Connect with us

ದಿನದ ಸುದ್ದಿ

ಕಚೇರಿ ಕೆಲಸ ನಿರ್ವಹಣೆ ಯಶಸ್ಸಿಗೆ ಸಂಘಟಿತ ಪ್ರಜ್ಞೆ ಅಗತ್ಯ : ಎಸ್.ಕೆ.ಬಿ.ಪ್ರಸಾದ್

Published

on

ಸುದ್ದಿದಿನ,ಚಿತ್ರದುರ್ಗ: ಸಂಘಟಿತ ಪ್ರಜ್ಞೆಯೊಂದಿಗೆ ಸಮಷ್ಟಿಭಾವದಿಂದ ಒಗ್ಗೂಡಿ ಕೆಲಸ ನಿರ್ವಹಿಸಿದಾಗ ಕಚೇರಿ ಕೆಲಸಗಳು ಯಶಸ್ವಿಯಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಸ್.ಕೆ.ಬಿ.ಪ್ರಸಾದ್ ಹೇಳಿದರು.

ನಗರದ ಡಯಟ್‌ನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರು (ಆಡಳಿತ) ಮತ್ತು ಉಪನಿರ್ದೇಶಕರು(ಅಭಿವೃದ್ಧಿ) ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರಿಗೆ ಆಯೋಜಿಸಿದ್ದ ಕಾರ್ಯಕ್ಷಮತೆ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ವಿಷಯ ನಿರ್ವಾಹಕರಿಗೆ ಕಡತಗಳ ನಿರ್ವಹಣೆ ಮತ್ತು ವಿಲೇವಾರಿ ಮಾಡುವ ಜ್ಞಾನ ಅಗತ್ಯವಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಕಂಪ್ಯೂಟರ್ ಜ್ಞಾನವು ಅಗತ್ಯವಿದ್ದು ಪತ್ರಗಳನ್ನು ತಯಾರಿಸುವಾಗ ತಪ್ಪಿಲ್ಲದಂತೆ ತಯಾರಿಸಿ ಗೊಂದಲಗಳಿಗೆ ಅವಕಾಶ ನೀಡದಂತೆ ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ತರಬೇತಿ ನೀಡಿದ ನಂತರ ಕಾರ್ಯಕ್ಷಮತೆ ಕುರಿತು ಪರೀಕ್ಷೆ ನಡೆಸಲಾಗುವುದು. ಸದರಿ ಪರೀಕ್ಷೆಯಲ್ಲಿ ಶೇ ೫೦ ರಷ್ಟು ಅಂಕಗಳನ್ನು ಪಡೆಯಬೇಕು ಎಂದು ಮಾಹಿತಿ ನೀಡಿದರು.

ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಪಿ.ವಿ ಸವಿತಾ ಮಾತನಾಡಿ, ಸಂಘಟನೆ ಎಂದರೆ ಶಕ್ತಿ. ಕಚೇರಿ ಎಂದರೆ ನಮ್ಮ ಮನೆ ಎಂಬ ಭಾವನೆ ಮೂಡಿಸಿಕೊಂಡು ಸ್ವಚ್ಚತೆ ಕಾಪಾಡಿಕೊಳ್ಳಬೇಕು. ವೃತ್ತಿಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸುವುದು ಇಲಾಖೆಯ ಆಶಯವಾಗಿದೆ. ಕಾರ್ಯಕ್ಷಮತೆಯು ಬದ್ಧತೆ ಮತ್ತು ವಿಷಯ ಜ್ಞಾನ ಹೆಚ್ಚಿಸಿಕೊಳ್ಳುವುದರಿಂದ ದೊರೆಯುತ್ತದೆ. ವಿಷಯ ನಿರ್ವಾಹಕರು ತಮಗೆ ವಹಿಸಿದ ಕೆಲಸವನ್ನು ಮುಖ್ಯಸ್ಥರು ಮತ್ತು ಭಾಗಾಧಿಕಾರಿ(ಅಧೀಕ್ಷಕರು)ಗಳ ಮಾರ್ಗದರ್ಶನದಲ್ಲಿ ನಿರ್ವಹಿಸಬೇಕು. ಕಡತಗಳನ್ನು ನಿರ್ವಹಿಸುವ ನಿಯಮಗಳ ಜ್ಞಾನ ತಿಳಿದು ಪರಿಪೂರ್ಣತೆ, ತ್ವರಿತವಾಗಿ ನಿರಾತಂಕವಾಗಿ ಕೆಲಸ ನಡೆಯುವಂತೆ ಕಾರ್ಯಕ್ಷಮತೆ ಬೆಳೆಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.

ಜಿ.ತ.ಸಂಸ್ಥೆಯ ಉಪ ಪ್ರಾಚಾರ್ಯ ಪಿ. ಚಂದ್ರಕಾAತ್, ಉಪನಿರ್ದೇಶಕರ ಕಚೇರಿಯ ಪತ್ರಾಂಕಿತ ಅಧಿಕಾರಿಗಳಾದ ಪ್ರಸಾದ್ ಬಾಬು, ಪ್ರಥಮ ದರ್ಜೆ ಸಹಾಯಕ ರಾಜಣ್ಣ, ಚಿತ್ರದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ವ್ಯವಸ್ಥಾಪಕರಾದ ಸಾಯಿಪ್ರಸಾದ್, ಉಪನ್ಯಾಸಕರಾದ ಕೆ.ಜಿ.ಪ್ರಶಾಂತ್, ಎಸ್.ಬಸವರಾಜು, ತಾಂತ್ರಿಕ ಸಹಾಯಕರಾದ ಕೆ.ಆರ್.ಲೋಕೇಶ್, ಆರ್.ಲಿಂಗರಾಜು ತರಬೇತಿಗೆ ಹಾಜರಾಗಿದ್ದ ಜಿಲ್ಲೆಯ ಪ್ರಥಮ ದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending