Connect with us

ದಿನದ ಸುದ್ದಿ

ಬಸವನೊಲುಮೆಯ ಸಿರಿಗೆರೆ ಶ್ರೀ ಶಿವಕುಮಾರ ಶ್ರೀಗಳ 26 ನೇ ಶ್ರದ್ಧಾಂಜಲಿ ಕಾರ್ಯಕ್ರಮ

Published

on

ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಮಹಾಗುರುವಾಗಿ, ಕತ್ತಲೆಯಲ್ಲಿದ್ದ ಸಮಾಜಕ್ಕೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮಹಾಬೆಳಕನ್ನು ತೋರಿ ನಿಜಾರ್ಥದ ಜಗದ್ಗುರುವೆಂದು ಜನಮಾನಸದಿ ಚಿರಸ್ಥಾಯಿಯಾಗಿರುವ ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಇಪ್ಪತ್ತನೇಯ ಪೀಠಾಧೀಪತಿಗಳಾಗಿದ್ದ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರು ತಮ್ಮ ಜೀವಿತದ ಅವಧಿಯಲ್ಲಿಯೇ ಜನಮಾನಸದಿ ದಂತಕಥೆಯಾದವರು.

ಮೃತ್ಯು ಲೋಕದ ಕರ್ತಾರನ ಕಮ್ಮಟದಲ್ಲಿ ಲಿಂಗ ಮೆಚ್ಚಿ ಅಹುದಹುದೆನ್ನುವಂತೆ ಬದುಕಿದ ಅವರು ನುಡಿ ಜಾಣರಾಗದೆ ನಡೆಧೀರರಾಗಿದ್ದ ಅಪ್ರತಿಮ ವೀರ ಸನ್ಯಾಸಿ. ಅಜ್ಞಾನ, ಬಡತನ, ಅಶಿಸ್ತುಗಳನ್ನೕ ಬಳುವಳಿಯಾಗಿ ಪಡೆದ ಶಿಷ್ಯ ಸಮುದಾಯ.ಬಿಡಿಗಾಸು ಇಲ್ಲದ,ಹೆಸರಿಗೆ ಮಾತ್ರ ” ಬೃಹನ್ಮಠ” ಎನಿಸಿಕೊಂಡಿದ್ದ ಪೀಠ.ಸದಾ ಕತ್ತಿ ಮಸೆಯುವ ಒಳ ಹೊರಗಿನ ಶತ್ರುಗಳು-ಇವುಗಳ ಮಧ್ಯೆ ವೈರಿಯೂ ಮೆಚ್ಚಿ ತಲೆದೂಗುವಂತೆ ಅಡೆತಡೆಗಳನ್ನು ಪುಡಿಗೈದು ಸಮಾಜವನ್ನು ಕಟ್ಟಿ ಬೆಳೆಸಿದರು.ಕಂಟಕಗಳೆಂಬ ಕೆಂಡದ ಹಾಸಿಗೆಯಲ್ಲಿ ಮಲಗಿದರೂ,ಉಂಡದ್ದು ದ್ವೇಷ ಅಸೂಯೆಗಳ ಹಾಲಹಲವಾದರೂ ಸಮಾಜವೆಂಬ ಶಿಶುವಿಗೆ ಅಮೃತವನ್ನೇ ಮನದಣಿಯೇ ಉಣಿಸಿದರು.

ಹಳ್ಳಿಗಾಡಿನಲ್ಲಿ ನೆಲೆ ಕಳೆದುಕೊಂಡ ಬೇರುಗಳಿಗೆ ಶಿಕ್ಷಣದ ನೀರೆರೆದು ಬದುಕಿಸಿ ,ಸುಡುವ ಬೆಂಗಾಡಿನಲ್ಲಿಯೂ ಸುಖದ ನಂದನ ವನವನ್ನು ನಿರ್ಮಿಸಿದ ಮಹಾನಿರ್ಮಾತ್ರರು ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳವರು.ಉರಿಬರಲಿ,ಸಿರಿಬರಲಿ ಅಂಜದೇ ಅಳುಕದೆ ಪರಮಾತ್ಮನ ರಾಜತೇಜದಲ್ಲಿ ಬಾಳಿ ಸಮಾಜವನ್ನು ಮುನ್ನಡೆಸಿದ ಅವರ ಬದುಕೇ ಒಂದು ವೀರಗಾಥೆ.ಕಾಯಕವೇ ಶಿವಪೂಜೆ,ಜನತೆಯೇ ಜಂಗಮವೆಂದು ನಂಬಿ,ನುಡಿದು,ನಡೆದು ಭವದ ಬದುಕಿನಲ್ಲಿ ನೀರತಾವರೆಯಂತೆ ಬಾಳಿದ ಅವರ ಬದುಕೇ ಅನನ್ಯ,ಅಸದೃಶ .ಸಾಗರಕ್ಕೆ ಸಾಗರವೇ ಉಪಮೆ ಎನ್ನುವಂತೆ ಅವರಿಗೆ ಅವರೇ ಸಾಟಿ. ಗುರುಗಳವರು ಆಸೀನರಾದದ್ದು ಬೆಳ್ಳಿ ಬಂಗಾರದ ಸಿಂಹಾಸನದ ಮೇಲೆ ಅಲ್ಲ.ಭಕ್ತರ ಹೃದಯವೇ ಅವರ ಸಿಂಹಾಸನವಾಗಿತ್ತು.
ಸದ್ಭಕ್ತರಹೃದಯ ಸಿಂಹಾಸನಾಧೀಶರಾದ ಅವರನ್ನು ನೆನೆಯುವುದೇ ಪುಣ್ಯದ ಕೆಲಸ.

ಶ್ರದ್ಧಾಂಜಲಿ ಕಾರ್ಯಕ್ರಮ

ಇದೇ 2018 ರ ಸೆಪ್ಟಂಬರ್ 24 ರಂದು ಅವರ 26 ನೇಯ ಶ್ರದ್ದಾಂಜಲಿ ಸಮಾರಂಭ. ತಮ್ಮ ಭಕ್ತ ಕುಸುಮಾಂಜಲಿಯನ್ನು ಅರ್ಪಿಸಲು ಭಕ್ತರಿಗೆ ಇದೊಂದು ಸದಾವಕಾಶ. ಶ್ರದ್ದಾಂಜಲಿ ಸಮಾರಂಭ 20 ರಿಂದ 24 ರ ವರೆಗೆ ಸಿರಿಗೆರೆಯಲ್ಲಿ ಜರುಗಲಿದ್ದು ತನ್ನಿಮಿತ್ತ ಧಾರ್ಮಿಕ, ಸಾಂಸ್ಕೃತಿಕ, ಸಮಾಜ ಮುಖಿ ಚಿಂತನಾ ಕಾರ್ಯಕ್ರಮಗಳನ್ನು ಆಯೋಜಿಸಿರುವ ಕುರಿತು ಪ್ರಸ್ತುತ ಜಗದ್ಗುರುವರ್ಯರಾದ ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ಪೂರ್ವಭಾವಿ ಸಭೆಯ ಸಾನ್ನಿಧ್ಯ ವಹಿಸಿ ಮಾಹಿತಿ ನೀಡಿದರು.

ರಾಜ್ಯದ 14ಜಿಲ್ಲೆಗಳಲ್ಲಿ ನಡೆಯುತ್ತಿರುವ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.20 ರಿಂದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಪ್ರದರ್ಶನಗಳು,21 ರಂದು ಪ್ರಾದೇಶಿಕ ಮಟ್ಟದಲ್ಲಿ ವಿಜಯಿಯಾದ ತಂಡಗಳ ಸ್ಪರ್ಧೆಗಳು ಹಾಗೂ 22 ರಂದು ಕಾಲೇಜು ಮಟ್ಟದ ವಿದ್ಯಾರ್ಥಿಗಳ ಅಂತಿಮ ಸ್ಪರ್ಧೆಗಳು ನಡೆಯಲಿವೆ.ಪ್ರತಿ ದಿನ ಸಂಜೆ ಜರುಗುವ ಭವ್ಯ ವೇದಿಕೆಯ ಕಾರ್ಯಕ್ರಮದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸಿದ ತಂಡಗಳು ಪ್ರದರ್ಶನಗಳಿಗೆ ಅವಕಾಶ ನೀಡುವುದಾಗಿ ತಿಳಿಸಿದರು.

24 ರಂದು ಶ್ರದ್ದಾಂಜಲಿ ಸಮಾರಂಭಕ್ಕೆ ಆಗಮಿಷುವ ಆಗಮಿಸುವ ಲಕ್ಷಾಂತರ ಭಕ್ತಾಧಿಗಳಿಗೆ ಶ್ರೀ ಗುರುಶಾಂತೇಶ್ವರ ದಾಸೋಹ ಮಂಟಪ,ನೂತನವಾಗಿ ಸುಮಾರು ನಲವತ್ತು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನಿಲಯದ ಒಳಾಂಗಣದಲ್ಲಿ,ಪ್ರತಿ ವರ್ಷ ನಿರ್ಮಿಸುವ ದಾಸೋಹ ಮಂಟಪ ಸೇರಿದಂತೆ ಈ ಬಾರಿ ಮೂರು ಕಡೆ ಪ್ರಸಾದ ವಿನಿಯೋಗದ ವ್ಯವಸ್ಥೆ ಮಾಡಲಾಗುವುದು, ಹಿರೇಕೆರೂರ ತಾಲ್ಲೂಕಿನ ಒಂದು ಸಾವಿರ ಸ್ವಯಂ ಸೇವಕರು ದಾಸೋಹದ ನೆರವಿನ ನಿರ್ವಹಣೆ ನಡೆಸುವ ಜೊತೆಗೆ ಸಿರಿಗೆರೆ ಸುತ್ತಲಿನ ಗ್ರಾಮಗಳ ಸ್ವಯಂಸೇವಾ ತಂಡಗಳು,ಸ್ಥಳೀಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಸ್ವಯಂ ಸೇವಾ ತಂಡಗಳು ದಾಸೋಹ ವಿತರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ತರಳಬಾಳು ಶಾಖಾ ಶ್ರೀ ಮಠ ಸಾಣೇಹಳ್ಳಿಯ ಡಾ.ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಸಭಾ ಮಂಟಪ, ದಾಸೋಹ ಮಂಟಪ,ಸ್ವಾಗತ ಕಮಾನುಗಳ ರಚನೆ,ಅಡುಗೆ ಮಾಡಲು ದಾವಣಗೆರೆಯ ಮಹೇಶ್ವರಪ್ಪ ,ತುಮಕೂರಿನ ಆಂಕರ್ ತಂಡ, ವಿದ್ಯುತ್ ದೀಪಾಲಂಕಾರ ಮತ್ತು ಧ್ವನಿವರ್ದಕಗಳ ವ್ಯವಸ್ಥೆಯನ್ನು ಬೆಂಗಳೂರಿನ ಪರಿಣಿತ ತಂಡದವರು ನಿರ್ವಹಿಸಲಿದ್ದಾರೆ ಎಂದರು.

ಪ್ರತಿದಿನ ಸಂಜೆ 6 ಗಂಟೆಗೆ ಸಮಾರಂಭ ಆರಂಭವಾಗಲಿದ್ದು ನಾಡಿನ ವಿದ್ವಾಂಸರು,ಸಚಿವರು, ಸಂಸದರು, ಶಾಸಕರು,ವಿವಿಧ ಕ್ಷೇತ್ರಗಳ ಅಧಿಕಾರಿಗಳು ಭಾಗವಹಿಸಲಿದ್ದಾರೆ,23 ರಂದು ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಯುವ ಹಿರಿಯ ವಿದ್ಯಾರ್ಥಿ ಸಮಾವೇಶವನ್ನೂ ಹಮ್ಮಿಕೊಂಡಿರುವ ಬಗ್ಗೆ ತಿಳಿಸಿದರು.

ಸೆಪ್ಟೆಂಬರ್ 24 ರ ಬೆಳಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ ಗಣ್ಯಾತಿಗಣ್ಯರ ಲಕ್ಷಾಂತರ ಭಕ್ತ ಸಮುದಾಯದ ಉಪಸ್ಥಿತಿಗೆ ಸಾಕ್ಷಿಯಾಗಲಿರುವುದರ ಬಗ್ಗೆ ಮಾಹಿತಿ ನೀಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಗಿರೀಶ್ ಕುಮಾರ್.ಜಿ ಅವರಿಗೆ ಪಿಎಚ್.ಡಿ ಪದವಿ

Published

on

ಬಳ್ಳಾರಿ/ ವಿಜಯನಗರ:ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೌಡ್ರು ದೊಡ್ಡ ಹನುಮಂತಪ್ಪ ಮತ್ತು ನಾಗರತ್ನ ದಂಪತಿಗಳು ಮಗನಾದ ಗಿರೀಶ್ ಕುಮಾರ್.ಜಿ ಅವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಹತ್ತಿರದ ಕನ್ನಡ ವಿಶ್ವವಿದ್ಯಾಲಯ, ವಿದ್ಯಾರಣ್ಯ ಹಂಪಿಯಿಂದ ಪಿಎಚ್.ಡಿ ಪದವಿಯನ್ನು ನೀಡಲಾಯಿತು.

ಇವರು ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರ ತುಮಕೂರಿನ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ನಾಗೇಂದ್ರ ಅವರು ಮಾರ್ಗದರ್ಶನದಲ್ಲಿ ‘ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ’ ( ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ) ಎಂಬ ವಿಷಯದ ಕುರಿತು ಮಂಡಿಸಿದ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ನೀಡಲಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯ ಕುಲಸಚಿವರಾದ ಡಾ.ವಿಜಯ್ ಪೂಣಚ್ಚ ತಂಬಂಡ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಈ ಸಮಯದಲ್ಲಿ ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಯ ಹಿರಿಯ ಪತ್ರಕರ್ತರು, ಪೊಲೀಸ್ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು,ತಂದೆ ತಾಯಿ, ಕುಟುಂಬದ ಸದಸ್ಯರು, ಸ್ನೇಹಿತರು ಶುಭಕೋರಿದರು.

29 ರಂದು ಪಿ.ಎಚ್.ಡಿ ಮೌಖಿಕ ಪರೀಕ್ಷೆ

29 ಅಕ್ಟೋಬರ್ 2025 ರಂದು ಕನ್ನಡ ವಿಶ್ವವಿದ್ಯಾಲಯ ವಿದ್ಯಾರಣ್ಯ ಹಂಪಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಮೌಖಿಕ ಪರೀಕ್ಷೆ ನಡೆಯಿತು. ಸಮಾಜ ವಿಜ್ಞಾನ ನಿಕಾಯದ ಡೀನ್ ಡಾ.ಪ್ರಶಾಂತ ಕುಮಾರ್, ಆಂತರಿಕ ವಿಶೇಷ ತಜ್ಞರಾದ ಡಾ.ಎ.ಎಸ್ ಪ್ರಭಾಕರ್, ಬಾಹ್ಯ ಮೌಲ್ಯಮಾಪಕರಾದ ಡಾ.ಪುಟ್ಟಸ್ವಾಮಿ, ಪ್ರಾಧ್ಯಾಪಕ,ಮೈಸೂರು ವಿಶ್ವವಿದ್ಯಾಲಯ, ಮಾರ್ಗದರ್ಶಕ ಸಹಾಯಕ ಪ್ರಾಧ್ಯಾಪಕ ಡಾ.ನಾಗೇಂದ್ರ, ವಿಭಾಗದ ಮುಖ್ಯಸ್ಥ ಡಾ. ಎಸ್.ವೈ ಸೋಮಶೇಖರ್, ವಿಭಾಗದ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

ವೃತ್ತಿ

ಗಿರೀಶ್ ಕುಮಾರ್.ಜಿ ಅವರು 2017 ರಿಂದ ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಈಟಿವಿ ಭಾರತ್, ಹೊಸಪೇಟೆ ಟೈಮ್ಸ್ ದಿನಪತ್ರಿಕೆ ವರದಿಗಾರಾಗಿ, ಆಕಾಶವಾಣಿ ತಾತ್ಕಾಲಿಕ ಉದ್ಘೋಷಕರಾಗಿ, ಶ್ರೀ ಶಂಕರ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶ್ರೀಮತಿ ಸರಳ ದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೊಪ್ಪಳ ಪದವಿ ಕಾಲೇಜುಗಳಲ್ಲಿ ಮತ್ತು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಮುಖ್ಯ ಆವರಣ ಮತ್ತು ಕೊಪ್ಪಳ ಸ್ನಾತಕೋತ್ತರ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರಾಗಿ 9 ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಸೇವೆಯನ್ನು ಸಲ್ಲಿಸಿದ್ದಾರೆ. ಪ್ರಸ್ತುತ ಹೊಸಪೇಟೆ ಟೈಮ್ಸ್ ದಿನಪತ್ರಿಕೆ ಬಳ್ಳಾರಿ ಜಿಲ್ಲೆಯ ವರದಿಗಾರರಾಗಿ ಮತ್ತು ಲೋಕಲ್ ಆಪ್ ನಲ್ಲಿ ಬಳ್ಳಾರಿ ಜಿಲ್ಲೆಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ‌.

ಪಿಎಚ್.ಡಿ ಸಾರಾಂಶ

ಕನ್ನಡ ಮುದ್ರಣ ಮಾಧ್ಯಮಗಳಲ್ಲಿ ಸೈಬರ್ ಅಪರಾಧಗಳ ಪ್ರತಿನೀಧಿಕರಣ (ಬಳ್ಳಾರಿ ಜಿಲ್ಲೆಯ ಅನುಲಕ್ಷಿಸಿ : ಬಳ್ಳಾರಿ ವಿಜಯನಗರ ಜಿಲ್ಲೆ) ಎಂಬ ವಿಷಯದ ಸಂಶೋಧನೆ ಕರ್ನಾಟಕ ರಾಜ್ಯದ ಕನ್ನಡದ ಮೊದಲ ಸಂಶೋಧನೆ ಮಹಾಪ್ರಬಂಧವಾಗಿದೆ.

ಈ ವಿಷಯದ ಕುರಿತು 2019 ರಿಂದ 2022 ಅವಧಿ ವರೆಗೆ ಅಧ್ಯಾಯ ಮಾಡಿ, ಸೈಬರ್ ಅಪರಾಧಗಳ ಬಳ್ಳಾರಿ ಜಿಲ್ಲಾ ಪಕ್ಷೀನೋಟ, ಸೈಬರ್ ಅಪರಾಧಗಳ ಹುಟ್ಟು, ಬೆಳವಣಿಗೆ, 4 ವರ್ಷಗಳ ಸೈಬರ್ ಅಪರಾಧಗಳ ಅಂಕಿ, ಸಂಖ್ಯೆಗಳು, ಪೈ ಮತ್ತು ಸ್ತಂಭ ನಕ್ಷೆಗಳು ಒಳಗೊಂಡಿದೆ. ಮುಖ್ಯವಾಗಿ ವಿಜಯ ಕರ್ನಾಟಕ ಮತ್ತು ವಿಜಯವಾಣಿ ದಿನಪತ್ರಿಕೆ ಹಾಗು ಮೈಸೂರಿನ ಪ್ರತಿನಿಧಿ ದಿನಪತ್ರಿಕೆಗಳಲ್ಲಿ ಬರಹ, ಲೇಖನ, ಅಂಕಣಗಳು ವಿಶೇಷ ವಿಶ್ಲೇಷಣೆ, ಸೈಬರ್ ಅಪರಾಧಗಳ ಬಗ್ಗೆ ಕರ್ನಾಟಕ ರಾಜ್ಯದ ಪೋಲಿಸ್ ಇಲಾಖೆಯ ಐ.ಪಿ.ಎಸ್, ಸಿ.ಪಿ.ಐ, ಪಿ.ಎಸ್.ಐ ಅಧಿಕಾರಿಗಳು, ಹಿರಿಯ ಪತ್ರಕರ್ತರು, ಸೈಬರ್ ತಜ್ಞರು, ವಂಚನೆ ಒಳಗಾದವರ ಸಂರ್ದಶನ ಮತ್ತು ವಿಶ್ಲೇಷಣೆ ಮತ್ತು ಅವರ ಮಾನಸಿಕ ಸ್ಥಿತಿಗತಿ ಬಗ್ಗೆ ಈ ಸಂಶೋಧನೆ ಒಳಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.

ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

Published

on

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.

ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ಗಿರೀಶ್ ಕುಮಾರ್.ಜಿ ಅವರಿಗೆ ಪಿಎಚ್.ಡಿ ಪದವಿ

ಬಳ್ಳಾರಿ/ ವಿಜಯನಗರ:ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್...

ದಿನದ ಸುದ್ದಿ5 hours ago

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ...

ದಿನದ ಸುದ್ದಿ7 hours ago

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ...

ದಿನದ ಸುದ್ದಿ7 hours ago

ಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ...

ದಿನದ ಸುದ್ದಿ8 hours ago

ದಾವಣಗೆರೆ | ಇಂದಿನಿಂದ ಅಗ್ನಿವೀರ್ ನೇಮಕಾತಿ ರ‍್ಯಾಲಿ

ಸುದ್ದಿದಿನ,ದಾವಣಗೆರೆ: ಅಗ್ನಿಪಥ್ ಯೋಜನೆಯಡಿ ನವಂಬರ್ 13 ರಿಂದ 19 ರವರೆಗೆ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು...

ದಿನದ ಸುದ್ದಿ8 hours ago

ಯುವನಿಧಿ ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ

ಸುದ್ದಿದಿನ,ದಾವಣಗೆರೆ:ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಡಿ.ಬಿ.ಟಿ. ಮೂಲಕ ಹಣ ಸಂದಾಯ ಮಾಡಲಾಗುತ್ತಿದ್ದು, ಫಲಾನುಭವಿಗಳಿಗೆ ನಂತರದ ತಿಂಗಳುಗಳ ಯುವನಿಧಿ ಹಣ ಸಂದಾಯವಾಗಲು ಕಡ್ಡಾಯವಾಗಿ ಪ್ರತಿ ತಿಂಗಳ 25ನೇ ತಾರೀಖಿನೊಳಗೆ...

ದಿನದ ಸುದ್ದಿ1 day ago

ಜಿಲ್ಲಾ ಯೋಜನಾ ಸಮಿತಿ ಚುನಾವಣೆ ವೇಳಾಪಟ್ಟಿ ಪ್ರಕಟ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಪಂಚಾಯತ್ ರಾಜ್ (ಜಿಲ್ಲಾ ಯೋಜನಾ ಸಮಿತಿ ಸದಸ್ಯರುಗಳ ಚುನಾವಣೆ) ನಿಯಮಗಳ ಮೇರೆಗೆ ಪುರಸಭಾ, ಪಟ್ಟಣ ಪಂಚಾಯಿತಿ ಮತ ಕ್ಷೇತ್ರದಿಂದ ಜಿಲ್ಲೆಯ ಜಿಲ್ಲಾ ಯೋಜನಾ ಸಮಿತಿಗೆ ಸದಸ್ಯರ...

ದಿನದ ಸುದ್ದಿ1 day ago

ಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ

ಸುದ್ದಿದಿನ,ದಾವಣಗೆರೆ: ಜಿಲ್ಲಾ ಪಂಚಾಯಿತಿ ಸಹಾಯಕ ನಿರ್ದೇಶಕ ಬಸವರಾಜ್ ಅವರನ್ನು ಬೇರೆ ಜಿಲ್ಲೆಗೆ ವರ್ಗಾಹಿಸುವಂತೆ ಸಿ.ಎಂ. ಸಿದ್ಧರಾಮಯ್ಯ ಆದೇಶ ನೀಡಿದ್ದರೂ, ಅಧಿಕಾರಿಗಳು ವರ್ಗಾಹಿಸದ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ದಿನದ ಸುದ್ದಿ1 day ago

ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸುದ್ದಿದಿನ,ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ, ಬಳ್ಳಾರಿ ಇಲ್ಲಿ 2014-15ನೇ ಸಾಲಿನಿಂದ 2024-25ನೇ ಸಾಲಿನ ಅವಧಿಯಲ್ಲಿ ಸಂಗ್ರಹಿಸಿರುವ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯನ್ನು ನಿಯಮಾನುಸಾರ ಬಳಸದೆ ವಂಚಿಸಿರುವ 8...

ದಿನದ ಸುದ್ದಿ1 day ago

ಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು

ಸುದ್ದಿದಿನ,ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾನೂನುಬಾಹಿರವಾಗಿ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಭಾಗಿಯಾಗಿರುವ ಪ್ರಾಂಶುಪಾಲ ಡಾ.ರವಿ ಎಸ್.ಪಿ...

Trending