ಲೈಫ್ ಸ್ಟೈಲ್
ಭಾರತೀಯರಲ್ಲಿ ‘ಹೃದಯಾಘಾತ’ಗಳಿಗೆ ವಿಶೇಷ ಕಾರಣಗಳು : ಮಿಸ್ ಮಾಡ್ದೆ ಓದಿ
“ಹೃದಯಬೇನೆ ಮತ್ತು ಹೃದಯಾಘಾತಗಳಿಗೆ ಕಾರಣಗಳಾದ ಧೂಮಪಾನ, ಅಧಿಕ ರಕ್ತದೊತ್ತಡ, ಮಧುಮೇಹ ರೋಗ, ಬೊಜ್ಜುದೇಹ, ರಕ್ತದಲ್ಲಿ ಅಧಿಕ ಮಟ್ಟದ ಕೊಲೆಸ್ಟರಾಲ್, ದೈಹಿಕ ವ್ಯಾಯಾಮದ ಕೊರತೆ ಮತ್ತು ತರಾತುರಿ ಜೀವನ ಶೈಲಿಗಳಲ್ಲದೆ ವ್ಯಕ್ತಿಯು ಭಾರತೀಯನಾಗಿರುವುದೇ ಹೃದಯಬೇನೆ ಮತ್ತು ಹೃದಯಾಘಾತಗಳಿಗೆ ಒಂದು ಮುಖ್ಯ ಕಾರಣವಾಗಿರುವುದು” ಎಂಬ ಪ್ರತಿಪಾದನೆಯನ್ನು ಮಂಡಿಸಲಾಗಿದೆ.
ಭಾರತೀಯರ ದೇಹದಲ್ಲಿ ಪರಂಪರೆಯಾಗಿ ಬಂದಿರುವ ‘ಲೋಭಿ ಜೀನ್ಸ್’ಗಳೂ(thrifty genes) ಹೃದಯಾಘಾತಗಳಿಗೆ ಒಂದು ಕಾರಣವೆಂದು ತಿಳಿದು ಬಂತು. ಲೋಭಿ ಜೀನ್ಸ್ ದೇಹದಲ್ಲಿನ ಆಹಾರ ಶೇಖರಣೆಗೆ ಸಂಬಂಧಪಟ್ಟ ಜೀನ್ಸ್.ದೈಹಿಕ ಚಟುವಟಿಕೆಗಳಿಗೆ ಅಗತ್ಯವಾಗಿ ಬೇಕಾಗಿರುವುದಕ್ಕಿಂತಲೂ ಹೆಚ್ಚಿಗೆ ಪ್ರಮಾಣದಲ್ಲಿ ಸೇವಿಸಿದ ಆಹಾರವನ್ನು ದೇಹವು ಕೊಬ್ಬಿನ ರೂಪದಲ್ಲಿ ತನ್ನಲ್ಲಿ ಶೇಖರಿಸಿ ಕೊಳ್ಳುವಂತೆ ಲೋಭಿ ಜೀನ್ಸ್ ಮಾಡುವುವು.
ಭಾರತದಲ್ಲಿ ನಮ್ಮ ಪೂರ್ವಿಕರು ಆಹಾರದ ಕೊರತೆಯಿಂದಲೋ(ಬರಗಾಲ, ಕ್ಷಾಮ), ಸಾಂಪ್ರದಾಯಕ ಅಭ್ಯಾಸದಿಂದಲೋ ಉಪವಾಸಗಳಿಗೆ ಹೊಂದಿಕೊಂಡಿದ್ದರು, ಆಹಾರ ಅಭಾವದಿಂದ ಅವರ ದೇಹವು ಬಳಲದಂತೆ ಪ್ರಕೃತಿಯು ಅವರ ದೇಹದಲ್ಲಿ ಲೋಭಿ ಜೀನ್ಗಳನ್ನು ಸೃಷ್ಟಿ ಮಾಡಿತು. ಇದೊಂದು ಪ್ರಕೃತಿ ಕೊಟ್ಟಿರುವ ಸಂರಕ್ಷಣೆಯ ವ್ಯವಸ್ಥೆ (defence mechanism), ತನ್ನ ಕ್ರಿಯೆಗೆ ಬೇಕಾಗುವುದಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದ ಆಹಾರವನ್ನು ದೇಹವು ಕೊಬ್ಬಿನ ರೂಪಕ್ಕೆ ಪರಿವರ್ತಿಸಿ, ತನ್ನಲ್ಲಿ ಶೇಖರಿಸಿ ಕೊಳ್ಳುವುದು. ಹೀಗೆ ಶೇಖರಿಸಿಟ್ಟುಕೊಂಡ ಕೊಬ್ಬನ್ನು ಬರಗಾಲ ಹಾಗೂ ಉಪವಾಸ ಪರಿಸ್ಥಿತಿಗಳಲ್ಲಿ ತನ್ನ (ದೈಹಿಕ) ಚಟುವಟಿಕೆಗಳ ಶಕ್ತಿಗೆ ಉಪಯೋಗಿಸಿಕೊಳ್ಳುವುದು – ಈ ವ್ಯವಸ್ಥೆಯ ಸಾರಾಂಶ.
ಇದೊಂದು ಭಾರತೀಯರಲ್ಲಿ ತಲತಲಾಂತರದಿಂದ ಬಂದಿರುವ ಪ್ರಕೃತಿಯ ವರದಾನ. ಹಿಂದಿನ ಕಾಲದಲ್ಲಿ ಉಪವಾಸ, ಕ್ಷಾಮ ಪರಿಸ್ಥಿತಿಗಳನ್ನು ಎದುರಿಸುವ ಸಲುವಾಗಿ ದೇಹವು ಸೇವಿಸಿದ ಆಹಾರವನ್ನು ನಾಜೂಕಾಗಿಯೂ, ಜೋಪನವಾಗಿಯೂ ಉಪಯೋಗಿಸಬೇಕಾಗಿತ್ತು. ಇಂದಿನ ದಿನಗಳಲ್ಲಿ ಕ್ಷಾಮ, ಬರಗಾಲಗಳು ಮಾಯವಾಗಿವೆ. ಉಪವಾಸದ ದಿನಗಳು ಇಲ್ಲವಾಗಿವೆ. ಅನೇಕ ಭಾರತೀಯರಲ್ಲಿ ಆಹಾರ ಸೇವನೆಯು (ಪ್ರಮಾಣದಲ್ಲಿ) ಹೆಚ್ಚುತ್ತದೆ.
ದೈಹಿಕ ಶ್ರಮವು ಕುಗ್ಗುತ್ತಿದೆ. ಓಡಾಡಲು ವಾಹನಗಳ ಸೌಕರ್ಯ, ಮನೆಯ ಕೆಲಸಗಳಿಗೂ ಬಗೆ ಬಗೆಯ ಯಂತ್ರಗಳ ವ್ಯವಸ್ಥೆ, ಕೂರುವುದು-ಕುಳಿತು ತಿನ್ನುವುದು ಸಾಮಾನ್ಯವಾಗಿ ಕಂಡುಬರುವ ದೃಶ್ಯಗಳು. ಒಂದೆಡೆ ಅಗತ್ಯಕ್ಕಿಂತಲೂ ಹೆಚ್ಚಿನ ಆಹಾರ ಸೇವನೆ, ಇನ್ನೊಂದು ದೈಹಿಕ ಶ್ರಮವಿಲ್ಲದ ಜೀವನ ಶೈಲಿ, ಆದರೆ ಲೋಭಿ ಜೀನ್ಗಳ (thrifty genes) ಪ್ರಭಾವವು ಮುಂದುವರಿಯುತ್ತಲೇ ಇದೆ ದೇಹದಲ್ಲಿ ಮತ್ತಷ್ಟು ಕೊಬ್ಬಿನ ಶೇಕರಣೆ. ಒಟ್ಟಿನಲ್ಲಿ ಇದರ ತಾತ್ಪರ್ಯ ದೈಹಿಕ ಕ್ರಿಯೆಗಳಿಗೆ ಅಗತ್ಯಕ್ಕಿಂತಲೂ ಹೆಚ್ಚಿನ ಪ್ರಮಾಣದ ಆಹಾರ ಸೇವನೆಯು ಬೊಜ್ಜು ದೇಹ ಮತ್ತು ಮಧುಮೇಹ ರೋಗಿಗಳಿಗೆ ದಾರಿ ಮಾಡಿಕೊಟ್ಟಿರುವುವು, ತನ್ಮೂಲಕ ಹೃದಯಬೇನೆ ಹಾಗೂ ಹೃದಯಾಘಾತಗಳಿಗೆ ನಾಂದಿಯಾಗುವುದು.
ದಕ್ಷಿಣ ಏಷ್ಯಾ ಖಂಡದ ಜನರ ದೇಹದಲ್ಲಿ ಹೋಮೋಸಿಸ್ಟಿನ್ (homocystine) ಎಂಬ ವಸ್ತುವು ಇತರೆ ದೇಶಗಳ ಪ್ರಜೆಗಳಿಗಿಂತ ಹೆಚ್ಚಿರುವುದು. ಹೆಚ್ಚಿನ ಮಟ್ಟದಲ್ಲಿನ ಹೋಮೋಸಿಸ್ಟಿನ್ ಮ್ಯ(hyper homocystinaemia) ರಕ್ತನಾಳಗಳನ್ನು (ಕರೋನರಿ ರಕ್ತನಾಳಗಳಲನ್ನು ಕೂಡಿ) ಗಡಸುಮಾಡುವುದರ ಮೂಲಕ ಹೃದಯಾಘಾತಗಳಿಗೆ ಕಾರಣವಾಗುವುದು.
ಕೆಲವು ಕುಟುಂಬಗಳಲ್ಲಿ ಅನುವಂಶಿಕವಾಗಿಯೇ ದೇಹದಲ್ಲಿ ಹೋಮೋಸಿಸ್ಟಿನ್ ಮಟ್ಟವು ಹೆಚ್ಚಿರಬಹುದು. ಆಹಾರದಲ್ಲಿ ಫೋಲಿಕ್ ಆಸಿಡ್ ( folic acid ) ಅಭಾವದಿಂದಲೂ ದೇಹದಲ್ಲಿ ಹೋಮೋಸಿಸ್ಟಿನ್ ಮಟ್ಟವು ಹೆಚ್ಚುವುದು. ಒಟ್ಟಿನಲ್ಲಿ ಭಾರತೀಯರಲ್ಲಿ ಹಲವಾರು ರಿಸ್ಕ್ ಫ್ಯಾಕ್ಟರುಗಳು ಒಂಟಿ ಒಂಟಿಯಾಗಿಯೂ, ಜೊತೆಯಾಗಿಯೂ ಹೃದಯಾಘಾತಗಳಿಗೆ ಕಾರಣಗಳಾಗುವುವು.
ಭಾರತೀಯರಲ್ಲಿ ಅಧಿಕ ಸಂಖ್ಯೆಯಲ್ಲಿ ಕಂಡುಬರುವ ಹೃದಯಬೇನೆ, ಹೃದಯಾಘಾತಗಳಿಗೆ ಇನ್ನೂ ಕೆಲವು ವಿಶೇಷ ಕಾರಣಗಳನ್ನೂ ಗುರುತಿಸಲಾಗಿದೆ. ಇವು ದೇಹದ ಲೈಪೋಪ್ರೋಟೀನ್-ಎ( lipoprotein-a ) ಮತ್ತು ಹೋಮೋಸಿಸ್ಟಿನ್ ಗಳು ( homocystein) . ಲೈಪೋಪ್ರೋಟೀನ್-ಎ ರಕ್ತನಾಳಗಳ ಗಡುಸಾಗುವಿಕೆಗೆ ಒಂದು ವಿಶೇಷ ಕಾರಣವಾಗಿರುವುದು. ಅನೇಕ ಭಾರತೀಯರ ದೇಹದಲ್ಲಿ ಅನುವಂಶಿಕವಾಗಿ ಲೈಪೋಪ್ರೋಟೀನ್-ಎ ಹೆಚ್ಚಿನ ಮಟ್ಟದಲ್ಲಿ ಕಂಡುಬರುವುದು.
–ಡಾ. ವಿ. ಪರಮೇಶ್ವರ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ7 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ


