Connect with us

ರಾಜಕೀಯ

“ನನ್ನ ರಾಜೀವ್ ನನಗೆ ಮರಳಿ ನೀಡಿ, ನಾನು ಹಿಂತಿರುಗಿ ಹೋಗುತ್ತೇನೆ” ಸೋನಿಯಾ ಗಾಂಧಿ ಮನ‌ಮಿಡಿವ ಪತ್ರ : ಮಿಸ್ ಮಾಡ್ದೆ ಓದಿ..!

Published

on

  • ಮೂಲ : ಸೋನಿಯಾ ಗಾಂಧಿ |ಅನುವಾದ : ರಾಮಚಂದ್ರ ಹುದುಗೂರು

” ನನ್ನ ರಾಜೀವ್ ನನಗೆ ಮರಳಿ ನೀಡಿ
ನಾನು ಹಿಂತಿರುಗಿ ಹೋಗುತ್ತೇನೆ
ನೀವು ಅವರನ್ನು ನನಗೆ ಹಿಂತಿರುಗಿಸದಿದ್ದರೆ ನಾನು ಇಲ್ಲಿಯೇ ಈ ಮಣ್ಣಿನಲ್ಲಿ ಮಣ್ಣಾಗಿ ಹೋಗುತ್ತೇನೆ “

ಸೋನಿಯಾ ಗಾಂಧಿ


ನಾಯಿತೆಂದು ನಿಮಗೆ ತಿಳಿದಿಲ್ಲ, ನಾನು ಹೇಗೆ ಭೇಟಿಮಾಡಿದೆ ಎಂದು ನಿಮಗೆ ತಿಳಿದಿಲ್ಲ. ಅವರ ಆ ಮುಗುಳ್ನಗೆ, ಎತ್ತರ ಅವರ ಆಕರ್ಷಣೆಯ ಕಣ್ಣುಗಳು, ಆ ವರ್ಚಸ್ಸು. ನಾನು ಅವರನ್ನು ಮೊದಲ ಬಾರಿಗೆ ನೋಡಿದಾಗ ನಾನು ಅವರನ್ನು ಎಷ್ಟು ಸಮಯ ನೋಡಿದೆ ಎಂದು ನನಗೆ ತಿಳಿಯಲಿಲ್ಲ.

ನಾನು ನನ್ನ ಸ್ನೇಹಿತನೊಬ್ಬನನ್ನು ಕೇಳಿದೆ ಅವರು ಯಾರು ಎಂದು. ಅವರು ಒಬ್ಬ ಭಾರತೀಯ, ಪಂಡಿತ್ ನೆಹರೂ ಅವರ ಕುಟುಂಬದ ಕುಡಿ ಎಂದಷ್ಟೇ ಉತ್ತರಿಸಿದನು.ನಾನು ನೋಡುತ್ತಲೇ ಇದ್ದೆ. ಮರುದಿನ ಊಟಕ್ಕೆ ಹೊರಟಾಗ ಅವರು ಕೂಡ ಅಲ್ಲಿದ್ದರು, ಆ ದಿನಗಳು ಎಷ್ಟು ಸಂತೋಷವಾಗಿತ್ತೆಂದರೆ ಅದು ಸ್ವರ್ಗವಾಗಿತ್ತು.

ನಾವು ನದಿಗಳ ಉದ್ದಕ್ಕೂ ಸವಾರಿ ಮಾಡುತ್ತಿದ್ದೆವು, ಕಾರಿನಲ್ಲಿ ಓಡುತ್ತಿದ್ದೆವು, ಕೈ ಕೈ ಹಿಡಿದು ಬೀದಿಗಳಲ್ಲಿ ನಡೆದಾಡುತ್ತಿದ್ದೆವು, ಇಬ್ಬರು ಸಿನಿಮಾಗಳನ್ನು ನೋಡುತ್ತಿದ್ದೆವು. ನಾವು ಒಬ್ಬರಿಗೊಬ್ಬರು ಪ್ರೀತಿಯನ್ನು ವ್ಯಕ್ತಪಡಿಸಿದ್ದು ನನಗೆ ನೆನಪಿಲ್ಲ, ಅದರ ಅಗತ್ಯವೂ ಇರಲಿಲ್ಲ, ಎಲ್ಲವೂ ಸಹಜವಾಗಿತ್ತು, ನಾವು ಇಬ್ಬರು ಒಬ್ಬರಿಗೊಬ್ಬರು ಹುಟ್ಟಿದ್ದೇವೆ ನಾವು ಒಟ್ಟಿಗೆ ಬದುಕುವ ಸಮಯ ಎಂದು ಆಗಲೇ ನಿರ್ಧರಿಸಿದೆವು.

ಇಂದಿರಾ ಗಾಂಧಿ ಆಗ ಪ್ರಧಾನಿಯಾಗಿದ್ದರು.
ಅವರು ಇಂಗ್ಲೆಂಡ್ ಬಂದಾಗ ರಾಜೀವ್‌ ಭಯ ದಿಂದಲೆ ನಾವು ಮದುವೆಯಾಗಲು ನಿಮ್ಮ ಅನುಮತಿ ಬೇಕೆಂದು ಇಂದಿರಾಜಿ ಗೆ ಕೇಳಿದ್ದರು ಇಂದಿರಾ ನಮ್ಮನ್ನು ಭಾರತಕ್ಕೆ ಬರಲು ಹೇಳಿದರು.

ಭಾರತದ ಯಾವುದೇ ಮೂಲೆಯಲ್ಲಿ ರಾಜೀವ್ ಅವರೊಂದಿಗೆ ಇರಲು ನನಗೆ ಧೈರ್ಯವಿದೆ. ಇಂದಿರಾ ಜಿ ಮದುವೆಗೆ ನೆಹರು ಜಿ ಉಡುಗೊರೆ ಕೊಟ್ಟಿದ್ದ ಆ ಗುಲಾಬಿ ಬಣ್ಣದ ಸೀರೆಯನ್ನು ನಾನು ಧರಿಸಿದ್ದೆ. ರಾಜೀವ್ ನಾನು ಒಂದಾದೆವು ನನ್ನ ಕನಸು ನನಸಾದ ಸಮಯ ಅದು,ನಾನು ಮತ್ತು ರಾಜೀವ್ ಒಟ್ಟಿಗೆ ಹೊಸ ಜೀವನವನ್ನು ಪ್ರಾರಂಭಿಸಿ ನಾನು ಇಲ್ಲಿಯೇ ನೆಲೆಸಿದೆ.

ದಿನಗಳು ಹೇಗೆ ಗತಿಸಿ ಹೋದವು ಎಂಬುದು ನನಗೆ ನೆನಪಿಲ್ಲ. ರಾಜೀವ್ ಸಹೋದರ ವಿಮಾನ ಅಪಘಾತದಲ್ಲಿ ಮೃತಪಟ್ಟಾಗ ಇಂದಿರಾ ಜಿ ಅವರಿಗೆ ರಾಜಕೀಯ ವಾರಸುದಾರರಾಗಿ ಬೆಂಬಲಕ್ಕೆ ನಿಂತೆವು. ರಾಜೀವ್ ರಾಜಕೀಯಕ್ಕೆ ಬರಲು ಪ್ರಾರಂಭಿಸಿದರು. ನನಗೆ ಅದು ಇಷ್ಟವಿಲ್ಲ, ಆದರೆ ನನ್ನ ಪ್ರಯತ್ನ ವಿಫಲ ವಾಯಿತು. ಭಾರತೀಯರಾದ ನೀವು ಹೆಂಡತಿಯ ಮಾತನ್ನು ತಾಯಿಯ ಮುಂದೆ ಕೇಳುವುದಿಲ್ಲ ಎಂಬ ಸತ್ಯ ಅರಿವಾಯಿತು. ಕುಟುಂಬಕ್ಕಾಗಿ ಸಮಯ ನೀಡದ
ಅವರು ರಾಜಕಾರಣಕ್ಕೆ ಬಂದರು, ಸಂಪೂರ್ಣ ವಾಗಿ ಅವರ ಸಮಯವನ್ನು ದೇಶ ಸೇವೆಗಾಗಿ ಕಾಯ್ದಿರಿಸಿದರು.

ಅವರು ದೇಶ ಸೇವೆಗಾಗಿ ಪರಿತಪಿಸುತ್ತದ್ದರು, ಬಡವ ಬಲ್ಲಿದರಿಗಾಗಿ ಸೇವೆ ಮಾಡುತ್ತಿದ್ದಾರೆ ಎಂದು ನಾನು ಭಾವಿಸುತ್ತಿದ್ದೆ. ಸುಖ ಸಂತೋಷವಾಗಿದ್ದೇವೆ ಎಂದು ಕೊಳ್ಳುತ್ತಿದ್ದಾಗ ಅನಿರೀಕ್ಷಿತವಾಗಿ ಒಂದು ದಿನ ಮುಂಜಾನೆ ಇಂದಿರಾಜಿ ಮನೆಯಿಂದ ಹೊರಬಂದಾಗ ಗುಂಡಿನ ಸದ್ದು ಕೇಳಿತು, ಹೊರಗೆ ಬಂದು ನೋಡಿದೆ ಇಂದಿರಾಜಿಯ ದೇಹ ರಕ್ತ ಸಿಕ್ತವಾಗಿತ್ತು . ಇಂದಿರಾಜಿ ಜೊತೆ ನನ್ನ ಕೈಗಳು ರಕ್ತದಲ್ಲಿ ತೇವವಾಗಿದ್ದವು, ಅವರ ಜೊತೆಯಲ್ಲಿಯೇ‌ ನಾನೂ ಸಹ ಆಸ್ಪತ್ರೆಗೆ ಹೊರಟೆ ಕೊನೆಗೆ
ನನ್ನ ಕೈ ಗಳಲ್ಲಿಯೇ ಅವರ ಆತ್ಮ ಜಾರಿ ಹೋಯಿತು. ನೀವು ಎಂದಾದರೂ ಸಾವನ್ನು ಇಷ್ಟು ಹತ್ತಿರದಿಂದ ನೋಡಿದ್ದೀರಾ?

ರಾಜೀವ್ ಸಂಪೂರ್ಣವಾಗಿ ನಮ್ಮ (ಭಾರತ) ದೇಶಕ್ಕೆ‌ ಸಮರ್ಪಿಸಿ ಕೊಂಡಿದ್ದರು. ನಾನು ಅವರೊಂದಿಗೆ ಪ್ರತಿ ಹಂತದಲ್ಲೂ ಸೇವಕಿಯಾಗಿದ್ದೆ. ಒಂದು ದಿನ ಅವರನ್ನೂ ಬಲಿಪಡೆದರು. ಇರಿತಕ್ಕೊಳಗಾದರು ಅದೃಷ್ಟವಶಾತ್ ಜೀವಹಾನಿಯಿಂದ ಪಾರಾದರು.ಮತ್ತೊಂದು ದಿನ ಅವರ ದೇಹ ಚೂರುಚೂರಾಯಿತು, ಆ ಚೂರಾದ ದೇಹವೂ ಮನೆಯ ಆವರಣಕ್ಕೆ ಬಂತು. ಅವರ ಮುಖವು ಬಟ್ಟೆಯಿಂದ ಮುಚ್ಚಲ್ಪಟ್ಟಿತ್ತು. ಹೊರ ಹೋಗುವಾಗ ನಗುತ್ತಿರುವ ಗುಲಾಬಿ ಹೂವಿನಂತಿದ್ದ ಮುಖ ಇನ್ನಿಲ್ಲದಾಗಿತ್ತು. ನನ್ನ ಮನೆಯಲ್ಲಿ ಒಬ್ಬರಲ್ಲ ಇಬ್ಬರು ಕುಟುಂಬ ಸದಸ್ಯರನ್ನು ಕಳೆದುಕೊಂಡೆ.

ಈ ದೇಶ ನನ್ನದು, ಈ ಪ್ರೀತಿಯನ್ನು ನನ್ನ ದೇಶದೊಂದಿಗೆ ಮಾತ್ರ ಹಂಚಿಕೊಳ್ಳ ಬಯಸಯತ್ತೇನೆ. ಕೊನೆಯ ಬಾರಿ ನಾನು ಅವರು ನೋಡಿದ ಮುಖವನ್ನು ಮರೆಯಲು ಬಯಸುತ್ತೇನೆ. ಆದರೆ ಮೊದಲು ನಾವು ಬೇಟಿಯಾದ ರೆಸ್ಟೋರೆಂಟ್, ಆ ಸಂಜೆ, ಆ ಮುಗುಳ್ನಗೆ ಮಾತ್ರ ನಾನು ನೆನಪಿಟ್ಟುಕೊಳ್ಳಲು ಬಯಸಿದ್ದೆ. ನಾನು ಈ ದೇಶದಲ್ಲಿ ರಾಜೀವ್ ಅವರೊಂದಿಗೆ ಸಾಕಷ್ಟು ಸಮಯ ಕಳೆದಿದ್ದೇನೆ ರಾಜೀವ್ ಇಲ್ಲದೆ ಇನ್ನೂ ಹೆಚ್ಚು.

ಜವಾಬ್ದಾರಿಯನ್ನು ನಿರ್ವವಹಿಸಿದ್ದೇನೆ ಅಧಿಕಾರ ಇರುವವರೆಗೂ ಅವರ ಪರಂಪರೆಯನ್ನು ಮುರಿಯದಂತೆ ನಡೆದುಕೊಂಡು ಬಂದಿದ್ದೇನೆ.ಅದು ಈ ದೇಶದ ಸಮೃದ್ಧಿಯ ಅದ್ಭುತ ಕ್ಷಣಗಳನ್ನು ನನಗೆ ನೀಡಿದೆ. ನಾನು ಮನೆ ಮತ್ತು ಅವರ ಕುಟುಂಬವನ್ನು ಪರಿಪೂರ್ಣ ವಾಗಿ ನಿರ್ವಹಿಸಿದ್ದೇನೆ.ಪರಿಪೂರ್ಣ ಜೀವನವನ್ನು ನಡೆಸಿದ್ದೇನೆ. ನಾನು ನನ್ನ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದೇನೆ.ರಾಜೀವ್‌ ನೀಡಿದ ಭರವಸೆಗಳನ್ನೂ ನಾನು ಬಗೆಹರಿಸಿದ್ದೇನೆ.

ಸರ್ಕಾರಗಳು ಸುಂಟರಗಾಳಿ ಯಂತೆ ಬರುತ್ತವೆ ಹೋಗುತ್ತವೆ. ಈ ಸೋಲುಗಳು ಈಗ ನನಗೆ ವ್ಯತ್ಯಾಸವನ್ನುಂಟುಮಾಡುತ್ತವೆ ಎಂದು ನೀವು ಭಾವಿಸುತ್ತೀರಾ? ನೀವು ಮಾಡುವ ನಿಂದನೆಗಳು ಪರದೇಶಿ, ಬಾರ್ ಬಾಲೆ, ಜರ್ಸಿ ಹಸು, ವಿಧವೆ, ಕಳ್ಳಸಾಗಣೆದಾರಳು, ಪತ್ತೇದಾರಿ…ಇವು ನೀವು ನೀಡಿದ ಕೊಡುಗೆಗಳು. ನನ್ನ ಬಗ್ಗೆ ಒಂದು ಟಿವಿ ಮಾಧ್ಯಮ ಕೆಟ್ಟದಾಗಿ ಪ್ರಚಾರ ಮಾಡುತ್ತಿದೆ. ಅದು ಅನಿಯಂತ್ರಿತವಾಗಿ ತನ್ನ ಪ್ರವೃತ್ತಿಗಳೊಂದಿಗೆ ಟ್ವಿಟರ್ ಮತ್ತು ಫೇಸ್‌ಬುಕ್‌ನಲ್ಲಿ ಪ್ರತಿನಿತ್ಯ ನಿಂದನೆ ಮಾಡುತ್ತಾರೆ.ಅವು ನನ್ನನ್ನು ಕಾಡುತ್ತಿವೆಯೇ? ಇಲ್ಲ ಆ ನಿಂದಕರ ಮೇಲೆ ನನಗೆ ಖಂಡಿತವಾಗಿಯೂ ದ್ವೇಷವಿಲ್ಲ ಅನುಕಂಪವಿದೆ.

ನೆನಪಿಡಿ ಕಣ್ಣು ಮುಂದೆಯೇ ಪ್ರೀತಿಪಾತ್ರರ ಶವವನ್ನು ನೋಡುವುದು ಎಷ್ಟು ದುಃಖಕರವಾದದ್ದು. ತುಂಬಾ ದುಃಖ ಅನುಭವಿಸಿದ ನಂತರ ನನ್ನ ಮನಸ್ಸು ಕಲ್ಲು ಬಂಡೆಯಾಯಿತು. ಆದರೂ ನೀವು ನನ್ನನ್ನು ದ್ವೇಷಿಸುತ್ತಿದ್ದೀರಿ. ನಾನು ಇಂದು ಹಿಂತಿರುಗಿ ಹೋಗುತ್ತೇನೆ ಆದರೆ ನನಗೆ ನನ್ನ ರಾಜೀವ್‌ ರನ್ನು ಹಿಂದಿರುಗಿಸಿ. ನೀವು ನನ್ನ ರಾಜೀವ್ ರನ್ನು ಹಿಂತಿರುಗಿಸದಿದ್ದರೆ ನೀವು ಶಾಂತಿಯುತವಾಗಿ ನನ್ನ ರಾಜೀವ್ ರ ಸುತ್ತಲಿರುವ ಮಣ್ಣಿನಲ್ಲಿ ಮಣ್ಣಾಗಲು ಬಿಡಿ.

(ಸೋನಿಯಾ ಗಾಂಧಿಯವರ ಪತ್ರದಿಂದ ಆಯ್ದ ಭಾಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿಕ್ಷಣ ಸಂಸ್ಥೆಗಳು ವೈಚಾರಿಕತೆ ; ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಾಗಲಿ

Published

on

ಸುದ್ದಿದಿನ,ಚನ್ನಗಿರಿ: ಪಟ್ಟಣದ ಬಸವ ಚೇತನ ಎಜುಕೇರ್ ಪ್ರಿ – ಪ್ರೈಮರಿ ಸ್ಕೂಲ್ ನಲ್ಲಿ “ಬಂಧುತ್ವ ಫೌಂಡೇಶನ್ ‘ ವತಿಯಿಂದ ಇಂದು ಶ್ರಾವಣಮಾಸದ ನಾಗರ ಪಂಚಮಿ ಪ್ರಯುಕ್ತ ” ಮಿಲ್ಕ್ ಫೆಸ್ಟ್”( ಹಾಲು ಹಬ್ಬ ) ಎಂಬ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಕುಡಿಸುವುದರ ಮೂಲಕ ವಿನೂತನವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ರಾಘು ದೊಡ್ಡಮನಿಯವರು ನಾಗರ ಪಂಚಮಿ ಹಬ್ಬದಂದು ನಮ್ಮ ಜನರು ಕಲ್ಲುನಾಗರಕ್ಕೆ ಮತ್ತು ಹುತ್ತಗಳಿಗೆ ಹಾಲು ಎರೆಯುವ ಸಂಪ್ರದಾಯವಿದೆ ಆದರೆ ಹಾವುಗಳು ಎಂದಿಗೂ ಹಾಲು ಕುಡಿಯುವುದಿಲ್ಲ, ಹಾಲು ಅದರ ಆಹಾರವಲ್ಲ ಹೀಗಿರುವಾಗ ಹಾಲನ್ನು ಈ ರೀತಿಯಲ್ಲಿ ಪೋಲು ಮಾಡುವ ಬದಲಾಗಿ ಅದೇ ಹಾಲನ್ನು ಮಕ್ಕಳಿಗೆ, ಬಡವರಿಗೆ, ರೋಗಿಗಳಿಗೆ ನೀಡಬೇಕು.

ಹಾಲು ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಕರ್ನಾಟಕವೊಂದರಲ್ಲಿ ಪ್ರತಿವರ್ಷ ಸಾವಿರಾರು ಮಕ್ಕಳು ಅಪೌಷ್ಟಿಕತೆಯಿಂದ ಮರಣ ಹೊಂದುತ್ತಿದ್ದಾರೆ ಆದ್ದರಿಂದ ನಮ್ಮ ಜನರು ಈ ವಿಷಯವಾಗಿ ಜಾಗೃತರಾಗಬೇಕಿದೆ ಮತ್ತು ಸಮಾಜದಲ್ಲಿ ಹೆಚ್ಚು ಬದಲಾವಣೆ ತರಬಹುದಾದ ಬಹುದೊಡ್ಡ ಜವಾಬ್ದಾರಿ ಹೊಂದಿರುವ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಮಕ್ಕಳ ಮೂಲಕ ಜನ ಸಮುದಾಯಕ್ಕೆ ವೈಚಾರಿಕತೆ ಮತ್ತು ವೈಜ್ಞಾನಿಕತೆಯ ಬೆಳಕು ಚೆಲ್ಲುವ ದೀಪಗಳಂತೆ ಕೆಲಸ ಮಾಡಬೇಕು ಎಂದು ಅಭಿಪ್ರಾಯ ಪಟ್ಟರು. ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಸಹನಾ, ಸಿಂಧೂ, ಬಿಂದು, ಮುಕ್ತ, ಶ್ವೇತ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

ದಿಮಾಗಿ ನಕ್ಸಲ್-ನಗರ ನಕ್ಸಲ್

Published

on

~ರಹಮತ್ ತರೀಕೆರೆ, ಚಿಂತಕರು

ಕಾರ್ನಾಡರಲ್ಲಿ ನನಗೆ ಮೊದಲಿಂದಲೂ ವೈಯಕ್ತಿಕ ಸಂಪರ್ಕ ಇರಲಿಲ್ಲ. ಅನಂತಮೂರ್ತಿ ಅವರಂತೆ ಅವರು ಕಿರಿಯ ಲೇಖಕರ ಜತೆ ನಂಟಿರಿಸಿಕೊಂಡವರಲ್ಲ. ಯಾರಿಗಾದರೂ ಮುನ್ನುಡಿ ಬರೆದಿದ್ದೂ ನನಗೆ ತಿಳಿದಿಲ್ಲ. ತಾವಾಯಿತು ತಮ್ಮ ಬರೆಹ, ಸಿನಿಮಾ ಆಯಿತು ಎಂದಿದ್ದವರು. ಮಹಾರಾಷ್ಟ್ರದಲ್ಲಿ ಹುಟ್ಟಿ, ಜೀವಿತದ ಬಹುಕಾಲ ಕರ್ನಾಟಕದ ಹೊರಗಿದ್ದ ಅವರು, ಕರ್ನಾಟಕದ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಹೆಚ್ಚು ಕಾಣಿಸಿದವರಲ್ಲ. ಸಮಕಾಲೀನರಾದ ತೇಜಸ್ವಿ ಲಂಕೇಶ್ ಅನಂತಮೂರ್ತಿ ಅವರಂತೆ ಪಬ್ಲಿಕ್ ಇಂಟಲೆಕ್ಚುವಲ್ ಕೆಲಸವನ್ನು ಮೈಮೇಲೆ ಹಾಕಿಕೊಂಡು, ಕರ್ನಾಟಕದ ಕಷ್ಟದ ದಿನಗಳಲ್ಲಿ ತಮ್ಮ ಮಾತು ಭಾಷಣ ಬರೆಹಗಳಿಂದ ಜನಾಭಿಪ್ರಾಯ ರೂಪಿಸಿದವರಲ್ಲ.

ಹೀಗಿದ್ದ ಕಾರ್ನಾಡರು ಬಾಳಿನ ಕೊನೆಯ ವರ್ಷಗಳಲ್ಲಿ ಆಶ್ಚರ್ಯಕರವಾಗಿ ಬದಲಾದರು; ಸಾರ್ವಜನಿಕ ಮಹತ್ವದ ಪ್ರಸಂಗಗಳಲ್ಲಿ ಮಾತಾಡಿದರು. ಹಠಬಿದ್ದಂತೆ ಬೀದಿಗಿಳಿದರು. ಈ ರೂಪಾಂತರಕ್ಕೆ ಕಾರಣ, ಪ್ರಭುತ್ವಗಳು ರಾಜಕೀಯ ಸೈದ್ದಾಂತಿಕ ಭಿನ್ನಮತಗಳನ್ನು ದಮನಿಸುವ ನಡೆಗಳಿರಬಹುದು; ಅನಂತಮೂರ್ತಿ ತೇಜಸ್ವಿ ಲಂಕೇಶ್ ತೀರಿಕೊಂಡ ಬಳಿಕ, ಉಂಟಾದ ರಿಕ್ತತೆ ಅವರನ್ನು ಈ ಹೊಸ ಪಾತ್ರ ನಿರ್ವಹಿಸುವಂತೆ ಆಹ್ವಾನಿಸಿರಬಹುದು. ಅವರು ತಮ್ಮ ಮಾತು, ಕೃತಿ, ಕ್ರಿಯೆಗಳಲ್ಲಿ ಭಾರತವನ್ನು ಆವರಿಸುತ್ತಿರುವ ಮತೀಯತೆ ಕುರಿತು ವ್ಯಗ್ರರಾಗಿದ್ದರು.

ಅವರು ಮಾಡಿದ ಸಾರ್ವಜನಿಕ ಪ್ರತಿರೋಧದ ಪ್ರಕರಣಗಳನ್ನು ಗಮನಿಸಬೇಕು. ಬಾಬರಿ ಮಸೀದಿಯ ಧ್ವಂಸವನ್ನು ವಿರೋಧಿಸಿದ್ದು; ನೈಪಾಲರ ಬಲಪಂಥೀಯವಾದ ಬೆಂಬಲಿಸುವ ನಿಲುವನ್ನು ಖಂಡಿಸಿದ್ದು; ಬಾಬಾಬುಡನಗಿರಿ ಚಳುವಳಿಯಲ್ಲಿ ಭಾಗವಹಿಸಿದ್ದು; ಟಿಪ್ಪು ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು; ಟಿಪ್ಪು ಕುರಿತು ನಾಟಕ ಬರೆದಿದ್ದು; ಎಂ. ಎಫ್. ಹುಸೇನರ ಸೃಜನಶೀಲತೆ ಪರವಾಗಿ ನಿಂತಿದ್ದು; ಗೋರಕ್ಷಣೆ ಹೆಸರಲ್ಲಿ ನಡೆಯುತ್ತಿರುವ ಉಪಟಳ ವಿರೋಧಿಸಿ `ನಮ್ಮ ಆಹಾರ ನಮ್ಮ ಹಕ್ಕು’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು. ಇಲ್ಲಿನ ಕೊನೆಯ ಕಾರ್ಯಕ್ರಮದಲ್ಲಿ ಅವರೊಟ್ಟಿಗೆ ಅನಂತಮೂರ್ತಿಯವರೂ ಇದ್ದರು. ಭಾರತದಲ್ಲಿ ಇಬ್ಬರು ಜ್ಞಾನಪೀಠ ಲೇಖಕರು ಇಂತಹದೊಂದು ಸಾರ್ವಜನಿಕ ಪ್ರತಿರೋಧದ ಕಾರ್ಯಕ್ರಮದಲ್ಲಿ ಒಟ್ಟಿಗೆ ಭಾಗವಹಿಸಿದ್ದು ಅಪೂರ್ವ ಸಂಗತಿ.

ನನಗೆ ಅವರ ಜತೆ ಮೊದಲ ಮುಖಾಬಿಲೆ ಆಗಿದ್ದು ಬಾಬಾಬುಡನಗಿರಿಗೆ ಮಾಡಿದ ಪಯಣದಲ್ಲಿ. ಸೂಫಿಗಳ ಮೇಲೆ ತುಸು ಅಧ್ಯಯನ ಮಾಡಿದವನೆಂದು ನನ್ನನ್ನು ಅವರೊಟ್ಟಿಗೆ ಕೂರಿಸಲಾಗಿತ್ತು. ಅವರ ಗಂಭೀರ ಸ್ವಭಾವದ ಬಗ್ಗೆ ತಿಳಿದಿದ್ದ ನಾನು, ಅವರಾಗಿ ಏನಾದರೂ ಕೇಳಿದರೆ ಮಾತ್ರ ಹೇಳಬೇಕೆಂದು, ಸಹಪಯಣದ ಖುಶಿಯನ್ನು ಅನುಭವಿಸುತ್ತ ಜತೆಗೆ ಕೂತಿದ್ದೆ. ಗಿರಿಯನ್ನು ವಾಹನ ಹತ್ತುವಾಗ, ನೆತ್ತಿಮೇಲಣ ಶಿಖರಗಳನ್ನೂ ಕೆಳಗಿನ ಕಣಿವೆಗಳನ್ನೂ ನೋಡುತ್ತ ಕಾರ್ನಾಡರು `ಓಹ್ ಎಷ್ಟೊಂದು ಸುಂದರವಾಗಿದೆಯಲ್ಲ’’ ಎಂದು ಉದ್ಗರಿಸುತ್ತ ಮಗುವಿನಂತೆ ಪುಟಿಯುತ್ತಿದ್ದರು.

ಅವರೊಬ್ಬ ಸೆಲೆಬ್ರಿಟಿಯಾದರೂ ಸರಳವ್ಯಕ್ತಿ. ಅಭಿನಯ ಅವರ ವೃತ್ತಿಯಾದರೂ ವ್ಯಕ್ತಿಯಾಗಿ ತೋರಿಕೆಯೇ ಇಲ್ಲದ ನೇರಗುಣದವರು. ಗೋಕರ್ಣದಲ್ಲಿ ನಡೆದ ಗೌರೀಶ ಕಾಯ್ಕಿಣಿಯವರ ಶತಮಾನೋತ್ಸವ ಕಾರ್ಯಕ್ರಮದಲ್ಲಿ ನಮ್ಮನ್ನು ತೋಟದ ಮನೆಯೊಂದರಲ್ಲಿ ಉಳಿಸಲಾಗಿತ್ತು. ಕಾರ್ನಾಡರು ನನಗಿಂತಲೂ ವೈದ್ಯೆಯಾದ ನನ್ನ ಮಗಳ ಜತೆ ಹೆಚ್ಚು ಮಾತನಾಡಿದರು. ಆದಿನ ನಾನು ಅವರ `ಆಡಾಡ್ತಾ ಆಯುಷ್ಯ’ ಒಳಗೊಂಡಂತೆ (ಬೆರಗು ಹುಟ್ಟಿಸುವ ಭಾಷೆಯುಳ್ಳ ವಿಶಿಷ್ಟ ಗದ್ಯಶೈಲಿಯ ಕೃತಿಯಿದು) ಕನ್ನಡದ ಆತ್ಮಕತೆಗಳ ಬಗ್ಗೆ ಉಪನ್ಯಾಸ ಮಾಡಿದೆ. ಬಸಳೆಸೊಪ್ಪಿನ ಹೊರೆಯನ್ನು ಅವರ ಕೈಯಿಂದ ಉಡುಗೊರೆ ಕೊಡಿಸಲಾಯಿತು. ಉಪನ್ಯಾಸದ ಬಳಿಕ ಕಾರ್ನಾಡರು ಕೇಳಿದರು: “ಭಾರತದ ಮೊಟ್ಟಮೊದಲ ಆತ್ಮಕಥೆ `ಅರ್ಧಕಥಾನಕ’ ಓದಿದ್ದೀರಾ?” “ಇಲ್ಲ” “ನೀವು ಓದಲೇಬೇಕು. ಅಪರೂಪದ ಪುಸ್ತಕ. 16ನೇ ಶತಮಾನದ್ದು’’. ಬೆಂಗಳೂರಿಗೆ ಹೋದೊಡನೆ ನೆರಳಚ್ಚನ್ನು ಕಳಿಸಿಕೊಟ್ಟರು. ವ್ಯವಹಾರ ಪ್ರಜ್ಞೆಯಿಲ್ಲದವನೂ ಕಾವ್ಯಪ್ರೇಮಿಯೂ ಆದ ಜೈನ ವ್ಯಾಪಾರಿಯೊಬ್ಬನ ರೋಚಕ ಅನುಭವಗಳ ಕಥನವದು.

ಹೀಗೆ ಸಣ್ಣಗೆ ಆರಂಭವಾದ ಪರಿಚಯ `ಅಮೀರ‍ಬಾಯಿ ಕರ್ನಾಟಕಿ’ ಪುಸ್ತಕದ ಸನ್ನಿವೇಶದಲ್ಲಿ ಧಕ್ಕೆಗೊಳಗಾಯಿತು. ನಾನು ಅಮೀರಬಾಯಿ ಸಂಶೋಧನೆಗೆಂದು ಪುಣೆ ಮುಂಬೈ ತಿರುಗಾಡುವಾಗ, ಮಹಾರಾಷ್ಟ್ರದಲ್ಲಿ ಕಾರ್ನಾಡರಿಗೆ ಸಿನಿಮಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿರುವ ಮರ್ಯಾದೆಯನ್ನು ಗಮನಿಸಿದ್ದೆ. ಮರಾಠಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾಡಿದ ದಿಟ್ಟ ಭಾಷಣವು-ಅದರಲ್ಲಿ ರಾಜಕೀಯ ಪಕ್ಷಗಳು ಸೈನೀಕರಣಗೊಳ್ಳುವುದರ ಬಗ್ಗೆ ಕಟುವಾದ ವಿಮರ್ಶೆಯಿದೆ- ಅಲ್ಲಿನ ಲೇಖಕರು ನೆನಪಿಟ್ಟಿದ್ದರು. ಕನ್ನಡ-ಮರಾಠಿ ಸಾಂಸ್ಕøತಿಕ ಬಾಂಧವ್ಯದ ಕೊಂಡಿಯಾಗಿದ್ದ ಅಮೀರಬಾಯಿ ಕುರಿತ ಹೊತ್ತಗೆಯನ್ನು ಅವರೇ ಬಿಡುಗಡೆ ಮಾಡಿದರೆ ಚೆನ್ನವೆನಿಸಿತು. ಹೇಗೂ `ಸಾಹಿತ್ಯ ಸಂಭ್ರಮ’ದ ಕಾರ್ಯಕ್ರಮಕ್ಕಾಗಿ ದಿನ ಮೊದಲೇ ಧಾರವಾಡಕ್ಕೆ ಬರುತ್ತಿದ್ದರು. ಹಿಂದಿನ ದಿನ ಸಂಜೆ ಬಿಡುಗಡೆ ಮಾಡಲು ಸಾಧ್ಯವೇ ಎಂದು ಕೇಳಿದೆ. ಕೂಡಲೇ ಒಪ್ಪಿದರು.

ಆದರೆ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸ್ವರೂಪದ ಬಗ್ಗೆ ಭಿನ್ನಮತ ವ್ಯಕ್ತಪಡಿಸಿ ನಾನು ಭಾಗವಹಿಸದೆ ಹೊರಗುಳಿದೆ. ಕಾರ್ನಾಡರು ಕರೆ ಮಾಡಿ “ನೀವು ಸಂಭ್ರಮಕ್ಕೆ ಬರಲು ನಿರಾಕರಿಸಿದರಂತೆ. ನಿಜವೇ?’’ ಎಂದು ಕೇಳಿದರು. ಹೌದೆಂದೆ. `ಹಾಗಿದ್ದಲ್ಲಿ ನಿಮ್ಮ ಕಾರ್ಯಕ್ರಮಕ್ಕೆ ಬರಲಾರೆ, ಕ್ಷಮಿಸಿ’ ಎಂದರು. `ಆಗಲಿ’ ಎಂದೆ. ಅವರಿಗೆ ತಾನು ಹಾಗೆ ಮಾಡಿದ್ದು ಸರಿಯಲ್ಲ ಅನಿಸಿರಬೇಕು. ಧಾರವಾಡದಲ್ಲಿರುವ ತಮ್ಮ ಒಡನಾಡಿ ಸುರೇಶ ಕುಲಕರ್ಣಿಯವರೊಟ್ಟಿಗೆ ತಮ್ಮ ಚಡಪಡಿಕೆ ಹಂಚಿಕೊಂಡರಂತೆ. ಆದರೆ ನಾನು ಕಾರ್ಯಕ್ರಮ ಮುಗಿದ ಬಳಿಕ ಪುಸ್ತಕದ ಗೌರವಪ್ರತಿ ಕಳಿಸಿಕೊಟ್ಟೆ. ಚೆನ್ನಾಗಿ ಬಂದಿದೆ ಎಂದು ಪತ್ರ ಬರೆದರು. ಅವರು ಆ ಘಟನೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡಂತೆ ಕಾಣಲಿಲ್ಲ. ತಮ್ಮ ಪರಿಚಿತರು ಯಾರಾದರೂ ಹಂಪಿ ನೋಡಬಯಸಿದರೆ, ನನ್ನ ಸಲಹೆ ಪಡೆಯಲು ಹೇಳುತ್ತಿದ್ದರು. ಒಮ್ಮೆ ಅವರ ನಾಟಕಗಳಲ್ಲಿ ನಟಿಸುವ ಬಂಗಾಳದ ನಟಿ ಹಂಪಿಯಲ್ಲಿ ಹಣ ಪಾಸ್‍ಪೋರ್ಟುಳ್ಳ ಪರ್ಸನ್ನು ಕಳೆದುಕೊಂಡರು. ಕಾರ್ನಾಡರು ಕರೆಮಾಡಿ ಆಕೆಗೆ ಬೆಂಗಳೂರಿನ ತನಕ ಬರಲು ಸಹಾಯ ಮಾಡುವುದು ಸಾಧ್ಯವೇ ಎಂದು ಕೇಳಿದರು.

ಸಂವಾದಕ್ಕೆ ಸದರವಾಗಿ ಸಿಗುವ ಲೇಖಕರಲ್ಲದ ಗಿರೀಶ್, ಬಾಳಿನ ಕೊನೆಯ ದಿನಗಳಲ್ಲಿ ತಮ್ಮ ಲಾಗಾಯ್ತಿನ ಸ್ವಭಾವಕ್ಕೆ ಪ್ರತಿಯಾಗಿ, ಸಾಂಸ್ಕøತಿಕ ನಾಯಕತ್ವದ ದನಿ ಮೊಳಗಿಸಿದರು. ತಮಗೆ ತಪ್ಪೆಂದು ಕಂಡ ವಿಷಯಗಳಲ್ಲಿ ಪರಿಣಾಮ ಲೆಕ್ಕಿಸದೆ ದಿಟ್ಟತನದ ನಿಲುವು ತೆಗೆದುಕೊಂಡರು. ತಮ್ಮ ತಾತ್ವಿಕ ರಾಜಕೀಯ ನಿಲುವಿಗೆ ವಿರುದ್ಧವಿರುವ ದೊಡ್ಡ ಸಾಧಕರನ್ನೂ ಲೆಕ್ಕಿಸದೆ ಶಾಬ್ದಿಕ ಹಿಂಸೆಗೆ ಗುರಿಪಡಿಸುವ ಈಚಿನ ಪದ್ಧತಿಗೆ ಬಲಿಯೂ ಆದರು. ಗೌರಿಲಂಕೇಶ್ ಸ್ಮರಣ ಕಾರ್ಯಕ್ರಮಕ್ಕೆ `ನಾನೂ ನಗರ ನಕ್ಸಲ್’ ಎಂದು ಕೊರಳಿಗೆ ಬೋರ್ಡು ಸಿಕ್ಕಿಸಿಕೊಂಡು ಬಂದ ಸನ್ನಿವೇಶ ನೆನಪಾಗುತ್ತಿದೆ. ಅದು ತೀರಾ ನಾಟಕೀಯವಾಗಿತ್ತು. ಆದರೆ ಅವರ ಸ್ಪಷ್ಟತೆ ಧೈರ್ಯ ಸಿಟ್ಟು ಹತಾಶೆ ಆಕ್ಟಿವಿಸಂಗಳ ಆತ್ಯಂತಿಕ ರೂಪಕವಾಗಿತ್ತು. ಆರೋಗ್ಯ ಸರಿಯಿರಲಿಲ್ಲ. ಕೈಯಲ್ಲಿ ಆಮ್ಲಜನಕದ ಸಿಲಿಂಡರನ್ನು ಹಿಡಿದಿದ್ದರು. ಅಪರಾಧಿಗಳ ಕೊರಳಿಗೆ ಫಲಕ ತೂಗುಹಾಕುವುದು ಕ್ರಮವಿದೆ. ಶಿಲುಬೆಗೇರಿದ ಕ್ರಿಸ್ತನ ಕೊರಳಿಗೂ `ನಜರೇತಿನ ಅರಸ’ ಎಂಬ ವ್ಯಂಗ್ಯದ ಫಲಕ ತೂಗಿಸಲಾಗಿತ್ತು. ಆದರೆ ಕಾರ್ನಾಡರು ಇದನ್ನು ಸ್ವತಃ ಧಾರಣಮಾಡಿದ್ದರು. `ವಿಚಾರ ಮಾಡುವುದು, ಪ್ರಭುತ್ವವನ್ನು ವಿಮರ್ಶಿಸುವುದು, ಮತಧರ್ಮದ ಹಿಂಸೆ ಖಂಡಿಸುವುದು ಅಪರಾಧವಾದರೆ ನಾನೂ ಅಪರಾಧಿ’ ಎಂಬ ನಾಟಕೀಯ ತಪ್ಪೊಪ್ಪಿಗೆಯನ್ನು ಅದು ಒಳಗೊಂಡಿತ್ತು. ಜನಪದ ಮಿತ್ ಮತ್ತು ಪುರಾಣಗಳನ್ನು ನಾಟಕಗಳಿಗೆ ದುಡಿಸಿಕೊಂಡ ಕಾರ್ನಾಡರು ನಾಗರಿಕ ಹಕ್ಕುಗಳ ವಿಷಯ ಬಂದರೆ, ಮುಕ್ತ ಸಮಾಜದ ಪರವಾದ ಆಕ್ಸಫರ್ಡ್ ಪದವೀಧರರೇ. ನಾಗರಿಕ ಸಮಾಜವೊಂದರಲ್ಲಿ ಸಹಜವಾಗಿ ಇರಬೇಕಾದ ಸ್ವಾತಂತ್ರ್ಯದ ಪರವಾಗಿ ಅವರು ಸದಾ ಆಲೋಚಿಸುತ್ತಿದ್ದರು. ಫಲಕದಲ್ಲಿರುವ ಬರೆಹವು ಸ್ವಹಸ್ತಾಕ್ಷರದಲ್ಲಿತ್ತು. ದೇಶದ ಸುದ್ದಿಯಾಗಬೇಕೆಂದೇ ಇಂಗ್ಲೀಶಿನಲ್ಲಿತ್ತು. ಅದರಲ್ಲಿ ದೇಶೀಭಾಷೆಯ ಲೇಖಕ ಎಂಬುದನ್ನು ದಾಖಲಿಸುವಂತೆ `ನಾನು ಕೂಡ’ ಎಂಬ ಎರಡು ಪದಗಳು ಕನ್ನಡದಲ್ಲಿದ್ದವು. ಉಸಿರ್ಗಟ್ಟಿಸುವ ಸನ್ನಿವೇಶಕ್ಕೆ ತುಡಿಯುವಂತೆ ಕೈಯಲ್ಲಿ ಆಕ್ಸಿಜನ್ ಸಿಲಿಂಡರಿತ್ತು.

ಅದೊಂದು ಅಭಿಮಾನ ಉಕ್ಕಿಸುವ ಮತ್ತು ಎದೆಕರಗಿಸುವ ಚಿತ್ರ; ಸಮಾಜದ ಹದುಳಕ್ಕಾಗಿ ತನ್ನ ಬೇನೆಯಲ್ಲೂ ಲೇಖಕ ರಿಸ್ಕ್ ತೆಗೆದುಕೊಳ್ಳುವ ಪ್ರತೀಕ. ಕಾರ್ನಾಡರಲ್ಲಿ ಲೆಕ್ಕಾಚಾರ ದ್ವಂದ್ವ ಇರಲಿಲ್ಲ. ಅಂತರಂಗಕ್ಕೆ ಸರಿಯೆನಿಸಿದ್ದನ್ನು ಹೇಳುವ-ಮಾಡುವ ಪ್ರಾಮಾಣಿಕತೆಯಿತ್ತು. ಇದು ಅವರ ಶವಸಂಸ್ಕಾರದಲ್ಲೂ ವ್ಯಕ್ತವಾಯಿತು. ಅವರು ಸತ್ತು ದೊಡ್ಡವರಾದವರು; ಅವರನ್ನು ಕೆಟ್ಟದಾಗಿ ನಡೆಸಿಕೊಂಡು ಬದುಕಿರುವ ನಾವು ಸಣ್ಣವರಾದೆವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ: ವಿವಿಐಎಸ್‌ನಲ್ಲಿ ಅರ್ಥಪೂರ್ಣ ಸ್ವಾತಂತ್ರ್ಯೋತ್ಸವ

Published

on

ಸುದ್ದಿದಿನ,ಬೆಂಗಳೂರು: ವಿಶ್ವ ವೆಂಕಟೇಶ್ವರ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನಲ್ಲಿ “ಸ್ವಾತಂತ್ರ್ಯವನ್ನು ಗೌರವಿಸಿ, ಭವಿಷ್ಯವನ್ನು ಪ್ರೇರೇಪಿಸೋಣ” ಎಂಬ ಆಶಯದೊಂದಿಗೆ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕಟ್ಟಾ ಬಾಲಾಜಿ ಬಾಬು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ತಮ್ಮ ಪ್ರೇರಣಾದಾಯಕ ಭಾಷಣದಲ್ಲಿ ಅವರು, ದೇಶಭಕ್ತಿ ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ಪ್ರತಿಯೊಬ್ಬರೂ ತಮ್ಮ ಮೂಲಭೂತ ಕರ್ತವ್ಯಗಳನ್ನು ಅರಿತು, ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಅಭಿರುಚಿಗೆ ತಕ್ಕಂತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದರಲ್ಲಿ ಅಡಗಿದೆ ಎಂದು ಕರೆ ನೀಡಿದರು. ಪ್ರಾಮಾಣಿಕ ಪರಿಶ್ರಮ ಮತ್ತು ಜವಾಬ್ದಾರಿಯುತ ನಾಗರಿಕತ್ವವೇ ಬಲಿಷ್ಠ ಭಾರತದ ನಿರ್ಮಾಣಕ್ಕೆ ಅಡಿಪಾಯ ಎಂದರು.

ವಿದ್ಯಾರ್ಥಿಗಳ ಮನೋಜ್ಞ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಶಭಕ್ತಿ ಪ್ರದರ್ಶನಗಳು ಹಾಗೂ ಶಿಸ್ತುಬದ್ಧ ಮೆರವಣಿಗೆಗಳು ಕಾರ್ಯಕ್ರಮಕ್ಕೆ ಮೆರುಗು ನೀಡಿದವು. ಕೊಡಿಪಾಳ್ಯ ಮತ್ತು ಕೆಂಗೇರಿಯಲ್ಲಿ 445 ಮೀಟರ್ ಇರುವ ವಿಶೇಷ ಧ್ವಜದೊಂದಿಗೆ ವಿದ್ಯಾರ್ಥಿಗಳ ಮೆರವಣಿಗೆ ಗಮನ ಸೆಳೆಯಿತು. ಶತಪ್ರತಿಶತ ಫಲಿತಾಂಶ ಸಾಧಿಸಿದ ಬೋಧಕ ಸಿಬ್ಬಂದಿಯನ್ನು ಮತ್ತು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನೇರ ಪ್ರಸಾರವೂ ನಡೆಯಿತು. 2,500 ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗೆ ವಿಶೇಷ ಮಧ್ಯಾಹ್ನದ ಊಟ ಮತ್ತು ಸಿಹಿತಿಂಡಿ ವ್ಯವಸ್ಥೆ ಮಾಡಲಾಗಿದ್ದು, ಒಗ್ಗಟ್ಟು ಮತ್ತು ದೇಶಪ್ರೇಮದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಿತು.

ಈ ಸಂದರ್ಭದಲ್ಲಿ ವಿವಿಐಎಸ್ ನ ಅಕಾಡೆಮಿಕ್ ಅಡ್ವೈಸರ್ ಡಾ. ರಾಜೇಶ್ವರಿ ದತ್ತಾತ್ರಿ, ವಿವಿ ವಿದ್ಯಾಸಂಸ್ಥೆಯ ಡೀನ್ ಶ್ರೀ ಕಿಶೋರ್ ಕಟ್ಟ, ಪ್ರಾಂಶುಪಾಲೆ ಶ್ರೀಮತಿ ಲಕ್ಷ್ಮಿ ಟಿ.ಎನ್, ಕೆಪಿಸಿ ಪಿಯು ಕಾಲೇಜು ಪ್ರಾಂಶುಪಾಲರಾದ ಡಾ. ಐ. ಚೆನ್ನಾರೆಡ್ಡಿ, ಸಿಬಿಎಸ್‌ಇ ಪ್ರಾಂಶುಪಾಲರಾದ ಪ್ರೊ. ಪ್ರಹ್ಲಾದ, ಉಪಪ್ರಾಂಶುಪಾಲರಾದ ಶ್ರೀ ಮದನ್ ರಾಜ್, ಪ್ರಾಂಶುಪಾಲರಾದ ಡಾ. ಸುರೇಶ್ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending