ದಿನದ ಸುದ್ದಿ
ಆನೆಗಳು ಓಡೋದನ್ನು, ನಡೆಯೋದನ್ನ ನೋಡಿದ್ದೇವೆ..! ಮಲಗೋದು ಹೇಗೆ? ಇಲ್ಲಿದೆ ಅಪರೂಪದ ಚಿತ್ರ..!
- ಜಿರೊಟುಜೆನ್ ಶಾರದಾ
15 ಆನೆಗಳಿರುವ ಏಶಿಯನ್ ಆನೆ (ಏಶಿಯಾಟಿಕ್ ಎಲಿಫಂಟ್, ಬದುಕುಳಿದಿರುವ ಜೀನಸ್ ಎಲಿಫಸ್ ತಳಿ ) ತಂಡ ಸುಮಾರು 500 ಕಿಮೀ ಕ್ರಮಿಸಿದ ಮೇಲೆ ಆರಾಮಾಗಿ ವಿಶ್ರಮಿಸುತ್ತಿರುವ ಚಿತ್ರವನ್ನು ,ವಿಡಿಯೋಗಳನ್ನು ಚೀನಾ ಇತ್ತೀಚೆಗೆ ಬಿಡುಗಡೆ ಮಾಡಿದೆ. ಕಳೆದೊಂದು ವಾರದಿಂದ ಚೀನಾ ಸೊಶಿಯಲ್ ಮಿಡಿಯಾ ತುಂಬೆಲ್ಲಾ ವಿಶ್ವದ ಗಮನ ಸೆಳೆದಿರುವ ಈ ಆನೆಗಳದ್ದೇ ಸುದ್ದಿ.
ಬಿಬಿಸಿ ನ್ಯೂಸ್ , ದಿ ವಾಲ್ ಸ್ಟ್ರೀಟ್ ಜರ್ನಲ್ ಸೇರಿದಂತೆ ವಿಶ್ವ ಮಾಧ್ಯಮ ಈ ಆನೆಗಳ ವರದಿ ಮಾಡಿವೆ. “ಅಲೆದಾಡುವ ಆನೆಗಳು” ಎಂದು ಚೀನಾ ಜನತೆ ಇದನ್ನು ಹೆಸರಿಸಿದ್ದು ಇಲ್ಲಿನ ಸರಕಾರ ಈ ಆನೆಗಳ ರಕ್ಷಣೆಗೆ 500 ಜನರನ್ನು 14 ದ್ರೋಣ್ ಕ್ಯಾಮೆರಾಗಳನ್ನು ನೇಮಿಸಿದೆ.
ಈ ರೀತಿಯ ಆನೆ ಹಿಂಡೊಂದು ಮೊದಲ ಬಾರಿ ಸತತ 15 ತಿಂಗಳು ಐದನೂರು ಕಿಮಿ ಕ್ರಮಿಸಿದ್ದನ್ನು ಚೀನಾ ದಾಖಲು ಮಾಡಿದೆ. ಸಾಮಾನ್ಯವಾಗಿ ಆನೆಗಳು ತಾವಿರುವ ಪ್ರದೇಶದಿಂದ ಹೊರ ಹೋಗುವುದು ಕಡಿಮೆ. ಎಲ್ಲಿಂದ ಪ್ರಯಾಣವನ್ನು ಈ ಆನೆಗಳು ಆರಂಭಿಸಿದ್ದವೋ ಗೊತ್ತಿಲ್ಲ (ಒಂದು ಮಾಹಿತಿ ಪ್ರಕಾರ ಲಾವೊಸ್/ಮ್ಯಾನ್ಮಾರ್ -ಚೀನಾ ಗಡಿಯಿಂದ ಹೊರಟಿರಬಹುದು ಎಂಬುದು) ಆದರೆ ಜಿಯಾಂಗ್ ಪಟ್ಟಣ ಬಳಿಯ ಹಳ್ಳಿಯೊಂದರ ಅರಣ್ಯ ಪ್ರದೇಶದಲ್ಲಿ ಈ ಹಿಂಡು ಮಲಗಿ ವಿಶ್ರಾಂತಿ ಪಡೆದಿದೆ.
ಈ ಪ್ರದೇಶದಲ್ಲಿ ವಿಪರೀತ ಮಳೆ ಇದ್ದು, ಮಳೆ ನಿಂತ ಬಳಿಕ ನಿದ್ದೆಗೆ ಮೊರೆ ಹೋಗಿವೆ. ಸಾಮಾನ್ಯವಾಗಿ ಆನೆಗಳನ್ನು ಕಾಲೇಜಿಗೆ ಹೋಗುವ ಹುಡುಗರಿಗೆ ಹೊಲಿಸಲಾಗುತ್ತದೆ. ಸೂರ್ಯೋದಯದ ವೇಳೆ ನಿದ್ದೆ ಮಾಡುವ ಇವುಗಳು ಸಾಯಂಕಾಲದ ಹೊತ್ತಿಗೆ ಬ್ರೆಕ್ ಪಾಸ್ಟ್, ಮಧ್ಯಾಹ್ನದ ಊಟ’ ಎಲ್ಲವನ್ನು “ಬ್ರಂಚ್” ರೂಪದಲ್ಲಿ ಒಟ್ಟಿಗೆ ಮುಗಿಸಿ ರಾತ್ರಿ ಅಂಡಲೆಯುತ್ತವೆ.
ಅಲೆದಾಡುವ ಆನೆಗಳ ಈ ಹಿಂಡಿನಲ್ಲಿ ಒಟ್ಟು 15 ಆನೆಗಳಿದ್ದು ಮೂರು ಮರಿ ಆನೆಗಳು. ಒಂದು ಗಂಡು ಆನೆ ಮಾತ್ರ ಗುಂಪಿನಿಂದ 4 ಕಿಮಿ ಮುಂದೆ ಇದ್ದು ಗುಂಪಿನ ಉಸ್ತುವಾರಿ ಹೊತ್ತಿದೆ ಎಂದು ಯುನಾನ್ ಅರಣ್ಯ ಅಗ್ನಿಶಾಮಕದಳ ತಿಳಿಸಿದೆ. ದಟ್ಟ ಅರಣ್ಯ ಪ್ರದೇಶ, ಹಳ್ಳಿ, ಗುಡ್ಡಗಾಡು ಪಟ್ಟಣಗಳನ್ನು ಕ್ರಮಿಸಿ ಹೋಗುವ ಇವುಗಳು ರಸ್ತೆ ದಾಟುವಾಗ ಚೀನಾ ಸರಕಾರ ಸಂಪೂರ್ಣ ರಕ್ಷಣೆ ನೀಡಿದೆ. ತಾವು ನಡೆಸಿದ ಪರೇಡ್ ವೇಳೆ ಈ ಆನೆಗಳು ಮಿಲಿಯನ್ ಡಾಲರ್ ಮೌಲ್ಯದ ಆಹಾರ ಧಾನ್ಯಗಳನ್ನು ತಿಂದು ಮುಗಿಸಿವೆ.
ಕಬ್ಬು ಮತ್ತು ಆಲ್ಕೊಹಾಲ್ ನ ಮತ್ತು-ಗಮ್ಮತ್ತಿನ ಈ ಆನೆಗಳ ಆಟಾಟೋಪಕ್ಕೆ ಈಗ ಎಲ್ಲಿಲ್ಲದ ಪ್ರಚಾರ. ಶೆಹನ್ ಶಾ ಸ್ಟೈಲ್ ನಲ್ಲಿ ಪಟ್ಟಣಕ್ಕೆ ಬರುವ ಈ ಆನೆಗಳು ಕಟ್ಟಡಗಳನ್ನು ಗುಮ್ಮಿ ದಾಂಧಲೆ ಮಾಡಿವೆ. ಸೊಂಡಿಲುಗಳನ್ನು ಬಾಗಿಲು ಮತ್ತು ಕಿಟಕಿಯೊಳಗೆ ತೂರಿಸಿವೆ. ಜನವಸತಿ ತುಂಬಾ ಇರುವ ತುನ್ಮಿಂಗ್ ನಗರಕ್ಕೂ ಈ ಆನೆಗಳು ಭೇಟಿ ನೀಡಿವೆ.
ಮನುಷ್ಯ ನಿರ್ಮಿತ ನಗರ ಪ್ರದೇಶದ ಗಟರ್ ನಲ್ಲಿ ಬಿದ್ದ ಮರಿ ಆನೆಯನ್ನು ತಾಯಿ ಆನೆ ಎತ್ತಿದ್ದು ಈಗ ಚೀನಾ ಸೊಶಿಯಲ್ ಮಿಡಿಯಾ ತುಂಬ ವೈರಲ್. ಜನರಿಗೆ ಪುಳಕ, ತಳಮಳ.
ಆನೆಗಳು ಬರುವ ದಾರಿಯಲ್ಲಿ ಜನ ಮೆಕ್ಕೆಜೋಳ, ಬಾಳೆಹಣ್ಣು ಮತ್ತು ಅನಾನಸು ಇಟ್ಟಿದ್ದಾರೆ. ಮೊದಲ ಎರಡನ್ನು ಮುಗಿಸಿರುವ ಆನೆಗಳು ಕೊನೆಯದನ್ನು ಮೂಸಿಯೂ ನೋಡಿಲ್ಲ.
ಆಲ್ಕೊಹಾಲ್ ಬಗ್ಗೆ ಸಾಕಷ್ಟು ಆಸಕ್ತಿ ತೋರಿಸಿರುವ ಇವು ಹಳ್ಳಿಗಳು ಮತ್ತು ಸಣ್ಣ ಪಟ್ಟಣ ಪ್ರದೇಶಗಳಲ್ಲಿ ಆಲ್ಕೊಹಾಲ್ ತುಂಬಿಸಿರುವ ದೊಡ್ಡ ದೊಡ್ಡ ಬ್ಯಾರಲ್ ಗಳಿಟ್ಟ ಪ್ರದೇಶಕ್ಕೆ ಬಂದು ಗಡದ್ದಾಗಿ ಕುಡಿದು, ತೇಕಿವೆ. ಮರಿ ಆನೆಯೊಂದು ಗಂಟಲು ಪೂರ್ತಿ ಕುಡಿದು ಥೇಟ್ ಮನುಷ್ಯರಂತೆ ತೂರಾಡಿ ದಾರಿ ತಪ್ಪಿಸಿಕೊಂಡು ಮತ್ತು ಪೂರ್ತಿ ಇಳಿದ ಮೇಲೆ ಮಾರನೆ ದಿನ ತನ್ನ ತಂಡವನ್ನು ಸೇರಿದೆ.
ಚೀನಾ ಸುದ್ದಿ ವಾಹಿನಿಗಳು ಈ ಆನೆಗಳಿಗಾಗಿ ಸ್ಪೆಶಲ್ ಬುಲೆಟಿನ್ ಮಾಡಿವೆ. ಆರಂಭದಲ್ಲಿ ಆನೆಗಳನ್ನು ನೈರುತ್ಯದೆಡೆಗೆ ತಿರುಗಿಸುವ ವಿಫಲ ಯತ್ನ ನಡೆಯಿತು. ಆದರೆ ಕೊನೆಯಲ್ಲಿ 500 ಕಿಮೀ ಕ್ರಮಿಸಿದ ಬಳಿಕ ಬಹುಶ: ತಾವು ಬಂದಂಥ ಮೂಲ ನೈರುತ್ಯ ಯುನಾನ್ ಪ್ರಾಂತ್ಯದ ಕ್ಷುವಾನ್ಬನ್ನಾದ ಮೆಂಗ್ಯಾಂಜಿ ಸಂರಕ್ಷಿತ ಉದ್ಯಾನವನಕ್ಕೆ ಮರಳಬಹುದು ಎಂಬುದು ಇಲ್ಲಿನ ಅಧಿಕಾರಿಗಳ ಅಭಿಪ್ರಾಯ. ಈ ತಳಿ (ಏಶಿಯನ್ ಆನೆ) ಭಾರತೀಯ ಉಪಖಂಡ ಮತ್ತು ಆಗ್ನೇಯ ಏಶಿಯಾದಲ್ಲಿ ಕಂಡು ಬರುವ ಸಂರಕ್ಷಿತ ಪ್ರಾಣಿ. ಪಶ್ಚಿಮದಲ್ಲಿ ಭಾರತ ಉತ್ತರದಲ್ಲಿ ನೇಪಾಳ, ದಕ್ಷಿಣದಲ್ಲಿ ಸುಮಾತ್ರಾ, ಪೂರ್ವದಲ್ಲಿ ಬೊರ್ನಿಯೊದಲ್ಲಿ ಇವು ಹರಡಿಕೊಂಡಿವೆ. ಜೀವಿತಾವಧಿ 48 ವರ್ಷ. ಗಂಡು ಆನೆ 4000 ಕೆಜಿ ಹೆಣ್ಣು ಆನೆ 2700 ಕೆಜಿ ಇರುತ್ತದೆ.
Shhhh, the elephants are sleeping. This herd of wild Asian elephants was spotted taking a group nap as they migrated across southwest China. Scientists have been tracking them for hundreds of miles as a recent population boom resulted in the animals expanding their territory 🐘 pic.twitter.com/kkQtKUbXmI
— NowThis (@nowthisnews) June 9, 2021
ವಿಶ್ವದ ಗಮನ ಸೆಳೆದಿರುವ ಈ ಆನೆಗಳು ಯಾವಾಗ ಮತ್ತು ಏಕೆ ಈ ರೀತಿಯ ಟ್ರೆಕ್ಕಿಂಗ್ ಗೆ ಇಳಿದಿರಬಹುದು ಎಂಬುದು ಈಗಲೂ ನಿಗೂಢ. ಅನನುಭವಿ ಆನೆಯೇನಾದರೂ ಹಿಂಡಿನ ನೇತೃತ್ವ ವಹಿಸಿದ್ದರಿಂದ ಈ ರೀತಿ ಆಗಿರಬಹುದೇ ಅಥವಾ ವಾಸಿಸಲು ಬೇರೆಯದೇ ಮನೆ ಹುಡುಕುವ ಯೋಚನೆ ಈ ಆನೆಗಳಿಗೆ ಬಂದಿರಬಹುದೇ ಎಂಬುದು ತಜ್ಞರನ್ನು ಕಾಡಿದೆ. ವಿಜ್ಞಾನಿಗಳ ಪ್ರಕಾರ ಆನೆಗಳು ಇಷ್ಟೊಂದು ದೂರ ಪ್ರಯಾಣ ಮಾಡಿದ್ದು ಇದೇ ಮೊದಲು.
“ಎಲ್ಲಿಯೂ ನಿಲ್ಲದಿರು ಮನೆಯನೆಂದೂ ಕಟ್ಟದಿರು” ಎಂದು ಈ ಆನೆಗಳಿಗೂ ಅನ್ನಿಸಿರಬಹುದೇ?
ಚೀನಾದಲ್ಲೆಲ್ಲ ಈಗ “ಅಲೆದಾಡುವ ಆನೆಗಳು ಬರುತ್ತಿವೆ. ದಾರಿ ಬಿಡಿ..”
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ7 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ6 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

