Connect with us

ರಾಜಕೀಯ

ಕಾಂಗ್ರೆಸ್ ನಲ್ಲಿ ಸಿದ್ದು ಬಗ್ಗೆ ಇದೆ ಸಾಫ್ಟ್ ಕಾರ್ನರ್ !

Published

on

  • ಎಚ್‌ಡಿಕೆಗೆ ಸಿದ್ದು ಗೈಡ್ ಆಗಿರಲಿ
  • ಹಣಕಾಸು ವಿಚಾರದಲ್ಲಿ ಸಿದ್ದರಾಮಯ್ಯ ಅವರಷ್ಟು ಚಾಣಾಕ್ಷರು ಮತ್ತೊಬ್ಬರಿಲ್ಲ
  • ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆಗೆ ಫೇಸ್‌ಬುಕ್‌ನಲ್ಲಿ ಸಿಗುತ್ತಿದೆ ಒಮ್ಮತ
ಸುದ್ದಿದಿನ ವಿಶೇಷ : ಈ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸೋಲಿನ ಎಲ್ಲ ಜವಾಬ್ದಾರಿಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಹೊರಿಸಿದೆ. ಕೆಪಿಸಿಸಿ ಸಭೆಯಲ್ಲಿ ಈ ಕೈ ಮುಖಂಡ ಕೋಳಿವಾಡ ಅವರು ನಡೆದುಕೊಂಡ ವರ್ತನೆಯು ಇದಕ್ಕೆ ಕನ್ನಡಿ ಹಿಡಿದಂತಿತ್ತು.
ಆಡಳಿತ ವಿರೋಧಿ ಅಲೆ ಇಲ್ಲದಿರುವಾಗ ಸಿದ್ದರಾಮಯ್ಯ ಅವರ ಏಕ ಪಕ್ಷೀಯ ನಿರ್ಧಾರಗಳೇ ಸೋಲಿಗೆ ಕಾರಣವಾಯಿತು ಎಂಬ ಚರ್ಚೆಗಳೂ ಚಾಲ್ತಿಯಲ್ಲಿವೆ. ಆದರೆ, ಕೈ ಪಾಳಯದೊಳಗೆ ಸಿದ್ದರಾಮಯ್ಯ ಅವರ ಕುರಿತು ಕೆಲ ಮುಖಂಡರು ಒಳ್ಳೆಯ ಅಭಿಪ್ರಾಯ ಅದರಲ್ಲೂ ಸಾಫ್ಟ್ ಕಾರ್ನರ್ ಹೊಂದಿರುವುದು ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿದೆ.
ಫೇಸ್‌ಬುಕ್‌ನಲ್ಲಿ ಬರಹಗಾರ ರಾಜಾರಾಂ ತಳ್ಳೂರ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಅವರ ಕುರಿತು ವ್ಯಕ್ತಪಡಿಸಿರುವ ಅಭಿಪ್ರಾಯವೊಂದನ್ನು ಹಂಚಿಕೊಂಡಿದ್ದು, ಇದಕ್ಕೆ ಚಿಂತಕರು, ವಾಗ್ಮಿಗಳು, ಬರಹಗಾರರು ಮೊದಲಾದ ಗಣ್ಯರ ಪಡೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ.

ಪೋಸ್ಟ್ ಹೀಗಿದೆ:

ವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಮುನ್ನ ಸ್ಪೀಕರ್ ಮಾತನಾಡುತ್ತಾ: ರಾಜನೀತಿ ತಜ್ನನಾಗಿ ಒಂದು ಮಾತು ಹೇಳ್ತೇನೆ. ಇದು ಸ್ಪೀಕರ್ ಕುರ್ಚಿಯಿಂದ ಹೇಳುವ ಮಾತಲ್ಲ ಅಥವಾ ರಾಜಕೀಯ ಪಕ್ಷದ ಪ್ರತಿನಿಧಿ ಆಗಿಯೂ ಹೇಳುವ ಮಾತಲ್ಲ.
ಫಿಸ್ಕಲ್ ರೆಸ್ಪಾನ್ಸಿಬಿಲಿಟಿ ಬಿಲ್ ಸ್ವಲ್ಪವೂ ಉಲ್ಲಂಘನೆ ಆಗದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಅದಕ್ಕೆ ಹಣಕಾಸನ್ನೂ ವ್ಯವಸ್ಥೆ ಮಾಡಿ, ಯಾವುದೇ ಸರ್ಕಾರಿ ಚೆಕ್ ಬೌನ್ಸ್ ಆಗದಂತೆ ಅದನ್ನೆಲ್ಲ ಜಾರಿ ಮಾಡಿದ ಸಿದ್ದರಾಮಯ್ಯ ಹಣಕಾಸು ಸಚಿವರಾಗಿಯೂ ಹಲವು ಸಂಪುಟಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಇರುವವರು. ಹೆಚ್ಚಿನಂಶ ಪ. ಬಂಗಾಳದ ಕಮ್ಯುನಿಸ್ಟ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿದ್ದ ಅಶೋಕ್ ಮಿತ್ರಾ ಬಿಟ್ಟರೆ ಇಂತಹ ಹಣಕಾಸಿನ ಶಿಸ್ತು ಹೊಂದಿದ್ದ ದೇಶದ ಮತ್ತೊಬ್ಬ ಹಣಕಾಸು ಸಚಿವರೆಂದರೆ ಸಿದ್ಧರಾಮಯ್ಯ ಎಂದರು. ಜೊತೆಗೆ ಹೊಸ ಮುಖ್ಯಮಂತ್ರಿಗಳಿಗೆ ಸಿದ್ಧರಾಮಯ್ಯ ಅವರಿಂದ ಸಲಹೆಗಳನ್ನು ಪಡೆದು ಮುಂದುವರಿಯಲು ಹೇಳಿದರು.
ಹೆಚ್ಚಿನಂಶ ಮಾಜೀ ಮುಖ್ಯಮಂತ್ರಿಯೊಬ್ಬರು ತನ್ನ ಸಾರ್ವಜನಿಕ ಸೇವೆಗಾಗಿ ಸಂಸದೀಯ ಸೀಟೊಂದರಿಂದ ಪಡೆಯಬಹುದಾದ ಅತಿದೊಡ್ಡ ಮಾತಿನ ಗೌರವ ಇದು.
ರಾಜಾರಾಂ ಅವರ ಈ ಪೋಸ್ಟ್ ಫೇಸ್‌ಬುಕ್‌ನಲ್ಲಿ ಕಂಡ ಕೂಡಲೇ ಹಲವರು ಸಿದ್ದರಾಮಯ್ಯ ಅವರ ಪರ ಭಾವನಾತ್ಮಕವಾದ ಸಾಲುಗಳನ್ನು ಬರೆದಿದ್ದಾರೆ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಅರಸು ಅವರಿಗಿಂತ ಒಂದು ಹೆಜ್ಜೆ ಮುಂದೆ ಇದ್ದಾರೆ ಎಂಬುದಾಗಿಯೂ ಅಭಿಪ್ರಾಯ ವ್ಯಕ್ತವಾಗಿದೆ.  ಫೇಸ್‌ಬುಕ್‌ನಲ್ಲಿ ವ್ಯಕ್ತವಾಗಿರುವ ಕೆಲವು ಕಮೆಂಟ್‌ಗಳು ಇಲ್ಲಿವೆ.

ದಿನೇಶ್ ಅಮಿನ್ ಮಟ್ಟು

ಇದೇ ಮಾತನ್ನು ಮಾಜಿಪ್ರಧಾನಿ ಮನಮಮೋಹನ್ ಸಿಂಗ್ ಬೆಂಗಳೂರಿನಲ್ಲಿ ಹೇಳಿದ್ದರು. ಸಿಂಗ್ ಅವರ ಮಾತಿನಲ್ಲಿ ಸ್ವಲ್ಪ ಪಶ್ಚಾತಾಪ ಮತ್ತು ಸ್ವಲ್ಪ ಅಪರಾಧಿ ಪ್ರಜ್ಞೆ ಕೂಡಾ ಇತ್ತೆಂದು ನನಗನಿಸಿತ್ತು.

ಗೋವಿಂದ ರಾಜ್ ಬೈಚನಕುಪ್ಪೆ

ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…
ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಮಂಜುನಾಥ್ ಚಾಂದ್

ಮನ್ನಾಗಳ ದೊಡ್ಡ ಸಂತೆಯೇ ಇರುವ ಜೆಡಿಎಸ್ ಪ್ರಣಾಳಿಕೆಯನ್ನು ಈಡೇರಿಸುವುದಲ್ಲ, ನಿಭಾಯಿಸುವುದಕ್ಕೆ ಸಿದ್ದರಾಮಯ್ಯನವರೇ ಮುಂಚೂಣಿಯಲ್ಲಿ ನಿಲ್ಲಬೇಕಾಗುತ್ತದೆ. ಇಲ್ಲವಾದರೆ ಸರಕಾರ ಮಕಾಡೆ ಮಲಗಬೇಕಾಗುತ್ತದೆ.

ರಾಘವೇಂದ್ರ ಹೆಗಡೇಕರ್

 ಸಿದ್ಧರಾಮ್ಯನವರ ಬಡವರ ಪರ ಯೋಜನೆಗಳು ಹೆಚ್ಚು ಪ್ರಚಾರವಾಗದೆ ಮೇಲ್ವರ್ಗದ ಕುರಿತ ಅವರ ಉಡಾಪೆ ಮತ್ತು ವಿರೋಧಿ ನೀತಿಗಳೆ ಅಗತ್ಯಕ್ಕಿಂತ ಹೆಚ್ಚು ಪ್ರಚಾರವಾಗಿ ಅವರಿಗೆ ಮುಳುವಾಯಿತು..

ನವೀನ್ ತೀರ್ಥಹಳ್ಳಿ

ನಿಜಕ್ಕೂ ಸಿದ್ದರಾಮಯ್ಯನವರು ದೇವರಾಜ ಅರಸು ಅವರಂತ ಬಲಿಷ್ಠ ಯೋಗ್ಯ ಮುಖ್ಯಮಂತ್ರಿ ಯಾಗಿದ್ದರು
ಈ ನಾಡಿನ ಮತದಾರ ಜಾತೀವಾದಿಗಳ
ಹುನ್ನಾರ ಕ್ಕೆ ಬಲಿಯಾಗಿ ಕಾಂಗ್ರೆಸ್‌ಗೆ ಕಡಿಮೆ ಮತ ಹಾಕಿದ ಅದರಿಂದ ಸಿದ್ದರಾಮಯ್ಯನವರು ಮತ್ತೊಮ್ಮೆ ಮುಖ್ಯಮಂತ್ರಿ ಯಾಗುವುದು ತಪ್ಪಿ ಹೋಗಿದೆ.

ವೀರಭದ್ರ ಭದ್ರ

 ದೂರದರ್ಶಿತ್ವ, ಮತ್ಸದ್ದಿತನ, ತಾಳ್ಮೆ ಗಾಂಭೀರ್ಯ, ಮಾತು ಮತ್ತು ಮೌನಗಳ ತಿಳುವಳಿಕೆ ಸಿದ್ದರಾಮಯ್ಯ ಅವರಲ್ಲಿ ಅಪಾರವಾಗಿದ್ದವು…( ನಮ್ಮಲ್ಲಿ ಅಧಿಕಾ ಸಿಗಲಿಲ್ಲವೆಂದೂ, ಸಿಕ್ಕ ಅಧಿಕಾರ ಹೋಯ್ತು ಎಂದೂ, ಖಾಸಗಿ ವಿಚಾರಗಳಿಗೂ ಆಶ್ರುಧಾರೆಯರಿಸುವ ರಾಜಕಾರಣಿಗಳು ಬಹಳ ಇದ್ದಾರೆ. ಆದರೆ ಸಿದ್ದು ಆ ಕೆಟಗರಿ ಅಲ್ಲ. ಮಗ ಸತ್ತಾಗ ಕೂಡ ಜನರ ಮುಂದೆ ಕಣ್ಣೀರಾಕಲಿಲ್ಲ. ಸಾಂಸತ್ವನ ಹೇಳಲು ಬಂದುದ್ದವರು ಕಣ್ಣೀರು ಹಾಕಿ ಆಶ್ಚರ್ಯ ಮೂಡಿಸಿದ್ದರು)
ಇನ್ನು ಮ.ಸಿಂಗ್ ಹಾಗೂ ಸಿದ್ದು ಇಬ್ಬರಲ್ಲೂ ಈ ವಿಚಾರದಲ್ಲಿ ಸಾಮ್ಯತೆ ಇದೆ…ದೇಶ, ಧರ್ಮ, ಹುಟ್ಟು, ಸಾವುಗಳನ್ನೇ ಬಂಡವಾಳ ಮಾಡಿಕೊಂಡು ಭಾವನಾತ್ಮಕ ರಾಜಕಾರಣವವರು ಈ ಇಬ್ಬರಿಂದಲೂ ಕಲಿವುದು ಸಾಕಷ್ಟಿದೆ…

ಚೆನ್ನರಾಜು

ಅಗೋರಿಗಳನ್ನು ನಂಬುವ ಯಡ್ಡಿ, ಜೋತಿಷ್ಯವನ್ನು ನಂಬುವ ಕುಮಾರಸ್ವಾಮಿ ಇವರ ನಡುವೆ ಸಿದ್ದರಾಮಯ್ಯ ಎಂಬ ನೈತಿಕ ಗುರುವೊಬ್ಬರಿದ್ದಾರೆ ಎಂದರೆ ನಂಬಲಾಗದು. ಅವರಿಗೆ ಇದುವರೆಗೂ ಯಾವ ಸ್ಥಾನವೂ ನೀಡದೆ ಎಲ್ಲಿ ಮೂಲೆಗುಂಪಾಗಿ ಬಿಡುವರೋ ಎಂಬ ಆತಂಕವಿದೆ. ಒಂದಂತು ನಿಜ ನೈತಿಕ ಸ್ವಾಭಿಮಾನದ ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ . ಲವ್ ಯು ಎರ್ ಸರ್

ಲೋಕೇಶ್ ಮುನಿಯಪ್ಪ

ಬಹುಶಃ ಭಾರತದ ರಾಜಕೀಯದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ತಾನು ಇಷ್ಟು ಮಾಡುತ್ತೇನೆ(ಸಿದ್ದರಾಯ್ಯ ಅದನ್ನು ಚುನಾವಣಾಆಶ್ವಾಸನೆಯಾಗಿ ಹೇಳಿರಲಿಲ್ಲ)ಎಂದು ಹೇಳಿದನ್ನು ಚ್ಯುತಿ ಇಲ್ಲದೇ ಪಾಲಿಸಿದರು. ಖಂಡಿತವಾಗಿಯೂ ಅದು ಎಲ್ಲರಿಗೂ ಸಾದ್ಯವಿರಲಿಲ್ಲ. ನಮಸ್ಕಾರ ಸಾರ ನೀವು ನಮ್ಮ ಜೊತೆಗಿರುತ್ತೀರಾ..

ಚಿದಂಬರ್ ಜೋಷಿ

ಮಾನ್ಯ ಸಿದ್ದರಾಮಯ್ಯ ಸಾಹೇಬರದು ಉನ್ನತ ವ್ಯಕ್ತಿತ್ವ, ಕಳಂಕ ರಹಿತ ಸಮಾಜ ಸೇವೆ, ಇಷ್ಟೊಂದು ವರ್ಷ ರಾಜಕೀಯದಲ್ಲಿದ್ದರೂ ಅವರ ಅಣ್ಣತಮ್ಮಂದಿರುಗಳಿಗೆ ಯಾವುದೇ ಸಹಾಯ ಮಾಡಿರದ ವ್ಯಕ್ಕಿ— ಸನ್ಮಾನ್ಯ ಮೋದೀಜಿಯವರ ಹಾಗೆ, ಚಾಣಾಕ್ಷ ನಡೆ ಹೊಂದಿದವರು, ಐದು ವರ್ಷ ಮುಖ್ಯಮಂತ್ರಿಯಾಗಿ ಯಾವ ಕಪ್ಪು ಚುಕ್ಕೆ ಇಲ್ಲದೇ ಇರುವದು ಸಾಮಾನ್ಯ ಮಾತಲ್ಲ. ಹಗರಣಗಳಂತೂ ಇಲ್ಲವೇ ಇಲ್ಲ.

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ3 days ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ4 days ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ5 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ6 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ1 week ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ2 weeks ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ2 weeks ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

Trending