Connect with us

ಕ್ರೀಡೆ

ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ

Published

on

ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸುತ್ತಿರುವ ಕ್ರೀಡಾಶಾಲೆ ಹಾಗೂ ಕ್ರೀಡಾ ನಿಲಯಗಳಿಗೆ 2019-20ನೇ ಸಾಲಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ವಿವಿಧ ಹಂತಗಳಲ್ಲಿ ಕ್ರೀಡಾಶಾಲೆ/ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.

ದಾವಣಗೆರೆ ಕ್ರೀಡಾ ಶಾಲೆಗೆ ಆಯ್ಕೆಗೊಳ್ಳಲು ಕಿರಿಯರ ವಿಭಾಗದಲ್ಲಿ ಕಬಡ್ಡಿ-ಬಾಲಕರು, ಕುಸ್ತಿ-ಬಾಲಕರು, ಅಥ್ಲೆಟಿಕ್-ಬಾಲಕರು ಪಾಲ್ಗೊಳ್ಳಬಹುದಾಗಿದ್ದು 2020 ರ ಜೂನ್ 01 ಕ್ಕೆ 11 ವರ್ಷ ಮೀರಿರಬಾರದು ಮತ್ತು 5ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು.

ಖೋ-ಖೊ-ಬಾಲಕರು 2020 ರ ಜೂನ್ 01 ಕ್ಕೆ 12 ವರ್ಷ ಮೀರಿರಬಾರದು ಮತ್ತು 6ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು.

ಕಿರಿಯರ ವಿಭಾಗ (ಮೊದಲನೆ ಹಂತ)

ಕ್ರೀಡೆಗಳು: ಜೂಡೋ, ಕುಸ್ತಿ, ಅಥ್ಲೆಟಿಕ್ಸ್, ಹಾಕಿ, ಬ್ಯಾಸ್ಕೆಟ್‍ಬಾಲ್, ಫುಟ್‍ಬಾಲ್, ವಾಲಿಬಾಲ್, ಜಿಮ್ನಾಸ್ಟಿಕ್, ಈಜು(ಬಾಲಕ/ಬಾಲಕಿಯರು), ಕಬಡ್ಡಿ ಮತ್ತು ಖೋ-ಖೋ (ಬಾಲಕರು) ಈ ವಿಭಾಗದಲ್ಲಿ ಪ್ರವೇಶ ಬಯಸುವ ಕ್ರೀಡಾಪಟುಗಳು 2020 ರ ಜೂನ್ 01 ಕ್ಕೆ 14 ವರ್ಷ ಮೀರಿರಬಾರದು ಮತ್ತು 8ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು.

ಹಿರಿಯರ ವಿಭಾಗ : ಜೂಡೋ, ಕುಸ್ತಿ, ಅಥ್ಲೆಟಿಕ್ಸ್, ಹಾಕಿ, ಬ್ಯಾಸ್ಕೆಟ್‍ಬಾಲ್, ಫುಟ್‍ಬಾಲ್,ವಾಲಿಬಾಲ್, ಜಿಮ್ನಾಸ್ಟಿಕ್ (ಬಾಲಕ/ಬಾಲಕಿಯರು), ಕಬಡ್ಡಿ ಮತ್ತು ಖೋ-ಖೋ (ಬಾಲಕರು) ಈ ವಿಭಾಗದಲ್ಲಿ ಪ್ರವೇಶ ಬಯಸುವ ಬಾಲಕ/ಬಾಲಕಿಯರು 2020 ರ ಜೂನ್ 01 ಕ್ಕೆ 19 ವರ್ಷ ಮೀರಿರಬಾರದು ಮತ್ತು ಪ್ರಥಮ ಪಿ.ಯು.ಸಿ ಗೆ ಸೇರಲು ಅರ್ಹತೆ ಹೊಂದಿರಬೇಕು. ಜನ್ಮ ದಿನಾಂಕ ದೃಢೀಕರಣ ಪತ್ರದೊಂದಿಗೆ ಹಾಜರಾಗಬೇಕು.

ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಆಯ್ಕೆ ನಡೆಯುವ ಸ್ಥಳ ಮತ್ತು ದಿನಾಂಕ ವಿವರ

ಡಿ.27 ರಂದು ಜಗಳೂರು ತಾಲ್ಲೂಕಿನ ಬಿಳಿಚೋಡು ಗ್ರಾಮ ಮತ್ತು ಡಿ.28 ರಂದು ತಾಲ್ಲೂಕು ಕ್ರೀಡಾಂಗಣ, ಜಗಳೂರು ಮೊ.ಸಂ: 7019565606. ಡಿ.30 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ನ್ಯಾಮತಿ ಮೊ.ಸಂ: 9448977066, ಡಿ.31 ರಂದು ತಾಲ್ಲೂಕು ಕ್ರೀಡಾಂಗಣ ಹೊನ್ನಾಳಿ ದೂ.ಸಂ: 8762435467. ಡಿ.30 ಸರ್ಕಾರಿ ಪದವಿಪೂರ್ವ ಕಾಲೇಜು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಮೊ.ಸಂ: 9741839790. ಡಿ.31 ರಂದು ತಾಲ್ಲೂಕು ಕ್ರೀಡಾಂಗಣ ಚನ್ನಗಿರಿ ಮೊ.ಸಂ: 9480796263. 2020 ರ ಜನವರಿ 02 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಹರಿಹರ ತಾಲ್ಲೂಕು ಕುಂಬಳೂರು ಗ್ರಾಮ ಮತ್ತು 2020 ರ ಜನವರಿ 03 ರಂದು ತಾಲ್ಲೂಕು ಕ್ರೀಡಾಂಗಣ ಹರಿಹರ ಮೊ.ಸಂ: 94486 67255.

2020 ರ ಜನವರಿ 06 ರಂದು ಶ್ರೀಹ್ಯಾಳ್ಯಾದ ವೀರಪ್ಪ ಶಿವಲಿಂಗಪ್ಪ ಸಂಯುಕ್ತ ಪದವಿಪೂರ್ವ ವಿದ್ಯಾಲಯ ದಾವಣಗೆರೆ ತಾಲ್ಲೂಕು ಅಣಜಿ ಮೊ.ಸಂ: 9448667255. 2020 ರ ಜನವರಿ 08 ರಂದು ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಬಹುದು. ಜಿಲ್ಲಾ ಮಟ್ಟದ ಆಯ್ಕೆಯು 2020 ರ ಜನವರಿ 08 ರಂದು ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480 ಇಲ್ಲಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಕಚೇರಿ ದೂ.ಸಂ: 08192-237480 ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.

ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಬೇಸಿಗೆ ವಾಲಿಬಾಲ್ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಿಟಿ ಸ್ಟಾರ್ ವಾಲಿಬಾಲ್ ಕ್ಲಬ್, ಫ್ರೆಂಡ್ಸ್ ಸ್ಪೋಟ್ಸ್ ಕ್ಲಬ್ ಹಾಗೂ ಗೋಲ್ಡನ್ ಈಗಲ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 25 ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರವನ್ನು ಬೆಳಿಗ್ಗೆ 5 ರಿಂದ 7 ಗಂಟೆಯವರೆಗೆ ಹಾಗೂ ಸಂಜೆ 5 ರಿಂದ 6.30 ರವರೆಗೆ ಆಯೋಜಿಸಲಾಗಿದೆ.

ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೇಸಿಗೆ ವಾಲಿಬಾಲ್ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಎಂ.ಎಸ್. ಜಮಾ ಅಹಮ್ಮದ್-ಮೊ.ನಂ: 9141091590, ದರ್ಶನ್ ಮೊ.ನಂ: 8147842647 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending