ಸಿನಿ ಸುದ್ದಿ
ಟಾಕೀಸ್ ಸಿನಿವಾರದಲ್ಲಿ– ‘ಸ್ಪಾಟ್ ಲೈಟ್’ ಚಿತ್ರ ಪ್ರದರ್ಶನ ಮತ್ತು ಸಂವಾದ

ಸುದ್ದಿದಿನ,ಶಿವಮೊಗ್ಗ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಟಾಕೀಸ್ ಸಿನಿವಾರ- ವಾರಾಂತ್ಯ ಸಿನಿ ಸಂಭ್ರಮದಲ್ಲಿ ವಿಶ್ವ ಪತ್ರಿಕೋದ್ಯಮ ದಿನದ ಅಂಗವಾಗಿ2015ರಲ್ಲಿ ತೆರೆಕಂಡ ತನಿಕಾ ಪತ್ರಿಕೋದ್ಯಮಕ್ಕೆ ಸಂಬಂಧಿಸಿದ ಸ್ಪಾಟ್ ಲೈಟ್ ಇಂಗ್ಲೀಷ್ ಚಿತ್ರ ಪ್ರದರ್ಶನ ಮತ್ತು ಸಂವಾದ ಕಾರ್ಯಕ್ರಮ ಶಿವಮೊಗ್ಗ ನಗರದ ನೆಹರೂ ಸ್ಟೇಡಿಯಂ ಬಳಿಯಿರುವ ವಾರ್ತಾ ಭವನದ ಎರಡನೇ ಮಹಡಿಯ ಮಿನಿಚಿತ್ರಮಂದಿರಲ್ಲಿ ದಿನಾಂಕ 06-07-2019ರ ಸಂಜೆ 5.30ಕ್ಕೆ ಆಯೋಜಿಸಲಾಗಿದೆ.
ಸ್ಪಾಟ್ ಲೈಟ್ ಚಿತ್ರ ಆರಂಭವಾಗುವುದು 1976ರ ಒಂದು ಘಟನೆಯಿಂದ. ಅಮೇರಿಕಾದ ಬೋಸ್ಟನ್ನ ಒಂದು ಪೋಲಿಸ್ ಠಾಣೆಯಲ್ಲಿ ಒಂದೆಡೆ ನಾಲ್ಕು ಮಕ್ಕಳು ಮತ್ತು ಅವರ ತಾಯಿ ಕುಳಿತಿದ್ದರೆ ಇನ್ನೊಂದು ಕೋಣೆಯಲ್ಲಿ ಅ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಕಿದ ಒಬ್ಬ ಪಾದ್ರಿ ಕುಳಿತಿರುತ್ತಾನೆ. ಪೋಲಿಸ್ ಅಧಿಕಾರಿಗಳು ಮತ್ತು ಡಿಸ್ಟ್ರಿಕ್ಟ್ ಅಟಾರ್ನಿ ಸೇರಿ ಪಾದ್ರಿಯನ್ನು ಬಿಡುಗಡೆಗೊಳಿಸಿ ಆ ಘಟನೆಯನ್ನು ಅಲ್ಲಿಯೇ ಮುಚ್ಚಿಹಾಕಲಾಗುತ್ತದೆ.2001ರಲ್ಲಿ ಬೋಸ್ಟನ್ ಗ್ಲೋಬ್ ಪತ್ರಿಕೆಗೆ ಹೊಸ ಸಂಪಾದಕ ನೇಮಕಗೊಳ್ಳುತ್ತಾನೆ. ಆ ಪತ್ರಿಕೆಯ ತನಿಕಾ ಪತ್ರಿಕೋದ್ಯಮದಲ್ಲಿ ನಿರತವಾಗಿರುವ ತಂಡವಿದೆ. ಅದುವೇ ಸ್ಪಾಟ್ಲೈಟ್ ತಂಡ. 1976ರ ಘಟನೆ ಸರಿಯಾದ ಫಾಲೋಅಪ್ ಆಗಿಲ್ಲವಾದುದ್ದರಿಂದ ಆ ವಿಷಯನ್ನು ಕೈಗೆತ್ತಿಕೊಳ್ಳುವಂತೆ ಹೊಸ ಸಂಪಾದಕ ಸ್ಪಾಟ್ಲೈಟ್ ತಂಡಕ್ಕೆ ಸೂಚಿಸುತ್ತಾನೆ.
ಮುಂದಿನ ಘಟನಾವಳಿಯನ್ನು ಚಿತ್ರ ಪ್ರೇಕ್ಷಕನ ಮುಂದೆ ಅತ್ಯುತ್ತಮವಾಗಿ ನಿರ್ದೇಶಕ ಟಾಮ್ಮ್ಯಾಕ್ಕಾರ್ಟಿ ತೆರೆದಿಟ್ಟಿದ್ದಾರೆ. ಚಿತ್ರವು 2015ರ ಅತ್ಯುತ್ತಮ ಚಿತ್ರ ಜೊತೆಗೆ 150ಕ್ಕೂ ಹೆಚ್ಚು ಪ್ರಶಸ್ತಿ ಮತ್ತು ನಾಮಿನೇಶನ್ ಗಳನ್ನು ಪಡೆದ ಚಿತ್ರವೆಂಬ ಹೆಗ್ಗಳಿಕೆ ಪಡೆದು ಹಲವಾರು ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಚಿತ್ರದ ಒಟ್ಟು ಅವಧಿ 129 ನಿಮಿಷಗಳು. ಚಿತ್ರಕ್ಕೆ ಇಂಗ್ಲೀಷ್ ಸಬ್ಟೈಟಲ್ ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರದ ಟಿಕೆಟ್ ಮೇಲೆ ಶೆ.20ರಷ್ಟು ಕಡಿತ

ಸುದ್ದಿದಿನ ಡೆಸ್ಕ್ : ರಕ್ಷಿತ್ ಶೆಟ್ಟಿ ಮತ್ತು ರುಕ್ಷಿಣಿ ವಸಂತ್ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ – ಸೈಡ್ ಬಿ’ ಚಿತ್ರವು ಕಳೆದ ಶುಕ್ರವಾರ ಬಿಡುಗಡೆಯಾಗಿ, ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ.
ಈ ಮಧ್ಯೆ, ಇನ್ನಷ್ಟು ಹೆಚ್ಚು ಜನರನ್ನು ಚಿತ್ರಮಂದಿರಗಳಿಗೆ ಕರೆತರುವ ನಿಟ್ಟಿನಲ್ಲಿ ಚಿತ್ರತಂಡ ಇಂದಿನಿಂದ ಪ್ರತಿ ಟಿಕೆಟ್ ಶೇ. 20ರಷ್ಟು ರಿಯಾಯ್ತಿಯನ್ನು ಚಿತ್ರತಂಡ ಘೋಷಿಸಿದೆ. ಈ ಚಿತ್ರವನ್ನು ಹೇಮಂತ್ ರಾವ್ ನಿರ್ದೇಶಿಸಿದ್ದು, ಗೋಪಾಲಕೃಷ್ಣ ದೇಶಪಾಂಡೆ, ಚೈತ್ರಾ ಆಚಾರ್, ಅಚ್ಯುತ್ ಕುಮಾರ್, ರಮೇಶ್ ಅರವಿಂದ್ ಮುಂತಾದವರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಬ್ಯಾಡ್ ಮ್ಯಾನರ್ಸ್’ ಸಿನಿಮಾ ನೋಡಿದ ಮೊದಲ ಪ್ರೇಕ್ಷಕ ದರ್ಶನ್

ಸುದ್ದಿದಿನ ಡೆಸ್ಕ್ : ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ಅಭಿನಯಿಸಿರುವ ‘ಬ್ಯಾಡ್ ಮ್ಯಾನರ್ಸ್’ ಚಿತ್ರವು ಇದೇ ನ.24ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಈ ಮಧ್ಯೆ, ಇತ್ತೀಚೆಗೆ ಚಿತ್ರತಂಡ ಆಯೋಜಿಸಿದ್ದ ವಿಶೇಷ ಪ್ರದರ್ಶನದಲ್ಲಿ ದರ್ಶನ್ ಮತ್ತು ಸುಮಲತಾ ಅಂಬರೀಷ್ ಅವರು ಚಿತ್ರವನ್ನು ನೋಡಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡಿರುವ ದರ್ಶನ್, ಅಭಿ ಬೆನ್ನಿಗೆ ‘ನಿಮ್ಮಪ್ರೀತಿಯ ದಾಸ’ ಎಂದು ಬರೆದು 5ಕ್ಕೆ 5 ಸ್ಟಾರ್ ಗಳನ್ನ ಕೊಟ್ಟಿದ್ದಾರೆ.
“ಈ ಸಿನಿಮಾದಲ್ಲಿ ನೀವು ರಿಯಲ್ ರೆಬೆಲ್ ಸ್ಟಾರ್ನ ನೋಡ್ತೀರಿ. ಹೆಮ್ಮೆಯಾಗ್ತಿದೆ ಎರಡನೇ ಸಿನಿಮಾದಲ್ಲಿ ಈ ಲೆವ್ವೆಲ್ಲಿಗೆ ಅಭಿ ಮಾಗಿರೋದು. ಸಿನಿಮಾ ಬೇರೆ ಲೆವ್ವಲ್ ಇದೆ. ದೊಡ್ಡ ಯಶಸ್ಸು ಇದಕ್ಕೆ ಖಂಡಿತ ಧಕ್ಕಲಿದೆ’ ಎಂದು ಬರೆಯುವ ಮೂಲಕ ದರ್ಶನ್ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10,000 ಅಡಿ ಉದ್ದದ ‘ಘೋಸ್ಟ್’ ಪೋಸ್ಟರ್ ಬಿಡುಗಡೆ

ಸುದ್ದಿದಿನ ಡೆಸ್ಕ್ : ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರವು ಈಗಾಗಲೇ ನವೆಂಬರ್ 17ರಂದು ಜೀ5ನಲ್ಲಿ ಬಿಡುಗಡೆಯಾಗಿದೆ.
ಈ ಚಿತ್ರದ ಪ್ರಮೋಷನ್ಗೆ ಬರೋಬ್ಬರಿ 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರನ್ನು ಜೀ5 ಬಿಡುಗಡೆ ಮಾಡಿದೆ. ಜಯನಗರದ ಎಂ.ಇ.ಎಸ್ ಗ್ರೌಂಡ್ ನಲ್ಲಿ ‘ಘೋಸ್ಟ್’ ಸಿನಿಮಾದ 10,000 ಅಡಿ ಪೋಸ್ಟರ್ ಅನಾವರಣ ಮಾಡಲಾಗಿದೆ. ಥಿಯೇಟರ್ಗಳಲ್ಲಿ ಬಿಡುಗಡೆಯಾಗುತ್ತಿರುವ ಸಿನಿಮಾಗೆ ಬ್ಯಾನರ್, ಪೋಸ್ಟರ್ ಹಾಕೋದು ಸಹಜ. ಆದರೆ, ಈ ಬಾರಿ ಒಟಿಟಿ ರಿಲೀಸ್ಗೆ ಪೋಸ್ಟರ್ ಹಾಕಿ ವಿಭಿನ್ನವಾಗಿ ಪ್ರಚಾರ ಮಾಡಿದೆ ಜೀ ಕನ್ನಡ.
ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ನಿರ್ಮಾಣವಾಗಿರುವ ‘ಘೋಸ್ಟ್’ ಚಿತ್ರವನ್ನು ಆರ್.ಜೆ. ಶ್ರೀನಿ ಬರೆದು, ನಿರ್ದೇಶಿಸಿದ್ದು, ಅರ್ಜುನ್ ಜನ್ಯಾ ಸಂಗೀತವಿದೆ. ಶಿವರಾಜಕುಮಾರ್ ಜೊತೆ ಮಲಯಾಳಂ ನಟ ಜಯರಾಮ್, ಹಿಂದಿ ನಟ ಅನುಪಮ್ ಖೇರ್, ಅರ್ಚನಾ ಜೋಯಿಸ್, ಸತ್ಯಪ್ರಕಾಶ್, ನಿರ್ದೇಶಕ ಎಂಜಿ ಶ್ರೀನಿವಾಸ್ ಹಾಗೂ ಇನ್ನಿತರರು ನಟಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ6 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ2 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ1 day ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ