Connect with us

ದಿನದ ಸುದ್ದಿ

ಬಸವನೊಲುಮೆಯ ಸಿರಿಗೆರೆ ಶ್ರೀ ಶಿವಕುಮಾರ ಶ್ರೀಗಳ 26 ನೇ ಶ್ರದ್ಧಾಂಜಲಿ ಕಾರ್ಯಕ್ರಮ

Published

on

ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಮಹಾಗುರುವಾಗಿ, ಕತ್ತಲೆಯಲ್ಲಿದ್ದ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮಹಾಬೆಳಕನ್ನು ತೋರಿ ನಿಜಾರ್ಥದ ಜಗದ್ಗುರುವೆಂದು ಜನಮಾನಸದಿ ಚಿರಸ್ಥಾಯಿಯಾಗಿರುವ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಇಪ್ಪತ್ತನೇಯ ಪೀಠಾಧೀಪತಿಗಳಾಗಿದ್ದ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ತಮ್ಮ ಜೀವಿತದ ಅವಧಿಯಲ್ಲಿಯೇ ಜನಮಾನಸದಿ ದಂತಕಥೆಯಾದವರು.

ಮೃತ್ಯು ಲೋಕದ ಕರ್ತಾರನ ಕಮ್ಮಟದಲ್ಲಿ ಲಿಂಗ ಮೆಚ್ಚಿ ಅಹುದಹುದೆನ್ನುವಂತೆ ಬದುಕಿದ ಅವರು ನುಡಿ ಜಾಣರಾಗದೆ ನಡೆಧೀರರಾಗಿದ್ದ ಅಪ್ರತಿಮ ವೀರ ಸನ್ಯಾಸಿ. ಅಜ್ಞಾನ, ಬಡತನ, ಅಶಿಸ್ತುಗಳನ್ನೕ ಬಳುವಳಿಯಾಗಿ ಪಡೆದ ಶಿಷ್ಯ ಸಮುದಾಯ.ಬಿಡಿಗಾಸು ಇಲ್ಲದ,ಹೆಸರಿಗೆ ಮಾತ್ರ ” ಬೃಹನ್ಮಠ” ಎನಿಸಿಕೊಂಡಿದ್ದ ಪೀಠ.ಸದಾ ಕತ್ತಿ ಮಸೆಯುವ ಒಳ ಹೊರಗಿನ ಶತ್ರುಗಳು-ಇವುಗಳ ಮಧ್ಯೆ ವೈರಿಯೂ ಮೆಚ್ಚಿ ತಲೆದೂಗುವಂತೆ ಅಡೆತಡೆಗಳನ್ನು ಪುಡಿಗೈದು ಸಮಾಜವನ್ನು ಕಟ್ಟಿ ಬೆಳೆಸಿದರು.ಕಂಟಕಗಳೆಂಬ ಕೆಂಡದ ಹಾಸಿಗೆಯಲ್ಲಿ ಮಲಗಿದರೂ,ಉಂಡದ್ದು ದ್ವೇಷ ಅಸೂಯೆಗಳ ಹಾಲಹಲವಾದರೂ ಸಮಾಜವೆಂಬ ಶಿಶುವಿಗೆ ಅಮೃತವನ್ನೇ ಮನದಣಿಯೇ ಉಣಿಸಿದರು.

ಹಳ್ಳಿಗಾಡಿನಲ್ಲಿ ನೆಲೆ ಕಳೆದುಕೊಂಡ ಬೇರುಗಳಿಗೆ ಶಿಕ್ಷಣದ ನೀರೆರೆದು ಬದುಕಿಸಿ ,ಸುಡುವ ಬೆಂಗಾಡಿನಲ್ಲಿಯೂ ಸುಖದ ನಂದನ ವನವನ್ನು ನಿರ್ಮಿಸಿದ ಮಹಾನಿರ್ಮಾತ್ರರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳವರು.ಉರಿಬರಲಿ,ಸಿರಿಬರಲಿ ಅಂಜದೇ ಅಳುಕದೆ ಪರಮಾತ್ಮನ ರಾಜತೇಜದಲ್ಲಿ ಬಾಳಿ ಸಮಾಜವನ್ನು ಮುನ್ನಡೆಸಿದ ಅವರ ಬದುಕೇ ಒಂದು ವೀರಗಾಥೆ.ಕಾಯಕವೇ ಶಿವಪೂಜೆ,ಜನತೆಯೇ ಜಂಗಮವೆಂದು ನಂಬಿ,ನುಡಿದು,ನಡೆದು ಭವದ ಬದುಕಿನಲ್ಲಿ ನೀರತಾವರೆಯಂತೆ ಬಾಳಿದ ಅವರ ಬದುಕೇ ಅನನ್ಯ,ಅಸದೃಶ .ಸಾಗರಕ್ಕೆ ಸಾಗರವೇ ಉಪಮೆ ಎನ್ನುವಂತೆ ಅವರಿಗೆ ಅವರೇ ಸಾಟಿ. ಗುರುಗಳವರು ಆಸೀನರಾದದ್ದು ಬೆಳ್ಳಿ ಬಂಗಾರದ ಸಿಂಹಾಸನದ ಮೇಲೆ ಅಲ್ಲ.ಭಕ್ತರ ಹೃದಯವೇ ಅವರ ಸಿಂಹಾಸನವಾಗಿತ್ತು.
ಸದ್ಭಕ್ತರಹೃದಯ ಸಿಂಹಾಸನಾಧೀಶರಾದ ಅವರನ್ನು ನೆನೆಯುವುದೇ ಪುಣ್ಯದ ಕೆಲಸ.

ಶ್ರದ್ಧಾಂಜಲಿ ಕಾರ್ಯಕ್ರಮ

ಇದೇ 2018 ರ ಸೆಪ್ಟಂಬರ್ 24 ರಂದು ಅವರ 26 ನೇಯ ಶ್ರದ್ದಾಂಜಲಿ ಸಮಾರಂಭ. ತಮ್ಮ ಭಕ್ತ ಕುಸುಮಾಂಜಲಿಯನ್ನು ಅರ್ಪಿಸಲು ಭಕ್ತರಿಗೆ ಇದೊಂದು ಸದಾವಕಾಶ. ಶ್ರದ್ದಾಂಜಲಿ ಸಮಾರಂಭ 20 ರಿಂದ 24 ರ ವರೆಗೆ ಸಿರಿಗೆರೆಯಲ್ಲಿ ಜರುಗಲಿದ್ದು ತನ್ನಿಮಿತ್ತ ಧಾರ್ಮಿಕ, ಸಾಂಸ್ಕೃತಿಕ, ಸಮಾಜ ಮುಖಿ ಚಿಂತನಾ ಕಾರ್ಯಕ್ರಮಗಳನ್ನು ಆಯೋಜಿಸಿರುವ ಕುರಿತು ಪ್ರಸ್ತುತ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾಹಿತಿ ನೀಡಿದರು.

ರಾಜ್ಯದ 14ಜಿಲ್ಲೆಗಳಲ್ಲಿ ನಡೆಯುತ್ತಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.20 ರಿಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರದರ್ಶನಗಳು,21 ರಂದು ಪ್ರಾದೇಶಿಕ ಮಟ್ಟದಲ್ಲಿ ವಿಜಯಿಯಾದ ತಂಡಗಳ ಸ್ಪರ್ಧೆಗಳು ಹಾಗೂ 22 ರಂದು ಕಾಲೇಜು ಮಟ್ಟದ ವಿದ್ಯಾರ್ಥಿಗಳ ಅಂತಿಮ ಸ್ಪರ್ಧೆಗಳು ನಡೆಯಲಿವೆ.ಪ್ರತಿ ದಿನ ಸಂಜೆ ಜರುಗುವ ಭವ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ತಂಡಗಳು ಪ್ರದರ್ಶನಗಳಿಗೆ ಅವಕಾಶ ನೀಡುವುದಾಗಿ ತಿಳಿಸಿದರು.

24 ರಂದು ಶ್ರದ್ದಾಂಜಲಿ ಸಮಾರಂಭಕ್ಕೆ ಆಗಮಿಷುವ ಆಗಮಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಶ್ರೀ ಗುರುಶಾಂತೇಶ್ವರ ದಾಸೋಹ ಮಂಟಪ,ನೂತನವಾಗಿ ಸುಮಾರು ನಲವತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನಿಲಯದ ಒಳಾಂಗಣದಲ್ಲಿ,ಪ್ರತಿ ವರ್ಷ ನಿರ್ಮಿಸುವ ದಾಸೋಹ ಮಂಟಪ ಸೇರಿದಂತೆ ಈ ಬಾರಿ ಮೂರು ಕಡೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗುವುದು, ಹಿರೇಕೆರೂರ ತಾಲ್ಲೂಕಿನ ಒಂದು ಸಾವಿರ ಸ್ವಯಂ ಸೇವಕರು ದಾಸೋಹದ ನೆರವಿನ ನಿರ್ವಹಣೆ ನಡೆಸುವ ಜೊತೆಗೆ ಸಿರಿಗೆರೆ ಸುತ್ತಲಿನ ಗ್ರಾಮಗಳ ಸ್ವಯಂಸೇವಾ ತಂಡಗಳು,ಸ್ಥಳೀಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸ್ವಯಂ ಸೇವಾ ತಂಡಗಳು ದಾಸೋಹ ವಿತರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ತರಳಬಾಳು ಶಾಖಾ ಶ್ರೀ ಮಠ ಸಾಣೇಹಳ್ಳಿಯ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಸಭಾ ಮಂಟಪ, ದಾಸೋಹ ಮಂಟಪ,ಸ್ವಾಗತ ಕಮಾನುಗಳ ರಚನೆ,ಅಡುಗೆ ಮಾಡಲು ದಾವಣಗೆರೆಯ ಮಹೇಶ್ವರಪ್ಪ ,ತುಮಕೂರಿನ ಆಂಕರ್ ತಂಡ, ವಿದ್ಯುತ್ ದೀಪಾಲಂಕಾರ ಮತ್ತು ಧ್ವನಿವರ್ದಕಗಳ ವ್ಯವಸ್ಥೆಯನ್ನು ಬೆಂಗಳೂರಿನ ಪರಿಣಿತ ತಂಡದವರು ನಿರ್ವಹಿಸಲಿದ್ದಾರೆ ಎಂದರು.

ಪ್ರತಿದಿನ ಸಂಜೆ 6 ಗಂಟೆಗೆ ಸಮಾರಂಭ ಆರಂಭವಾಗಲಿದ್ದು ನಾಡಿನ ವಿದ್ವಾಂಸರು,ಸಚಿವರು, ಸಂಸದರು, ಶಾಸಕರು,ವಿವಿಧ ಕ್ಷೇತ್ರಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ,23 ರಂದು ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಯುವ ಹಿರಿಯ ವಿದ್ಯಾರ್ಥಿ ಸಮಾವೇಶವನ್ನೂ ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು.

ಸೆಪ್ಟೆಂಬರ್ 24 ರ ಬೆಳಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ ಗಣ್ಯಾತಿಗಣ್ಯರ ಲಕ್ಷಾಂತರ ಭಕ್ತ ಸಮುದಾಯದ ಉಪಸ್ಥಿತಿಗೆ ಸಾಕ್ಷಿಯಾಗಲಿರುವುದರ ಬಗ್ಗೆ ಮಾಹಿತಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ4 days ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ4 days ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ5 days ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ2 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ3 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ3 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ3 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending