Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಸಿದ್ದು ಬಗ್ಗೆ ಇದೆ ಸಾಫ್ಟ್ ಕಾರ್ನರ್ !

Published

on

  • ಎಚ್‌ಡಿಕೆಗೆ ಸಿದ್ದು ಗೈಡ್ ಆಗಿರಲಿ
  • ಹಣಕಾಸು ವಿಚಾರದಲ್ಲಿ ಸಿದ್ದರಾಮಯ್ಯ ಅವರಷ್ಟು ಚಾಣಾಕ್ಷರು ಮತ್ತೊಬ್ಬರಿಲ್ಲ
  • ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಫೇಸ್‌ಬುಕ್‌ನಲ್ಲಿ ಸಿಗುತ್ತಿದೆ ಒಮ್ಮತ
ಸುದ್ದಿದಿನ ವಿಶೇಷ : ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿನ ಎಲ್ಲ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೊರಿಸಿದೆ. ಕೆಪಿಸಿಸಿ ಸಭೆಯಲ್ಲಿ ಈ ಕೈ ಮುಖಂಡ ಕೋಳಿವಾಡ ಅವರು ನಡೆದುಕೊಂಡ ವರ್ತನೆಯು ಇದಕ್ಕೆ ಕನ್ನಡಿ ಹಿಡಿದಂತಿತ್ತು.
ಆಡಳಿತ ವಿರೋಧಿ ಅಲೆ ಇಲ್ಲದಿರುವಾಗ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂಬ ಚರ್ಚೆಗಳೂ ಚಾಲ್ತಿಯಲ್ಲಿವೆ. ಆದರೆ, ಕೈ ಪಾಳಯದೊಳಗೆ ಸಿದ್ದರಾಮಯ್ಯ ಅವರ ಕುರಿತು ಕೆಲ ಮುಖಂಡರು ಒಳ್ಳೆಯ ಅಭಿಪ್ರಾಯ ಅದರಲ್ಲೂ ಸಾಫ್ಟ್ ಕಾರ್ನರ್ ಹೊಂದಿರುವುದು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಬರಹಗಾರ ರಾಜಾರಾಂ ತಳ್ಳೂರ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದು, ಇದಕ್ಕೆ ಚಿಂತಕರು, ವಾಗ್ಮಿಗಳು, ಬರಹಗಾರರು ಮೊದಲಾದ ಗಣ್ಯರ ಪಡೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹೀಗಿದೆ:

ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸ್ಪೀಕರ್ ಮಾತನಾಡುತ್ತಾ: ರಾಜನೀತಿ ತಜ್ನನಾಗಿ ಒಂದು ಮಾತು ಹೇಳ್ತೇನೆ. ಇದು ಸ್ಪೀಕರ್ ಕುರ್ಚಿಯಿಂದ ಹೇಳುವ ಮಾತಲ್ಲ ಅಥವಾ ರಾಜಕೀಯ ಪಕ್ಷದ ಪ್ರತಿನಿಧಿ ಆಗಿಯೂ ಹೇಳುವ ಮಾತಲ್ಲ.
ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಬಿಲ್ ಸ್ವಲ್ಪವೂ ಉಲ್ಲಂಘನೆ ಆಗದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಅದಕ್ಕೆ ಹಣಕಾಸನ್ನೂ ವ್ಯವಸ್ಥೆ ಮಾಡಿ, ಯಾವುದೇ ಸರ್ಕಾರಿ ಚೆಕ್ ಬೌನ್ಸ್ ಆಗದಂತೆ ಅದನ್ನೆಲ್ಲ ಜಾರಿ ಮಾಡಿದ ಸಿದ್ದರಾಮಯ್ಯ ಹಣಕಾಸು ಸಚಿವರಾಗಿಯೂ ಹಲವು ಸಂಪುಟಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಇರುವವರು. ಹೆಚ್ಚಿನಂಶ ಪ. ಬಂಗಾಳದ ಕಮ್ಯುನಿಸ್ಟ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಶೋಕ್ ಮಿತ್ರಾ ಬಿಟ್ಟರೆ ಇಂತಹ ಹಣಕಾಸಿನ ಶಿಸ್ತು ಹೊಂದಿದ್ದ ದೇಶದ ಮತ್ತೊಬ್ಬ ಹಣಕಾಸು ಸಚಿವರೆಂದರೆ ಸಿದ್ಧರಾಮಯ್ಯ ಎಂದರು. ಜೊತೆಗೆ ಹೊಸ ಮುಖ್ಯಮಂತ್ರಿಗಳಿಗೆ ಸಿದ್ಧರಾಮಯ್ಯ ಅವರಿಂದ ಸಲಹೆಗಳನ್ನು ಪಡೆದು ಮುಂದುವರಿಯಲು ಹೇಳಿದರು.
ಹೆಚ್ಚಿನಂಶ ಮಾಜೀ ಮುಖ್ಯಮಂತ್ರಿಯೊಬ್ಬರು ತನ್ನ ಸಾರ್ವಜನಿಕ ಸೇವೆಗಾಗಿ ಸಂಸದೀಯ ಸೀಟೊಂದರಿಂದ ಪಡೆಯಬಹುದಾದ ಅತಿದೊಡ್ಡ ಮಾತಿನ ಗೌರವ ಇದು.
ರಾಜಾರಾಂ ಅವರ ಈ ಪೋಸ್ಟ್ ಫೇಸ್‌ಬುಕ್‌ನಲ್ಲಿ ಕಂಡ ಕೂಡಲೇ ಹಲವರು ಸಿದ್ದರಾಮಯ್ಯ ಅವರ ಪರ ಭಾವನಾತ್ಮಕವಾದ ಸಾಲುಗಳನ್ನು ಬರೆದಿದ್ದಾರೆ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಅರಸು ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂಬುದಾಗಿಯೂ ಅಭಿಪ್ರಾಯ ವ್ಯಕ್ತವಾಗಿದೆ.  ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿರುವ ಕೆಲವು ಕಮೆಂಟ್‌ಗಳು ಇಲ್ಲಿವೆ.

ದಿನೇಶ್ ಅಮಿನ್ ಮಟ್ಟು

ಇದೇ ಮಾತನ್ನು ಮಾಜಿಪ್ರಧಾನಿ ಮನಮಮೋಹನ್ ಸಿಂಗ್ ಬೆಂಗಳೂರಿನಲ್ಲಿ ಹೇಳಿದ್ದರು. ಸಿಂಗ್ ಅವರ ಮಾತಿನಲ್ಲಿ ಸ್ವಲ್ಪ ಪಶ್ಚಾತಾಪ ಮತ್ತು ಸ್ವಲ್ಪ ಅಪರಾಧಿ ಪ್ರಜ್ಞೆ ಕೂಡಾ ಇತ್ತೆಂದು ನನಗನಿಸಿತ್ತು.

ಗೋವಿಂದ ರಾಜ್ ಬೈಚನಕುಪ್ಪೆ

ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…
ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಮಂಜುನಾಥ್ ಚಾಂದ್

ಮನ್ನಾಗಳ ದೊಡ್ಡ ಸಂತೆಯೇ ಇರುವ ಜೆಡಿಎಸ್ ಪ್ರಣಾಳಿಕೆಯನ್ನು ಈಡೇರಿಸುವುದಲ್ಲ, ನಿಭಾಯಿಸುವುದಕ್ಕೆ ಸಿದ್ದರಾಮಯ್ಯನವರೇ ಮುಂಚೂಣಿಯಲ್ಲಿ ನಿಲ್ಲಬೇಕಾಗುತ್ತದೆ. ಇಲ್ಲವಾದರೆ ಸರಕಾರ ಮಕಾಡೆ ಮಲಗಬೇಕಾಗುತ್ತದೆ.

ರಾಘವೇಂದ್ರ ಹೆಗಡೇಕರ್

 ಸಿದ್ಧರಾಮ್ಯನವರ ಬಡವರ ಪರ ಯೋಜನೆಗಳು ಹೆಚ್ಚು ಪ್ರಚಾರವಾಗದೆ ಮೇಲ್ವರ್ಗದ ಕುರಿತ ಅವರ ಉಡಾಪೆ ಮತ್ತು ವಿರೋಧಿ ನೀತಿಗಳೆ ಅಗತ್ಯಕ್ಕಿಂತ ಹೆಚ್ಚು ಪ್ರಚಾರವಾಗಿ ಅವರಿಗೆ ಮುಳುವಾಯಿತು..

ನವೀನ್ ತೀರ್ಥಹಳ್ಳಿ

ನಿಜಕ್ಕೂ ಸಿದ್ದರಾಮಯ್ಯನವರು ದೇವರಾಜ ಅರಸು ಅವರಂತ ಬಲಿಷ್ಠ ಯೋಗ್ಯ ಮುಖ್ಯಮಂತ್ರಿ ಯಾಗಿದ್ದರು
ಈ ನಾಡಿನ ಮತದಾರ ಜಾತೀವಾದಿಗಳ
ಹುನ್ನಾರ ಕ್ಕೆ ಬಲಿಯಾಗಿ ಕಾಂಗ್ರೆಸ್‌ಗೆ ಕಡಿಮೆ ಮತ ಹಾಕಿದ ಅದರಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವುದು ತಪ್ಪಿ ಹೋಗಿದೆ.

ವೀರಭದ್ರ ಭದ್ರ

 ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಚೆನ್ನರಾಜು

ಅಗೋರಿಗಳನ್ನು ನಂಬುವ ಯಡ್ಡಿ, ಜೋತಿಷ್ಯವನ್ನು ನಂಬುವ ಕುಮಾರಸ್ವಾಮಿ ಇವರ ನಡುವೆ ಸಿದ್ದರಾಮಯ್ಯ ಎಂಬ ನೈತಿಕ ಗುರುವೊಬ್ಬರಿದ್ದಾರೆ ಎಂದರೆ ನಂಬಲಾಗದು. ಅವರಿಗೆ ಇದುವರೆಗೂ ಯಾವ ಸ್ಥಾನವೂ ನೀಡದೆ ಎಲ್ಲಿ ಮೂಲೆಗುಂಪಾಗಿ ಬಿಡುವರೋ ಎಂಬ ಆತಂಕವಿದೆ. ಒಂದಂತು ನಿಜ ನೈತಿಕ ಸ್ವಾಭಿಮಾನದ ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ . ಲವ್ ಯು ಎರ್ ಸರ್

ಲೋಕೇಶ್ ಮುನಿಯಪ್ಪ

ಬಹುಶಃ ಭಾರತದ ರಾಜಕೀಯದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತಾನು ಇಷ್ಟು ಮಾಡುತ್ತೇನೆ(ಸಿದ್ದರಾಯ್ಯ ಅದನ್ನು ಚುನಾವಣಾಆಶ್ವಾಸನೆಯಾಗಿ ಹೇಳಿರಲಿಲ್ಲ)ಎಂದು ಹೇಳಿದನ್ನು ಚ್ಯುತಿ ಇಲ್ಲದೇ ಪಾಲಿಸಿದರು. ಖಂಡಿತವಾಗಿಯೂ ಅದು ಎಲ್ಲರಿಗೂ ಸಾದ್ಯವಿರಲಿಲ್ಲ. ನಮಸ್ಕಾರ ಸಾರ ನೀವು ನಮ್ಮ ಜೊತೆಗಿರುತ್ತೀರಾ..

ಚಿದಂಬರ್ ಜೋಷಿ

ಮಾನ್ಯ ಸಿದ್ದರಾಮಯ್ಯ ಸಾಹೇಬರದು ಉನ್ನತ ವ್ಯಕ್ತಿತ್ವ, ಕಳಂಕ ರಹಿತ ಸಮಾಜ ಸೇವೆ, ಇಷ್ಟೊಂದು ವರ್ಷ ರಾಜಕೀಯದಲ್ಲಿದ್ದರೂ ಅವರ ಅಣ್ಣತಮ್ಮಂದಿರುಗಳಿಗೆ ಯಾವುದೇ ಸಹಾಯ ಮಾಡಿರದ ವ್ಯಕ್ಕಿ— ಸನ್ಮಾನ್ಯ ಮೋದೀಜಿಯವರ ಹಾಗೆ, ಚಾಣಾಕ್ಷ ನಡೆ ಹೊಂದಿದವರು, ಐದು ವರ್ಷ ಮುಖ್ಯಮಂತ್ರಿಯಾಗಿ ಯಾವ ಕಪ್ಪು ಚುಕ್ಕೆ ಇಲ್ಲದೇ ಇರುವದು ಸಾಮಾನ್ಯ ಮಾತಲ್ಲ. ಹಗರಣಗಳಂತೂ ಇಲ್ಲವೇ ಇಲ್ಲ.

ದಿನದ ಸುದ್ದಿ

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

Published

on

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು ಶಾಲೆಗಳ ಅಭಿವೃದ್ಧಿ ಆಗಬೇಕು. ನಮ್ಮ ಹೊಲದ ರಸ್ತೆಗಳು ಅಭಿವೃದ್ಧಿ ಆಗಬೇಕು. ಜಲಮೂಲಗಳ ಶುದ್ದೀಕರಣ, ಹೂಳೆತ್ತಿ ಅಂತರ್ಜಲ ಹೆಚ್ಚಳದ ಮೂಲಕ ಸ್ವಾವಲಂಬಿ ಹಳ್ಳಿಯ ರೂಪುರೇಷ ಹಾಕಿಕೊಂಡು ಪಂಚಾಯತ್‍ನಲ್ಲಿ ತೀರ್ಮಾನ ಮಾಡಿಕೊಂಡರೆ ಜನರು ಉದ್ಯೋಗ ಖಾತರಿಯಲ್ಲಿ ಹಳ್ಳಿಯನ್ನು ಕಟ್ಟುವ ಕೆಲಸ ಮಾಡುತ್ತಾರೆ ಎಂದು ದಾವಣಗೆರೆ ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ (Dr.Prabha Malikarjun) ತಿಳಿಸಿದರು.

ಅವರು ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಹೊನ್ನೂರು ಗ್ರಾಮದಲ್ಲಿ ಮಂಗಳವಾರ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಆಯೋಜಿಸಿದ್ದ ಮನರೇಗಾ ಕಾಮಗಾರಿ ಸ್ಥಳದಲ್ಲಿ ಆರೋಗ್ಯ ತಪಾಸಣಾ ಶಿಬಿರ ಮತ್ತು ಕೂಲಿಕಾರರ ಕುಂದುಕೊರತೆಗಳ ಪರಿಶೀಲನೆ ಕಾರ್ಯಕ್ರಮ ಉದ್ಘಾಟಿಸಿ ಅವರು (Dr.Prabha Malikarjun) ಮಾತನಾಡಿದರು.

ಉದ್ಯೋಗ ಖಾತರಿ ಯೋಜನೆ ಅನುಷ್ಟಾನದಲ್ಲಿ ಗ್ರಾಮ ಪಂಚಾಯಿತಿಯಲ್ಲಿ ಉತ್ತಮ ಕೆಲಸ ಮಾಡಿ ಜನರಿಗೆ ಉದ್ಯೋಗ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೊನ್ನೂರು ಗ್ರಾಪಂನಲ್ಲಿ ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಿದ್ದರಿಂದ ಇಲ್ಲಿನ ಗ್ರಾಪಂ ಉದ್ಯೋಗ ಖಾತರಿಯಲ್ಲಿ ನಂ.1 ಸ್ಥಾನ ಪಡೆದುಕೊಂಡಿದೆ ಎಂದು ಅವರು (Dr.Prabha Malikarjun) ಶ್ಲಾಘಿಸಿದರು.

ಮನರೇಗಾದಿಂದ ದೇಶದಲ್ಲಿ 5 ರಿಂದ 6 ಕೋಟಿ ಜನ ಕೂಲಿಕಾರ್ಮಿಕರು ಆರ್ಥಿಕವಾಗಿ ಸಬಲರಾಗಿದ್ದಾರೆ. 2005 ರಿಂದ 2026 ರವರೆಗೆ ಸುಮಾರು 20 ವರ್ಷಗಳಿಂದ ಗ್ರಾಮಗಳ ಅಭಿವೃದ್ಧಿಗೆ ಮನರೇಗಾ ಯೋಜನೆ ಕಾರಣವಾಗಿತ್ತು. ಈಗ ಇದನ್ನು ಕೇಂದ್ರ ಸರ್ಕಾರ ಬದಲಾಯಿಸಿ ವಿಕಸಿತ ಭಾರತ-ಗ್ಯಾರಂಟೀ ಫಾರ್ ರೋಜಗಾರ್ ಮತ್ತು ಆವೀಜಿಕ ಮಿಷನ್ ವಿಬಿ-ಜಿ.ರಾಮ್ ಜಿ ಕಾಯ್ದೆ-2005 ಎಂದು ಬದಲಿಸಿದ್ದು ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಗೆ ಪೆಟ್ಟು ನೀಡಲು ಮುಂದಾಗಿದೆ. ಮಹಿಳಾ ಮತ್ತು ಪುರುಷರಿಗೆ ಸಮಾನವಾದ ಕೆಲಸ ಕೊಡುವ ಯೋಜನೆವೊಂದಿದ್ದರೆ ಅದು, ‘ಮನರೇಗಾ’ ಯೋಜನೆ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾಪುರುಷನ ಹೆಸರಿಟ್ಟ ‘ಮನರೇಗಾ’ಯೋಜನೆಯ ಹೆಸರನ್ನೇ ಅಳಿಸುವ ಕೆಲಸ ಮಾಡಿದೆ ಎಂದು ಸಂಸದರು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಅವರು ಹಳ್ಳಿ ಜನರ ದನಿಯಾಗಿ, ಅವರ ಕಷ್ಟ-ಸುಖಗಳನ್ನು ಅಂಚಿಕೊಂಡಿದ್ದಾರೆ. ಅವರು ಬಡವರ ಕಷ್ಟ-ಸುಖಗಳನ್ನು ಚೆನ್ನಾಗಿ ಅರಿತುಕೊಂಡಿದ್ದಾರೆ. ಅವರ ಜೊತೆಯಲ್ಲಿ ಮಾಯಕೊಂಡ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾದಾಗ ಅವರಿಂದ ಸಾಕಷ್ಟು ಕಲಿಯುವ ಅವಕಾಶ ಸಿಕ್ಕಿದೆ. ಸ್ವಯಂ ಉದ್ಯೋಗದಲ್ಲಿ ನೀವು ಹೇಗೆ ಆರ್ಥಿಕವಾಗಿ ಸಬಲರಾಗಬಹುದು ಎಂಬ ಬಗ್ಗೆ ತಿಳಿಸಿದ್ದಾರೆ ಎಂದು (Dr.Prabha Malikarjun) ಮೆಚ್ಚುಗೆ ವ್ಯಕ್ತಪಡಿಸಿದರು.


ಶಾಸಕರಾದ ಕೆ.ಎಸ್.ಬಸವಂತಪ್ಪ ಮಾತನಾಡಿ, ದೇಶದಲ್ಲಿ ದುಡಿಯುವ ವರ್ಗಕ್ಕೆ ಕೆಲಸ ಕೊಡಬೇಕೆಂಬ ಉದ್ದೇಶದಿಂದ 2005ರಲ್ಲಿ ಯುಪಿಎ ಸರ್ಕಾರ ನೇತೃತ್ವ ವಹಿಸಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ‘ಮನರೇಗಾ’ ಯೋಜನೆ ಜಾರಿಗೊಳಿಸುವ ಮೂಲಕ ದುಡಿಯುವ ವರ್ಗಕ್ಕೆ ಕೆಲಸ ಕೊಟ್ಟು ಆರ್ಥಿಕವಾಗಿ ಸಬಲರನ್ನಾಗಿ ಮಾಡಿತು. ಅಂದಿನಿಂದ ಈವರೆಗೆ ದೇಶದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಪಥದಲ್ಲಿ ಸಾಗುತ್ತಿವೆ. ಮನರೇಗಾ’ ಯೋಜನೆ ಜಾರಿಗೊಳ್ಳುವ ಪೂರ್ವದಲ್ಲಿ ಇಲ್ಲಿನ ಹಳ್ಳಿಯ ಜನರು ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯ ಹಾಗೂ ರಾಜ್ಯದ ಕಾಫಿನಾಡು ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಉದ್ಯೋಗ ಅರಸಿ ವಲಸೆ ಹೋಗುತ್ತಿದ್ದರು. ಯಾವಾಗ ಹಿಂದಿನ ಯುಪಿಎ ಸರ್ಕಾರ ‘ಮನರೇಗಾ’ ಯೋಜನೆ ಜಾರಿಗೊಳಿಸಿತು. ಅಂದಿನಿಂದ ಈವರೆಗೂ ಹಳ್ಳಿಯ ಜನರು ಬದುಕು ಕಂಡುಕೊಂಡು ಆರ್ಥಿಕವಾಗಿ ಸಬಲರಾದರು. ಆದರೆ ಈಗ ಕೇಂದ್ರ ಸರ್ಕಾರ ‘ಮನರೇಗಾ’ ಹೆಸರು ಬದಲಾಯಿಸುತ್ತಿದೆ ಎಂದು (Dr.Prabha Malikarjun) ಅಸಮಧಾನ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ್ ರಾವ್, ತಾಪಂ ಇಓ ರಾಮಭೋವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

Continue Reading

ರಾಜಕೀಯ

ಸಚಿವ ಎನ್.ಎಸ್.ಭೋಸರಾಜು: ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ DCM ಒಲವು

Published

on

ಬೆಂಗಳೂರು : ಮಲೇಷ್ಯಾದ ಪ್ರಮುಖ ಸೆಮಿಕಂಡಕ್ಟರ್ ಹಬ್ ಆಗಿರುವ ಪೆನಾಂಗ್ ರಾಜ್ಯದ ಉನ್ನತ ಮಟ್ಟದ ನಿಯೋಗವು, ಕರ್ನಾಟಕದೊಂದಿಗೆ ಕ್ವಾಂಟಮ್ ತಂತ್ರಜ್ಞಾನ ಅಭಿವೃದ್ಧಿಯಲ್ಲಿ ಸಹಭಾಗಿತ್ವಕ್ಕೆ ಆಸಕ್ತಿ ವ್ಯಕ್ತಪಡಿಸಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ತಿಳಿಸಿದರು.

 

ಇಂದು ವಿಕಾಸಸೌಧದಲ್ಲಿ ಪೆನಾಂಗ್ ರಾಜ್ಯದ ಉಪಮುಖ್ಯಮಂತ್ರಿಗಳಾದ ಶ್ರೀ ಜಗದೀಪ್ ಸಿಂಗ್ ದಿಯೋ ನೇತೃತ್ವದ ನಿಯೋಗದೊಂದಿಗೆ ಸಭೆ ನಡೆಸಿದ ನಂತರ ಸಚಿವರು ಈ ವಿಷಯ ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಪೆನಾಂಗ್ ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ, ತಮ್ಮ ರಾಜ್ಯದ ಯಶಸ್ಸಿನ ಮಾದರಿಯನ್ನು ವಿವರಿಸಿದರು. “ಪೆನಾಂಗ್ ಭೌಗೋಳಿಕವಾಗಿ ಸಣ್ಣ ರಾಜ್ಯವಾಗಿದ್ದರೂ, ಇಂದು ಜಾಗತಿಕ ಮಟ್ಟದ ಸೆಮಿಕಂಡಕ್ಟರ್ ಶಕ್ತಿಯಾಗಿ ಹೊರಹೊಮ್ಮಿದೆ. ಇದಕ್ಕೆ ಮುಖ್ಯ ಕಾರಣ ನಮ್ಮಲ್ಲಿರುವ ಬಲವಾದ ‘ಉದ್ಯಮ ಮತ್ತು ಸಂಶೋಧನಾ ಸಹಭಾಗಿತ್ವ’ (Industry-Research Collaboration). ಇದರಲ್ಲಿ ಪೆನಾಂಗ್ ವಿಶ್ವವಿದ್ಯಾಲಯವು (Penang University) ನಿರ್ಣಾಯಕ ಪಾತ್ರ ವಹಿಸಿದೆ. ಉದ್ಯಮಗಳಿಗೆ ನೇರವಾಗಿ ಬೆಂಬಲ ನೀಡುವಂತಹ ಸಂಶೋಧನಾ ಪರಿಸರ ವ್ಯವಸ್ಥೆಯನ್ನು ವಿವಿ ನಿರ್ಮಿಸಿದೆ,” ಎಂದು ಅವರು ತಿಳಿಸಿದರು. ಇದೇ ಮಾದರಿಯನ್ನು ಕರ್ನಾಟಕ ಮತ್ತು ಪೆನಾಂಗ್ ನಡುವೆ ವಿಸ್ತರಿಸುವ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟರು.

ಚರ್ಚೆಯ ವೇಳೆ ಸಚಿವ ಎನ್.ಎಸ್. ಭೋಸರಾಜು ಅವರು ಸಣ್ಣ ನೀರಾವರಿ ಕ್ಷೇತ್ರದಲ್ಲಿ ಕರ್ನಾಟಕ ಸಾಧಿಸಿರುವ ಮೈಲಿಗಲ್ಲುಗಳನ್ನು ಪರಿಚಯಿಸಿದರು. ವಿಶೇಷವಾಗಿ ರಾಜ್ಯದ ‘ತ್ಯಾಜ್ಯದಿಂದ ಸಂಪತ್ತು’ (Waste to Wealth) ಪರಿಕಲ್ಪನೆಯಡಿ ಜಾರಿಗೆ ತಂದಿರುವ ಕೆ.ಸಿ. ವ್ಯಾಲಿ (ಕೋರಮಂಗಲ-ಚಲ್ಲಘಟ್ಟ) ಮತ್ತು ಎಚ್.ಎನ್. ವ್ಯಾಲಿ (ಹೆಬ್ಬಾಳ-ನಾಗವಾರ) ಯೋಜನೆಗಳ ಬಗ್ಗೆ ಗಮನ ಸೆಳೆದರು.

“ನಗರದ ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಅದನ್ನು ಕೋಲಾರ ಮತ್ತು ಚಿಕ್ಕಬಳ್ಳಾಪುರದಂತಹ ಬರಪೀಡಿತ ಜಿಲ್ಲೆಗಳ ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಮಟ್ಟವನ್ನು ಯಶಸ್ವಿಯಾಗಿ ಹೆಚ್ಚಿಸಿದ್ದೇವೆ. ಕೃಷಿ ಚಟುವಟಿಕೆಗಳಿಗೆ ಇದು ಜೀವ ತುಂಬಿದೆ,” ಎಂದು ಸಚಿವರು ನಿಯೋಗಕ್ಕೆ ವಿವರಿಸಿದರು. ಈ ಸುಸ್ಥಿರ ಅಭಿವೃದ್ಧಿ ಮಾದರಿಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿತು.

ಕರ್ನಾಟಕ ಸರ್ಕಾರ ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ರೂಪಿಸಿರುವ ಮಹತ್ವಾಕಾಂಕ್ಷೆಯ ‘ಕ್ವಾಂಟಮ್ ಆಕ್ಷನ್ ಪ್ಲಾನ್’ ನಲ್ಲಿ ಭಾಗಿಯಾಗಲು ಪೆನಾಂಗ್ ನಿಯೋಗ ಉತ್ಸುಕತೆ ತೋರಿತು. “ಪೂರ್ವದ ಸಿಲಿಕಾನ್ ವ್ಯಾಲಿ ಎಂದು ಕರೆಯಲ್ಪಡುವ ಪೆನಾಂಗ್ ಜೊತೆಗಿನ ಸಹಭಾಗಿತ್ವಕ್ಕೆ ನಮ್ಮ ಸರ್ಕಾರ ಮುಕ್ತವಾಗಿದೆ,” ಎಂದು ಸಚಿವರು ಸ್ವಾಗತಿಸಿದರು. ಬೆಂಗಳೂರು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ಹಾಗೂ ಪೆನಾಂಗ್ ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಹೊಂದಿರುವ ಪರಿಣತಿಯ ಸಮ್ಮಿಲನದಿಂದ ವಿಫುಲ ಅವಕಾಶಗಳು ಸೃಷ್ಟಿಯಾಗಲಿವೆ ಎಂದು ಉಭಯ ನಾಯಕರು ಅಭಿಪ್ರಾಯವ್ಯಕ್ತಪಡಿಸಿದರು.

ಸಭೆಯ ಅಂತ್ಯದಲ್ಲಿ, ಉಪಮುಖ್ಯಮಂತ್ರಿ ಜಗದೀಪ್ ಸಿಂಗ್ ದಿಯೋ ಅವರು ಸಚಿವ ಭೋಸರಾಜು ಅವರಿಗೆ ಮಲೇಷ್ಯಾ ಮತ್ತು ಪೆನಾಂಗ್‌ಗೆ ಭೇಟಿ ನೀಡುವಂತೆ ಅಧಿಕೃತ ಆಹ್ವಾನ ನೀಡಿದರು. ವಿಶೇಷವಾಗಿ ಪೆನಾಂಗ್‌ನ ವಿಶ್ವವಿದ್ಯಾಲಯದ ಸಂಶೋಧನಾ ಸೌಲಭ್ಯಗಳು ಮತ್ತು ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಯನ್ನು ಖುದ್ದಾಗಿ ವೀಕ್ಷಿಸಿ, ಮಾನವ ಸಂಪನ್ಮೂಲ ಅಭಿವೃದ್ಧಿ ಒಪ್ಪಂದವನ್ನು (MoU) ಅಂತಿಮಗೊಳಿಸಲು ಈ ಭೇಟಿ ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಐಟಿ, ಬಿಟಿ ಮತ್ತು ವಿಜ್ಞಾನ ತಂತ್ರಜ್ಞಾನ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎನ್. ಮಂಜುಳಾ, ಕೆ-ಸ್ಟೆಪ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಸದಾಶಿವ ಪ್ರಭು ಸೇರಿದಂತೆ ಪೆನಾಂಗ್ ರಾಜ್ಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ರಾಜಕೀಯ

‘CM’ ಆಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ : ಸಿಎಂ ಸಿದ್ದರಾಮಯ್ಯ

Published

on

ಮೈಸೂರು: ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಆಗಿ ಸಿಎಂ ಸಿದ್ದರಾಮಯ್ಯ ಡಿ ದೇವರಾಜು ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ಮೈಸೂರಿನಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇಷ್ಟು ವರ್ಷದ ರಾಜಕಾರಣ ನನಗೆ ತೃಪ್ತಿ ತಂದಿದ್ದು, ಮುಖ್ಯಮಂತ್ರಿ ಆಗಿ ಪೂರ್ಣಾವಧಿಯಾಗಿ ಮುಂದುವರಿಯುವ ವಿಶ್ವಾಸವಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ಅವರು, ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ಅವರ ದಾಖಲೆಯನ್ನು ಮುರಿಯಲೆಂದು ನಾನು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ. ಮುಖ್ಯಮಂತ್ರಿಯಾಗಿ ಈ ಅವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕಷ್ಟೆ.

ನನ್ನ ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿದ ಸುದ್ದಿ ಗಮನಿಸಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ.

https://x.com/siddaramaiah/status/2008449729609560294?s=20

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ. ಜನರ ಕೆಲಸ ಮಾಡುವುದು ಖುಷಿಯ ಸಂಗತಿ. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಮಾಡಿಕೊಡುವುದು. ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು.

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದೇವೆ. ಆದರೆ ಕಾಲಘಟ್ಟ ಬೇರೆ ಬೇರೆಯಾಗಿದೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದು ಟ್ವಿಟ್‌ನಲ್ಲಿ ಹಂಚಿಕೊಂಡಿದ್ದಾರೆ.

Continue Reading
Advertisement

Title

ದಿನದ ಸುದ್ದಿ2 days ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 days ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

ದಿನದ ಸುದ್ದಿ3 days ago

ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ...

ದಿನದ ಸುದ್ದಿ3 days ago

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

ಸುದ್ದಿದಿನ,ದಾವಣಗೆರೆ:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸುವ ಕೆಎಎಸ್...

ದಿನದ ಸುದ್ದಿ7 days ago

ಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಸುದ್ದಿದಿನಡೆಸ್ಕ್:ಪ್ರತಿ ವರ್ಷ ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ಪ್ರಶಸ್ತಿಗಳಿಗೆ ಪ್ರಾಧ್ಯಾಪಕ ಪೂರ್ಣಾನಂದ, ವ್ಯಂಗ್ಯಚಿತ್ರಕಾರ ಸತೀಶ್‌ ಆಚಾರ್ಯ, ಪತ್ರಕರ್ತ ಸೋಮಶೇಖರ್ ಪಡುಕೆರೆ ಹಾಗೂ ಚಿಂತಕ, ಬರಹಗಾರ ಎ ನಾರಾಯಣ್...

ದಿನದ ಸುದ್ದಿ7 days ago

ಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾಲಯವು ಪ್ರಥಮ ಘಟಿಕೋತ್ಸವವನ್ನು ಆಯೋಜಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಖಲಿಸಲಿದೆ. ಈ ಘಟಿಕೋತ್ಸವವು ವಿಶ್ವವಿದ್ಯಾಲಯದ ಮೊದಲ ಪದವಿ ಬ್ಯಾಚ್‌ನ ಯಶಸ್ವಿ ಶೈಕ್ಷಣಿಕ ಪಯಣವನ್ನು ಸಂಭ್ರಮದಿಂದ...

ದಿನದ ಸುದ್ದಿ7 days ago

ಮೌಲ್ಯ ಕಳೆದು ಕೊಳ್ತಿದ್ಯ ದಾವಣಗೆರೆ ವಿಶ್ವವಿದ್ಯಾಲಯ? ರಿಪೀಟರ್ಸ್ ಗೋಳು ಕೇಳೋರಿಲ್ಲ..

~ಹನುಮಂತ ನಾಯ್ಕ್ .ಡಿ ಎಲ್. ಎಲ್. ಬಿ, ಆರ್. ಎಲ್. ಕಾನೂನು ಕಾಲೇಜು ದಾವಣಗೆರೆ ದಾವಣಗೆರೆ ವಿಶ್ವವಿದ್ಯಾಲಯವು ಈ ಹಿಂದೆ ಮೌಲ್ಯಮಾಪನ ಮುಗಿದು 24 ಗಂಟೆಗಳ ಒಳಗೆ...

ದಿನದ ಸುದ್ದಿ1 week ago

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಮಹಿಳಾ ಮತ್ತು ಪುರುಷರಿಗೆ ಸಮಾನ ವೇತನ ನೀಡಿದ ಉದ್ಯೋಗ ಖಾತರಿ ಯೋಜನೆ ಹೆಸರು ಬದಲಾವಣೆಗೆ ಅಸಮಧಾನ

ದಾವಣಗೆರೆ: ಅಭಿವೃದ್ಧಿ ಕಾಮಗಾರಿ ದೆಹಲಿ ಮಟ್ಟದಲ್ಲಿ ತೀರ್ಮಾನ ಆಗಬೇಕಿಲ್ಲ. ಪಂಚಾಯತ್‍ನಲ್ಲಿ ಗ್ರಾಮಸಭೆ ಮೂಲಕ ಗ್ರಾಪಂ ಸದಸ್ಯರು ತೀರ್ಮಾನ ಕೈಗೊಂಡು ನಮ್ಮ ಹಳ್ಳಿಯಲ್ಲಿ ಇಷ್ಟು ಶೌಚಾಲಯ ಆಗಬೇಕು. ಇಷ್ಟು...

ದಿನದ ಸುದ್ದಿ1 week ago

ರಸ್ತೆ ವಿಸ್ತೀರ್ಣ ವಿರೋಧಿಸಿ ಎಸ್‌ಓಜಿ ಕಾಲೋನಿ ನಿವಾಸಿಗಳ ಪ್ರತಿಭಟನೆ

ದಾವಣಗೆರೆ: ಎಸ್‌ಓಜಿ ಕಾಲೊನಿಯ ಮುಖ್ಯ ರಸ್ತೆಯ ವಿಸ್ತೀರ್ಣ ಕಡಿತಗೊಳಿಸಿ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಮಾಡಿರುವ ಆದೇಶವನ್ನು ಕೂಡಲೇ ರದ್ದುಪಡಿಸುವುದರೊಂದಿಗೆ, ನೀರಿನ ಕಂದಾಯ ಪಾವತಿಗೆ 5 ವರ್ಷದ ಬಾಕಿಯನ್ನು...

ಅಂತರಂಗ1 week ago

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ...

Trending