಸಾಗಿದೆ. ಬಾಲಸೋರ್ ಸರ್ಕಾರಿ ಆಸ್ಪತ್ರೆಗೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ, ಅಲ್ಲಿನ ವೈದ್ಯಾಧಿಕಾರಿಗಳಿಂದ ರಾಜ್ಯದ ಗಾಯಾಳುಗಳ ಬಗ್ಗೆ ಮಾಹಿತಿ ಪಡೆದುಕೊಂಡರು, ಕನ್ನಡಿಗರ ಸುರಕ್ಷತೆ ಸಂಬಂಧ ಅಲ್ಲಿನ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೂ ಸಚಿವರು ಸಮಾಲೋಚನೆ ನಡೆಸಿದ್ದಾರೆ.
ಒರಿಸ್ಸಾದ ಪುರಿಯಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಭಾಗವಹಿಸಲು ತೆರಳಿದ್ದ ರಾಜ್ಯದ 17 ಜನರ ಕಲಾವಿದರ ತಂಡ ರೈಲು ದುರಂತದ ಹಿನ್ನೆಲೆಯಲ್ಲಿ ಹಿಂದಿರುಗಿ ಬರಲಾಗದೆ ಅತಂತ್ರ ಸ್ಥಿತಿಯಲ್ಲಿದ್ದರು.
ಈ ಕಲಾತಂಡವನ್ನು ಕ್ಷೇಮವಾಗಿ ಕರೆತರಲು ನಮ್ಮ ಸರ್ಕಾರ ವಿಮಾನ ಪ್ರಯಾಣದ ವ್ಯವಸ್ಥೆ ಮಾಡಿದೆ.
ಕನ್ನಡಿಗರ ಹಿತ ಕಾಯಲು ಕಾಂಗ್ರೆಸ್ ಸದಾ ಬದ್ದ.… pic.twitter.com/b5PK9akslN
— Karnataka Congress (@INCKarnataka) June 4, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರೈತರಿಂದ ಖರೀದಿಸುವ ಹಾಲಿನ ದರ ಕಡಿಮೆ ಮಾಡುವಂತಿಲ್ಲ : ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನ, ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಅಮೂಲ್ ದರ ಕಡಿತ ಮಾಡಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕ ಹಾಲು ಮಹಾಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ

ಸುದ್ದಿದಿನ ಡೆಸ್ಕ್ : ಕೋಲ್ಕತಾದ ಹೌರಾದಲ್ಲಿ ಸಿಲುಕಿರುವ ಕನ್ನಡಿಗರನ್ನು ವಿಶೇಷ ವಿಮಾನದಲ್ಲಿ ಕರ್ನಾಟಕಕ್ಕೆ ಕರೆ ತರಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ.
ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಎಲ್ಲರೂ ಆಗಮಿಸುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕೋಲ್ಕತಾದಿಂದ ಬೆಂಗಳೂರಿಗೆ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ.
ಮುಂಜಾನೆ ಹೊರಡಲಿರುವ ಇಂಡಿಗೊ ವಿಮಾನ ಬೆಂಗಳೂರಿಗೆ ಬರಲಿದೆ. ಕೋಲ್ಕತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪಾಲ್ಗೊಂಡಿದ್ದ ಆಟಗಾರರೂ ಈ ರೈಲುಗಳಲ್ಲಿ ವಾಪಸಾಗುವ ವೇಳೆ ಈ ದುರಂತ ಸಂಭವಿಸಿದ್ದು, ತರಬೇತುದಾರರು ಸೇರಿ 32 ಜನರನ್ನು ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ರಕ್ಷಣೆಗಾಗಿ ಸಚಿವ ಸಂತೋಷ್ ಲಾಡ್ ಅವರನ್ನು ಘಟನಾ ಸ್ಥಳಕ್ಕೆ ನಿಯೋಜಿಸಲಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ರೈಲು ದುರಂತದಲ್ಲಿ 280ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ಘೋರ, ದುರದೃಷ್ಟಕರ ಘಟನೆ. ಅಪಘಾತ ಸುದ್ದಿಯಿಂದ ಅತೀವ ನೋವಾಗಿದೆ. ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಅಪಘಾತದಲ್ಲಿ ಕನ್ನಡಿಗರ ಸಾವು – ನೋವಿನ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಘಟನೆಯ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಾಥಮಿಕ ಮಾಹಿತಿ ಪಡೆದು ಕನ್ನಡಿಗರ ರಕ್ಷಣೆಗೆ ಹಾಗೂ ಅಗತ್ಯ ನೆರವು ಒದಗಿಸಲು ಘಟನಾ ಸ್ಥಳಕ್ಕೆ ಸಚಿವ ಸಂತೋಷ್ ಲಾಡ್ ತೆರಳಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ದುರಂತದಲ್ಲಿ ಸಿಲುಕಿದ್ದ ಕನ್ನಡಿಗರೊಂದಿಗೆ ದೂರವಾಣಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಅಗತ್ಯ ನೆರವು ಒದಗಿಸಿ, ಸುರಕ್ಷಿತವಾಗಿ ವಾಪಸ್ ಕರೆ ತರಲಾಗುವುದು ಎಂದು ಧೈರ್ಯ ತುಂಬಿದರು. ರಾಜ್ಯ ಸರ್ಕಾರದ ತುರ್ತು ನಿರ್ವಹಣಾ ಕೇಂದ್ರದ ಸಹಾಯವಾಣಿ ಸಂಖ್ಯೆ 1070ಅಥವಾ
080-22253707 ಅಥವಾ 080 – 22340676 ಅನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಜೂನ್ 1 ರಿಂದಲೇ ಗ್ಯಾರಂಟಿ ಯೋಜನೆ ಘೋಷಣೆ
-
ದಿನದ ಸುದ್ದಿ3 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ4 days ago
ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ
-
ದಿನದ ಸುದ್ದಿ3 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ದಿನದ ಸುದ್ದಿ5 days ago
ಹೋಟೆಲ್ಗಳಲ್ಲಿ ವಿವಿಧ ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ2 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ