Connect with us

ದಿನದ ಸುದ್ದಿ

ಸಾಮಾಜಿಕ ಜಾಲತಾಣಗಳು ಮತ್ತು ಸುಳ್ಳು ಸುದ್ದಿಗಳು..!

Published

on

  • ವಿವೇಕಾನಂದ. ಹೆಚ್.ಕೆ.

ಸಾಮಾಜಿಕ ಜಾಲತಾಣಗಳ ಮೇಲೆ ಇರುವ ಒಂದು ದೊಡ್ಡ ಆರೋಪ ಇಲ್ಲಿ ಸುಳ್ಳು ಮತ್ತು ಪ್ರಚೋದನಕಾರಿ ಸಂದೇಶಗಳು ಬಹು ವೇಗವಾಗಿ ಹರಡಿ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿವೆ. ಅವುಗಳಲ್ಲಿ ಬಿತ್ತರವಾಗುವ ಸಂದೇಶಗಳನ್ನು ಮಾನಿಟರ್ ಮಾಡಬೇಕು ಮತ್ತು ಶಿಕ್ಷೆ ವಿಧಿಸಬೇಕು ಎಂಬ ಕೂಗಿನ ಜೊತೆ ಕೆಲವು Watsapp ಗುಂಪುಗಳಲ್ಲಿ Forward ಮಾಡುವ ಸಂದೇಶಗಳಿಂದ ನಿರ್ವಾಹಕರು ತೊಂದರೆಗೆ ಆಗುವ ಭಯ ಕಾಡುತ್ತಿದೆ.

ಹಾಗಾದರೆ ವಾಸ್ತವ ಏನು ?

ಸುಳ್ಳು ವಂಚನೆ ಮೋಸ ವಿಷ ಕಾರುವ ಪ್ರಚೋದನಕಾರಿ ವಿಷಯಗಳು ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭಗಳಿಗೂ ಯಾವಾಗಲೂ ಕಾನೂನು ಬಾಹಿರವೇ,ಅನೈತಿಕವೇ ಮತ್ತು ನಿಷಿದ್ಧವೇ. ಅದು ಸೋಷಿಯಲ್‌ ಮೀಡಿಯಾ ‌ಆಗಲಿ ಅಥವಾ ಎಲ್ಲೇ ಆಗಿರಲಿ ಅದನ್ನು ಒಪ್ಪುವ ಪ್ರಶ್ನೆಯೇ ಇಲ್ಲ.

ಒಂದು ವೇಳೆ ಅದು ಸಾಮಾಜಿಕ ಜಾಲತಾಣಗಳ ಕಾರಣದಿಂದ ಅತ್ಯಂತ ಅಪಾಯಕಾರಿ ಹಂತ ತಲುಪಿದೆ ಎಂದು ಹೇಳಿದರೆ ಇಡೀ ಸಮಾಜದ ಮಾನಸಿಕ ವರ್ತನೆಯ ಬಗ್ಗೆಯೇ ಅನುಮಾನಿಸಬೇಕಾಗುತ್ತದೆ. ಹಾಗಾದರೆ ನಾವೆಲ್ಲರೂ ಸುಳ್ಳು ವಂಚನೆಯ ಸಮಾಜದಲ್ಲಿ ಬದುಕುತ್ತಿದ್ದೇವೆಯೇ ಅಥವಾ ಅದನ್ನು ಅರ್ಥಮಾಡಿಕೊಳ್ಳುವ ಬುದ್ದಿ ಶಕ್ತಿ ನಮಗಿಲ್ಲವೇ.

ಇದನ್ನೂ ಓದಿ | ದಿ ಗ್ರೇಟೆಸ್ಟ್‌ ಇಂಡಿಯನ್ ಡಾ.ಅಂಬೇಡ್ಕರ್..!

ಸ್ವಲ್ಪ ಯೋಚಿಸಿ ನೋಡಿದರೆ ಸಾಮಾಜಿಕ ಜಾಲತಾಣಗಳನ್ನು ಅತಿಹೆಚ್ಚು ಸದುಪಯೋಗ ಮತ್ತು ದುರುಪಯೋಗ ಪಡಿಸಿಕೊಂಡ ಕುಖ್ಯಾತಿ ರಾಜಕೀಯ ಪಕ್ಷಗಳು ಮತ್ತು ಸಂಘಟನಾತ್ಮಕ ಪಂಥಗಳಿಗೆ ಸಲ್ಲುತ್ತದೆ.

ಇವು ಈ ಜಾಲತಾಣಗಳ ನಿರ್ವಹಣೆಗೆ ಏಜೆಂಟರುಗಳನ್ನು ನೇಮಿಸಿಕೊಂಡರು. ಕೆಲವು ಅಧೀಕೃತ ಮತ್ತೆ ಕೆಲವು ಅನಧಿಕೃತ. ಇವುಗಳ ಕೆಲಸ ಇತಿಹಾಸವನ್ನು ತಿರುಚುವುದು, ಅದನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸುವುದು, ಮಹಾಪುರುಷರ ಸಂದೇಶಗಳನ್ನು ತಪ್ಪಾಗಿ ಬರೆದು ತಮ್ಮ ಪರವಾಗಿ ತಿದ್ದುವುದು, ವಿರೋಧಿಗಳನ್ನು ದೇಶದ್ರೋಹಿಗಳಂತೆ ಚಿತ್ರಿಸುವುದು, ಇಲ್ಲಸಲ್ಲದ ಆರೋಪಗಳನ್ನು ಜಾಣ್ಮೆಯಿಂದ ಇತರರ ತಲೆಗೆ ಕಟ್ಟುವುದು.

ಪೋಟೋ ಶಾಪ್ ಸಂಕಲನ ತಂತ್ರದಿಂದ ಯಾರದೋ ತಲೆಗೆ ಇನ್ಯಾರನ್ನೋ ಜೋಡಿಸುವುದು, ಸುಳ್ಳು ಧ್ವನಿ ಸುರಳಿಗಳನ್ನು ಪ್ರಸಾರ ಮಾಡುವುದು, ಇತ್ತೀಚೆಗೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಮುಸ್ಲಿಂಮನೊಬ್ಬ ಹಿಂದೂ ವೇಷ ಧರಿಸಿ, ಹಿಂದೂ ಒಬ್ಬ ಮುಸ್ಲಿಂ ವೇಷ ಧರಿಸಿ ಅನಾಹುತಕಾರಿಯಾಗಿ ಮಾತನಾಡುವುದು ಮುಂತಾದ ಅನೇಕ ಕುತಂತ್ರಗಳನ್ನು ಹರಿಯ ಬಿಡುತ್ತಾರೆ. ಇದು ಕೊನೆಗೆ ನಿಜ ಮತ್ತು ಸುಳ್ಳುಗಳ ನಡುವಿನ ವ್ಯತ್ಯಾಸಗಳನ್ನೇ ಗೊಂದಲಗೊಳಿಸಿದೆ. ಅದರ ಲಾಭವನ್ನು ಅವು ಪಡೆದರೆ ನಷ್ಟ ಮಾತ್ರ ಜನರ ಪಾಲಿಗೆ.

ಹಾಗಾದರೆ ಸುದ್ದಿಗಳ ನಿಖರತೆಯನ್ನು ಗುರುತಿಸುವುದು ಹೇಗೆ ?

ನೋಡಿ ಈಗಿನ ವ್ಯವಸ್ಥೆಯಲ್ಲಿ ಇದಕ್ಕೆ ದಿಡೀರನೇ ಒಂದು ಸ್ಪಷ್ಟ ಪರಿಹಾರ ಸಿಗುವುದಿಲ್ಲ. ಸತ್ಯ ಹರಿಶ್ಚಂದ್ರರ ಉಗಮವೂ ಆಗುವುದಿಲ್ಲ. ಇರುವುದರಲ್ಲಿ ನಾವು ಒಪ್ಪಬಹುದಾದ ಒಂದು ಸರಳ ಪರಿಹಾರವೆಂದರೆ..

ಏನೇ ಆಪಾದನೆಗಳು, ಪಕ್ಷಪಾತಗಳು, ವಿವೇಚನಾರಹಿತ ವಿಮರ್ಶೆಗಳು, ಸ್ಪರ್ಧಾತ್ಮಕ ತಂತ್ರಗಳು ಇದ್ದರೂ ಈಗಲೂ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಲ್ಲಿ ಹೆಚ್ಚು ಕಡಿಮೆ ‌ನಂಬಲರ್ಹ ಸುದ್ದಿಗಳು ಪ್ರಸಾರವಾಗುತ್ತವೆ. ಅಧೀಕೃತ ಸುದ್ದಿ ಸಂಸ್ಥೆಗಳು, ಸರ್ಕಾರದ ಆಡಳಿತ ವ್ಯವಸ್ಥೆ, ಪೋಲೀಸ್, ಮುಂತಾದ ಎಲ್ಲವೂ ಮೊದಲು ಸುದ್ದಿಗಳನ್ನು ಇವುಗಳಿಗೆ ಕಳುಹಿಸುತ್ತವೆ‌.

ಈ ಮಾಧ್ಯಮಗಳಿಗೆ ಗೊತ್ತಿಲ್ಲದ ವಿಶ್ವದ ಯಾವುದೇ ದೊಡ್ಡ ಘಟನೆಗಳು ಇರುವುದೇ ಇಲ್ಲ. ಏನೇ ಅಪರಾಧ, ಅಪಘಾತ, ಅವಘಡ, ಸಾಧನೆ, ಪತನ, ಕ್ರಾಂತಿ, ಬದಲಾವಣೆ ಎಲ್ಲವೂ ಬಹುತೇಕ ಮಾಧ್ಯಮಗಳಿಗೆ ತಿಳಿಸಲಾಗುತ್ತದೆ. ಹಾಗೆಂದು ಸಂಪೂರ್ಣ ಎಲ್ಲವೂ ಎಂದು ಅಲ್ಲ.

ಕೆಲವು ಅಪರೂಪದ, ಕುತಂತ್ರದ, ಜನರಿಗೆ ಮರೆಮಾಚಿದ ಸುದ್ದಿಗಳು ಇರುತ್ತವೆ. ಆದರೆ ಅದು ಬಯಲಾಗುವುದು ಸಹ ಮಾಧ್ಯಮಗಳಿಂದಲೇ. ಯಾರೋ ಒಬ್ಬ ಜನಪ್ರಿಯ ವ್ಯಕ್ತಿಯ ಸಾವು ಮೊದಲು ಅಲ್ಲಿನ ಸ್ಥಳೀಯ ಜನರಿಗೆ ತಲುಪಿ, ಸಾಮಾಜಿಕ ಜಾಲತಾಣಗಳಲ್ಲಿ ಬಂದರೂ ಕೆಲವೇ ಕ್ಷಣಗಳಲ್ಲಿ ಮಾಧ್ಯಮಗಳಲ್ಲಿ ಬಂದೇ ಬರುತ್ತದೆ.

ಹಾಗೆಯೇ ಈ ಮಾಧ್ಯಮಗಳಲ್ಲಿ ಒಂದಷ್ಟು ಊಹೆ, ಆತುರ, ಕೆಟ್ಟ ವಿಮರ್ಶೆ, ವ್ಯಕ್ತಿ ನಿಂದನೆ ಇರುತ್ತದೆ. ಆದರೆ ತಲೆಬುಡವಿಲ್ಲದ ಅತ್ಯಂತ ಅಪಾಯಕಾರಿ ಸುದ್ದಿಗಳನ್ನು ಪ್ರಸಾರ ಮಾಡಲು ಭಯಪಡುತ್ತಾರೆ. ಏಕೆಂದರೆ ಅವರು ಸುದ್ದಿಗಳನ್ನು ಖಚಿತ ಪಡಿಸಿಕೊಳ್ಳುವ ವ್ಯವಸ್ಥೆ ಹೊಂದಿದ್ದಾರೆ ಮತ್ತು Accountability ಇದೆ. ಅವರ ಮೇಲೆಯೂ ಮಾನಹಾನಿ ಮೊಕದ್ದಮೆ ಹೂಡಬಹುದು.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಆ ರೀತಿಯ ವ್ಯವಸ್ಥೆ ಇಲ್ಲ. ಯಾರೋ ಒಬ್ಬ ವ್ಯಕ್ತಿ ವೈಯಕ್ತಿಕ ಸಂದೇಶವನ್ನು ಅಥವಾ ದೃಶ್ಯಗಳನ್ನು ಬೇಕಂತಲೇ ಹರಿಯ ಬಿಡಬಹುದು. ಅದು ಹೊಸದೋ ಹಳೆಯದೋ ನಿಜವೋ ಸುಳ್ಳೋ ಯಾರಿಗೂ ತಿಳಿಯುವುದಿಲ್ಲ ಮತ್ತು ಅದಕ್ಕೆ ಯಾರೂ ಜವಾಬ್ದಾರರಿರುವುದಿಲ್ಲ. ನೀವು ಯಾರನ್ನು ಪ್ರಶ್ನಿಸಲು ಸಿಗುವುದಿಲ್ಲ.

ಈಗ ಕೊರೋನಾ ವೈರಸ್ ದಾಳಿಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್ ಕೆಲವು ನಿಭಂದನೆಗಳನ್ನು ವಿಧಿಸಿದೆ ಎಂಬ ಮಾಹಿತಿ ಇದೆ. ಇದು ಹೊಸದೇನು ಅಲ್ಲ. ಎಂದಿನಂತೆ ಸುಳ್ಳು ಪ್ರಚೋದನಕಾರಿ ವಿಷಯಗಳಿಗೆ ಮಾತ್ರ ಸಂಬಂಧಿಸಿದೆ. ಸತ್ಯವನ್ನು, ಸ್ವತಂತ್ರ ಅಭಿಪ್ರಾಯವನ್ನು,
ಅಧೀಕೃತ ಮಾಹಿತಿಯನ್ನು ಕಾನೂನು ಮತ್ತು ನೈತಿಕತೆಯ ಮಿತಿಯೊಳಗೆ ವ್ಯಕ್ತಪಡಿಸಲು ಯಾವುದೇ ಅಂಜಿಕೆ ಬೇಡ.

Forward ಮಾಡುವ ವಿಷಯದಲ್ಲಿ ಮಾತ್ರ ಜಾಗೃತವಾಗಿರಿ. ಒಂದು ವೇಳೆ ಸುದ್ದಿಯೊಂದು ಮಾಧ್ಯಮಗಳಲ್ಲಿ ಪ್ರಸಾರವಾಗದೆ ಕೇವಲ ಜಾಲತಾಣಗಳಲ್ಲಿ ಮಾತ್ರ ಹರಿದಾಡುತ್ತಿದ್ದರೆ ಅದನ್ನು ಅಷ್ಟಾಗಿ ನಂಬಬಾರದು ಮತ್ತು Forward ಮಾಡಬಾರದು. ಯಾರೋ ‌ದೇಶಭಕ್ತಿಯ ಹೆಸರಿನಲ್ಲಿ, ದೇವರ ಹೆಸರಿನಲ್ಲಿ, ಧರ್ಮದ ಹೆಸರಿನಲ್ಲಿ ಭಾವನಾತ್ಮಕವಾಗಿ ಏನನ್ನೋ ಹೇಳಿದರೆ ಅದನ್ನು ಓದಬಹುದೇ ಹೊರತು Forward ಮಾಡಬಾರದು.

ಬೇಕಾದರೆ ಅದರ ಸಾರಾಂಶವನ್ನು ಸ್ವತಂತ್ರ ಅಭಿಪ್ರಾಯದೊಂದಿಗೆ ಮತ್ತು ಒಂದು ಅನುಮಾನದೊಂದಿಗೆ ಸ್ವತಃ ಬರೆಯಬಹುದು. ಕರೋನ ಔಷಧಿ, ಸಾವಿನ ಅಂಕಿ ಸಂಖ್ಯೆಗಳು ಮುಂತಾದ ವಿಷಯಗಳ ಬಗ್ಗೆ ಯಾವುದೇ ಸಂದೇಶ ಕಳಿಸಬಾರದು. ಹೊಸ ಸಂಶೋಧನಾ ವರದಿ ಸರ್ಕಾರಕ್ಕೆ ಮಾತ್ರ ಕಳುಹಿಸಿ.

ಸುಳ್ಳುಗಳನ್ನೇ ಧೈರ್ಯವಾಗಿ ರಾಜಾರೋಷವಾಗಿ ಪ್ರಸಾರ ಮತ್ತು ಪ್ರಚಾರ ಮಾಡುವ ಸಂದರ್ಭದಲ್ಲಿ, ಅದರ ಮುಖಾಂತರವೇ ಸಮಾಜವನ್ನು ನಿಯಂತ್ರಣ ಪಡೆಯುವ ಸಮಯದಲ್ಲಿ ಸತ್ಯ ಹೇಳುವವರು ಹೆದರಿಕೊಳ್ಳಬಾರದು. ಸುಳ್ಳು ಸತ್ಯವನ್ನು ಸೋಲಿಸಲು ಬಿಡಬಾರದು.

ಖಂಡಿತವಾಗಿಯೂ ಸತ್ಯ ಸುಳ್ಳಿಗಿಂತ ಹೆಚ್ಚು ಬಲಶಾಲಿ ಮತ್ತು ಪರಿಣಾಮಕಾರಿ. ಆದರೆ ನಾವು ನಿಜಕ್ಕೂ ಪ್ರಾಮಾಣಿಕರಾಗಿರಬೇಕು ಮತ್ತು ಗಟ್ಟಿ ವ್ಯಕ್ತಿತ್ವ ಹೊಂದಿರಬೇಕು. ನಮಗೆ ಅನುಕೂಲಕರ ಮುಖವಾಡ ತೊಟ್ಟು ಸತ್ಯವನ್ನು ‌ಸಮರ್ಥಿಸಲು ಸಾಧ್ಯವಿಲ್ಲ. ನಮ್ಮ ನಡೆ ನುಡಿ ನೇರವಾಗಿದ್ದರೆ ಸುಳ್ಳನ್ನು ಗೆಲ್ಲುಬಹುದು.

ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆ – ನಮ್ಮ ಹೆಮ್ಮೆ ‘ಅಲ್ಲಮಪ್ರಭು’

ಆದ್ದರಿಂದ ವ್ಯವಸ್ಥೆ ಯಾವುದೇ ಇರಲಿ, ಮಾಧ್ಯಮ ಯಾವುದೇ ಇರಲಿ, ಕಾನೂನು ಏನೇ ಹೇಳಲಿ, ಸುಳ್ಳು ಪ್ರಚೋದನೆ ಅನೈತಿಕತೆ ಖಂಡಿತ ಶಿಕ್ಷಾರ್ಹ ಅಪರಾಧ ಮತ್ತು ಅಮಾನವೀಯ ಹಾಗೂ ದೇಶದ್ರೋಹ. ಆದರೆ ಸತ್ಯಕ್ಕೆ, ಸಮಾಜ ಒಪ್ಪಿತ, ಕಾನೂನಿನ ವ್ಯಾಪ್ತಿಯ ನೈತಿಕತೆಗೆ ಯಾವುದೇ ತಡೆ ಇಲ್ಲ.

ಸಾಮಾನ್ಯ ಜ್ಞಾನ ಇಲ್ಲಿ ಮುಖ್ಯ

ಸಾಮಾಜಿಕ ಜಾಲತಾಣಗಳು ಸಾಮಾನ್ಯ ಜನರ ಪ್ರಜಾಪ್ರಭುತ್ವದ ಒಂದು ಅತ್ಯುತ್ತಮ ವೇದಿಕೆ. ಅದರ ಧ್ವನಿ ಅಡಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದು. ಕೆಟ್ಟದ್ದರ ನೆಪದಲ್ಲಿ ಒಳ್ಳೆಯದನ್ನು ನಾಶ ಮಾಡುವುದು ಬೇಡ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ತನಿಖಾ ವರದಿನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷö್ಯ ತೋರಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇಲ್ಲಿನ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿನ ಬುಡಕಟ್ಟು ಸಮುದಾಯಗಳ ಪ್ರಗತಿಗೆ ಸಂಬAಧಿಸಿದAತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಸಲುವಾಗಿ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರೂ. 695 ಲಕ್ಷ ರೂಪಾಯಿಗಳನ್ನು ಸರ್ಕಾರ ಬಿಡುಗಡೆ ಮಾಡಿರುತ್ತದೆ. ಸದರಿ ಅನುದಾನದ ಖರ್ಚು-ವೆಚ್ಚದಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಅಕ್ರಮಗಳು ನಡೆದಿರುವ ಅಧಿಕೃತ ದಾಖಲೆಗಳನ್ನು ಲಗತ್ತಿಸಿ ಇಲಾಖಾ ತನಿಖೆ ನಡೆಸುವಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ದಿನಾಂಕ: 27-04-2026 ರಂದು ದೂರು ನೀಡಲಾಗಿತ್ತು.

ಆದರೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಸಾರ್ವಜನಿಕ ಹಿತಾಸಕ್ತಿ ಕೇಂದ್ರಿತ ದೂರು ಅರ್ಜಿಗೆ ಸಂಬಂಧಿಸಿದಂತೆ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರು ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡಿರುವುದಿಲ್ಲ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಡಾ. ಅಶೋಕ್ ಡಿ.ಆರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending