ದಿನದ ಸುದ್ದಿ
ಚನ್ನಗಿರಿ | ವಿದ್ಯಾರ್ಥಿನಿಯ ಉತ್ತರ ಪತ್ರಿಕೆಯೇ ಬದಲು: ಪರೀಕ್ಷಾ ಮಂಡಳಿಯ ಎಡವಟ್ಟು ಬಯಲು
ಸುದ್ದಿದಿನ, ದಾವಣಗೆರೆ: ಅಕ್ಷತ ದಾವಣಗೆರೆ ಜಿಲ್ಲೆಯ, ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದಳು. ಪ್ರತಿಭಾನ್ವಿತ ವಿದ್ಯಾರ್ಥಿನಿಯಾದ ಆಕೆ ಈ ಬಾರಿ ಫಸ್ಟ್ ಕ್ಲಾಸ್ ನಲ್ಲಿ ಪಾಸ್ ಆಗುತ್ತಾಳೆ ಎಂದು ಪೋಷಕರು ಭರವಸೆ ಇಟ್ಟುಕೊಂಡಿದ್ದರು. ಆದರೆ, ರಿಸಲ್ಟ್ ಬಂದಾಗ ಆಕೆ ಫೇಲ್ ಆಗಿದ್ದಳು.
ಪರೀಕ್ಷಾ ಮಂಡಳಿಯ ಎಡವಟ್ಟಿನಿಂದ ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಅನ್ಯಾಯವಾಗಿದ್ದು, ಪರೀಕ್ಷೆಯಲ್ಲಿ ಫೇಲ್ ಆಗಿದ್ದಾಳೆ. ಇದರಿಂದ ಆತಂಕಗೊಂಡ ಪೋಷಕರು ಪರೀಕ್ಷಾ ಮಂಡಳಿಯಿಂದ ನಕಲು ಉತ್ತರ ಪತ್ರಿಕೆಯನ್ನು ಪಡೆದಾಗ ಮಂಡಳಿಯ ಎಡವಟ್ಟು ಬಹಿರಂಗವಾಗಿದೆ.
ಹನುಂಮತರಾಜ್ ಕೆ ಇವರು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದವರು. ಇವರ ಮಗಳು ಅಕ್ಷತ, ಬೆಳಲಗೆರೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ ಎಸ್ ಎಲ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದು, ಕಾರಿಗನೂರು- ಕತ್ತಲಗೆರೆ ಸರ್ಕಾರಿ ಪ್ರೌಢಶಾಲೆ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಬರೆದಿದ್ದಳು. ಓದಿನಲ್ಲಿ ಮುಂದಿದ್ದ ವಿದ್ಯಾರ್ಥಿನಿ ಅಕ್ಷತ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸ್ ಆಗುತ್ತಾಳೆ ಎಂದು ಪೋಷಕರು ಭರವಸೆ ಇಟ್ಟುಕೊಂಡಿದ್ದರು. ಆದರೆ, ರಿಸಲ್ಟ್ ಬಂದಾಗ ಈಕೆ ಫೇಲ್ ಆಗಿದ್ದಳು. ಕನ್ನಡ – 120, ಆಂಗ್ಲ ಭಾಷೆಯಲ್ಲಿ-55, ವಿಜ್ಞಾನ-50, ಗಣಿತ-62 ಹಿಂದಿ-91, ಹಾಗೂ ಸಮಾಜ ವಿಜ್ಞಾನದಲ್ಲಿ ಕೇವಲ 34 ಅಂಕ ಬಂದಿತ್ತು.
ಇದರಿಂದ ಕಂಗಾಲಾದ ವಿದ್ಯಾರ್ಥಿನಿಯ ಪೋಷಕರು ಪರೀಕ್ಷಾ ಮಂಡಳಿಯಿಂದ ಉತ್ತರ ಪತ್ರಿಕೆ ನಕಲು ಪಡೆದಾಗ ಪರೀಕ್ಷಾ ಮಂಡಳಿಯ ಎಡವಟ್ಟು ಬೆಳಕಿಗೆ ಬಂದಿದೆ. ವಿದ್ಯಾರ್ಥಿನಿಯ ಸಮಾಜ ವಿಜ್ಞಾನದ ಉತ್ತರ ಪತ್ರಿಕೆಯಲ್ಲಿ ಕೈ ಬರಹ ಬದಲಾಗಿದ್ದು, ಅಕ್ಷತ 13 ಪುಟ ಬರೆದಿದ್ದೆ ಹಾಗೂ ಇಲ್ಲಿ ಕೇವಲ 05 ಪುಟವಿರುವ ಉತ್ತರ ಪತ್ರಿಕೆ ದೊರೆತಿದೆ. ರಿಜಿಸ್ಟರ್ ನಂಬರ್ ಕೂಡ ತಿದ್ದುಪಡಿಗೊಂಡಿದೆ ಎನ್ನುತ್ತಾರೆ.
ಇದರಿಂದ ಕಂಗಾಲಾಗಿರುವ ಕುಟುಂಬ ಇದೀಗ ನ್ಯಾಯಕ್ಕಾಗಿ ಪರೀಕ್ಷಾ ಮಂಡಳಿಗೆ ದೂರು ನೀಡಿದೆ. ಪ್ರತಿಭಾನ್ವಿತ ವಿದ್ಯಾರ್ಥಿನಿಗೆ ಈ ರೀತಿ ಆಗಿರೋದು ಶಾಲೆಯ ಮುಖ್ಯ ಶಿಕ್ಷಕರಿಗೂ ಅಚ್ಚರಿ ಮೂಡಿಸಿದ್ದು, ಶಾಲೆಯಿಂದ ಕೂಡ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದು, ಪರೀಕ್ಷಾ ಮಂಡಳಿಯಲ್ಲಿ ಇಂದು ಪರಿಶೀಲನೆ ನಡೆಯಲಿದೆ. ಇಂದು ಸಂಜೆ ಫಲಿತಾಂಶ ಗೊತ್ತಾಗಲಿದೆ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.
“ವಿದ್ಯಾರ್ಥಿನಿ ಅಕ್ಷತ ಅವರ ಉತ್ತರ ಪತ್ರಕೆ ಬದಲಾಗಿರುವ ಬಗ್ಗೆ ಈಗಾಗಾಲೇ ಪರಿಶೀಲನೆಗೆ ಕಳಿಸಲಾಗಿದೆ. ಸಂಜೆಯೊಳಗೆ ಫಲಿತಾಂಶ ಗೊತ್ತಾಗಲಿದೆ.”
| ಮಂಜುನಾಥ್, ಕ್ಷೇತ್ರ ಶಿಕ್ಷಣ ಅಧಿಕಾರಿಗಳು, ಚನ್ನಗಿರಿ
“ನಮ್ಮ ಶಾಲೆಯ ವಿದ್ಯಾರ್ಥಿನಿ ಅಕ್ಷತಾಳ ಪೂಷಕರು ಉತ್ತರ ಪತ್ರಿಕೆ ಬದಲಾಗಿರುವ ಬಗ್ಗೆ ತಿಳಿಸಿದ್ದು, ಪರೀಕ್ಷಾ ಮಂಡಳಿಗೆ ಇದರ ಬಗ್ಗೆ ಪರಿಶೀಲಿಸಲು ಕಳಿಸಿಕೊಡಲಾಗಿದೆ.”
| ಕಮಲಾಕ್ಷ ಶೇಟ್ , ಮುಖ್ಯೋಪಾಧ್ಯಾಯರು, ಬೆಳಲಗೆರೆ ಸರ್ಕಾರಿ ಪ್ರೌಢಶಾಲೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ7 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಕವಿತೆ | ನೆನಪು