Connect with us

ದಿನದ ಸುದ್ದಿ

ದಾವಣಗೆರೆ | ಸತತ 11 ಗಂಟೆಗಳ ಶಸ್ತ್ರಚಿಕಿತ್ಸೆ ; ಯುವಕನ ಬಾಳಿಗೆ ಬೆಳಕಾದ ಎಸ್‌ಎಸ್‌ ನಾರಾಯಣ ಆಸ್ಪತ್ರೆ ವೈದ್ಯರು

Published

on

ಫೋಟೋ | ಡಾ. ಹನುಮಂತ ನಾಯ್ಕ ಹಾಗೂ ಅವರ ತಂಡ ಗುಣಮುಖವಾದ ರೋಗಿಯೊಂದಿಗೆ

ಸುದ್ದಿದಿನ,ದಾವಣಗೆರೆ: ನಾಲ್ಕು ವರ್ಷಗಳ ಕಾಲ ಪದೇ ಪದೇ ತೀವ್ರವಾದ ಹೊಟ್ಟೆನೋವು, ಜ್ವರ, ಬಳಲಿಕೆಯಿಂದ ನರಳಿದ 26 ವರ್ಷದ ಯುವಕನಿಗೆ ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನ ವೈದ್ಯರು ಅಕ್ಷರಶಃ ಜೀವದಾನ ಮಾಡಿದ್ದಾರೆ!

ಅಪರೂಪವಾದ, ಅತ್ಯಂತ ಸಂಕೀರ್ಣವಾದ ಲೀವರ್‌ (ಯಕೃತ್ತ)ನ ರಕ್ತದ ಹರಿವಿನ ಸಮಸ್ಯೆಯಾದ ಎಕ್ಸ್‌ಟ್ರಾಹೆಪಾಟಿಕ್ ಪೋರ್ಟಲ್ ವೀನಸ್ ಅಬ್ಸ್ಟ್ರಕ್ಷನ್ (EHPVO) ನಿಂದ ಬಳಲುತ್ತಿದ್ದ ಈ ರೋಗಿಯ ಪ್ರಾಣ ಉಳಿಸಲು, ವೈದ್ಯರು ಬರೋಬ್ಬರಿ 11 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಈ ಯುವಕನಿಗೆ ಹೊಟ್ಟೆ ನೋವು, ಪದೇ ಪದೇ ಬರುವ ಜ್ವರ, ದೇಹದ ನಿಶ್ಶಕ್ತಿ, ಮತ್ತು ಏನನ್ನೂ ತಿನ್ನಲು ಆಗದಿರುವ ಸಮಸ್ಯೆಗಳು ದಿನನಿತ್ಯದ ಸಂಗತಿಯಾಗಿದ್ದವು. ತನ್ನ ರೋಗಕ್ಕೆ ಚಿಕಿತ್ಸೆ ಹುಡುಕಿಕೊಂಡು ಅದೆಷ್ಟೋ ಆಸ್ಪತ್ರೆಗಳಿಗೆ ಅಲೆದರೂ ಪ್ರಯೋಜನವಾಗಿರಲಿಲ್ಲ. ಇತ್ತೀಚೆಗೆ, ಅವನಿಗೆ ಜಾಂಡೀಸ್ ಕಾಣಿಸಿಕೊಂಡು, ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗಿ, ಮೈ ನಡುಗುವಿಕೆ ಶುರುವಾಗಿತ್ತು. ಬದುಕಿನ ಆಸೆಯೇ ದೂರವಾಗಿ, ನಿರಂತರ ಆಸ್ಪತ್ರೆ ಭೇಟಿಗಳಿಂದ ಹತಾಶನಾಗಿದ್ದ ಆ ಯುವಕ, ಕೊನೆಗೆ ಎಸ್‌ಎಸ್ ನಾರಾಯಣ ಹೆಲ್ತ್ ಸೂಪರ್ ಸ್ಪೆಷಾಲಿಟಿ ಸೆಂಟರ್‌ನಲ್ಲಿ ತನ್ನ ಭರವಸೆಯನ್ನು ಕಂಡುಕೊಂಡ.

ಅವರು ಎಸ್‌ಎಸ್ ನಾರಾಯಣ ಹೆಲ್ತ್‌ ಸೂಪರ್ ಸ್ಪೆಷಾಲಿಟಿ ಸೆಂಟರ್‌ಗೆ ಭೇಟಿ ನೀಡಿದಾಗ, ಸರ್ಜಿಕಲ್‌ ಗ್ಯಾಸ್ಟ್ರೋಎಂಟರೋಲಾಜಿಸ್ಟ್‌ ಡಾ. ಆರ್.ಕೆ. ಹನುಮಂತ್ ನಾಯ್ಕ್‌ ನೇತೃತ್ವದ ವೈದ್ಯರ ತಂಡವು ರೋಗಿಯ ಪೋರ್ಟಲ್ ವೇನ್ (ಕರುಳಿನಿಂದ ಯಕೃತ್ತಿಗೆ ರಕ್ತವನ್ನು ಕೊಂಡೊಯ್ಯುವ ಮುಖ್ಯ ರಕ್ತನಾಳ) ಹಳೆಯ ರಕ್ತ ಹೆಪ್ಪುಗಟ್ಟುವಿಕೆಯಿಂದ ರಕ್ತ ಸಂಚಾರ ನಿರ್ಬಂಧವಾಗಿರುವದನ್ನು ಪತ್ತೆಹಚ್ಚಿತು. ಇದರಿಂದಾಗಿ, ರಕ್ತದ ಹರಿವನ್ನು ಮುಂದುವರೆಸಲು ದೇಹವು ಸಣ್ಣ ಬೈಪಾಸ್ ರಕ್ತನಾಳಗಳನ್ನು (ಕಾವರ್ನಸ್ ಟ್ರಾನ್ಸ್‌ಫಾರ್ಮೇಶನ್ ಎಂದು ಕರೆಯಲ್ಪಡುವ ಸ್ಥಿತಿ) ಸೃಷ್ಟಿಸಿತ್ತು. ಆದಾಗ್ಯೂ, ಇದು ಗುಲ್ಮ(Spleen)ದ ಊತ (ಸ್ಪ್ಲೆನೋಮೆಗಾಲಿ), ಪಿತ್ತನಾಳಗಳ ಹಿಗ್ಗುವಿಕೆ ಮತ್ತು ಯಕೃತ್ತಿನ ರಕ್ತನಾಳಗಳಲ್ಲಿ ಅಧಿಕ ಒತ್ತಡಕ್ಕೆ (ಪೋರ್ಟಲ್ ಹೈಪರ್ಟೆನ್ಷನ್) ಕಾರಣವಾಗಿತ್ತು. ಇದು ಹೊಟ್ಟೆ ಮತ್ತು ಪಿತ್ತ ವ್ಯವಸ್ಥೆಯ ಮೇಲೆ ಪರಿಣಾಮ ಬೀರಿ, ರಕ್ತಸ್ರಾವದ ಅಪಾಯಗಳು ಮತ್ತು ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಕಾರಣವಾಗಿತ್ತು.

ಇದಕ್ಕೆ ಚಿಕಿತ್ಸೆ ನೀಡಲು, ವೈದ್ಯಕೀಯ ತಂಡವು “ಪ್ರಾಕ್ಸಿಮಲ್ ಸ್ಪ್ಲೆನೋರೆನಲ್ ಶಂಟ್” ಎಂಬ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ನಡೆಸಿತು. ಸರಳವಾಗಿ ಹೇಳುವುದಾದರೆ, ಶಸ್ತ್ರಚಿಕಿತ್ಸಕರು ಸ್ಪ್ಲೆನಿಕ್ ವೇನ್ (ಗುಲ್ಮದಿಂದ) ಅನ್ನು ಎಡ ಮೂತ್ರಪಿಂಡದಿಂದ ಸಂಪರ್ಕಿಸಿ, ನಿರ್ಬಂಧಿತ ಪೋರ್ಟಲ್ ವೇನ್ ಅನ್ನು ಬೈಪಾಸ್ ಮಾಡಲು ರಕ್ತಕ್ಕೆ ಹೊಸ ಮಾರ್ಗವನ್ನು ಸೃಷ್ಟಿಸಿದರು. ಇದು ಯಕೃತ್ತಿನ ರಕ್ತನಾಳಗಳಲ್ಲಿನ ಒತ್ತಡವನ್ನು ಕಡಿಮೆ ಮಾಡಿ ಮತ್ತು ಮುಂದಿನ ತೊಡಕುಗಳನ್ನು ನಿವಾರಿಸುತ್ತದೆ.

ರೋಗಿಯ ಬಗ್ಗೆ ಮಾತನಾಡಿದ ಡಾ. ನಾಯ್ಕ, ರೋಗಿಯನ್ನು ದಾಖಲಿಸಿದಾಗ ಅವರ ಹಿಮೋಗ್ಲೋಬಿನ್ ಮಟ್ಟ, ಡಬ್ಲ್ಯೂಬಿಸಿ, ಪ್ಲೇಟ್‌ಲೆಟ್ ಸಂಖ್ಯೆಗಳು ತುಂಬಾ ಕಡಿಮೆ ಇದ್ದವು ಇದರಿಂದಾಗಿ ಅವರಿಗೆ ಆಗಾಗ್ಗೆ ಸೋಂಕು ತಗುಲುತ್ತಿತ್ತು, ಅವರ ರಕ್ತನಾಳಗಳು, ಪಿತ್ತನಾಳಗಳು ಹಿಗ್ಗಿದ್ದವು. ಶಸ್ತ್ರಚಿಕಿತ್ಸೆ ಮಾಡದಿದ್ದರೆ ರಕ್ತನಾಳಗಳು ಛಿದ್ರಗೊಂಡು ಮಾರಣಾಂತಿಕವಾಗುವ ಸಾಧ್ಯತೆ ಇತ್ತು ಎಂದರು.

ಶಸ್ತ್ರಚಿಕಿತ್ಸೆಯ ನಂತರ, ರೋಗಿಯು ಚೇತರಿಸಿಕೊಳ್ಳುತ್ತಿದ್ದು, ಶೀಘ್ರದಲ್ಲೇ ಶಕ್ತಿ ಮತ್ತು ಸಾಮಾನ್ಯ ಹಸಿವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ರೋಗಿಯು ಆಸ್ಪತ್ರೆಯಿಂದ ಗುಣಮುಖರಾಗಿ ಇತ್ತೀಚೆಗೆ ಮನೆಗೆ ಹಿಂತಿರುಗಿದ್ದಾರೆ ಎಂದರು..

ಡಾ. ನಾಯ್ಕ್ ಅವರು, ಆರಂಭಿಕ ರೋಗನಿರ್ಣಯ ಮತ್ತು ವಿಶೇಷ ಚಿಕಿತ್ಸೆಯು ರೋಗಿಯ ಜೀವವನ್ನು ಉಳಿಸಿದೆ ಮತ್ತು ಅವರ ಜೀವನದ ಗುಣಮಟ್ಟವನ್ನು ಗಮನಾರ್ಹವಾಗಿ ಸುಧಾರಿಸಿದೆ ಎಂದು ಹೇಳಿದರು.

ಈ ಪ್ರಕರಣವು ದೀರ್ಘಕಾಲದ ಜೀರ್ಣಕ್ರಿಯೆಯ ಸಮಸ್ಯೆಗಳಿಗೆ ಗಮನ ಕೊಡುವುದು ಮತ್ತು ತಜ್ಞ ವೈದ್ಯರ ಸಹಾಯ ಪಡೆಯುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ. ಶಸ್ತ್ರಚಿಕಿತ್ಸಾ ತಂತ್ರಗಳು ಮತ್ತು ಇಮೇಜಿಂಗ್‌ನಲ್ಲಿನ ಪ್ರಗತಿಯೊಂದಿಗೆ, EHPVO ನಂತಹ ಅಪರೂಪದ ಯಕೃತ್ತಿನ ಅಸ್ವಸ್ಥತೆಗಳಿಗೂ ಈಗ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎಂದು ಅವರು ಹೇಳಿದರು.

ಎಸ್‌ ಎಸ್‌ ನಾರಾಯಣ ಹೆಲ್ತ್‌ ಸೂಪರ್‌ ಸ್ಪೇಷಾಲಿಟಿ ಸೆಂಟರ್ ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಸುನೀಲ್‌ ಭಂಡಾರಿಗಲ್‌ ಅವರು ಅತಿ ಕ್ಲೀಷ್ಟಕರವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ ವೈದ್ಯಕೀಯ ತಂಡವನ್ನು ಅಭಿನಂದಿಸಿದ್ದು. ಇದು ನಾರಾಯಣ ಹೆಲ್ತ್‌ನಲ್ಲಿ ಅತಿ ಕ್ಲೀಷ್ಟಕರವಾದ ಆರೋಗ್ಯ ಸಮಸ್ಯೆಗಳಿಗೆ ಆಧುನಿಕ ಚಿಕಿತ್ಸೆ ಲಭ್ಯವಿದೆ ಎಂಬುದನ್ನು ಸಾರುತ್ತದೆ ಎಂದರು.

ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದ ವೈದ್ಯರ ತಂಡದಲ್ಲಿ ಅರಿವಳಿಕೆ ತಜ್ಞರಾದ ಡಾ. ಸಾಗರ್ ಎಸ್‌ ಎಂ ಮತ್ತು ಡಾ. ಜಯಶ್ರೀ ಪಾಟೀಲ, ಇಂಟೆನ್ಸಿವಿಸ್ಟ್ ಡಾ. ವಿಶ್ವಾಸ್ ಜಿಕೆ ಮತ್ತು ಡಾ. ಕಿರಣ್ ಬಿಆರ್‌ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending