Connect with us

ದಿನದ ಸುದ್ದಿ

ದಾವಣಗೆರೆ | ಸ್ಮಾರ್ಟ್‍ಸಿಟಿ ವತಿಯಿಂದ ಪ್ರೌಢಶಾಲಾ ವಿದ್ವಿದ್ವತ್ತಿನಳಿಗೆ ವಿದ್ವತ್ ಲರ್ನಿಂಗ್ ಆ್ಯಪ್ ಮೂಲಕ ಉಚಿತ ಶಿಕ್ಷಣ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಹಾಗೂ ಮೈಸೂರಿನ ವಿದ್ವತ್ ಇನ್ನೋವೇಟಿವ್ ಸಲ್ಯೂಷನ್ಸ್ ಪ್ರೈಲಿ. ಇವರ ಪ್ರಾಯೋಜಕತ್ವದಲ್ಲಿ ದಾವಣಗೆರೆ ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ಪರೀಕ್ಷಾ ಹಿತದೃಷ್ಟಿಯಿಂದ 08, 09 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ 02 ತಿಂಗಳುಗಳ ಕಾಲ ವಿದ್ವತ್ ಲರ್ನಿಂಗ್ ಆ್ಯಪ್‍ನ ಉಚಿತ ಸಬ್‍ಸ್ಕ್ರಿಪ್ಷನ್ ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಾಗಿದ್ದು, ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳು ಈ ಆ್ಯಪ್ ಅನ್ನು ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಇದರ ಅನುಕೂಲ ಪಡೆದುಕೊಳ್ಳಬೇಕು ಎಂದು ಸ್ಮಾರ್ಟ್‍ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ ಅವರು ತಿಳಿಸಿದ್ದಾರೆ.

ಜಿಲ್ಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಲರ್ನಿಂಗ್ ಆ್ಯಪ್ ಉಚಿತವಾಗಿ ಒದಗಿಸುವ ಕುರಿತಂತೆ ಜಿಲ್ಲಾಡಳಿತ ಭವನ ಆವರಣದಲ್ಲಿರುವ ಸ್ಮಾಟ್‍ಸಿಟಿ ಯೋಜನಾ ಕಚೇರಿಯಲ್ಲಿ ಬುಧವಾರ ಏರ್ಪಡಿಸಲಾದ ಸುದ್ದಿಗೋಷ್ಠಿಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದರು.

ಕೋವಿಡ್-19 ಸಾಂಕ್ರಾಮಿಕ ಸೋಂಕಿನ ಕಾರಣದಿಂದಾಗಿ ಕಳೆದೆರಡು ವರ್ಷಗಳಲ್ಲಿ ಮಕ್ಕಳು ಶಾಲೆಗಳಿಗೆ ಭೌತಿಕವಾಗಿ ಹಾಜರಾಗದೆ, ಕಲಿಕೆಯಲ್ಲಿ ಹಿಂದುಳಿಯುವಂತಾಗಿದೆ. ಆನ್‍ಲೈನ್ ತರಗತಿಗಳನ್ನು ಅನಿವಾರ್ಯವಾಗಿ ಕೈಗೊಳ್ಳಲಾಗಿತ್ತು. ಕಳೆದ ಶೈಕ್ಷಣಿಕ ಸಾಲಿನಲ್ಲಿ ಮೈಸೂರಿನ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಕಂಪನಿಯು ದಾವಣಗೆರೆಯಲ್ಲಿ 05 ರಿಂದ 10 ನೇ ತರಗತಿ ಮತ್ತು ಕಾಲೇಜುಗಳಲ್ಲಿ ಪದವಿಪೂರ್ವ ಹಾಗೂ ಪದವಿ ಕಾಲೇಜುವರೆಗಿನ ವಿದ್ಯಾರ್ಥಿಗಳಿಗೆ ಎಲ್ಲ ವಿಷಯಗಳ ಪಠ್ಯಗಳನ್ನು ಒಳಗೊಂಡಂತೆ ಸ್ಮಾರ್ಟ್‍ಕ್ಲಾಸ್‍ಗಳಿಗೆ ಕಂಟೆಂಟ್‍ಗಳನ್ನು ಒದಗಿಸಿಕೊಟ್ಟಿದೆ.

ಕಳೆದ ವರ್ಷ ಸುಮಾರು 6900 ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು, ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಲು ಸಾಧ್ಯವಾಗಿದೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಹಾಗೂ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ಪ್ರಯತ್ನದ ಕಾರಣದಿಂದ ಪ್ರಸಕ್ತ ವರ್ಷವೂ ಕೂಡ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಕಂಪನಿಯು ಜಿಲ್ಲೆಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಮಕ್ಕಳ ಪರೀಕ್ಷಾ ಹಿತದೃಷ್ಟಿಯಿಂದ 08, 09 ಹಾಗೂ 10 ನೇ ತರಗತಿ ವಿದ್ಯಾರ್ಥಿಗಳಿಗೆ 02 ತಿಂಗಳುಗಳ ಕಾಲ ವಿದ್ವತ್ ಲರ್ನಿಂಗ್ ಆ್ಯಪ್‍ನ ಉಚಿತ ಸಬ್‍ಸ್ಕ್ರಿಪ್ಷನ್ ಪಡೆದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದು, ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಈ ಆ್ಯಪ್ ಅನ್ನು ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಇದರ ಅನುಕೂಲ ಪಡೆದುಕೊಳ್ಳಬೇಕು.

ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿ ನಗರದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಆಧಾರಿತ ಸ್ಮಾರ್ಟ್ ತರಗತಿಗಳನ್ನು ಮೂರು ಹಂತಗಳಲ್ಲಿ ಹಾಗೂ ಕಾಲೇಜಿನಲ್ಲಿ ಮೊದಲ ಹಂತದ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಶಾಲೆಗಳಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ 03 ಕೋಟಿ ರೂ. ವೆಚ್ಚದಲ್ಲಿ 19 ಶಾಲೆಗಳಲ್ಲಿ 62 ಸ್ಮಾರ್ಟ್ ತರಗತಿಗಳು ಮತ್ತು 19 ಸ್ಮಾರ್ಟ್ ಲ್ಯಾಬ್‍ಗಳು.

ಎರಡನೆ ಹಂತದಲ್ಲಿ 1.70 ಕೋಟಿ ರೂ. ವೆಚ್ಚದಲ್ಲಿ 10 ಶಾಲೆಗಳ 40 ತರಗತಿಗಳಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು 01 ಸರ್ಕಾರಿ ಐಟಿಐ ಕಾಲೇಜು ಸೇರಿದಂತೆ ಒಟ್ಟು 11 ಸ್ಮಾರ್ಟ್ ಲ್ಯಾಬ್‍ಗಳು. ಮೂರನೆ ಹಂತದಲ್ಲಿ 31 ಶಾಲೆಗಳ 56 ತರಗತಿಗಳಲ್ಲಿ ಸ್ಮಾರ್ಟ್ ಕ್ಲಾಸ್ ನಿರ್ಮಿಸಿದ್ದು, 31 ಕಂಪ್ಯೂಟರ್ ಲ್ಯಾಬ್ ನಿರ್ಮಿಸಲಾಗಿದೆ. 09 ಕಾಲೇಜುಗಳಲ್ಲಿ 36 ಸಾರ್ಟ್ ತರಗತಿ, 18 ಕಂಪ್ಯೂಟರ್ ಲ್ಯಾಬ್ ನಿರ್ಮಿಸಲಾಗಿದೆ.

ಮೈಸೂರಿನ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಇವರು ಎರಡನೆ ಮತ್ತು ಮೂರನೆ ಹಂತದ ಕಾಮಗಾರಿಗಳ ಗುತ್ತಿಗೆದಾರರಾಗಿದ್ದು, ಈ ಕಾಮಗಾರಿಗಳು ಲೋಕಾರ್ಪಣೆಗೊಂಡು ನಗರದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿವೆ ಎಂದರು.

ಮೈಸೂರಿನ ವಿದ್ವತ್ ಇನೋವೇಟಿವ್ ಸಲ್ಯೂಷನ್ಸ್ ಪ್ರೈ.ಲಿ. ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ರೋಹಿತ್ ಎಂ. ಪಾಟೀಲ್ ಅವರು ಮಾತನಾಡಿ, ತಮ್ಮ ಕಂಪನಿಯು ತನ್ನ ಸಿಎಸ್‍ಆರ್ ನಿಧಿಯಡಿ, ದಾವಣಗೆರೆ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕ್ಷೇತ್ರದಲ್ಲಿ ನೆರವು ನೀಡುವ ಉದ್ದೇಶದಿಂದ ವಿದ್ವತ್ ಎಜುಕೇಷನಲ್ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಶಿಕ್ಷಣ ಒದಗಿಸಲು ಮುಂದಾಗಿದೆ.

ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಡಿಜಿಟಲ್ ಶಿಕ್ಷಣ ಒದಗಿಸುವುದು ತನ್ನ ಮುಖ್ಯ ಧ್ಯೇಯವಾಗಿದ್ದು, ಈ ಆ್ಯಪ್ ಬಳಸಿ ವ್ಯಾಸಂಗ ಮಾಡಿರುವ ಅನೇಕ ವಿದ್ಯಾರ್ಥಿಗಳು ಕಳೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 625 ಕ್ಕೆ 600 ಕ್ಕಿಂತ ಹೆಚ್ಚಿನ ಅಂಕ ಗಳಿಸಿ ಪಾಸಾಗಿದ್ದಾರೆ. ಕಳೆದ ವರ್ಷ ದಾವಣಗೆರೆ ಜಿಲ್ಲೆಯ 6900 ಕ್ಕೂ ವಿದ್ಯಾರ್ಥಿಗಳು ಆ್ಯಪ್ ಬಳಸಿದ್ದು, ಇದರಲ್ಲಿ ಹಲವಾರು ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ.

ದಾವಣಗೆರೆಯಲ್ಲಿ ಸ್ಮಾರ್ಟ್ ಕ್ಲಾಸ್‍ಗಳ ಮೂಲಕ ತರಗತಿವಾರು ವಿಷಯ ಪಠ್ಯಗಳಿಗೆ ಎಲ್ಲ ರೀತಿಯ ಪರಿಕಲ್ಪನೆಗಳನ್ನು ದೃಶ್ಯ ಮಾಧ್ಯಮ ಹಾಗೂ ಅನಿಮೇಷನ್‍ಗಳ ಮೂಲಕ ವಿವರಿಸಲಾಗಿದೆ. ಇದರ ಜೊತೆಗೆ ಪಠ್ಯ ಪುಸ್ತಕದ ಅಭ್ಯಾಸ ಪ್ರಶ್ನೋತ್ತರಗಳನ್ನು ನೀಡಿದ್ದು, ಕಲೆಕೆಗೆ ಸಹಾಯವಾಗುವಂತೆ ಪ್ರಶ್ನೆಕೋಠಿ, ಅಭ್ಯಾಸ ಪುಸ್ತಕಗಳು, ಪರಿಕಲ್ಪನಾ ನಕ್ಷೆ, ಪಾಠ ಯೋಜನೆ, ಮಾದರಿ ಪ್ರಶ್ನೆಪತ್ರಿಕೆಗಳನ್ನೂ ಸಹ ನೀಡಲಾಗಿದ್ದು, ಈ ಕಲಿಕಾ ಸೌಲಭ್ಯವು ಕೇವಲ ಸ್ಮಾರ್ಟ್ ಶಾಲೆಗಳಿಗೆ ಮಾತ್ರ ಸೀಮಿತವಾಗಿರದೆ, ವಿದ್ವತ್ ಲರ್ನಿಂಗ್ ಆ್ಯಪ್‍ನಲ್ಲಿ ಕೂಡ ನೀಡಲಾಗಿದೆ.

ವಿದ್ವತ್ ಆ್ಯಪ್‍ನಲ್ಲಿ 8 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲೀಷ್, ಉರ್ದು ಮಾಧ್ಯಮದಲ್ಲಿ ಪಠ್ಯಗಳು ಸಿಬಿಎಸ್‍ಸಿ ಹಾಗೂ ಸ್ಟೇಟ್ ಸಿಲಬಸ್‍ನವರಿಗೂ ಲಭ್ಯವಿದೆ. ಈ ಪರಿಕಲ್ಪಾಧಾರಿತ ಕಲಿಕೆಯು ಮಗುವಿನ ಬೌದ್ಧಿಕ ಸಾಮಥ್ರ್ಯ ಹೆಚ್ಚಿಸುವುದಲ್ಲದೆ, ಕಲಿಕೆಯ ಆಸಕ್ತಿ ಉಂಟುಮಾಉವುದರಲ್ಲಿ ಸಹಾಯಕವಾಗಿದೆ.

ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಮತ್ತು ಸಂವಾದನಾತ್ಮಕ ಕಲಿಕಾ ಮನೋಭಾವ ಹೆಚ್ಚಿಸಿ, ತಮ್ಮನ್ನು ತಾವು ಕಲಿಕೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವಂತೆ ರೇರೇಪಿಸುತತದೆ. ಕೋವಿಡ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಯಬೇಕಾದ ಎಲ್ಲ ಬಗೆಯ ಪಠ್ಯ ವಿಷಯಗಳನ್ನು ವಿದ್ವತ್ ಆ್ಯಪ್ ಮೂಲಕವೇ ಮನೆಯಲ್ಲಿಯೇ ಸುರಕ್ಷಿತವಾಗಿ ಅಭ್ಯಾಸಿಸಬಹುದಾಗಿದೆ ಎಂದರು.

ವಿದ್ವತ್ ಲರ್ನಿಂಗ್ ಆ್ಯಪ್ ಅನ್ನು ಗೂಗಲ್ ಪ್ಲೇಸ್ಟೋರ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ. ಇದರ ವೆಬ್‍ಲಿಂಕ್ ಮೊಬೈಲ್‍ಗಾಗಿ https://play.google.com/store/apps/details?id=com.visl ನಿಂದ ಪಡೆಯಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending