ದಿನದ ಸುದ್ದಿ
ಬಸವನೊಲುಮೆಯ ಸಿರಿಗೆರೆ ಶ್ರೀ ಶಿವಕುಮಾರ ಶ್ರೀಗಳ 26 ನೇ ಶ್ರದ್ಧಾಂಜಲಿ ಕಾರ್ಯಕ್ರಮ
![](https://suddidina.com/wp-content/uploads/2018/09/Taralabalu-suddidina178.jpg)
ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಮಹಾಗುರುವಾಗಿ, ಕತ್ತಲೆಯಲ್ಲಿದ್ದ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮಹಾಬೆಳಕನ್ನು ತೋರಿ ನಿಜಾರ್ಥದ ಜಗದ್ಗುರುವೆಂದು ಜನಮಾನಸದಿ ಚಿರಸ್ಥಾಯಿಯಾಗಿರುವ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಇಪ್ಪತ್ತನೇಯ ಪೀಠಾಧೀಪತಿಗಳಾಗಿದ್ದ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ತಮ್ಮ ಜೀವಿತದ ಅವಧಿಯಲ್ಲಿಯೇ ಜನಮಾನಸದಿ ದಂತಕಥೆಯಾದವರು.
ಮೃತ್ಯು ಲೋಕದ ಕರ್ತಾರನ ಕಮ್ಮಟದಲ್ಲಿ ಲಿಂಗ ಮೆಚ್ಚಿ ಅಹುದಹುದೆನ್ನುವಂತೆ ಬದುಕಿದ ಅವರು ನುಡಿ ಜಾಣರಾಗದೆ ನಡೆಧೀರರಾಗಿದ್ದ ಅಪ್ರತಿಮ ವೀರ ಸನ್ಯಾಸಿ. ಅಜ್ಞಾನ, ಬಡತನ, ಅಶಿಸ್ತುಗಳನ್ನೕ ಬಳುವಳಿಯಾಗಿ ಪಡೆದ ಶಿಷ್ಯ ಸಮುದಾಯ.ಬಿಡಿಗಾಸು ಇಲ್ಲದ,ಹೆಸರಿಗೆ ಮಾತ್ರ ” ಬೃಹನ್ಮಠ” ಎನಿಸಿಕೊಂಡಿದ್ದ ಪೀಠ.ಸದಾ ಕತ್ತಿ ಮಸೆಯುವ ಒಳ ಹೊರಗಿನ ಶತ್ರುಗಳು-ಇವುಗಳ ಮಧ್ಯೆ ವೈರಿಯೂ ಮೆಚ್ಚಿ ತಲೆದೂಗುವಂತೆ ಅಡೆತಡೆಗಳನ್ನು ಪುಡಿಗೈದು ಸಮಾಜವನ್ನು ಕಟ್ಟಿ ಬೆಳೆಸಿದರು.ಕಂಟಕಗಳೆಂಬ ಕೆಂಡದ ಹಾಸಿಗೆಯಲ್ಲಿ ಮಲಗಿದರೂ,ಉಂಡದ್ದು ದ್ವೇಷ ಅಸೂಯೆಗಳ ಹಾಲಹಲವಾದರೂ ಸಮಾಜವೆಂಬ ಶಿಶುವಿಗೆ ಅಮೃತವನ್ನೇ ಮನದಣಿಯೇ ಉಣಿಸಿದರು.
ಹಳ್ಳಿಗಾಡಿನಲ್ಲಿ ನೆಲೆ ಕಳೆದುಕೊಂಡ ಬೇರುಗಳಿಗೆ ಶಿಕ್ಷಣದ ನೀರೆರೆದು ಬದುಕಿಸಿ ,ಸುಡುವ ಬೆಂಗಾಡಿನಲ್ಲಿಯೂ ಸುಖದ ನಂದನ ವನವನ್ನು ನಿರ್ಮಿಸಿದ ಮಹಾನಿರ್ಮಾತ್ರರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳವರು.ಉರಿಬರಲಿ,ಸಿರಿಬರಲಿ ಅಂಜದೇ ಅಳುಕದೆ ಪರಮಾತ್ಮನ ರಾಜತೇಜದಲ್ಲಿ ಬಾಳಿ ಸಮಾಜವನ್ನು ಮುನ್ನಡೆಸಿದ ಅವರ ಬದುಕೇ ಒಂದು ವೀರಗಾಥೆ.ಕಾಯಕವೇ ಶಿವಪೂಜೆ,ಜನತೆಯೇ ಜಂಗಮವೆಂದು ನಂಬಿ,ನುಡಿದು,ನಡೆದು ಭವದ ಬದುಕಿನಲ್ಲಿ ನೀರತಾವರೆಯಂತೆ ಬಾಳಿದ ಅವರ ಬದುಕೇ ಅನನ್ಯ,ಅಸದೃಶ .ಸಾಗರಕ್ಕೆ ಸಾಗರವೇ ಉಪಮೆ ಎನ್ನುವಂತೆ ಅವರಿಗೆ ಅವರೇ ಸಾಟಿ. ಗುರುಗಳವರು ಆಸೀನರಾದದ್ದು ಬೆಳ್ಳಿ ಬಂಗಾರದ ಸಿಂಹಾಸನದ ಮೇಲೆ ಅಲ್ಲ.ಭಕ್ತರ ಹೃದಯವೇ ಅವರ ಸಿಂಹಾಸನವಾಗಿತ್ತು.
ಸದ್ಭಕ್ತರಹೃದಯ ಸಿಂಹಾಸನಾಧೀಶರಾದ ಅವರನ್ನು ನೆನೆಯುವುದೇ ಪುಣ್ಯದ ಕೆಲಸ.
ಶ್ರದ್ಧಾಂಜಲಿ ಕಾರ್ಯಕ್ರಮ
ಇದೇ 2018 ರ ಸೆಪ್ಟಂಬರ್ 24 ರಂದು ಅವರ 26 ನೇಯ ಶ್ರದ್ದಾಂಜಲಿ ಸಮಾರಂಭ. ತಮ್ಮ ಭಕ್ತ ಕುಸುಮಾಂಜಲಿಯನ್ನು ಅರ್ಪಿಸಲು ಭಕ್ತರಿಗೆ ಇದೊಂದು ಸದಾವಕಾಶ. ಶ್ರದ್ದಾಂಜಲಿ ಸಮಾರಂಭ 20 ರಿಂದ 24 ರ ವರೆಗೆ ಸಿರಿಗೆರೆಯಲ್ಲಿ ಜರುಗಲಿದ್ದು ತನ್ನಿಮಿತ್ತ ಧಾರ್ಮಿಕ, ಸಾಂಸ್ಕೃತಿಕ, ಸಮಾಜ ಮುಖಿ ಚಿಂತನಾ ಕಾರ್ಯಕ್ರಮಗಳನ್ನು ಆಯೋಜಿಸಿರುವ ಕುರಿತು ಪ್ರಸ್ತುತ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾಹಿತಿ ನೀಡಿದರು.
ರಾಜ್ಯದ 14ಜಿಲ್ಲೆಗಳಲ್ಲಿ ನಡೆಯುತ್ತಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.20 ರಿಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರದರ್ಶನಗಳು,21 ರಂದು ಪ್ರಾದೇಶಿಕ ಮಟ್ಟದಲ್ಲಿ ವಿಜಯಿಯಾದ ತಂಡಗಳ ಸ್ಪರ್ಧೆಗಳು ಹಾಗೂ 22 ರಂದು ಕಾಲೇಜು ಮಟ್ಟದ ವಿದ್ಯಾರ್ಥಿಗಳ ಅಂತಿಮ ಸ್ಪರ್ಧೆಗಳು ನಡೆಯಲಿವೆ.ಪ್ರತಿ ದಿನ ಸಂಜೆ ಜರುಗುವ ಭವ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ತಂಡಗಳು ಪ್ರದರ್ಶನಗಳಿಗೆ ಅವಕಾಶ ನೀಡುವುದಾಗಿ ತಿಳಿಸಿದರು.
24 ರಂದು ಶ್ರದ್ದಾಂಜಲಿ ಸಮಾರಂಭಕ್ಕೆ ಆಗಮಿಷುವ ಆಗಮಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಶ್ರೀ ಗುರುಶಾಂತೇಶ್ವರ ದಾಸೋಹ ಮಂಟಪ,ನೂತನವಾಗಿ ಸುಮಾರು ನಲವತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನಿಲಯದ ಒಳಾಂಗಣದಲ್ಲಿ,ಪ್ರತಿ ವರ್ಷ ನಿರ್ಮಿಸುವ ದಾಸೋಹ ಮಂಟಪ ಸೇರಿದಂತೆ ಈ ಬಾರಿ ಮೂರು ಕಡೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗುವುದು, ಹಿರೇಕೆರೂರ ತಾಲ್ಲೂಕಿನ ಒಂದು ಸಾವಿರ ಸ್ವಯಂ ಸೇವಕರು ದಾಸೋಹದ ನೆರವಿನ ನಿರ್ವಹಣೆ ನಡೆಸುವ ಜೊತೆಗೆ ಸಿರಿಗೆರೆ ಸುತ್ತಲಿನ ಗ್ರಾಮಗಳ ಸ್ವಯಂಸೇವಾ ತಂಡಗಳು,ಸ್ಥಳೀಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸ್ವಯಂ ಸೇವಾ ತಂಡಗಳು ದಾಸೋಹ ವಿತರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ತರಳಬಾಳು ಶಾಖಾ ಶ್ರೀ ಮಠ ಸಾಣೇಹಳ್ಳಿಯ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಸಭಾ ಮಂಟಪ, ದಾಸೋಹ ಮಂಟಪ,ಸ್ವಾಗತ ಕಮಾನುಗಳ ರಚನೆ,ಅಡುಗೆ ಮಾಡಲು ದಾವಣಗೆರೆಯ ಮಹೇಶ್ವರಪ್ಪ ,ತುಮಕೂರಿನ ಆಂಕರ್ ತಂಡ, ವಿದ್ಯುತ್ ದೀಪಾಲಂಕಾರ ಮತ್ತು ಧ್ವನಿವರ್ದಕಗಳ ವ್ಯವಸ್ಥೆಯನ್ನು ಬೆಂಗಳೂರಿನ ಪರಿಣಿತ ತಂಡದವರು ನಿರ್ವಹಿಸಲಿದ್ದಾರೆ ಎಂದರು.
ಪ್ರತಿದಿನ ಸಂಜೆ 6 ಗಂಟೆಗೆ ಸಮಾರಂಭ ಆರಂಭವಾಗಲಿದ್ದು ನಾಡಿನ ವಿದ್ವಾಂಸರು,ಸಚಿವರು, ಸಂಸದರು, ಶಾಸಕರು,ವಿವಿಧ ಕ್ಷೇತ್ರಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ,23 ರಂದು ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಯುವ ಹಿರಿಯ ವಿದ್ಯಾರ್ಥಿ ಸಮಾವೇಶವನ್ನೂ ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು.
ಸೆಪ್ಟೆಂಬರ್ 24 ರ ಬೆಳಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ ಗಣ್ಯಾತಿಗಣ್ಯರ ಲಕ್ಷಾಂತರ ಭಕ್ತ ಸಮುದಾಯದ ಉಪಸ್ಥಿತಿಗೆ ಸಾಕ್ಷಿಯಾಗಲಿರುವುದರ ಬಗ್ಗೆ ಮಾಹಿತಿ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!