Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಸಿದ್ದು ಬಗ್ಗೆ ಇದೆ ಸಾಫ್ಟ್ ಕಾರ್ನರ್ !

Published

on

  • ಎಚ್‌ಡಿಕೆಗೆ ಸಿದ್ದು ಗೈಡ್ ಆಗಿರಲಿ
  • ಹಣಕಾಸು ವಿಚಾರದಲ್ಲಿ ಸಿದ್ದರಾಮಯ್ಯ ಅವರಷ್ಟು ಚಾಣಾಕ್ಷರು ಮತ್ತೊಬ್ಬರಿಲ್ಲ
  • ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಫೇಸ್‌ಬುಕ್‌ನಲ್ಲಿ ಸಿಗುತ್ತಿದೆ ಒಮ್ಮತ
ಸುದ್ದಿದಿನ ವಿಶೇಷ : ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿನ ಎಲ್ಲ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೊರಿಸಿದೆ. ಕೆಪಿಸಿಸಿ ಸಭೆಯಲ್ಲಿ ಈ ಕೈ ಮುಖಂಡ ಕೋಳಿವಾಡ ಅವರು ನಡೆದುಕೊಂಡ ವರ್ತನೆಯು ಇದಕ್ಕೆ ಕನ್ನಡಿ ಹಿಡಿದಂತಿತ್ತು.
ಆಡಳಿತ ವಿರೋಧಿ ಅಲೆ ಇಲ್ಲದಿರುವಾಗ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂಬ ಚರ್ಚೆಗಳೂ ಚಾಲ್ತಿಯಲ್ಲಿವೆ. ಆದರೆ, ಕೈ ಪಾಳಯದೊಳಗೆ ಸಿದ್ದರಾಮಯ್ಯ ಅವರ ಕುರಿತು ಕೆಲ ಮುಖಂಡರು ಒಳ್ಳೆಯ ಅಭಿಪ್ರಾಯ ಅದರಲ್ಲೂ ಸಾಫ್ಟ್ ಕಾರ್ನರ್ ಹೊಂದಿರುವುದು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಬರಹಗಾರ ರಾಜಾರಾಂ ತಳ್ಳೂರ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದು, ಇದಕ್ಕೆ ಚಿಂತಕರು, ವಾಗ್ಮಿಗಳು, ಬರಹಗಾರರು ಮೊದಲಾದ ಗಣ್ಯರ ಪಡೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹೀಗಿದೆ:

ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸ್ಪೀಕರ್ ಮಾತನಾಡುತ್ತಾ: ರಾಜನೀತಿ ತಜ್ನನಾಗಿ ಒಂದು ಮಾತು ಹೇಳ್ತೇನೆ. ಇದು ಸ್ಪೀಕರ್ ಕುರ್ಚಿಯಿಂದ ಹೇಳುವ ಮಾತಲ್ಲ ಅಥವಾ ರಾಜಕೀಯ ಪಕ್ಷದ ಪ್ರತಿನಿಧಿ ಆಗಿಯೂ ಹೇಳುವ ಮಾತಲ್ಲ.
ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಬಿಲ್ ಸ್ವಲ್ಪವೂ ಉಲ್ಲಂಘನೆ ಆಗದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಅದಕ್ಕೆ ಹಣಕಾಸನ್ನೂ ವ್ಯವಸ್ಥೆ ಮಾಡಿ, ಯಾವುದೇ ಸರ್ಕಾರಿ ಚೆಕ್ ಬೌನ್ಸ್ ಆಗದಂತೆ ಅದನ್ನೆಲ್ಲ ಜಾರಿ ಮಾಡಿದ ಸಿದ್ದರಾಮಯ್ಯ ಹಣಕಾಸು ಸಚಿವರಾಗಿಯೂ ಹಲವು ಸಂಪುಟಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಇರುವವರು. ಹೆಚ್ಚಿನಂಶ ಪ. ಬಂಗಾಳದ ಕಮ್ಯುನಿಸ್ಟ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಶೋಕ್ ಮಿತ್ರಾ ಬಿಟ್ಟರೆ ಇಂತಹ ಹಣಕಾಸಿನ ಶಿಸ್ತು ಹೊಂದಿದ್ದ ದೇಶದ ಮತ್ತೊಬ್ಬ ಹಣಕಾಸು ಸಚಿವರೆಂದರೆ ಸಿದ್ಧರಾಮಯ್ಯ ಎಂದರು. ಜೊತೆಗೆ ಹೊಸ ಮುಖ್ಯಮಂತ್ರಿಗಳಿಗೆ ಸಿದ್ಧರಾಮಯ್ಯ ಅವರಿಂದ ಸಲಹೆಗಳನ್ನು ಪಡೆದು ಮುಂದುವರಿಯಲು ಹೇಳಿದರು.
ಹೆಚ್ಚಿನಂಶ ಮಾಜೀ ಮುಖ್ಯಮಂತ್ರಿಯೊಬ್ಬರು ತನ್ನ ಸಾರ್ವಜನಿಕ ಸೇವೆಗಾಗಿ ಸಂಸದೀಯ ಸೀಟೊಂದರಿಂದ ಪಡೆಯಬಹುದಾದ ಅತಿದೊಡ್ಡ ಮಾತಿನ ಗೌರವ ಇದು.
ರಾಜಾರಾಂ ಅವರ ಈ ಪೋಸ್ಟ್ ಫೇಸ್‌ಬುಕ್‌ನಲ್ಲಿ ಕಂಡ ಕೂಡಲೇ ಹಲವರು ಸಿದ್ದರಾಮಯ್ಯ ಅವರ ಪರ ಭಾವನಾತ್ಮಕವಾದ ಸಾಲುಗಳನ್ನು ಬರೆದಿದ್ದಾರೆ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಅರಸು ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂಬುದಾಗಿಯೂ ಅಭಿಪ್ರಾಯ ವ್ಯಕ್ತವಾಗಿದೆ.  ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿರುವ ಕೆಲವು ಕಮೆಂಟ್‌ಗಳು ಇಲ್ಲಿವೆ.

ದಿನೇಶ್ ಅಮಿನ್ ಮಟ್ಟು

ಇದೇ ಮಾತನ್ನು ಮಾಜಿಪ್ರಧಾನಿ ಮನಮಮೋಹನ್ ಸಿಂಗ್ ಬೆಂಗಳೂರಿನಲ್ಲಿ ಹೇಳಿದ್ದರು. ಸಿಂಗ್ ಅವರ ಮಾತಿನಲ್ಲಿ ಸ್ವಲ್ಪ ಪಶ್ಚಾತಾಪ ಮತ್ತು ಸ್ವಲ್ಪ ಅಪರಾಧಿ ಪ್ರಜ್ಞೆ ಕೂಡಾ ಇತ್ತೆಂದು ನನಗನಿಸಿತ್ತು.

ಗೋವಿಂದ ರಾಜ್ ಬೈಚನಕುಪ್ಪೆ

ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…
ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಮಂಜುನಾಥ್ ಚಾಂದ್

ಮನ್ನಾಗಳ ದೊಡ್ಡ ಸಂತೆಯೇ ಇರುವ ಜೆಡಿಎಸ್ ಪ್ರಣಾಳಿಕೆಯನ್ನು ಈಡೇರಿಸುವುದಲ್ಲ, ನಿಭಾಯಿಸುವುದಕ್ಕೆ ಸಿದ್ದರಾಮಯ್ಯನವರೇ ಮುಂಚೂಣಿಯಲ್ಲಿ ನಿಲ್ಲಬೇಕಾಗುತ್ತದೆ. ಇಲ್ಲವಾದರೆ ಸರಕಾರ ಮಕಾಡೆ ಮಲಗಬೇಕಾಗುತ್ತದೆ.

ರಾಘವೇಂದ್ರ ಹೆಗಡೇಕರ್

 ಸಿದ್ಧರಾಮ್ಯನವರ ಬಡವರ ಪರ ಯೋಜನೆಗಳು ಹೆಚ್ಚು ಪ್ರಚಾರವಾಗದೆ ಮೇಲ್ವರ್ಗದ ಕುರಿತ ಅವರ ಉಡಾಪೆ ಮತ್ತು ವಿರೋಧಿ ನೀತಿಗಳೆ ಅಗತ್ಯಕ್ಕಿಂತ ಹೆಚ್ಚು ಪ್ರಚಾರವಾಗಿ ಅವರಿಗೆ ಮುಳುವಾಯಿತು..

ನವೀನ್ ತೀರ್ಥಹಳ್ಳಿ

ನಿಜಕ್ಕೂ ಸಿದ್ದರಾಮಯ್ಯನವರು ದೇವರಾಜ ಅರಸು ಅವರಂತ ಬಲಿಷ್ಠ ಯೋಗ್ಯ ಮುಖ್ಯಮಂತ್ರಿ ಯಾಗಿದ್ದರು
ಈ ನಾಡಿನ ಮತದಾರ ಜಾತೀವಾದಿಗಳ
ಹುನ್ನಾರ ಕ್ಕೆ ಬಲಿಯಾಗಿ ಕಾಂಗ್ರೆಸ್‌ಗೆ ಕಡಿಮೆ ಮತ ಹಾಕಿದ ಅದರಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವುದು ತಪ್ಪಿ ಹೋಗಿದೆ.

ವೀರಭದ್ರ ಭದ್ರ

 ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಚೆನ್ನರಾಜು

ಅಗೋರಿಗಳನ್ನು ನಂಬುವ ಯಡ್ಡಿ, ಜೋತಿಷ್ಯವನ್ನು ನಂಬುವ ಕುಮಾರಸ್ವಾಮಿ ಇವರ ನಡುವೆ ಸಿದ್ದರಾಮಯ್ಯ ಎಂಬ ನೈತಿಕ ಗುರುವೊಬ್ಬರಿದ್ದಾರೆ ಎಂದರೆ ನಂಬಲಾಗದು. ಅವರಿಗೆ ಇದುವರೆಗೂ ಯಾವ ಸ್ಥಾನವೂ ನೀಡದೆ ಎಲ್ಲಿ ಮೂಲೆಗುಂಪಾಗಿ ಬಿಡುವರೋ ಎಂಬ ಆತಂಕವಿದೆ. ಒಂದಂತು ನಿಜ ನೈತಿಕ ಸ್ವಾಭಿಮಾನದ ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ . ಲವ್ ಯು ಎರ್ ಸರ್

ಲೋಕೇಶ್ ಮುನಿಯಪ್ಪ

ಬಹುಶಃ ಭಾರತದ ರಾಜಕೀಯದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತಾನು ಇಷ್ಟು ಮಾಡುತ್ತೇನೆ(ಸಿದ್ದರಾಯ್ಯ ಅದನ್ನು ಚುನಾವಣಾಆಶ್ವಾಸನೆಯಾಗಿ ಹೇಳಿರಲಿಲ್ಲ)ಎಂದು ಹೇಳಿದನ್ನು ಚ್ಯುತಿ ಇಲ್ಲದೇ ಪಾಲಿಸಿದರು. ಖಂಡಿತವಾಗಿಯೂ ಅದು ಎಲ್ಲರಿಗೂ ಸಾದ್ಯವಿರಲಿಲ್ಲ. ನಮಸ್ಕಾರ ಸಾರ ನೀವು ನಮ್ಮ ಜೊತೆಗಿರುತ್ತೀರಾ..

ಚಿದಂಬರ್ ಜೋಷಿ

ಮಾನ್ಯ ಸಿದ್ದರಾಮಯ್ಯ ಸಾಹೇಬರದು ಉನ್ನತ ವ್ಯಕ್ತಿತ್ವ, ಕಳಂಕ ರಹಿತ ಸಮಾಜ ಸೇವೆ, ಇಷ್ಟೊಂದು ವರ್ಷ ರಾಜಕೀಯದಲ್ಲಿದ್ದರೂ ಅವರ ಅಣ್ಣತಮ್ಮಂದಿರುಗಳಿಗೆ ಯಾವುದೇ ಸಹಾಯ ಮಾಡಿರದ ವ್ಯಕ್ಕಿ— ಸನ್ಮಾನ್ಯ ಮೋದೀಜಿಯವರ ಹಾಗೆ, ಚಾಣಾಕ್ಷ ನಡೆ ಹೊಂದಿದವರು, ಐದು ವರ್ಷ ಮುಖ್ಯಮಂತ್ರಿಯಾಗಿ ಯಾವ ಕಪ್ಪು ಚುಕ್ಕೆ ಇಲ್ಲದೇ ಇರುವದು ಸಾಮಾನ್ಯ ಮಾತಲ್ಲ. ಹಗರಣಗಳಂತೂ ಇಲ್ಲವೇ ಇಲ್ಲ.

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

Published

on

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಪಡಿಸಿದೆ.

ಈ ತಿಂಗಳ 30ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯ ತನಕ ಮತದಾನ ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಈ ತಿಂಗಳ 13ರಂದು ಅದಿಸೂಚನೆ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಸಲು ಜೂನ್ 20 ಕಡೆಯ ದಿನ. ಜೂನ್ 21ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸಾತಿಗೆ ಜೂನ್ 23ರಂದು ಅಂತಿಮ ದಿನವಾಗಿದೆ. ಜೂನ್ 30ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್

Published

on

ಸುದ್ದಿದಿನ, ಬೆಂಗಳೂರು : ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಐದು ಗ್ಯಾರಂಟಿ ಯೋಜನೆಗಳ ಅನುಷ್ಟಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿ ಮಾತನಾಡಿದರು.

ಗ್ಯಾರಂಟಿ ಅನುಷ್ಟಾನ ಕುರಿತು ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಯೋಜನೆಗಳು ಜಾರಿಗೆ ಬರಲಿವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಎಂದರು. ಗೃಹಜ್ಯೋತಿ ಯೋಜನೆಯಡಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇಕಡ 10 ರಷ್ಟರವರೆಗಿನ ವಿದ್ಯುತ್ ಉಚಿತ.

ಜುಲೈ 1 ರಿಂದ ಆಗಸ್ಟ್ ವರೆಗಿನ ಖರ್ಚಿಗೆ ಇದು ಅನ್ವಯಿಸಲಿದೆ. ಜುಲೈನಿಂದ ವಿದ್ಯುತ್ ಬಿಲ್ ಆಗಸ್ಟ್‌ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ನೀಡುವುದಿಲ್ಲ ಎಂದರು.

ಗೃಹಲಕ್ಷ್ಮೀ ಯೋಜನೆಯಡಿ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್‌ವೇರ್ ತಂತ್ರಾಂಶ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂಪಾಯಿ ಜಮೆ ಆಗುವುದು. ಇದಕ್ಕಾಗಿ ಜೂನ್ 15 ರಿಂದ ಜುಲೈ 15 ರೊಳಗೆ ಆನ್‌ಲೈನ್ ಅಲ್ಲಿ ಅರ್ಜಿ ಸಲ್ಲಿಸಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಸಲ್ಲಿಸಬಹುದಾಗಿದೆ.

18 ವರ್ಷ ತುಂಬಿದವರು. ಜುಲೈ 15 ರಿಂದ ಆಗಸ್ಟ್ 15 ರವರೆಗೆ ಪ್ರಕ್ರಿಯೆ ನಡೆಸಿ, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಸೌಲಭ್ಯ ಇಲ್ಲ ಎಂದರು.

ಅನ್ನಭಾಗ್ಯ ಯೋಜನೆಯಡಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ,7 ಕೆ.ಜಿ. ಅಕ್ಕಿ ನೀಡುತ್ತಿದ್ದೆವು. ಅದನ್ನು ಬಿಜೆಪಿ ಸರ್ಕಾರ ಅದನ್ನು5 ಕೆ.ಜಿ.ಗೆ ಇಳಿಸಿದ್ದರು. ಇದೀಗ 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ಹೀಗಾಗಿ ಜುಲೈ 1 ರಿಂದ ಬಿಪಿಎಲ್ + ಅಂತ್ಯೋದಯ ಪಡಿತರದಾರರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ವಿವಿಧ ಮೂಲಗಳಿಂದ ತಂದು ವಿತರಿಸಲಾಗುತ್ತದೆ ಎಂದರು.

ಶಕ್ತಿ ಯೋಜನೆಡಿ ಸಮಾಜದಲ್ಲಿ ಶೇಕಡ ೫೦ ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂನ್ 11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು ಹೊರತುಪಡಿಸಿ ಉಳಿದೆಲ್ಲಾ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ. ಹಾಗೂ ಕೆಎಸ್‌ಆರ್‌ಟಿಸಿಯಲ್ಲಿ ಶೇಕಡ 50 ರಷ್ಟು ಆಸನವನ್ನು ಪುರುಷರಿಗೆ ಮೀಸಲಿರಿಸಲಾಗುವುದು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಪ್ರಯಾಣಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಯುವನಿಧಿ ಯೋಜನೆಯಡಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣವೂ ಸೇರಿ ಎಲ್ಲ ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದವರೆಗೆ ಪ್ರತಿ ತಿಂಗಳು 3 ಸಾವಿರ ರೂಪಾಯಿ ಮತ್ತು ಡಿಪ್ಲೊಮಾ ಪದವೀಧರರಿಗೆ 1 ಸಾವಿರದ 500 ರೂಪಾಯಿ ನೀಡಲಾಗುವುದು. ಅಷ್ಟರೊಳಗೆ ಉದ್ಯೋಗ ಪಡೆದವರು ಅಂತವರು ಘೋಷಿಸಿಕೊಂಡರೆ ಅಂತವರಿಗೆ ಯುವ ನಿಧಿ ಭತ್ಯೆ ಕೊನೆಗೊಳ್ಳುತ್ತದೆ. ಈ ಯೋಜನೆಗೆ ಯುವಕ, ಯುವತಿ ಮತ್ತು ತೃತೀಯಲಿಂಗಿಗಳಿಗೂ ಅನ್ವಯಿಸುತ್ತವೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ

Published

on

ಸುದ್ದಿದಿನ, ಬೆಂಗಳೂರು : ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ್ದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಂಪುಟ ಸಭೆ ನಡೆಯಲಿದೆ.

ಈ ಯೋಜನೆಗಳ ಜಾರಿ ಹೇಗೆ, ಫಲಾನುಭವಿಗಳ ಆಯ್ಕೆ ಮಾನದಂಡ, ಸರ್ಕಾರದ ಮೇಲೆ ಬೀಳಬಹುದಾದ ಆರ್ಥಿಕ ಹೊರೆ ಮುಂತಾದ ವಿಚಾರಗಳನ್ನು ಸಭೆಯಲ್ಲಿ ಚರ್ಚಿಸಿ, ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ6 hours ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ14 hours ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ15 hours ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ15 hours ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ18 hours ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ1 day ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

ದಿನದ ಸುದ್ದಿ1 day ago

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ2 days ago

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ ; ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ...

ದಿನದ ಸುದ್ದಿ3 days ago

ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ, ದಾವಣಗೆರೆ : ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Trending