ದಿನದ ಸುದ್ದಿ
ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ : ಶಾಸಕ ಬಿ.ದೇವೇಂದ್ರಪ್ಪ

- ವರದಿ : ಮಹಾಲಿಂಗಪ್ಪ ಜೆ ಎಚ್ ಎಮ್ ಹೊಳೆ
ಸುದ್ದಿದಿನ, ಜಗಳೂರು : ನೀರಿನ ಸಂರಕ್ಷಣೆ ಪ್ರತಿಯೊಬ್ಬರ ಹೊಣೆ ಎಂದು ಶಾಸಕ ಬಿ.ದೇವೇಂದ್ರಪ್ಪ ಕರೆ ನೀಡಿದರು.
ಪಟ್ಟಣದ ಹಳೇಬಸ್ ನಿಲ್ದಾಣದ ಬಳಿ ಅಟಲ್ ಭೂಜಲಯೋಜನೆ ಕಲಾ ತಂಡದ ಜನಜಾಗೃತಿ ಜಾಥಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಅಂತರ್ಜಲ ಹೆಚ್ಚಳಕ್ಕೆ ಅಟಲ್ ಭೂಜಲ ಯೋಜನೆ ಸಹಕಾರಿಯಾಗಲಿದೆ.ಮಳೆನೀರನ್ನು ಸಂಗ್ರಹಣೆಮಾಡಿ ಮಿತವಾಗಿ ಬಳಕೆಮಾಡಬೇಕು. ತಾಲೂಕು ಕಳೆದ ವರ್ಷ ಅತಿವೃಷ್ಠಿಗೆ ತುತ್ತಾಗಿ ಹಳ್ಳಕೊಳ್ಳಗಳು ಭರ್ತಿಯಾಗಿ ಬೆಳೆನಾಶವಾಗಿದ್ದವು. ಪ್ರಸಕ್ತಸಾಲಿನಲ್ಲಿ ಸರಿಯಾಗಿ ಮಳೆಬೀಳದೆ ಮುಂಗಾರು ಬೆಳೆಗಳು ಬಾಡುತ್ತಿವೆ.ರೈತರು ಸಂಕಷ್ಟದಲ್ಲಿದ್ದಾರೆ.ಜನಜಾನುವಾರುಗಳು ಕುಡಿಯುವ ನೀರಿಗೂ ಆಹಾಕಾರ ಉಂಟಾಗುವ ಭೀತಿ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಕೃತಿಯಲ್ಲಿ ನೀರು,ಗಾಳಿ,ಬೆಳಕು,ದೇವರು ಕೊಟ್ಟ ಬಿಕ್ಷೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಆಮ್ಲಜನಕಕ್ಕೂ ಪರದಾಡುವಾಗ ಪರಿಸರದ ಮಹತ್ವ ಅರಿವಾಗಿದೆ.ಪ್ರಕೃತಿ ವಿನಾಶ ಜೀವಸಂಕುಲಕ್ಕೆ ಆಪತ್ತು.ಪ್ರಕೃತಿ ಉಳಿವಿಗಾಗಿ ಸಂಕಲ್ಪಮಾಡಬೇಕು ಎಂದರು.
ಕಲಾತಂಡದಿಂದ ನೀರಿನ ಮಿತಬಳಕೆ ಕುರಿತು ಜನ ಜಾಗೃತಿ ಮೂಡಿಸಲಾಗುತ್ತಿದೆ.ಸದುಪಯೋಗಪಡೆದುಕೊಳ್ಳಬೇಕು.ಸರಕಾರದ ಯೋಜನೆಗಳು ಸಮಾಜಕ್ಕೆ ಪೂರಕವಾಗಬೇಕು ಎಂದರು.
ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ,ಡಿಪಿಎಂ ನೋಡೆಲ್ ಅಧಿಕಾರಿ ಆರ್.ಬಸವರಾಜ್,ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್,ಪ.ಪಂ ಸದಸ್ಯರಾದ ರಮೇಶ್ ರೆಡ್ಡಿ,ಶಕೀಲ್ ಅಹಮ್ಮದ್,ಮುಖಂಡರಾದ ಅಹಮ್ಮದ್ ಅಲಿ,ಓಮಣ್ಣ, ಶಂಭುಲಿಂಗಪ್ಪ, ಮಾಳಮ್ಮನಹಳ್ಳಿ ವೆಂಕಟೇಶ,ಸಮಾಜಕಲ್ಯಾಣ ಇಲಾಖೆ ನಿವೃತ್ತ ಅಧಿಕಾರಿ ಬಿ.ಮಹೇಶ್ವರಪ್ಪ,ಕೃಷಿ ಇಲಾಖೆ ಎಡಿ ಮಿಥುನ್ ಕಿಮಾವತ್,ನೀರಾವರಿ ಇಲಾಖೆಯ ಚಂದ್ರಗೌಡ,ಶ್ವೇತಾ ಕೆ.ಎಸ್.,ಅರ್ಪಿತ ಎಸ್ ಆರ್,ಯಶ್ವಂತ್,ಮಂಜುನಾಥ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ11 hours ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ1 day ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ12 hours ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ
-
ದಿನದ ಸುದ್ದಿ42 mins ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ