ದಿನದ ಸುದ್ದಿ
ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!
- ವಿವೇಕಾನಂದ. ಹೆಚ್.ಕೆ.
ಸಾಮಾಜಿಕ ಜಾಲತಾಣಗಳ ಮೇಲೆ ಇರುವ ಒಂದು ದೊಡ್ಡ ಆರೋಪ ಇಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳು ಬಹು ವೇಗವಾಗಿ ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿವೆ. ಅವುಗಳಲ್ಲಿ ಬಿತ್ತರವಾಗುವ ಸಂದೇಶಗಳನ್ನು ಮಾನಿಟರ್ ಮಾಡಬೇಕು ಮತ್ತು ಶಿಕ್ಷೆ ವಿಧಿಸಬೇಕು ಎಂಬ ಕೂಗಿನ ಜೊತೆ ಕೆಲವು Watsapp ಗುಂಪುಗಳಲ್ಲಿ Forward ಮಾಡುವ ಸಂದೇಶಗಳಿಂದ ನಿರ್ವಾಹಕರು ತೊಂದರೆಗೆ ಆಗುವ ಭಯ ಕಾಡುತ್ತಿದೆ.
ಹಾಗಾದರೆ ವಾಸ್ತವ ಏನು ?
ಸುಳ್ಳು ವಂಚನೆ ಮೋಸ ವಿಷ ಕಾರುವ ಪ್ರಚೋದನಕಾರಿ ವಿಷಯಗಳು ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ ಯಾವಾಗಲೂ ಕಾನೂನು ಬಾಹಿರವೇ,ಅನೈತಿಕವೇ ಮತ್ತು ನಿಷಿದ್ಧವೇ. ಅದು ಸೋಷಿಯಲ್ ಮೀಡಿಯಾ ಆಗಲಿ ಅಥವಾ ಎಲ್ಲೇ ಆಗಿರಲಿ ಅದನ್ನು ಒಪ್ಪುವ ಪ್ರಶ್ನೆಯೇ ಇಲ್ಲ.
ಒಂದು ವೇಳೆ ಅದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಅತ್ಯಂತ ಅಪಾಯಕಾರಿ ಹಂತ ತಲುಪಿದೆ ಎಂದು ಹೇಳಿದರೆ ಇಡೀ ಸಮಾಜದ ಮಾನಸಿಕ ವರ್ತನೆಯ ಬಗ್ಗೆಯೇ ಅನುಮಾನಿಸಬೇಕಾಗುತ್ತದೆ. ಹಾಗಾದರೆ ನಾವೆಲ್ಲರೂ ಸುಳ್ಳು ವಂಚನೆಯ ಸಮಾಜದಲ್ಲಿ ಬದುಕುತ್ತಿದ್ದೇವೆಯೇ ಅಥವಾ ಅದನ್ನು ಅರ್ಥಮಾಡಿಕೊಳ್ಳುವ ಬುದ್ದಿ ಶಕ್ತಿ ನಮಗಿಲ್ಲವೇ.
ಇದನ್ನೂ ಓದಿ | ದಿ ಗ್ರೇಟೆಸ್ಟ್ ಇಂಡಿಯನ್ ಡಾ.ಅಂಬೇಡ್ಕರ್..!
ಸ್ವಲ್ಪ ಯೋಚಿಸಿ ನೋಡಿದರೆ ಸಾಮಾಜಿಕ ಜಾಲತಾಣಗಳನ್ನು ಅತಿಹೆಚ್ಚು ಸದುಪಯೋಗ ಮತ್ತು ದುರುಪಯೋಗ ಪಡಿಸಿಕೊಂಡ ಕುಖ್ಯಾತಿ ರಾಜಕೀಯ ಪಕ್ಷಗಳು ಮತ್ತು ಸಂಘಟನಾತ್ಮಕ ಪಂಥಗಳಿಗೆ ಸಲ್ಲುತ್ತದೆ.
ಇವು ಈ ಜಾಲತಾಣಗಳ ನಿರ್ವಹಣೆಗೆ ಏಜೆಂಟರುಗಳನ್ನು ನೇಮಿಸಿಕೊಂಡರು. ಕೆಲವು ಅಧೀಕೃತ ಮತ್ತೆ ಕೆಲವು ಅನಧಿಕೃತ. ಇವುಗಳ ಕೆಲಸ ಇತಿಹಾಸವನ್ನು ತಿರುಚುವುದು, ಅದನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸುವುದು, ಮಹಾಪುರುಷರ ಸಂದೇಶಗಳನ್ನು ತಪ್ಪಾಗಿ ಬರೆದು ತಮ್ಮ ಪರವಾಗಿ ತಿದ್ದುವುದು, ವಿರೋಧಿಗಳನ್ನು ದೇಶದ್ರೋಹಿಗಳಂತೆ ಚಿತ್ರಿಸುವುದು, ಇಲ್ಲಸಲ್ಲದ ಆರೋಪಗಳನ್ನು ಜಾಣ್ಮೆಯಿಂದ ಇತರರ ತಲೆಗೆ ಕಟ್ಟುವುದು.
ಪೋಟೋ ಶಾಪ್ ಸಂಕಲನ ತಂತ್ರದಿಂದ ಯಾರದೋ ತಲೆಗೆ ಇನ್ಯಾರನ್ನೋ ಜೋಡಿಸುವುದು, ಸುಳ್ಳು ಧ್ವನಿ ಸುರಳಿಗಳನ್ನು ಪ್ರಸಾರ ಮಾಡುವುದು, ಇತ್ತೀಚೆಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮುಸ್ಲಿಂಮನೊಬ್ಬ ಹಿಂದೂ ವೇಷ ಧರಿಸಿ, ಹಿಂದೂ ಒಬ್ಬ ಮುಸ್ಲಿಂ ವೇಷ ಧರಿಸಿ ಅನಾಹುತಕಾರಿಯಾಗಿ ಮಾತನಾಡುವುದು ಮುಂತಾದ ಅನೇಕ ಕುತಂತ್ರಗಳನ್ನು ಹರಿಯ ಬಿಡುತ್ತಾರೆ. ಇದು ಕೊನೆಗೆ ನಿಜ ಮತ್ತು ಸುಳ್ಳುಗಳ ನಡುವಿನ ವ್ಯತ್ಯಾಸಗಳನ್ನೇ ಗೊಂದಲಗೊಳಿಸಿದೆ. ಅದರ ಲಾಭವನ್ನು ಅವು ಪಡೆದರೆ ನಷ್ಟ ಮಾತ್ರ ಜನರ ಪಾಲಿಗೆ.
ಹಾಗಾದರೆ ಸುದ್ದಿಗಳ ನಿಖರತೆಯನ್ನು ಗುರುತಿಸುವುದು ಹೇಗೆ ?
ನೋಡಿ ಈಗಿನ ವ್ಯವಸ್ಥೆಯಲ್ಲಿ ಇದಕ್ಕೆ ದಿಡೀರನೇ ಒಂದು ಸ್ಪಷ್ಟ ಪರಿಹಾರ ಸಿಗುವುದಿಲ್ಲ. ಸತ್ಯ ಹರಿಶ್ಚಂದ್ರರ ಉಗಮವೂ ಆಗುವುದಿಲ್ಲ. ಇರುವುದರಲ್ಲಿ ನಾವು ಒಪ್ಪಬಹುದಾದ ಒಂದು ಸರಳ ಪರಿಹಾರವೆಂದರೆ..
ಏನೇ ಆಪಾದನೆಗಳು, ಪಕ್ಷಪಾತಗಳು, ವಿವೇಚನಾರಹಿತ ವಿಮರ್ಶೆಗಳು, ಸ್ಪರ್ಧಾತ್ಮಕ ತಂತ್ರಗಳು ಇದ್ದರೂ ಈಗಲೂ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಲ್ಲಿ ಹೆಚ್ಚು ಕಡಿಮೆ ನಂಬಲರ್ಹ ಸುದ್ದಿಗಳು ಪ್ರಸಾರವಾಗುತ್ತವೆ. ಅಧೀಕೃತ ಸುದ್ದಿ ಸಂಸ್ಥೆಗಳು, ಸರ್ಕಾರದ ಆಡಳಿತ ವ್ಯವಸ್ಥೆ, ಪೋಲೀಸ್, ಮುಂತಾದ ಎಲ್ಲವೂ ಮೊದಲು ಸುದ್ದಿಗಳನ್ನು ಇವುಗಳಿಗೆ ಕಳುಹಿಸುತ್ತವೆ.
ಈ ಮಾಧ್ಯಮಗಳಿಗೆ ಗೊತ್ತಿಲ್ಲದ ವಿಶ್ವದ ಯಾವುದೇ ದೊಡ್ಡ ಘಟನೆಗಳು ಇರುವುದೇ ಇಲ್ಲ. ಏನೇ ಅಪರಾಧ, ಅಪಘಾತ, ಅವಘಡ, ಸಾಧನೆ, ಪತನ, ಕ್ರಾಂತಿ, ಬದಲಾವಣೆ ಎಲ್ಲವೂ ಬಹುತೇಕ ಮಾಧ್ಯಮಗಳಿಗೆ ತಿಳಿಸಲಾಗುತ್ತದೆ. ಹಾಗೆಂದು ಸಂಪೂರ್ಣ ಎಲ್ಲವೂ ಎಂದು ಅಲ್ಲ.
ಕೆಲವು ಅಪರೂಪದ, ಕುತಂತ್ರದ, ಜನರಿಗೆ ಮರೆಮಾಚಿದ ಸುದ್ದಿಗಳು ಇರುತ್ತವೆ. ಆದರೆ ಅದು ಬಯಲಾಗುವುದು ಸಹ ಮಾಧ್ಯಮಗಳಿಂದಲೇ. ಯಾರೋ ಒಬ್ಬ ಜನಪ್ರಿಯ ವ್ಯಕ್ತಿಯ ಸಾವು ಮೊದಲು ಅಲ್ಲಿನ ಸ್ಥಳೀಯ ಜನರಿಗೆ ತಲುಪಿ, ಸಾಮಾಜಿಕ ಜಾಲತಾಣಗಳಲ್ಲಿ ಬಂದರೂ ಕೆಲವೇ ಕ್ಷಣಗಳಲ್ಲಿ ಮಾಧ್ಯಮಗಳಲ್ಲಿ ಬಂದೇ ಬರುತ್ತದೆ.
ಹಾಗೆಯೇ ಈ ಮಾಧ್ಯಮಗಳಲ್ಲಿ ಒಂದಷ್ಟು ಊಹೆ, ಆತುರ, ಕೆಟ್ಟ ವಿಮರ್ಶೆ, ವ್ಯಕ್ತಿ ನಿಂದನೆ ಇರುತ್ತದೆ. ಆದರೆ ತಲೆಬುಡವಿಲ್ಲದ ಅತ್ಯಂತ ಅಪಾಯಕಾರಿ ಸುದ್ದಿಗಳನ್ನು ಪ್ರಸಾರ ಮಾಡಲು ಭಯಪಡುತ್ತಾರೆ. ಏಕೆಂದರೆ ಅವರು ಸುದ್ದಿಗಳನ್ನು ಖಚಿತ ಪಡಿಸಿಕೊಳ್ಳುವ ವ್ಯವಸ್ಥೆ ಹೊಂದಿದ್ದಾರೆ ಮತ್ತು Accountability ಇದೆ. ಅವರ ಮೇಲೆಯೂ ಮಾನಹಾನಿ ಮೊಕದ್ದಮೆ ಹೂಡಬಹುದು.
ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ರೀತಿಯ ವ್ಯವಸ್ಥೆ ಇಲ್ಲ. ಯಾರೋ ಒಬ್ಬ ವ್ಯಕ್ತಿ ವೈಯಕ್ತಿಕ ಸಂದೇಶವನ್ನು ಅಥವಾ ದೃಶ್ಯಗಳನ್ನು ಬೇಕಂತಲೇ ಹರಿಯ ಬಿಡಬಹುದು. ಅದು ಹೊಸದೋ ಹಳೆಯದೋ ನಿಜವೋ ಸುಳ್ಳೋ ಯಾರಿಗೂ ತಿಳಿಯುವುದಿಲ್ಲ ಮತ್ತು ಅದಕ್ಕೆ ಯಾರೂ ಜವಾಬ್ದಾರರಿರುವುದಿಲ್ಲ. ನೀವು ಯಾರನ್ನು ಪ್ರಶ್ನಿಸಲು ಸಿಗುವುದಿಲ್ಲ.
ಈಗ ಕೊರೋನಾ ವೈರಸ್ ದಾಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಕೆಲವು ನಿಭಂದನೆಗಳನ್ನು ವಿಧಿಸಿದೆ ಎಂಬ ಮಾಹಿತಿ ಇದೆ. ಇದು ಹೊಸದೇನು ಅಲ್ಲ. ಎಂದಿನಂತೆ ಸುಳ್ಳು ಪ್ರಚೋದನಕಾರಿ ವಿಷಯಗಳಿಗೆ ಮಾತ್ರ ಸಂಬಂಧಿಸಿದೆ. ಸತ್ಯವನ್ನು, ಸ್ವತಂತ್ರ ಅಭಿಪ್ರಾಯವನ್ನು,
ಅಧೀಕೃತ ಮಾಹಿತಿಯನ್ನು ಕಾನೂನು ಮತ್ತು ನೈತಿಕತೆಯ ಮಿತಿಯೊಳಗೆ ವ್ಯಕ್ತಪಡಿಸಲು ಯಾವುದೇ ಅಂಜಿಕೆ ಬೇಡ.
Forward ಮಾಡುವ ವಿಷಯದಲ್ಲಿ ಮಾತ್ರ ಜಾಗೃತವಾಗಿರಿ. ಒಂದು ವೇಳೆ ಸುದ್ದಿಯೊಂದು ಮಾಧ್ಯಮಗಳಲ್ಲಿ ಪ್ರಸಾರವಾಗದೆ ಕೇವಲ ಜಾಲತಾಣಗಳಲ್ಲಿ ಮಾತ್ರ ಹರಿದಾಡುತ್ತಿದ್ದರೆ ಅದನ್ನು ಅಷ್ಟಾಗಿ ನಂಬಬಾರದು ಮತ್ತು Forward ಮಾಡಬಾರದು. ಯಾರೋ ದೇಶಭಕ್ತಿಯ ಹೆಸರಿನಲ್ಲಿ, ದೇವರ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ಏನನ್ನೋ ಹೇಳಿದರೆ ಅದನ್ನು ಓದಬಹುದೇ ಹೊರತು Forward ಮಾಡಬಾರದು.
ಬೇಕಾದರೆ ಅದರ ಸಾರಾಂಶವನ್ನು ಸ್ವತಂತ್ರ ಅಭಿಪ್ರಾಯದೊಂದಿಗೆ ಮತ್ತು ಒಂದು ಅನುಮಾನದೊಂದಿಗೆ ಸ್ವತಃ ಬರೆಯಬಹುದು. ಕರೋನ ಔಷಧಿ, ಸಾವಿನ ಅಂಕಿ ಸಂಖ್ಯೆಗಳು ಮುಂತಾದ ವಿಷಯಗಳ ಬಗ್ಗೆ ಯಾವುದೇ ಸಂದೇಶ ಕಳಿಸಬಾರದು. ಹೊಸ ಸಂಶೋಧನಾ ವರದಿ ಸರ್ಕಾರಕ್ಕೆ ಮಾತ್ರ ಕಳುಹಿಸಿ.
ಸುಳ್ಳುಗಳನ್ನೇ ಧೈರ್ಯವಾಗಿ ರಾಜಾರೋಷವಾಗಿ ಪ್ರಸಾರ ಮತ್ತು ಪ್ರಚಾರ ಮಾಡುವ ಸಂದರ್ಭದಲ್ಲಿ, ಅದರ ಮುಖಾಂತರವೇ ಸಮಾಜವನ್ನು ನಿಯಂತ್ರಣ ಪಡೆಯುವ ಸಮಯದಲ್ಲಿ ಸತ್ಯ ಹೇಳುವವರು ಹೆದರಿಕೊಳ್ಳಬಾರದು. ಸುಳ್ಳು ಸತ್ಯವನ್ನು ಸೋಲಿಸಲು ಬಿಡಬಾರದು.
ಖಂಡಿತವಾಗಿಯೂ ಸತ್ಯ ಸುಳ್ಳಿಗಿಂತ ಹೆಚ್ಚು ಬಲಶಾಲಿ ಮತ್ತು ಪರಿಣಾಮಕಾರಿ. ಆದರೆ ನಾವು ನಿಜಕ್ಕೂ ಪ್ರಾಮಾಣಿಕರಾಗಿರಬೇಕು ಮತ್ತು ಗಟ್ಟಿ ವ್ಯಕ್ತಿತ್ವ ಹೊಂದಿರಬೇಕು. ನಮಗೆ ಅನುಕೂಲಕರ ಮುಖವಾಡ ತೊಟ್ಟು ಸತ್ಯವನ್ನು ಸಮರ್ಥಿಸಲು ಸಾಧ್ಯವಿಲ್ಲ. ನಮ್ಮ ನಡೆ ನುಡಿ ನೇರವಾಗಿದ್ದರೆ ಸುಳ್ಳನ್ನು ಗೆಲ್ಲುಬಹುದು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ ‘ಅಲ್ಲಮಪ್ರಭು’
ಆದ್ದರಿಂದ ವ್ಯವಸ್ಥೆ ಯಾವುದೇ ಇರಲಿ, ಮಾಧ್ಯಮ ಯಾವುದೇ ಇರಲಿ, ಕಾನೂನು ಏನೇ ಹೇಳಲಿ, ಸುಳ್ಳು ಪ್ರಚೋದನೆ ಅನೈತಿಕತೆ ಖಂಡಿತ ಶಿಕ್ಷಾರ್ಹ ಅಪರಾಧ ಮತ್ತು ಅಮಾನವೀಯ ಹಾಗೂ ದೇಶದ್ರೋಹ. ಆದರೆ ಸತ್ಯಕ್ಕೆ, ಸಮಾಜ ಒಪ್ಪಿತ, ಕಾನೂನಿನ ವ್ಯಾಪ್ತಿಯ ನೈತಿಕತೆಗೆ ಯಾವುದೇ ತಡೆ ಇಲ್ಲ.
ಸಾಮಾನ್ಯ ಜ್ಞಾನ ಇಲ್ಲಿ ಮುಖ್ಯ
ಸಾಮಾಜಿಕ ಜಾಲತಾಣಗಳು ಸಾಮಾನ್ಯ ಜನರ ಪ್ರಜಾಪ್ರಭುತ್ವದ ಒಂದು ಅತ್ಯುತ್ತಮ ವೇದಿಕೆ. ಅದರ ಧ್ವನಿ ಅಡಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದು. ಕೆಟ್ಟದ್ದರ ನೆಪದಲ್ಲಿ ಒಳ್ಳೆಯದನ್ನು ನಾಶ ಮಾಡುವುದು ಬೇಡ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

