ರಾಜಕೀಯ
ಸಾಮಾಜಿಕ ಜಾಲತಾಣ ಅಭಿಯಾನ | ‘ನನ್ನ ಸಿಎಂ ಸತೀಶ ಜಾರಕಿಹೊಳಿ’
ಸುದ್ದಿದಿನ, ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ಕಾಂಗ್ರೆಸ್ ಶಾಸಕರು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆಗಳ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನಮ್ಮ ಸಿಎಂ ಸಿದ್ದರಾಮಯ್ಯ ಎಂದು ಬರೆದು ಹರಿಬಿಡುತ್ತಿದ್ದಾರೆ.
ಅದೇರೀತಿ ಈಗ ರಾಜ್ಯದ ಮತ್ತೋರ್ವ ಪ್ರಭಾವಿ ಸಚಿವ ಹಾಗೂ ಅಹಿಂದ ನಾಯಕರಾದ ಸತೀಶ್ಜಾರಕಿಹೊಳಿ ಅಭಿಮಾನಿಗಳು ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂದು ಫೇಸ್ಬುಕ್ ಪುಟಗಳಲ್ಲಿ ಬರೆದುಕೊಂಡು ಹರಿಬಿಟ್ಟು, ಜಾರಕಿಹೊಳಿ ಅಭಿಮಾನಿಗಳು ಸಹ ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದೇವೆ ಎಂಬ ಸಂದೇಹ ರವಾನಿಸಿದ್ದಾರೆ.
ಪ್ರಸ್ತುತ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದಲ್ಲಿ ಪ್ರಬಲ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಸಾರುತ್ತಿದ್ದು, ಪರೋಕ್ಷವಾಗಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಸಮರ ಸಾರುತ್ತಿದ್ದಾರೆ.
https://m.facebook.com/story.php?story_fbid=424351171636910&id=100021860916158
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಗಳಿದರೆ ತಪ್ಪೇನು? ಎಂಬ ವಾದವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದು ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟವಾದರೆ, ಉತ್ತರ ಕರ್ನಾಟಕದ ಜನತೆಯ ಸಂದೇಶವೇ ಭಿನ್ನವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಕ್ಷಕ ಎಂದೇ ಕರೆಸಿಕೊಳ್ಳುವ ಬೆಳಗಾವಿ ಸಾಹುಕಾರ್, ಸದ್ಯ ದೋಸ್ತಿ ಸರ್ಕಾರದ ಅರಣ್ಯ ಸಚಿವ ಸತೀಶ್ಜಾರಕಿಹೊಳಿ ಬೆಂಬಲಿಗರು ಸತೀಶ್ ಜಾರಕಿಹೊಳಿ ನನ್ನ ಸಿಎಂ ಎಂದು ಫೆಸ್ಬುಕ್ನಲ್ಲಿ ಬರೆದುಕೊಳ್ಳುತ್ತಿದ್ದಾರೆ.
https://m.facebook.com/story.php?story_fbid=105148150612593&id=100033522243207
ಈ ಮೂಲಕ ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ ಎಂಬ ಖಡಕ್ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿದ್ದಾರೆ.
ಸಚಿವ ಸತೀಶ್ಜಾರಕಿಹೊಳಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ವಿಷಯದ ಮೇಲೆ ಕೆಲ ದಿನಗಳ ಹಿಂದೆ ಚರ್ಚೆ ನಡೆದಾಗ ನಾನಿನ್ನು 10 ವರ್ಷಗಳ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಕಾಂಕ್ಷಿ ಎಂದು ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದರು.
ಇತ್ತೀಚಿಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಸಮಾರಂಭವೊಂದರಲ್ಲಿ ಅಧಿಕಾರ ಎಲ್ಲರಿಗೂ ಸಿಗಬೇಕು, ಸತೀಶ್ ಕೂಡಾ ಸಿಎಂ ಆಗಬೇಕು ಎಂದು ಹೇಳಿದ್ದರು. ಈ ಹಿಂದೆ ನನ್ನ ಸಹೋದರ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
https://m.facebook.com/story.php?story_fbid=1912640958861486&id=100003468012703
ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂಬ ಆರೋಪವಿದೆ. ಆದ್ದರಿಂದ ಪ್ರತ್ಯೇಕ ರಾಜ್ಯದ ಕೂಗು ಕೂಡಾ ಕೇಳಿ ಬರುತ್ತಿದೆ. ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟಕ್ಕೆ ಉತ್ತರ ಕರ್ನಾಟಕದವರು ನನ್ನ ಸಿಎಂ ಸತೀಶ್ ಜಾರಕಿಹೊಳಿ ಎಂದು ಹೇಳುವ ಮೂಲಕ ನಮಗೂ ಒಂದು ಅವಕಾಶ ನೀಡಬೇಕೆಂಬ ಸಂದೇಶ ರವಾನಿಸಿದ್ದಾರೆ.
ನಾನು ಮುಖ್ಯಮಂತ್ರಿ ಆಗೋದಿಕ್ಕೆ ನಮ್ಮ ಪಕ್ಷ ಬೆಂಬಲವಿದೆ#ನಮ್ಮ ಸಿ.ಎಂ ಸತೀಶ್ ಜಾರಕಿಹೊಳಿನಮ್ಮ ಸಿ, ಎಂ "ಸತೀಶ್ ಜಾರಕಿಹೊಳಿ"…
Posted by ಕರ್ನಾಟಕ ಸತೀಶ್ ಜಾರಕಿಹೊಳಿ ಯುವ ಸೈನ್ಯ on Sunday, 3 February 2019
ಪೊಲಿಟಿಕಲ್ ಕಿಂಗ್ ಮೇಕರ್ ಹಾಗೂ ಮಾಸ್ಟರ್ ಮೈಂಡ್ ಎಂದೇ ತಮ್ಮ ನಡೆಯಿಂದ ಕರೆಸಿಕೊಳ್ಳುವ ಸತೀಶ್ ಜಾರಕಿಹೊಳಿ ಇಡೀ ರಾಜ್ಯದ ತುಂಬಾ ತಮ್ಮ ಬೆಂಬಲಿಗರನ್ನು ಹೊಂದಿದ್ದಾರೆ. ರಾಜ್ಯದ ಸಾಕಷ್ಟು ಮತಕ್ಷೇತ್ರಗಳಲ್ಲಿ ಇವರೇ ನಿರ್ಣಯಕ. ಎಲ್ಲಾ ಸಮುದಾಯಗಳ ಪರ ನಿಲ್ಲುವ ಅದರಲ್ಲಿಯೂ ವಾಲ್ಮೀಕಿ ನಾಯಕ ಸಮುದಾಯದ ಪ್ರಶ್ನಾತೀತ ನಾಯಕ ಎಂದರೆ ತಪ್ಪಾಗಲಾರದು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸಚಿವರ ಅಭಿಮಾನಿಗಳಿದ್ದು, ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂಬ ಅಭಿಯಾನದ ಕೂಗು ಹೆಚ್ಚಾಗಿ ತೀವ್ರ ಸ್ವರೂಪ ಪಡೆದುಕೊಂಡರು ಅಚ್ಚರಿಪಡಬೇಕಿಲ್ಲ.
https://m.facebook.com/story.php?story_fbid=2249690161910902&id=100006098199391
“ಸತೀಶ್ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ರಾಜ್ಯಾದ್ಯಂತ ಇದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಂತೆ ಸಚಿವರು ಸಹ ಅಹಿಂದ ನಾಯಕರಿದ್ದಾರೆ. ಅಲ್ಲದೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದವರು ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅದರಂತೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಮುಖ್ಯಮಂತ್ರಿ ಪಟ್ಟಾ ಸಿಗಬೇಕಿದೆ ಎಂಬುದು ಅವರೆಲ್ಲ ಅಭಿಮಾನಿಗಳ ಬಯಕೆ. ಪ್ರತಿಬಾರಿ ಅಸಮಾಧಾನಗೊಂಡಾಗಲೆಲ್ಲ ಮೂಗಿಗೆ ತುಪ್ಪ ಸವರುವ ಕೆಲಸ ಆಗುತ್ತಿದೆ. ತಕ್ಷಣಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂಬುದು ನಮ್ಮ ಅಭಿಪ್ರಾಯವಲ್ಲ. ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮೊದಲ ಆದ್ಯತೆ ನೀಡಬೇಕಿದೆ”.
|ರಾಘುದೊಡ್ಮನಿ,ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ದಾವಣಗೆರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ
ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.
ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.
ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
ಸುದ್ದಿದಿನ,ಚಿತ್ರದುರ್ಗ : ಸ್ವಾತಂತ್ರ್ಯವೆಂದರೆ ಕೇವಲ ಹಕ್ಕುಗಳ ಅನುಭವವಲ್ಲ, ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಸಹ ಹೌದು. ನಮ್ಮ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನಗಳನ್ನು ಸದಾ ಸ್ಮರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಶಿಸ್ತು, ಪ್ರಾಮಾಣಿಕತೆ ಮತ್ತು ದೇಶಪ್ರೇಮವನ್ನು ಬೆಳೆಸಿಕೊಂಡು ರಾಷ್ಟ್ರದ ಭವಿಷ್ಯದ ಉತ್ತಮ ನಾಗರಿಕರಾಗಬೇಕು ರೋಟರಿ ಕ್ಲಬ್ ಆಫ್ ಚಿತ್ರದುರ್ಗ ಅಧ್ಯಕ್ಷರಾದ ರೊ. ಯೋಗೀಶ್ ಸಹ್ಯಾದ್ರಿ ತಿಳಿಸಿದರು.
ನಗರದ ರೋಟರಿ ವಿದ್ಯಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಬಳಿಕ ಮಾತನಾಡಿದ ಅವರು ಮಾತನಾಡಿದರು.
ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿರುವುದು ಅನೇಕ ಮಹನೀಯರ ತ್ಯಾಗದ ಫಲ. ಮಹಾತ್ಮ ಗಾಂಧೀಜಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ಸರ್ದಾರ್ ವಲ್ಲಭಭಾಯಿ ಪಟೇಲ್ ಸೇರಿದಂತೆ ಅಸಂಖ್ಯಾತ ಹೋರಾಟಗಾರರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಅರ್ಪಿಸಿದ್ದಾರೆ. ಅವರ ತ್ಯಾಗವನ್ನು ಸ್ಮರಿಸುವುದರ ಜೊತೆಗೆ, ಅವರು ಕಂಡ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸದಾ ಸ್ಮರಿಸಿ, ಏಕತೆ, ಶಿಸ್ತು, ಶಿಕ್ಷಣ ಮತ್ತು ಸೇವೆಯ ಮೂಲಕ ಶ್ರೇಷ್ಠ ಭಾರತವನ್ನು ನಿರ್ಮಿಸುವ ಸಂಕಲ್ಪವನ್ನು ವಿದ್ಯಾರ್ಥಿಗಳು ಮಾಡಬೇಕು ಎಂದು ಅವರು ಕರೆ ನೀಡಿದರು. ಎಲ್ಲಾ ವಿದ್ಯಾರ್ಥಿಗಳು ದೇಶದ ಹೆಮ್ಮೆ ಮತ್ತು ಭವಿಷ್ಯದ ಆಶಾಕಿರಣಗಳಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೊ. PHF. PDG. ಮಧುಪ್ರಸಾದ್ ಕೆ. ಅವರು ವಹಿಸಿದ್ದರು. ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ಉತ್ತಮ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳುವುದು ಇಂದಿನ ಯುವಜನತೆಯ ಕರ್ತವ್ಯವಾಗಿದೆ. ಸ್ವಾತಂತ್ರ್ಯ ನಮಗೆ ಹಕ್ಕುಗಳನ್ನು ನೀಡಿದಂತೆ ಕರ್ತವ್ಯಗಳನ್ನೂ ನೀಡಿದೆ. ಸಂವಿಧಾನವನ್ನು ಗೌರವಿಸುವುದು, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು, ಪರಿಸರವನ್ನು ಸಂರಕ್ಷಿಸುವುದು, ಸಾರ್ವಜನಿಕ ಆಸ್ತಿಯನ್ನು ಕಾಪಾಡುವುದು ಹಾಗೂ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಯನ್ನು ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ರೋಟರಿ ಟ್ರಸ್ಟ್ ನ ಖಜಾಂಚಿ ರೊ. ಸತ್ಯನಾರಾಯಣಾಚಾರ್,
ರೊ. ಜಿ.ಎ. ವಿಶ್ವನಾಥ್ ಬಾಬು, ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಸದಸ್ಯರು, ಹಾಗೂ ರೊ. ಶಂಕರಪ್ಪ, ಆಡಳಿತಾಧಿಕಾರಿ, ರೋಟರಿ ವಿದ್ಯಾಲಯ, ಉಪಸ್ಥಿತರಿದ್ದು , ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿ, ದೇಶದ ಪ್ರಗತಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ತಮ್ಮದೇ ಆದ ರೀತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ ಮಾಡಲು ಅವಕಾಶ ನೀಡಲಾಗಿದ್ದು, ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ದೇಶಭಕ್ತಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ರಾಷ್ಟ್ರದ ಅಭಿವೃದ್ಧಿಯ ಕುರಿತು ತಮ್ಮ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳ ಭಾಷಣಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು.
ವಿದ್ಯಾರ್ಥಿಗಳ ಪೋಷಕರು ಕೂಡ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಉಮಾದೇವಿ ಹೆಚ್.ಎಂ. ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.
ಶಿಕ್ಷಕಿ ಜ್ಯೋತಿ ಆರ್. ಅವರು ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿದರು. ಹಿರಿಯ ಶಿಕ್ಷಕಿ ಗೌರಮ್ಮ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ರೋಟರಿ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
ಸುದ್ದಿದಿನ,ದಾವಣಗೆರೆ: ಜಿಲ್ಲೆಯ ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ, ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ನವಿಲೇಹಾಳು ಗ್ರಾಮದಲ್ಲಿ ಸಿಹಿ ಹಂಚುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಸಾರ್ವಜನಿಕರಿಗೆ ಸಿಹಿ ವಿತರಿಸಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆಯ ಮಹತ್ವ, ದೇಶದ ಏಕತೆ, ಸಾಮರಸ್ಯ ಹಾಗೂ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯ ಕುರಿತು ಸಂದೇಶ ನೀಡಲಾಯಿತು.
ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷರಾದ ಜಾಫರ್ ಅವರು ಮಾತನಾಡಿ, ಸ್ವಾತಂತ್ರ್ಯವೆಂಬುದು ಕೇವಲ ಆಚರಣೆಗೆ ಸೀಮಿತವಾಗದೆ, ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ನ್ಯಾಯ ಹಾಗೂ ಅಭಿವೃದ್ಧಿಯ ಅವಕಾಶ ದೊರೆಯುವಂತಾಗಬೇಕು. ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಸಾರ್ವಜನಿಕರು ಭಾಗವಹಿಸಿ ಸ್ವಾತಂತ್ರ್ಯ ದಿನಾಚರಣೆಗೆ ಶುಭಾಶಯಗಳನ್ನು ಕೋರಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ನವಿಲೇಹಾಳು ಗ್ರಾಮ ಪಂಚಾಯಿತಿಗೆ ಭೇಟಿ ; ಗ್ರಾಮಸಭೆ – ಗ್ರಾಮಾಭಿವೃದ್ಧಿಗೆ ಮನವಿ
-
ದಿನದ ಸುದ್ದಿ2 days agoನವಿಲೇಹಾಳು | 80ನೇ ಸ್ವಾತಂತ್ರ್ಯ ದಿನಾಚರಣೆ ; ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿಯಿಂದ ಸಿಹಿ ಹಂಚಿ ಸಂಭ್ರಮ
-
ದಿನದ ಸುದ್ದಿ2 days agoಸ್ವಾತಂತ್ರ್ಯವೆಂದರೆ ಬರಿ ಹಕ್ಕಲ್ಲ ದೇಶದ ಬಗ್ಗೆ ಜವಾಬ್ದಾರಿ ಹೊಂದುವುದೂ ಕೂಡ : ಯೋಗೀಶ್ ಸಹ್ಯಾದ್ರಿ
-
ದಿನದ ಸುದ್ದಿ21 hours agoಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ



