ದಿನದ ಸುದ್ದಿ
ಪೊಲೀಸ್ ಇಲಾಖೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ : ಎಸ್ಪಿ ಉಮಾ ಪ್ರಶಾಂತ್
ಸುದ್ದಿದಿನ,ದಾವಣಗೆರೆ:ನಗರದ ಎಸ್.ಎಸ್.ಬಡಾವಣೆಯ ಎ ಬ್ಲಾಕಿನಲ್ಲಿ ಗಣರಾಜ್ಯೋತ್ಸವದಂದು ಎಸ್.ಎಸ್.ಬಡಾವಣೆ ಸ್ನೇಹಿತರ ಬಳಗದ ಸಂಘ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಉಮಾ ಪ್ರಶಾಂತ್ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಲಕ್ಷಾಂತರ ಹಣ ಖರ್ಚು ಮಾಡಿ ಈ ಬಡಾವಣೆ ಯಲ್ಲಿ ಮನೆಗಳನ್ನು ಕಟ್ಟಿಸಿದ್ದೀರಿ. ಆದರೆ ತಮ್ಮ ಮನೆಗಳ ರಕ್ಷಣೆ ಗೆ ಮಹತ್ವ ಕೊಡುತ್ತಿಲ್ಲ. ಇದರಿಂದ ಕಳ್ಳಕಾಕರಿಗೆ ಅನುಕೂಲವಾಗುತ್ತಿದೆ. ಸ್ನೇಹಮಯಿ ಪೋಲಿಸ್ ಇಲಾಖೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಪೊಲೀಸ್ ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ. ಇತ್ತೀಚಿನ ದಿನಗಳಲ್ಲಿ ಆದ್ದರಿಂದ ತಮ್ಮ ಮನೆಗಳಿಗೆ ಸಿಸಿ ಟಿವಿಗಳನ್ನು ಅಳವಡಿಸಿಕೊಂಡಲ್ಲಿ ನಮ್ಮ ಇಲಾಖೆಗೆ ಸಹಕಾರಿಯಾಗುತ್ತದೆ. ನಮ್ಮ ಬಗ್ಗೆ ನಾವೂ ಸಹಾ ಎಚ್ಚರ ವಹಿಸುವುದು ಅವಶ್ಯಕವಾಗಿರುತ್ತದೆ ಎಂದರು.
ದಾವಣಗೆರೆ ತಾಲೂಕು ತಹಸಿಲ್ದಾರ್ ಡಾ.ಎಂ.ಬಿ.ಅಶ್ವಥ್ ಮಾತನಾಡಿ, ದಾವಣಗೆರೆಯ ವಿವಿಧ ಬಡಾವಣೆ ಸೇರಿದಂತೆ ವಿದ್ಯಾನಗರ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೆಚ್ಚಿನ ಕಳ್ಳತನ ಸುಲಿಗೆ ಹೆಚ್ಚಾಗಿದ್ದು ಪೋಲೀಸ್ ಇಲಾಖೆಯ ಸೂಚನೆಗಳನ್ನು ಪ್ರತಿಯೊಬ್ಬರೂ ಸಹಾ ಪಾಲಿಸಲು ಕರೆ ನೀಡಿದರು.
ಸಂಘದ ಅಧ್ಯಕ್ಷರಾದ ಎಂ.ಆಂಜನೇಯುಲು ಮಾತನಾಡಿ, ಸಂಘದ ಪದಾಧಿಕಾರಿಗಳು, ಬಡಾವಣೆ ಸ್ನೇಹಿತ ಬಂಧುಗಳು ತನು, ಮನ, ಧನ ನೀಡಿ ಈ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ನೀಡಿ, ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರಿಯಾಗಿದ್ದಾರೆ. ಇದೇ ರೀತಿ ಎಲ್ಲರೂ ಸಹಕಾರ ನೀಡಿದರೆ ನಾವು ದೊಡ್ಡ ಸಾಧನೆಯನ್ನೂ ಮಾಡಬಹುದು ಎಂದು ತಿಳಿಸಿದರು.
ಸಂಘದ ಕಾರ್ಯದರ್ಶಿ ಎಂ.ಎಸ್.ದೇವರಾಜ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಘವು ನಾಗರೀಕರಿಗೆ ಸ್ವಚ್ವತೆ, ಪರಿಸರ ರಕ್ಷಣೆ, ಮಹಿಳಾ ಮತ್ತು ಮಕ್ಕಳ ಕ್ಷೇಮಾಭಿವೃದ್ದಿ ಕಾರ್ಯಕ್ರಮ ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಸ್ಥಳೀಯರ ಸಹಕಾರದಿಂದ ನಡೆಸಲಾಗುವುದು ಸಂಘದ ಸದುದ್ದೇಶ ಹೊಂದಿದೆ. ಬಡಾವಣೆ ಯ ಎಲ್ಲಾ ಸ್ನೇಹಿತರು ಸಂಘದ ಸದಸ್ಯರಾಗಲು ಕೋರಿಕೊಂಡರು.
ಈ ಸಂದರ್ಭದಲ್ಲಿ ಸಾಧಕರಾದ ಪರಿಸರ ಪ್ರೇಮಿ ಪ್ರಸೂತಿ, ಸ್ತಿçÃರೋಗ ತಜ್ಞೆ ಡಾ.ಶಾಂತಾಭಟ್, ದಾವಣಗೆರೆ ಜಿಲ್ಲೆ ಕ್ಯಾನ್ಸರ್ ಅಭಿಯಾನದ ರಾಯಬಾರಿ ಆರ್.ಟಿ.ಅರುಣಕುಮಾರ್ ಗೆ ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಘದ ಶಿವನಳ್ಳಿ ರಮೇಶ, ಸಂಘಟನಾ ಕಾರ್ಯದರ್ಶಿ ಟಿ.ನಾಗರಾಜ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು, ಇತರರು ಭಾಗವಹಿಸಿದ್ದರು.
ನಂತರದಲ್ಲಿ ಖ್ಯಾತ ಹಾಸ್ಯ ಭಾಷಣಕಾರರಾದ ಗಂಗಾವತಿ ಪ್ರಾಣೇಶ್, ನರಸಿಂಹ ಜೋಶಿ, ಬಸವರಾಜ್ ಮಾಮನಿ ಸಾಂಸ್ಕೃತಿಕ ಹಾಸ್ಯ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243