Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಸಿದ್ದು ಬಗ್ಗೆ ಇದೆ ಸಾಫ್ಟ್ ಕಾರ್ನರ್ !

Published

on

  • ಎಚ್‌ಡಿಕೆಗೆ ಸಿದ್ದು ಗೈಡ್ ಆಗಿರಲಿ
  • ಹಣಕಾಸು ವಿಚಾರದಲ್ಲಿ ಸಿದ್ದರಾಮಯ್ಯ ಅವರಷ್ಟು ಚಾಣಾಕ್ಷರು ಮತ್ತೊಬ್ಬರಿಲ್ಲ
  • ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಫೇಸ್‌ಬುಕ್‌ನಲ್ಲಿ ಸಿಗುತ್ತಿದೆ ಒಮ್ಮತ
ಸುದ್ದಿದಿನ ವಿಶೇಷ : ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿನ ಎಲ್ಲ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೊರಿಸಿದೆ. ಕೆಪಿಸಿಸಿ ಸಭೆಯಲ್ಲಿ ಈ ಕೈ ಮುಖಂಡ ಕೋಳಿವಾಡ ಅವರು ನಡೆದುಕೊಂಡ ವರ್ತನೆಯು ಇದಕ್ಕೆ ಕನ್ನಡಿ ಹಿಡಿದಂತಿತ್ತು.
ಆಡಳಿತ ವಿರೋಧಿ ಅಲೆ ಇಲ್ಲದಿರುವಾಗ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂಬ ಚರ್ಚೆಗಳೂ ಚಾಲ್ತಿಯಲ್ಲಿವೆ. ಆದರೆ, ಕೈ ಪಾಳಯದೊಳಗೆ ಸಿದ್ದರಾಮಯ್ಯ ಅವರ ಕುರಿತು ಕೆಲ ಮುಖಂಡರು ಒಳ್ಳೆಯ ಅಭಿಪ್ರಾಯ ಅದರಲ್ಲೂ ಸಾಫ್ಟ್ ಕಾರ್ನರ್ ಹೊಂದಿರುವುದು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಬರಹಗಾರ ರಾಜಾರಾಂ ತಳ್ಳೂರ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದು, ಇದಕ್ಕೆ ಚಿಂತಕರು, ವಾಗ್ಮಿಗಳು, ಬರಹಗಾರರು ಮೊದಲಾದ ಗಣ್ಯರ ಪಡೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹೀಗಿದೆ:

ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸ್ಪೀಕರ್ ಮಾತನಾಡುತ್ತಾ: ರಾಜನೀತಿ ತಜ್ನನಾಗಿ ಒಂದು ಮಾತು ಹೇಳ್ತೇನೆ. ಇದು ಸ್ಪೀಕರ್ ಕುರ್ಚಿಯಿಂದ ಹೇಳುವ ಮಾತಲ್ಲ ಅಥವಾ ರಾಜಕೀಯ ಪಕ್ಷದ ಪ್ರತಿನಿಧಿ ಆಗಿಯೂ ಹೇಳುವ ಮಾತಲ್ಲ.
ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಬಿಲ್ ಸ್ವಲ್ಪವೂ ಉಲ್ಲಂಘನೆ ಆಗದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಅದಕ್ಕೆ ಹಣಕಾಸನ್ನೂ ವ್ಯವಸ್ಥೆ ಮಾಡಿ, ಯಾವುದೇ ಸರ್ಕಾರಿ ಚೆಕ್ ಬೌನ್ಸ್ ಆಗದಂತೆ ಅದನ್ನೆಲ್ಲ ಜಾರಿ ಮಾಡಿದ ಸಿದ್ದರಾಮಯ್ಯ ಹಣಕಾಸು ಸಚಿವರಾಗಿಯೂ ಹಲವು ಸಂಪುಟಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಇರುವವರು. ಹೆಚ್ಚಿನಂಶ ಪ. ಬಂಗಾಳದ ಕಮ್ಯುನಿಸ್ಟ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಶೋಕ್ ಮಿತ್ರಾ ಬಿಟ್ಟರೆ ಇಂತಹ ಹಣಕಾಸಿನ ಶಿಸ್ತು ಹೊಂದಿದ್ದ ದೇಶದ ಮತ್ತೊಬ್ಬ ಹಣಕಾಸು ಸಚಿವರೆಂದರೆ ಸಿದ್ಧರಾಮಯ್ಯ ಎಂದರು. ಜೊತೆಗೆ ಹೊಸ ಮುಖ್ಯಮಂತ್ರಿಗಳಿಗೆ ಸಿದ್ಧರಾಮಯ್ಯ ಅವರಿಂದ ಸಲಹೆಗಳನ್ನು ಪಡೆದು ಮುಂದುವರಿಯಲು ಹೇಳಿದರು.
ಹೆಚ್ಚಿನಂಶ ಮಾಜೀ ಮುಖ್ಯಮಂತ್ರಿಯೊಬ್ಬರು ತನ್ನ ಸಾರ್ವಜನಿಕ ಸೇವೆಗಾಗಿ ಸಂಸದೀಯ ಸೀಟೊಂದರಿಂದ ಪಡೆಯಬಹುದಾದ ಅತಿದೊಡ್ಡ ಮಾತಿನ ಗೌರವ ಇದು.
ರಾಜಾರಾಂ ಅವರ ಈ ಪೋಸ್ಟ್ ಫೇಸ್‌ಬುಕ್‌ನಲ್ಲಿ ಕಂಡ ಕೂಡಲೇ ಹಲವರು ಸಿದ್ದರಾಮಯ್ಯ ಅವರ ಪರ ಭಾವನಾತ್ಮಕವಾದ ಸಾಲುಗಳನ್ನು ಬರೆದಿದ್ದಾರೆ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಅರಸು ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂಬುದಾಗಿಯೂ ಅಭಿಪ್ರಾಯ ವ್ಯಕ್ತವಾಗಿದೆ.  ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿರುವ ಕೆಲವು ಕಮೆಂಟ್‌ಗಳು ಇಲ್ಲಿವೆ.

ದಿನೇಶ್ ಅಮಿನ್ ಮಟ್ಟು

ಇದೇ ಮಾತನ್ನು ಮಾಜಿಪ್ರಧಾನಿ ಮನಮಮೋಹನ್ ಸಿಂಗ್ ಬೆಂಗಳೂರಿನಲ್ಲಿ ಹೇಳಿದ್ದರು. ಸಿಂಗ್ ಅವರ ಮಾತಿನಲ್ಲಿ ಸ್ವಲ್ಪ ಪಶ್ಚಾತಾಪ ಮತ್ತು ಸ್ವಲ್ಪ ಅಪರಾಧಿ ಪ್ರಜ್ಞೆ ಕೂಡಾ ಇತ್ತೆಂದು ನನಗನಿಸಿತ್ತು.

ಗೋವಿಂದ ರಾಜ್ ಬೈಚನಕುಪ್ಪೆ

ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…
ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಮಂಜುನಾಥ್ ಚಾಂದ್

ಮನ್ನಾಗಳ ದೊಡ್ಡ ಸಂತೆಯೇ ಇರುವ ಜೆಡಿಎಸ್ ಪ್ರಣಾಳಿಕೆಯನ್ನು ಈಡೇರಿಸುವುದಲ್ಲ, ನಿಭಾಯಿಸುವುದಕ್ಕೆ ಸಿದ್ದರಾಮಯ್ಯನವರೇ ಮುಂಚೂಣಿಯಲ್ಲಿ ನಿಲ್ಲಬೇಕಾಗುತ್ತದೆ. ಇಲ್ಲವಾದರೆ ಸರಕಾರ ಮಕಾಡೆ ಮಲಗಬೇಕಾಗುತ್ತದೆ.

ರಾಘವೇಂದ್ರ ಹೆಗಡೇಕರ್

 ಸಿದ್ಧರಾಮ್ಯನವರ ಬಡವರ ಪರ ಯೋಜನೆಗಳು ಹೆಚ್ಚು ಪ್ರಚಾರವಾಗದೆ ಮೇಲ್ವರ್ಗದ ಕುರಿತ ಅವರ ಉಡಾಪೆ ಮತ್ತು ವಿರೋಧಿ ನೀತಿಗಳೆ ಅಗತ್ಯಕ್ಕಿಂತ ಹೆಚ್ಚು ಪ್ರಚಾರವಾಗಿ ಅವರಿಗೆ ಮುಳುವಾಯಿತು..

ನವೀನ್ ತೀರ್ಥಹಳ್ಳಿ

ನಿಜಕ್ಕೂ ಸಿದ್ದರಾಮಯ್ಯನವರು ದೇವರಾಜ ಅರಸು ಅವರಂತ ಬಲಿಷ್ಠ ಯೋಗ್ಯ ಮುಖ್ಯಮಂತ್ರಿ ಯಾಗಿದ್ದರು
ಈ ನಾಡಿನ ಮತದಾರ ಜಾತೀವಾದಿಗಳ
ಹುನ್ನಾರ ಕ್ಕೆ ಬಲಿಯಾಗಿ ಕಾಂಗ್ರೆಸ್‌ಗೆ ಕಡಿಮೆ ಮತ ಹಾಕಿದ ಅದರಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವುದು ತಪ್ಪಿ ಹೋಗಿದೆ.

ವೀರಭದ್ರ ಭದ್ರ

 ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಚೆನ್ನರಾಜು

ಅಗೋರಿಗಳನ್ನು ನಂಬುವ ಯಡ್ಡಿ, ಜೋತಿಷ್ಯವನ್ನು ನಂಬುವ ಕುಮಾರಸ್ವಾಮಿ ಇವರ ನಡುವೆ ಸಿದ್ದರಾಮಯ್ಯ ಎಂಬ ನೈತಿಕ ಗುರುವೊಬ್ಬರಿದ್ದಾರೆ ಎಂದರೆ ನಂಬಲಾಗದು. ಅವರಿಗೆ ಇದುವರೆಗೂ ಯಾವ ಸ್ಥಾನವೂ ನೀಡದೆ ಎಲ್ಲಿ ಮೂಲೆಗುಂಪಾಗಿ ಬಿಡುವರೋ ಎಂಬ ಆತಂಕವಿದೆ. ಒಂದಂತು ನಿಜ ನೈತಿಕ ಸ್ವಾಭಿಮಾನದ ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ . ಲವ್ ಯು ಎರ್ ಸರ್

ಲೋಕೇಶ್ ಮುನಿಯಪ್ಪ

ಬಹುಶಃ ಭಾರತದ ರಾಜಕೀಯದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತಾನು ಇಷ್ಟು ಮಾಡುತ್ತೇನೆ(ಸಿದ್ದರಾಯ್ಯ ಅದನ್ನು ಚುನಾವಣಾಆಶ್ವಾಸನೆಯಾಗಿ ಹೇಳಿರಲಿಲ್ಲ)ಎಂದು ಹೇಳಿದನ್ನು ಚ್ಯುತಿ ಇಲ್ಲದೇ ಪಾಲಿಸಿದರು. ಖಂಡಿತವಾಗಿಯೂ ಅದು ಎಲ್ಲರಿಗೂ ಸಾದ್ಯವಿರಲಿಲ್ಲ. ನಮಸ್ಕಾರ ಸಾರ ನೀವು ನಮ್ಮ ಜೊತೆಗಿರುತ್ತೀರಾ..

ಚಿದಂಬರ್ ಜೋಷಿ

ಮಾನ್ಯ ಸಿದ್ದರಾಮಯ್ಯ ಸಾಹೇಬರದು ಉನ್ನತ ವ್ಯಕ್ತಿತ್ವ, ಕಳಂಕ ರಹಿತ ಸಮಾಜ ಸೇವೆ, ಇಷ್ಟೊಂದು ವರ್ಷ ರಾಜಕೀಯದಲ್ಲಿದ್ದರೂ ಅವರ ಅಣ್ಣತಮ್ಮಂದಿರುಗಳಿಗೆ ಯಾವುದೇ ಸಹಾಯ ಮಾಡಿರದ ವ್ಯಕ್ಕಿ— ಸನ್ಮಾನ್ಯ ಮೋದೀಜಿಯವರ ಹಾಗೆ, ಚಾಣಾಕ್ಷ ನಡೆ ಹೊಂದಿದವರು, ಐದು ವರ್ಷ ಮುಖ್ಯಮಂತ್ರಿಯಾಗಿ ಯಾವ ಕಪ್ಪು ಚುಕ್ಕೆ ಇಲ್ಲದೇ ಇರುವದು ಸಾಮಾನ್ಯ ಮಾತಲ್ಲ. ಹಗರಣಗಳಂತೂ ಇಲ್ಲವೇ ಇಲ್ಲ.

ದಿನದ ಸುದ್ದಿ

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

Published

on

ಮೇಲ್ಭದ್ರ ನೀರಿಗಾಗಿ ದಾವಣಗೆರೆ ಬಂದ್‌: ಗುಟ್ಕಾ–ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ, ನಗರದಲ್ಲಿ ಪ್ರತಿಭಟನೆ ಕಾವು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ. ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ನಗರದ ವಿವಿಧ ವೃತ್ತಗಳಲ್ಲಿ ಪ್ರತಿಭಟನಾಕಾರರು ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಮೇಲ್ಭದ್ರ ಯೋಜನೆಯ ನೀರು ದಾವಣಗೆರೆ ಭಾಗದ ರೈತರ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ. ನೀರಿನ ಲಭ್ಯತೆ ಕೃಷಿ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರುವ ಹಿನ್ನೆಲೆಯಲ್ಲಿ, ನೀರು ಬಿಡುಗಡೆ ವಿಚಾರದಲ್ಲಿ ಸರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ರೈತರ ಬೇಡಿಕೆಗೆ ತ್ವರಿತವಾಗಿ ಸ್ಪಂದಿಸಬೇಕು ಎಂಬ ಆಗ್ರಹವೂ ಕೇಳಿಬಂತು.

http://Visit : www.suddidina.com

davangere-bandh-upper-bhadra-water-release-gutka-pan-masala-ban-protest-renukacharya

ಗುಟ್ಕಾ, ಪಾನ್‌ ಮಸಾಲಾ ನಿಷೇಧಕ್ಕೂ ಆಗ್ರಹ

ಬಂದ್‌ನ ಮತ್ತೊಂದು ಪ್ರಮುಖ ಬೇಡಿಕೆ ಗುಟ್ಕಾ ಹಾಗೂ ಪಾನ್‌ ಮಸಾಲಾ ನಿಷೇಧಕ್ಕೆ ಸಂಬಂಧಿಸಿದೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರೈತ ಮೋರ್ಚಾ ಒತ್ತಾಯಿಸಿದೆ.

ಈ ಎರಡು ಪ್ರಮುಖ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಬೆಂಬಲ ನೀಡುವಂತೆ ವ್ಯಾಪಾರಸ್ಥರು, ವಿದ್ಯಾರ್ಥಿಗಳು, ಶಾಲಾ-ಕಾಲೇಜು ಆಡಳಿತ ಮಂಡಳಿಗಳು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ನಗರದ ವಿವಿಧ ಭಾಗಗಳಲ್ಲಿ ಪ್ರತಿಭಟನೆಯ ವಾತಾವರಣ ನಿರ್ಮಾಣವಾಗಿದ್ದು, ಬಂದ್‌ಗೆ ಬೆಂಬಲ ಪಡೆಯಲು ಸಂಘಟಕರು ಕರೆ ನೀಡಿದ್ದಾರೆ.

https://x.com/ians_india/status/2094602342230528256

ಟೈರ್‌ಗೆ ಬೆಂಕಿ; ಪೊಲೀಸರ ಮಧ್ಯಪ್ರವೇಶ

ಪ್ರತಿಭಟನೆಯ ವೇಳೆ ನಗರದ ಹಲವು ವೃತ್ತಗಳಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಲಾಯಿತು. ಇದರಿಂದ ಕೆಲಕಾಲ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಸಾರ್ವಜನಿಕ ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದಾರೆ. ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಪರಿಸ್ಥಿತಿಯನ್ನು ಗಮನಿಸಲಾಗಿದ್ದು, ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವ ಪ್ರಯತ್ನ ನಡೆದಿದೆ.

ಬಂದ್‌ಗೆ ವ್ಯಾಪಾರಸ್ಥರ ಬೆಂಬಲ?

ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ವ್ಯಾಪಾರಸ್ಥರು, ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಸಂಸ್ಥೆಗಳು ಸಹಕರಿಸಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ. ಆದರೆ ಬಂದ್‌ಗೆ ವಿವಿಧ ವರ್ಗಗಳಿಂದ ಎಷ್ಟರ ಮಟ್ಟಿಗೆ ಬೆಂಬಲ ದೊರೆಯಲಿದೆ ಎಂಬುದು ದಿನದ ಬೆಳವಣಿಗೆಗಳಿಂದ ಸ್ಪಷ್ಟವಾಗಲಿದೆ.

ಮೇಲ್ಭದ್ರ ನೀರಿನ ವಿಚಾರ ದಾವಣಗೆರೆ ಜಿಲ್ಲೆಯ ರೈತರ ಪಾಲಿಗೆ ದೀರ್ಘಕಾಲದ ಪ್ರಮುಖ ವಿಷಯವಾಗಿದ್ದು, ಇದೀಗ ಈ ಬೇಡಿಕೆ ಮತ್ತೊಮ್ಮೆ ರಾಜಕೀಯ ಹಾಗೂ ಸಾರ್ವಜನಿಕ ಚರ್ಚೆಯ ಕೇಂದ್ರಕ್ಕೆ ಬಂದಿದೆ. ಇದರ ಜತೆಗೆ ಗುಟ್ಕಾ ಮತ್ತು ಪಾನ್‌ ಮಸಾಲಾ ನಿಷೇಧದ ಬೇಡಿಕೆಯನ್ನೂ ಮುನ್ನೆಲೆಗೆ ತರುವ ಮೂಲಕ ಬಿಜೆಪಿ ರೈತ ಮೋರ್ಚಾ ಹೋರಾಟಕ್ಕೆ ವ್ಯಾಪಕ ಸ್ವರೂಪ ನೀಡಲು ಮುಂದಾಗಿದೆ.

ಒಟ್ಟಿನಲ್ಲಿ, ಮೇಲ್ಭದ್ರ ನೀರು ಬಿಡುಗಡೆ ಮತ್ತು ಗುಟ್ಕಾ–ಪಾನ್‌ ಮಸಾಲಾ ನಿಷೇಧ ಎಂಬ ಎರಡು ಪ್ರಮುಖ ಬೇಡಿಕೆಗಳೊಂದಿಗೆ ದಾವಣಗೆರೆಯಲ್ಲಿ ಬಂದ್‌ ಹಾಗೂ ಪ್ರತಿಭಟನೆ ಕಾವು ಪಡೆದಿದ್ದು, ಸರಕಾರದ ಮುಂದಿನ ಪ್ರತಿಕ್ರಿಯೆ ಇದೀಗ ಕುತೂಹಲ ಮೂಡಿಸಿದೆ.

Continue Reading

ದಿನದ ಸುದ್ದಿ

ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ

Published

on

Prajaseva Abhiyana: ಇನ್ಮುಂದೆ ಕಚೇರಿಗೆ ಅಲೆದಾಟ ಬೇಡ; ಜನರ ಮನೆ ಬಾಗಿಲಿಗೇ ಸರ್ಕಾರ, ಸೆ.5ರಿಂದ ‘ಪ್ರಜಾಸೇವಾ’ಗೆ ಚಾಲನೆ!

ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.

ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.

ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ

  • ಸೆಪ್ಟೆಂಬರ್ 5ರಿಂದ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ
  • ಪ್ರತಿ ಶನಿವಾರ ತಾಲ್ಲೂಕು/ಹೋಬಳಿ ಮಟ್ಟದಲ್ಲಿ ಜನಸಂಪರ್ಕ ಸಭೆ
  • ಬುಧವಾರ ತಾಲ್ಲೂಕು, ಉಪವಿಭಾಗ ಮತ್ತು ಜಿಲ್ಲಾ ಮಟ್ಟದಲ್ಲಿ ಮೂರು ಹಂತದ ಪರಿಶೀಲನೆ
  • ಗ್ರಾಮ ಒನ್ ಕೇಂದ್ರ ಹಾಗೂ ಸಭಾ ಸ್ಥಳದಲ್ಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ವ್ಯವಸ್ಥೆ
  • 1902 ಸಹಾಯವಾಣಿ ಮತ್ತು IPGRS ಮೂಲಕ ಕುಂದುಕೊರತೆ ದಾಖಲಿಸುವ ಅವಕಾಶ

http://Visit : www.suddidina.com

ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ

ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.

ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.

ಗ್ರಾಮ ಒನ್‌ನಲ್ಲೇ ಅರ್ಜಿ ಸಲ್ಲಿಕೆ

ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.

ಬುಧವಾರ ಮೂರು ಹಂತದ ಪರಿಶೀಲನೆ

ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.

ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.

ಸ್ಥಳದಲ್ಲೇ ಮಂಜೂರಾತಿ, ಆನ್‌ಲೈನ್‌ನಲ್ಲಿ ಸ್ಥಿತಿ

ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.

ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್‌ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.

ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ

ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

Continue Reading

ದಿನದ ಸುದ್ದಿ

ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

Published

on

kalaburagi-municipal-corporation-mayor-deputy-mayor-election-congress-win
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್‌-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!

ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.

ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ

ಈ ಚುನಾವಣೆಯಲ್ಲಿ 21ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.

ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.

ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು

20ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.

ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ

ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.

ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.

ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading
Advertisement

Title

ದಿನದ ಸುದ್ದಿ2 days ago

ಮಹಿಳೆಯರ ಉಚಿತ ಪ್ರಯಾಣದ ನಡುವೆ ನಿಗಮಗಳಿಗೆ ಹಣಕಾಸಿನ ಸಂಕಷ್ಟ; ವೇತನ, ಡೀಸೆಲ್‌ ಖರೀದಿಗೂ ಎದುರಾಗುತ್ತಿದೆ ಒತ್ತಡ

ಸುದ್ದಿದಿನ,ಬೆಂಗಳೂರು: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಕಲ್ಪಿಸುವ ಮೂಲಕ ರಾಜ್ಯದ ಸಾರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾದ ಶಕ್ತಿ ಯೋಜನೆಯ ಮತ್ತೊಂದು ಮುಖ ಇದೀಗ ಚರ್ಚೆಗೆ...

ದಿನದ ಸುದ್ದಿ2 days ago

ಭದ್ರಾ ಜಲಾಶಯ: ಮಲೆನಾಡಿನ ಮಳೆಯಿಂದ ಬಯಲುಸೀಮೆಯ ಹಸಿರಿನವರೆಗೆ… ಲಕ್ಷಾಂತರ ಜನರ ಬದುಕಿನ ಜಲನಾಡಿ!

ಸುದ್ದಿದಿನ,ಶಿವಮೊಗ್ಗ: ಭದ್ರಾ ಜಲಾಶಯ ಎಂದರೆ ಕೇವಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳುವ ಅಣೆಕಟ್ಟಲ್ಲ. ಪಶ್ಚಿಮಘಟ್ಟದ ಮಳೆಯನ್ನು ಮಧ್ಯ ಕರ್ನಾಟಕದ ಬರಡು ಭೂಮಿಗೆ ಕೊಂಡೊಯ್ಯುವ ಜೀವನಾಡಿ. ಮಲೆನಾಡಿನ ನದಿಯಿಂದ ಆರಂಭವಾಗುವ ಭದ್ರೆಯ...

ಸಿನಿ ಸುದ್ದಿ2 days ago

ಅಭಿಮಾನಿಗಳ ಸಂಭ್ರಮದಿಂದ ದೂರ ಕಿಚ್ಚನ ಬರ್ತ್‌ಡೇ; 53ನೇ ವಸಂತದಲ್ಲಿ ಸುದೀಪ್‌ ಸಿನಿಮಾ ಸರ್ಪ್ರೈಸ್‌ಗೆ ಕೌಂಟ್‌ಡೌನ್!

ಸುದ್ದಿದಿನ,ಬೆಂಗಳೂರು: ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ ಇಂದು, ಸೆಪ್ಟೆಂಬರ್‌ 2, ವಿಶೇಷ ದಿನ. 53ನೇ ವಸಂತಕ್ಕೆ ಕಾಲಿಡುತ್ತಿರುವ ಸುದೀಪ್‌, ಈ ಬಾರಿ ತಮ್ಮ...

ದಿನದ ಸುದ್ದಿ2 days ago

ಸಾಮಾಜಿಕ ಬದಲಾವಣೆಗೆ ಮಾದರಿಯಾಗಬೇಕಿದ್ದ ಯೋಜನೆಗೆ ದಾಖಲೆ, ಅನುದಾನ ಕೊರತೆ ಅಡ್ಡಿ; ಸಾವಿರಾರು ಅರ್ಜಿಗಳು ಬಾಕಿ

ಸುದ್ದಿದಿನ,ಶಿವಮೊಗ್ಗ: ಜಾತಿ-ಧರ್ಮದ ಕಟ್ಟುಪಾಡುಗಳನ್ನು ಮೀರಿ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಂಡು ಮದುವೆಯಾಗುವ ದಂಪತಿಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಸರ್ಕಾರ ಜಾರಿಗೊಳಿಸಿರುವ ಅಂತರ್ಜಾತಿ ವಿವಾಹ ಪ್ರೋತ್ಸಾಹಧನ ಯೋಜನೆಯೇ...

ನಿತ್ಯ ಭವಿಷ್ಯ2 days ago

ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?

ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ...

ದಿನದ ಸುದ್ದಿ3 days ago

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿಸುದ್ದಿ: 4,744 ತಾಂತ್ರಿಕೇತರ ಹಾಗೂ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸಿದ್ಧತೆ

ಸುದ್ದಿದಿನ,ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವಿ ಹಾಗೂ ಪಿಯುಸಿ-ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಅವಕಾಶ ಕಲ್ಪಿಸಲು ಸಜ್ಜಾಗಿದೆ. ವಿವಿಧ ಇಲಾಖೆಗಳಲ್ಲಿನ...

ದಿನದ ಸುದ್ದಿ3 days ago

ಬಿಜೆಪಿ ರೈತ ಮೋರ್ಚಾದಿಂದ ಬಂದ್‌ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್‌ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು

ಸುದ್ದಿದಿನ,ದಾವಣಗೆರೆ: ಮೇಲ್ಭದ್ರ ಯೋಜನೆಯ ನೀರನ್ನು ಸಮರ್ಪಕವಾಗಿ ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಸೇರಿದಂತೆ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ದಾವಣಗೆರೆಯಲ್ಲಿ ಬಿಜೆಪಿ ರೈತ ಮೋರ್ಚಾ ಬಂದ್‌ಗೆ ಕರೆ ನೀಡಿದೆ....

ದಿನದ ಸುದ್ದಿ3 days ago

ಅಪೌಷ್ಟಿಕತೆ ನಿವಾರಣೆಗೆ ಹೊಸ ಹೆಜ್ಜೆ; ಶಾಲೆ ಮುಗಿಯುವ ಮುನ್ನ ಮಕ್ಕಳಿಗೆ ಪೌಷ್ಟಿಕ ತಿನಿಸು

ಸುದ್ದಿದಿನ,ಹೂವಿನಹಡಗಲಿ: ಗಣಿ ಚಟುವಟಿಕೆಗಳಿಂದ ಬಾಧಿತ ಪ್ರದೇಶಗಳ ಮಕ್ಕಳ ಆರೋಗ್ಯ ಮತ್ತು ಪೌಷ್ಟಿಕತೆ ಸುಧಾರಣೆಗೆ ಕರ್ನಾಟಕ ಗಣಿ ಮತ್ತು ಪರಿಸರ ಪುನಸ್ಥಾಪನೆ ನಿಗಮ (ಕೆಎಂಆರ್‌ಸಿಇ) ಹೊಸ ಹೆಜ್ಜೆ ಇಟ್ಟಿದೆ....

ಕ್ರೀಡೆ3 days ago

ಕಲ್ಲು-ಮುಳ್ಳಿನ ದಾರಿಯಲ್ಲೂ ನಿಲ್ಲದ ಹೆಜ್ಜೆ; ತಾಯಿಯ ಛಲಕ್ಕೆ ಮ್ಯಾರಥಾನ್‌ನಲ್ಲಿ ಪ್ರಥಮ ಸ್ಥಾನ

ಸುದ್ದಿದಿನ,ಮುಂಬಯಿ: ಬದುಕಿನಲ್ಲಿ ಎದುರಾಗುವ ಸಂಕಷ್ಟಗಳು ಕೆಲವೊಮ್ಮೆ ಮನುಷ್ಯನನ್ನು ಕುಗ್ಗಿಸುತ್ತವೆ. ಆದರೆ ತಾಯಿಯೊಬ್ಬಳಿಗೆ ಮಕ್ಕಳ ಭವಿಷ್ಯದ ಕನಸು ದೊಡ್ಡದಾಗಿದ್ದರೆ, ಆಕೆಯ ಮುಂದೆ ನೋವು, ಬಡತನ, ಅಡೆತಡೆ ಯಾವುದೂ ನಿಲ್ಲುವುದಿಲ್ಲ....

ದಿನದ ಸುದ್ದಿ3 days ago

ಮೈಸೂರು ದಸರಾದಲ್ಲಿ ಕಂಬಳದ ಕಳೆ: ಕೋಣಗಳ ಓಟಕ್ಕೆ ಭರದ ಸಿದ್ಧತೆ, ಪರಿಸರ ವಿವಾದವೂ ತೀವ್ರ

ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಾಂಸ್ಕೃತಿಕ ವೈವಿಧ್ಯಕ್ಕೆ ಈ ಬಾರಿ ಕರಾವಳಿಯ ಕಂಬಳ ಮತ್ತೊಂದು ಆಯಾಮ ನೀಡಲಿದೆ. ಸಾತಗಳ್ಳಿಯ 25 ಎಕರೆ ಪ್ರದೇಶದಲ್ಲಿ ಕಂಬಳ ಆಯೋಜನೆಗೆ ಸಿದ್ಧತೆಗಳು...

Trending