ಕ್ರೀಡೆ
ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ಕ್ರೀಡಾಶಾಲೆ-ಕ್ರೀಡಾ ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ
ಸುದ್ದಿದಿನ,ದಾವಣಗೆರೆ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದ ವಿವಿಧ ಸ್ಥಳಗಳಲ್ಲಿ ನಡೆಸುತ್ತಿರುವ ಕ್ರೀಡಾಶಾಲೆ ಹಾಗೂ ಕ್ರೀಡಾ ನಿಲಯಗಳಿಗೆ 2019-20ನೇ ಸಾಲಿನಲ್ಲಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ, ವಿವಿಧ ಹಂತಗಳಲ್ಲಿ ಕ್ರೀಡಾಶಾಲೆ/ನಿಲಯಗಳಿಗೆ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು.
ದಾವಣಗೆರೆ ಕ್ರೀಡಾ ಶಾಲೆಗೆ ಆಯ್ಕೆಗೊಳ್ಳಲು ಕಿರಿಯರ ವಿಭಾಗದಲ್ಲಿ ಕಬಡ್ಡಿ-ಬಾಲಕರು, ಕುಸ್ತಿ-ಬಾಲಕರು, ಅಥ್ಲೆಟಿಕ್-ಬಾಲಕರು ಪಾಲ್ಗೊಳ್ಳಬಹುದಾಗಿದ್ದು 2020 ರ ಜೂನ್ 01 ಕ್ಕೆ 11 ವರ್ಷ ಮೀರಿರಬಾರದು ಮತ್ತು 5ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು.
ಖೋ-ಖೊ-ಬಾಲಕರು 2020 ರ ಜೂನ್ 01 ಕ್ಕೆ 12 ವರ್ಷ ಮೀರಿರಬಾರದು ಮತ್ತು 6ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು.
ಕಿರಿಯರ ವಿಭಾಗ (ಮೊದಲನೆ ಹಂತ)
ಕ್ರೀಡೆಗಳು: ಜೂಡೋ, ಕುಸ್ತಿ, ಅಥ್ಲೆಟಿಕ್ಸ್, ಹಾಕಿ, ಬ್ಯಾಸ್ಕೆಟ್ಬಾಲ್, ಫುಟ್ಬಾಲ್, ವಾಲಿಬಾಲ್, ಜಿಮ್ನಾಸ್ಟಿಕ್, ಈಜು(ಬಾಲಕ/ಬಾಲಕಿಯರು), ಕಬಡ್ಡಿ ಮತ್ತು ಖೋ-ಖೋ (ಬಾಲಕರು) ಈ ವಿಭಾಗದಲ್ಲಿ ಪ್ರವೇಶ ಬಯಸುವ ಕ್ರೀಡಾಪಟುಗಳು 2020 ರ ಜೂನ್ 01 ಕ್ಕೆ 14 ವರ್ಷ ಮೀರಿರಬಾರದು ಮತ್ತು 8ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು.
ಹಿರಿಯರ ವಿಭಾಗ : ಜೂಡೋ, ಕುಸ್ತಿ, ಅಥ್ಲೆಟಿಕ್ಸ್, ಹಾಕಿ, ಬ್ಯಾಸ್ಕೆಟ್ಬಾಲ್, ಫುಟ್ಬಾಲ್,ವಾಲಿಬಾಲ್, ಜಿಮ್ನಾಸ್ಟಿಕ್ (ಬಾಲಕ/ಬಾಲಕಿಯರು), ಕಬಡ್ಡಿ ಮತ್ತು ಖೋ-ಖೋ (ಬಾಲಕರು) ಈ ವಿಭಾಗದಲ್ಲಿ ಪ್ರವೇಶ ಬಯಸುವ ಬಾಲಕ/ಬಾಲಕಿಯರು 2020 ರ ಜೂನ್ 01 ಕ್ಕೆ 19 ವರ್ಷ ಮೀರಿರಬಾರದು ಮತ್ತು ಪ್ರಥಮ ಪಿ.ಯು.ಸಿ ಗೆ ಸೇರಲು ಅರ್ಹತೆ ಹೊಂದಿರಬೇಕು. ಜನ್ಮ ದಿನಾಂಕ ದೃಢೀಕರಣ ಪತ್ರದೊಂದಿಗೆ ಹಾಜರಾಗಬೇಕು.
ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ ಆಯ್ಕೆ ನಡೆಯುವ ಸ್ಥಳ ಮತ್ತು ದಿನಾಂಕ ವಿವರ
ಡಿ.27 ರಂದು ಜಗಳೂರು ತಾಲ್ಲೂಕಿನ ಬಿಳಿಚೋಡು ಗ್ರಾಮ ಮತ್ತು ಡಿ.28 ರಂದು ತಾಲ್ಲೂಕು ಕ್ರೀಡಾಂಗಣ, ಜಗಳೂರು ಮೊ.ಸಂ: 7019565606. ಡಿ.30 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ನ್ಯಾಮತಿ ಮೊ.ಸಂ: 9448977066, ಡಿ.31 ರಂದು ತಾಲ್ಲೂಕು ಕ್ರೀಡಾಂಗಣ ಹೊನ್ನಾಳಿ ದೂ.ಸಂ: 8762435467. ಡಿ.30 ಸರ್ಕಾರಿ ಪದವಿಪೂರ್ವ ಕಾಲೇಜು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಮೊ.ಸಂ: 9741839790. ಡಿ.31 ರಂದು ತಾಲ್ಲೂಕು ಕ್ರೀಡಾಂಗಣ ಚನ್ನಗಿರಿ ಮೊ.ಸಂ: 9480796263. 2020 ರ ಜನವರಿ 02 ರಂದು ಸರ್ಕಾರಿ ಪದವಿಪೂರ್ವ ಕಾಲೇಜು ಹರಿಹರ ತಾಲ್ಲೂಕು ಕುಂಬಳೂರು ಗ್ರಾಮ ಮತ್ತು 2020 ರ ಜನವರಿ 03 ರಂದು ತಾಲ್ಲೂಕು ಕ್ರೀಡಾಂಗಣ ಹರಿಹರ ಮೊ.ಸಂ: 94486 67255.
2020 ರ ಜನವರಿ 06 ರಂದು ಶ್ರೀಹ್ಯಾಳ್ಯಾದ ವೀರಪ್ಪ ಶಿವಲಿಂಗಪ್ಪ ಸಂಯುಕ್ತ ಪದವಿಪೂರ್ವ ವಿದ್ಯಾಲಯ ದಾವಣಗೆರೆ ತಾಲ್ಲೂಕು ಅಣಜಿ ಮೊ.ಸಂ: 9448667255. 2020 ರ ಜನವರಿ 08 ರಂದು ಜಿಲ್ಲಾ ಕ್ರೀಡಾಂಗಣ ದಾವಣಗೆರೆ ದೂ.ಸಂ: 08192-237480 ನ್ನು ಸಂಪರ್ಕಿಸಬಹುದು. ಜಿಲ್ಲಾ ಮಟ್ಟದ ಆಯ್ಕೆಯು 2020 ರ ಜನವರಿ 08 ರಂದು ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480 ಇಲ್ಲಿ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಸಂಬಂಧಪಟ್ಟ ತಾಲ್ಲೂಕಿನ ಅಧಿಕಾರಿಗಳ ಮೊಬೈಲ್ ಸಂಖ್ಯೆಯನ್ನು ಅಥವಾ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಾವಣಗೆರೆ ಕಚೇರಿ ದೂ.ಸಂ: 08192-237480 ಇವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ; ರಾಜ್ಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:2024 -25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಮಹಿಳಾ ಸೇವಾ ಸಮಾಜದ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಪಿಯು ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ಣಿಮ ಎಂ ರವರು ಜಿಲ್ಲಾಮಟ್ಟದ ಜೂಡೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ರಾಜನಹಳ್ಳಿ ಸೀತಮ್ಮ ಬಾಲಕಿಯರ ಪದವಿ ಪೂರ್ವ ಕಾಲೇಜು ದಾವಣಗೆರೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿತ್ತು.
ದೈಹಿಕ ಶಿಕ್ಷಕರಾದ ಎಂ ಎನ್ ಮರಳ ಸಿದ್ದಪ್ಪರವರ ಮಾರ್ಗದರ್ಶನದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.
ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.
ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.
ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್ನಲ್ಲಿ ನೆದರ್ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.
ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
https://x.com/siddaramaiah/status/1817536595970650154?t=otcDD00kQUBeN84H7DvrEA&s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ6 days ago
ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಚಿತ್ರದುರ್ಗ ಜಿಲ್ಲೆಯಲ್ಲಿ 6ಮತಗಟ್ಟೆಗಳ ಸ್ಥಳಾಂತರ ಹಾಗೂ ಮತಗಟ್ಟೆಗಳ ಹೆಸರು ಪರಿಷ್ಕರಣೆ
-
ದಿನದ ಸುದ್ದಿ5 days ago
ಮೈಸೂರಿನಲ್ಲಿ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ
-
ದಿನದ ಸುದ್ದಿ5 days ago
ಸಾಲ ಸೌಲಭ್ಯ ಯೋಜನೆ ; ಅ.23 ರಂದು ಆಯ್ಕೆ ಸಮಿತಿ ಸಭೆ
-
ದಿನದ ಸುದ್ದಿ5 days ago
ಪೊಕ್ಸೋ ಕಾಯ್ದೆಯ ಬೆಂಬಲ ವ್ಯಕ್ತಿಗಳಿಗಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಎಸ್ ಬಿ ಐ ಬ್ಯಾಂಕ್ ನಿರ್ಲಕ್ಷ್ಯ; ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ ನೀಡಲು ನ್ಯಾಯಾಲಯ ಆದೇಶ
-
ದಿನದ ಸುದ್ದಿ5 days ago
ವಾಮಾಚಾರಕ್ಕೆ ಬೆಚ್ಚಿಬಿದ್ದ ಕಾಫಿನಾಡು..!