Connect with us

ದಿನದ ಸುದ್ದಿ

ಗದುಗಿನ ತೋಂಟದಾರ್ಯ ಮಠದ ನೂತನ ಉತ್ತರಾಧಿಕಾರಿ ‘ಬಸವನುಯಾಯಿ ಡಾ ಸಿದ್ದರಾಮ ಶ್ರೀ’ಗಳಿಗೆ ಶರಣರ ಆಶೀರ್ವಾದವಿರಲಿ

Published

on

ಶ್ರೀ ಸಾಮಾನ್ಯರ ಶ್ರೀಗಳಾಗಿ,ಕಂದಾಚಾರ ಮೂಢನಂಬಿಕೆಯ ವಿರುದ್ಧ ಗುಡುಗಿ ತ್ರಿವಿಧ ದಾಸೋಹಿಗಳಾಗಿ,ಗೋಕಾಕ್ ಚಳವಳಿಗೆ ನಾಂದಿ ಹಾಡಿ , ಜನ ಮೆಚ್ಚಿದ ಗುರುವಾದ ಗದುಗಿನ ತೋಂಟದಾರ್ಯ ಶ್ರೀ ಮಠದ ಡಾ.ಸಿದ್ದಲಿಂಗ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಪೀಠಾಭಿಮಾನಿಗಳಿಗೆ ಬರ ಸಿಡಿಲಿನಂತೆ ಎರಗಿದ್ದು ಎಲ್ಲರನ್ನೂ ದುಃಖದ ಮಡುವಿನಲ್ಲಿ ಮಲಗಿಸಿದೆ. ಪೂಜ್ಯರು 2008 ರಲ್ಲಿಯೇ ತಮ್ಮ ಉತ್ತರಾಧಿಕಾರಿಗಳನ್ನಾಗಿ ನಾಗನೂರು ರುದ್ರಾಕ್ಷಿ ಮಠದ ಶ್ರೀಗಳ ಹೆಸರನ್ನು ಉಯಿಲಿನಲ್ಲಿ ನಮೂದಿಸಿರುವುದು ತಮ್ಮ ನಂತರವೂ ಸಮಾಜ ಮುಖಿ ಚಿಂತನೆಯ ಯೋಗ್ಯ ಉತ್ತರಾಧಿಕಾರಿಗಳನ್ನಾಗಿ ಆಯ್ಕೆ ಮಾಡಿರುವುದು ಲೋಕ ಮೆಚ್ಚುಗೆಗೆ ಪಾತ್ರವಾಗಿದೆ.

ಗದುಗಿನ ತೋಂಟದಾರ್ಯ ಶ್ರೀ ಮಠದ ಉತ್ತರಾಧಿಕಾರಾಯಾಗಿ ನೇಮಕಗೊಂಡ ನಾಗನೂರೂ ರುದ್ರಾಕ್ಷಿ ಮಠದ ಪೂಜನೀಯ ಡಾ. ಶ್ರೀ ಸಿದ್ದರಾಮ ಸ್ವಾಮೀಜಿಯವರು ಅಪ್ಪಟ ಬಸವಣ್ಣನವರ ಅನುಯಾಯಿಗಳು. ಧಾರ್ಮಿಕ ದಬ್ಬಾಳಿಕೆಯ ವಿರುದ್ಧ ಹೋರಾಡುತ್ತಿರುವ ನಿತ್ಯ ಕ್ರಾಂತಿ ಯೋಗಿಗಳು.ಸಮತೆಯ ಹಾಗೂ ಸಮಾಜ ಕಲ್ಯಾಣದ ಕನಸು ಹೊತ್ತವರು,ಸ್ವತಂತ್ರ
ಲಿಂಗಾಯತ ಧರ್ಮದ ಸಾಧಕ ಬಾಧಕಗಳನ್ನು ಅರಿತು ಪ್ರಚುರ ಪಡಿಸಿದವರು.ಸಾಂಸ್ಕೃತಿಕ ಮತ್ತು ವಚನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವವರು.

ನಾನೇ ಶ್ರೇಷ್ಠ ಎಂದು ಬೊಗಳೇ ಬಿಡುವ ಪೂಜಾರಿ ಪುರೋಹಿತ ಕಪಟ ಕಾವಿಧಾರಿಗಳ ನಿದ್ದೆ ಕೆಡಿಸಿದವರು.ಕಾಯಕವೇ ಪೂಜೆ, ಜನತೆಯೇ ಜಂಗಮವೆಂಬ ತತ್ವವನ್ನು ನಿತ್ಯಾನುಷ್ಟಾನ ಕೈಂಕರ್ಯದ ತರಳಬಾಳು ಶ್ರೀ ಜಗದ್ಗುರುವರ್ಯರೊಡನೆ ಉತ್ತಮ ಬಾಂಧವ್ಯ ಹೊಂದಿದವರು.ತರಳಬಾಳು ಶ್ರೀ ಜಗದ್ಗುರುವರ್ಯರ ವಿದ್ವತ್ ಪ್ರಭೆಗೆ ಮಾರು ಹೋಗಿ ಮಾರ್ಗದರ್ಶನದ ಆಶೀರ್ವಾದ ಬೇಡುವ ನಿಜ ಸಂತರು. ಪೂಜ್ಯರು ಇತ್ತೀಚೆಗೆ ಜಗಳೂರಿನಲ್ಲಿ ಜರುಗಿದ ತರಳಬಾಳು ಹುಣ್ಣಿಮೆ ಮಹೋತ್ಸವದ ಮೊದಲನೇ ದಿನದ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಕರುಣಿಸಿದ ಆಶೀರ್ವಚನ ಶ್ರೀ ಮಠದ ಮೇಲೆ ಅವರು ಹೊಂದಿರುವ ಗೌರವ ವಿಶ್ವಾಸಗಳಿಗೆ ಸಾಕ್ಷಿಯಂತಿದೆ.

ಪೂಜ್ಯರು ಕನ್ನಡದ ಜಗದ್ಗುರುವಿನ ಆಶೀರ್ವಾದದ ಆಣತಿಯಂತೆ.ಗದಗಿನ ಡಂಬಳದ ತೋಂಟದಾರ್ಯ ಮಠದ ಗುರುತರ ಜವಾಬ್ದಾರಿ ಹೊರಲಿರುವುದು ಬಸವಾನುಯಾಯಿಗಳಿಗೆ ಸಂತಸ ತಂದಿದೆ.
ನಡೆ ಮತ್ತು ನುಡಿಯಲಿ ಅಣ್ಣನವರ ಆಜ್ಞಾದಾರಿಗಳಾದ ಶ್ರೀಗಳಿಗೆ ವಿಶ್ವಬಂಧು ಮರುಳಸಿದ್ದರ ತರಳಬಾಳು ಜಗದ್ಗುರುವರ್ಯರ ಆಶೀರ್ವಾದ ಪೂರ್ವಕ ಮಾರ್ಗದರ್ಶನ ಸದಾ ಇರಲೆಂಬ ಆಶಯ ನಮ್ಮದು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending