Connect with us

ದಿನದ ಸುದ್ದಿ

ಸಮೀಪಿಸುತ್ತಿದೆ ಎಸ್.ಎಸ್.ಎಲ್.ಸಿ ಪರೀಕ್ಷೆ ; ಹೆಚ್ಚಾಗುತ್ತಿದೆ ಅಂಕ ಗಳಿಕೆಯ ನಿರೀಕ್ಷೆ..?

Published

on

ಸಾಂದರ್ಭಿಕ ಚಿತ್ರ
  • ಕುಮಾರಸ್ವಾಮಿ.ವಿ.ಕೆ,ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,ತೋಟಗೆರೆ, ಬೆಂಗಳೂರು ಉತ್ತರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಈಗ ದಿನಗಣನೆ ಆರಂಭವಾಗಿದೆ. ನಿರಂತರ ಅಭ್ಯಾಸದಲ್ಲಿರುವ ವಿದ್ಯಾರ್ಥಿಗಳು ಕೆಲವೇ ದಿನಗಳಲ್ಲಿ ಪರೀಕ್ಷೆ ಬರೆದು ನಿರಾಳಗೊಳ್ಳಲಿದ್ದಾರೆ. ವರ್ಷಪೂರ್ತಿ ಅಭ್ಯಾಸ ಮಾಡಿದ ಪಾಠಗಳನ್ನು ಕೇವಲ ಮೂರು ಗಂಟೆಗಳ ಪರೀಕ್ಷೆಯಲ್ಲಿ ಬರಯುವುದು ಅತ್ಯಂತ ಸವಾಲಿನ ಕೆಲಸವೂ ಹೌದು. ಹೀಗಾಗಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಇಲ್ಲೊಂದಿಷ್ಟು ಸೂಚನೆಗಳು.

ಪುನರ್ಮನನವಷ್ಟೇ ಬಾಕಿ

ವಿದ್ಯಾರ್ಥಿಗಳು ಈಗಾಗಲೇ ನಿರಂತರ ಅಭ್ಯಾಸದಲ್ಲಿ ತೊಡಗಿದ್ದು, ಪರೀಕ್ಷೆ ಬರೆಯಲು ಸಂಪೂರ್ಣವಾಗಿ ತಯಾರಿ ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಎಲ್ಲವನ್ನೂ ಓದಲು ಸವiಯಾವಕಾಶ ಇಲ್ಲದಿರುವುದರಿಂದ ಈಗಾಗಲೇ ಮಕ್ಕಳು ಕಲಿತಿರುವ ವಿಷಯಗಳನ್ನು ಪುನರರ್ಮನನ ಮಾಡಬೇಕಿದೆ. ತಾವು ತಯಾರಿಸಿಟ್ಟುಕೊಂಡಿರುವ ಮುಖ್ಯಾಂಶಗಳು, ಟಿಪ್ಪಣಿಗಳು ಇತ್ಯಾದಿ ಅಧ್ಯಯನ ಸಾಮಗ್ರಿಗಳನ್ನು ದಿನಕ್ಕೊಮ್ಮೆ ಮೆಲುಕು ಹಾಕುವುದರಿಂದ ಪರೀಕ್ಷೆಗೆ ಸಾಕಷ್ಟು ಅನುಕೂಲವಾಗುತ್ತದೆ.

ಒತ್ತಡ ಬೇಡ

ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಸೇರಿ ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಎದುರಿಸಿಯಾಗಿದೆ. ಸದರಿ ಪರೀಕ್ಷೆಗಳಲ್ಲಿ ಮಕ್ಕಳಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದ ಸಾಕಷ್ಟು ನಿರ್ದೇಶನಗಳು ದೊರೆತಿರುತ್ತವೆ. ಆದ್ದರಿಂದ ಮಕ್ಕಳು ಯಾವುದೇ ಹಂತದಲ್ಲಿ ತಮ್ಮ ಮೇಲೆ ಒತ್ತಡ ಹಾಕಿಕೊಳ್ಳದೆ ನಿರಾತಂಕವಾಗಿದ್ದಾಗ ಮಾತ್ರ ಹೆಚ್ಚು ಅಂಕ ಗಳಿಸಲು ಸಾಧ್ಯ. ಅಲ್ಲದೇ ಹಿಂದಿನ ಪರೀಕ್ಷೆಗಳಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಇದು ಸಕಾಲವಾಗಿದೆ.

ಎರಡು ವರ್ಷಗಳ ಅಂತರ

ಹಾಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿರುವ ವಿದ್ಯಾರ್ಥಿಗಳು ಶಾಲೆಗಳಲ್ಲಿ ನೇರ ಪರೀಕ್ಷೆ ಬರೆದು ಎರಡು ವರ್ಷಗಳಾಗಿವೆ. ಏಳನೇ ತರಗತಿಯ ಪರೀಕ್ಷೆ ಮುಗಿಸಿದ ನಂತರ ಕೊರೋನಾ ಕಾರಣದಿಂದ ಬಹುತೇಕ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆದಿವೆ. ಹೀಗಾಗಿ ಮಕ್ಕಳಿಗೆ ಸಹಜವಾಗಿಯೇ ಶೈಕ್ಷಣಿಕ ಅಂತರ ಕಾಡುತ್ತಿರುತ್ತದೆ. ಅದೂ ಅಲ್ಲದೇ ಬರವಣಿಗೆ ಶೈಲಿಯೂ ಬದಲಾಗಿರುತ್ತದೆ. ಹೀಗಾಗಿ ಮಕ್ಕಳು ಉಳಿದಿರುವ ಕಾಲಾವಧಿಯಲ್ಲಿ ಹೆಚ್ಚು ಬರವಣಿಗೆಗೆ ಮಹತ್ವ ಕೊಡಬೇಕಿದೆ.

ಪಠ್ಯ ಪುಸ್ತಕವೆಂಬ ಸ್ನೇಹಿತ

ಮಕ್ಕಳಲ್ಲಿ ಹತ್ತಾರು ರೀತಿಯ ಅಧ್ಯಯನ ಸಾಮಗ್ರಿಗಳು ಈಗಾಗಲೇ ಇರಬಹುದು ನಿಜ. ಆದರೆ ಎಲ್ಲಕ್ಕಿಂತ ಮಿಗಿಲಾಗಿ ಯಾವ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಓದಿಗೆ ಪ್ರಾಮುಖ್ಯತೆ ನೀಡುತ್ತಾರೋ, ಸಹಜವಾಗಿಯೇ ಅವರ ಅಂಕಗಳಿಕೆ ಹೆಚ್ಚಾಗುತ್ತದೆ. ಪರೀಕ್ಷೆಗೆ ಬರುವ ಯಾವುದೇ ಪ್ರಶ್ನೆಗಳು ಪಠ್ಯ ಪುಸ್ತಕವನ್ನು ಆಧರಿಸಿರುತ್ತವೆ. ಆದ್ದರಿಂದ ಮಕ್ಕಳು ಹೆಚ್ಚಾಗಿ ಪಠ್ಯ ಪುಸ್ತಕವನ್ನು ಒಳ್ಳೆಯ ಸ್ನೇಹಿತನಂತೆ ಬಳಸಿಕೊಳ್ಳಬೇಕಿದೆ.

ಇರುವ ಭಾಗ್ಯವ ನೆನೆದು ಬಾರನೆಂಬುದನು ಬಿಡು! :

ಬಹುತೇಕ ವಿದ್ಯಾರ್ಥಿಗಳು ಮಾಡುತ್ತಿರುವ ದೊಡ್ಡ ತಪ್ಪೇನೆಂದರೆ ಪ್ರಶ್ನೆ ಪತ್ರಿಕೆಯನ್ನು ಓದಿದಾಗ ತಮಗೆ ಗೊತ್ತಿಲ್ಲದಿರುವ ಯಾವುದೋ ಒಂದೆರಡು ಪ್ರಶ್ನೆಗಳ ಬಗ್ಗೆ ಗಾಬರಿಯಾಗಿ ಅದನ್ನೇ ಚಿಂತಿಸುತ್ತಾ ಕುಳಿತು, ಗೊತ್ತಿರುವ ಪ್ರಶ್ನೆಗಳ ಉತ್ತರವನ್ನೂ ಮರೆಯುತ್ತಿದ್ದಾರೆ. ಇದರಿಂದ ಅವರ ಅಂಕ ಗಳಿಕೆಯ ಮೇಲೆ ಋಣಾತ್ಮಕ ಪ್ರಭಾವ ಬೀರುವುದು ಖಚಿತ. ಆದ್ದರಿಂದ ಮೊದಲು ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯುವುದನ್ನು ರೂಢಿಸಿಕೊಳ್ಳಬೇಕಿದೆ.

ಹಳೆಯ ಪ್ರಶ್ನೆ ಪತ್ರಿಕೆಗಳ ವಿಮರ್ಶೆ

ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಸಹಾಯ ಮಾಡುವುದೇ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ವರದಾನವೇ ಆಗಿದೆ. ಪ್ರೌಢ ಶಿಕ್ಷಣ ಮಂಡಳಿಯಲ್ಲಿರುವ ಲಭ್ಯವಿರುವ ಹಿಂದಿನ ಮೂರು ನಾಲ್ಕು ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಮಕ್ಕಳು ಅಭ್ಯಸಿಸಿದಾಗ ಅವರಿಗೆ ಪರೀಕ್ಷೆ ಬರೆಯಲು ಇನ್ನೂ ವಿಶ್ವಾಸ ಹೆಚ್ಚಾಗುತ್ತದೆ. ಅಲ್ಲದೇ ಗೊತ್ತಿಲ್ಲದಿರುವ ಸುಮರು ಪ್ರಶ್ನೆಗಳಿಗೆ ಉತ್ತರವೂ ಸಿಗುತ್ತದೆ.

ಶಿಕ್ಷಕರೊಂದಿಗೆ ಸಂಪರ್ಕ

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅಭ್ಯಸಿಸುವ ಮುನ್ನ ಸಂಬAಧಿಸಿದ ವಿಷಯ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸ್ವಯಂ ಅಭ್ಯಾಸ ಮಾಡಿದಾಗ ಎಲ್ಲವೂ ಗೊಂದಲಮಯವಾಗಿ ಪರೀಕ್ಷೆಗೆ ತೊಡಕಾಗುವುದು ಖಚಿತ. ಆದ್ದರಿಂದ ತಮಗೆ ಏನೇ ಸಂದೇಹಗಳು ಬಂದಲ್ಲಿ ಕೂಡಲೇ ಅದನ್ನು ಶಿಕ್ಷಕರಿಂದ ಬಗೆಹರಿಸಿಕೊಂಡು ಮುಂದೆ ಸಾಗಬೇಕು.

ಬಿಡುವಿಲ್ಲದ ಓದು ಬೇಡ

ಹೆಚ್ಚು ಅಂಕಗಳಿಕೆ ನಿರೀಕ್ಷೆಯಲ್ಲಿರುವ ಮಕ್ಕಳು ಎರಡು – ಮೂರು ಗಂಟೆಗಳ ನಿರಂತರ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಸ್ಮರಣ ಶಕ್ತಿ ಕಡಿಮೆಯಾಗುವುದು ಖಚಿತ. ಆದ್ದರಿಂದ ಮಕ್ಕಳು ಕನಿಷ್ಠ ಅರ್ಧ ಗಂಟೆ ಓದಿ ನಂತರ ಹತ್ತರಿಂದ ಹದಿನೈದು ನಿಮಿಷಗಳ ಬ್ರೇಕೆ ಪಡೆದಾಗ ಓದಿದ ವಿಚಾರಗಳು ಮನಸ್ಸಿನಲ್ಲೇ ಉಳಿಯುತ್ತವೆ. ಓದುವಾಗ ಯಾವುದೇ ವಿಧಧ ಗದ್ದಲವಿರದ ಸ್ಥಳದ ಆಯ್ಕೆ ಅತಿ ಅಗತ್ಯ.

ಪರೀಕ್ಷೆಗೆ ಅಗತ್ಯವಾದ ಪ್ರಮುಖ ಸೂಚನೆಗಳು

  1. ಬರವಣಿಗೆ ಸ್ಫುಟವಾಗಿರಲಿ ಸಮಯದ ಹೊಂದಾಣಿಕೆ ಅತ್ಯಗತ್ಯ
  2. ಪ್ರಶ್ನೆ ಪತ್ರಿಕೆಯನ್ನು ಚೆನ್ನಾಗಿ ಓದಿ ನೋಂದಣಿ ಸಂಖ್ಯೆಯನ್ನು ತಪ್ಪಿಲ್ಲದೆ ಬರೆಯಿರಿ
  3. ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ಬರೆಯಿರಿ ಮರೆಯದೆ ಪ್ರವೇಶ ಪತ್ರವನ್ನು ಒಯ್ಯಿರಿ
  4. ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಪರೀಕ್ಷೆಗೆ ಬೇಕಾದ ಉಪಕರಣಗಳನ್ನು ಮರೆಯದೆ ತೆಗೆದುಕೊಂಡು ಹೋಗಿ
  5. ಪರೀಕ್ಷೆಗೆ ಮುನ್ನ ಅನಗತ್ಯ ಚರ್ಚೆ ಬೇಡ ಪರೀಕ್ಷೆಗೆ ಒಂದು ಗಂಟೆಗಿಂತ ಮುಂಚೆ ಓದುವುದನ್ನು ನಿಲ್ಲಿಸಿ
  6. ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿರಿ
  7. ವದಂತಿಗಳಿಗೆ ಕಿವಿ ಕೊಡಬೇಡಿ
  8. ಸಡಿಲವಾದ ಉಡುಪುಗಳನ್ನು ಧರಿಸಿ ಪರೀಕ್ಷೆಯನ್ನು ಒಂದು ಹಬ್ಬದಂತೆ ಸ್ವೀಕರಿಸಿ
  9. ಪರೀಕ್ಷೆ ಮುಗಿಯವರೆಗೂ ಮೊಬೈಲ್, ಟಿವಿ ವೀಕ್ಷಣೆಯಿಂದ ದೂರವಿರಿ ನಿಯಮಿತ ನಿದ್ದೆ, ಧ್ಯಾನ, ವ್ಯಾಯಾಮಗಳಂತಹ ಕ್ರಿಯೆ ನಿಮ್ಮ ಸ್ಮರಣಯನ್ನು ಹೆಚ್ಚು ಮಾಡುತ್ತದೆ.
  10. ಎಲ್ಲಾ ವಿಷಯದ ಪರೀಕ್ಷೆ ಮುಗಿಯುವವರೆಗೂ ಮಾದರಿ ಉತ್ತರಗಳ ಬಗ್ಗೆ ಚಿಂತಿಸದಿರಿ ಕೇವಲ ಅಂಕಗಳಿಗಾಗಿ ಅಲ್ಲ, ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆ ಬರೆಯಿರಿ.
  11. ಮುಖ್ಯಾಂಶಗಳಿಗೆ ಅಡಿಗೆರೆ ಹಾಕಿರಿ ಅಪರಿಚಿತರಿಗೆ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡದಿರಿ.
  12. ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಿ ಉತ್ತರ ಪತ್ರಿಕೆಯನ್ನು ಹಿಂತಿರುಗಿಸುವ ಮುನ್ನ ಗಮನವಿಟ್ಟು ಪರಿಶಿಲೀಸಿ.
  13. ಎಲ್ಲಾ ಪ್ರಶ್ನೆಗಳಿಗೂ ತಪ್ಪದೇ ಉತ್ತರಿಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಕರ ನಿರ್ದೇಶನದಂತೆ ಸಹಿ ಮಾಡಲು ಮರೆಯದಿರಿ
    ಓದುವ ಕೋಣೆ ಗಾಳಿ, ಬೆಳಕಿನಿಂದ ಕೂಡಿರಲಿ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ

(ಕುಮಾರಸ್ವಾಮಿ.ವಿ.ಕೆ
ಮುಖ್ಯ ಶಿಕ್ಷಕರು,
ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,
ತೋಟಗೆರೆ, ಬೆಂಗಳೂರು ಉತ್ತರ
ಮೊ : ೯೧೧೩೯೦೬೧೨೦)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತಿಗೆ ಮಾತ್ರ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

Published

on

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ.

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ ಭೂಮಿಯನ್ನು ಖರೀದಿ ಮಾಡಿದ್ದ ಅವರು ಅದನ್ನು ತಮ್ಮ ಸಹೋದರಿಯರ ಹೆಸರಿನಲ್ಲಿ ನೋಂದಾಯಿಸಿದ್ದರು. ಇದಕ್ಕೆ ಪತ್ನಿ ಪಲ್ಲವಿಯವರ ಆಕ್ಷೇಪ ಇತ್ತು ಎನ್ನಲಾಗುತ್ತಿದೆ.

ಆದರೆ ಆಸ್ತಿ ವಿವಾದವೇ ಎಲ್ಲದಕ್ಕೂ ಕಾರಣವಾಯ್ತಾ? ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಓಂ ಪ್ರಕಾಶ್ ಅವರು 2017 ರಲ್ಲಿ ನಿವೃತ್ತಿಗೊಂಡಿದ್ದರು. ನಿವೃತ್ತಿಗೂ ಮೊದಲು ಹಾಗೂ ನಂತರದಲ್ಲಿ ಅವರು ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಆಸ್ತಿ ಖರೀದಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಅಕ್ರಮ ಪಡಿತರ ಅಕ್ಕಿ ರಾತ್ರಿ ವೇಳೆ ಜಿಲ್ಲೆಯಿಂದ ಬೇರೆ ಬೇರೆ ರಾಜ್ಯಗಳಿಗೆ ಲಾರಿಗಳಲ್ಲಿ ಕಳ್ಳತನದ ಮೂಲಕ ಸಾಗಾಟ ಮಾಡುತ್ತಿರುವ ಅಂಶಗಳು ಬೆಳಕಿಗೆ ಬಂದಿವೆ.
ಅದರಲ್ಲಿ 10 ಲಕ್ಷ ಮೌಲ್ಯದ ಅನುಮಾನ ಪಡಿತರ ಅಕ್ಕಿ ಲಾರಿ, ಮದ್ಯ ರಾತ್ರಿಯಿಂದ ಬೆಳಿಗ್ಗೆ 9ಗಂಟೆವರೆಗೆ ಇದ್ದ ಲಾರಿ ನಂತರ ಇಲ್ಲದೆ ಇರೋದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳ್ಳಾರಿ ನಗರದಲ್ಲಿ ಕೆಲ ದಿನಗಳ ಹಿಂದೆ ( ರಾತ್ರಿ 2.30 ಗಂಟೆ) ಸಮಯದಲ್ಲಿ 10 ಲಕ್ಷ ರೂಪಾಯಿ ಮೌಲ್ಯದ ಪಡಿತರ ಅಕ್ಕಿ ವಾಹನವನ್ನು ಬಳ್ಳಾರಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪೊಲೀಸ ಅಧಿಕಾರಿಗಳು ತಪಾಸಣೆ ಮಾಡಿ ಠಾಣೆಗೆ ತಂದು ನಿಲ್ಲಿಸಿಕೊಂಡಿದ್ದರು.

ರಾಯಚೂರುನಿಂದ ಛತ್ತೀಸ್ಗಢದ ವರೆಗೆ ಪಡಿತರ ಅಕ್ಕಿ ಸಾಗಾಟ

ರಾಯಚೂರದಿಂದ ಛತ್ತೀಸ್ಗಢಕ್ಕೆ ಸಾಗಣೆಯ ಮಾಡುತ್ತಿದ್ದ ವಾಹನವಾಗಿತ್ತು ವಾಹನಕ್ಕೆ ಆರ್.ಕೆ ಎಂಟರ್ಪ್ರೈಸಸ್ ರಾಯಚೂರು,ಬಳ್ಳಾರಿ ಎಂದು ಬಿಲ್ ಹಾಕಿ ರಾಯಚೂರುದಿಂದ ಛತ್ತೀಸ್ ಗಡಿಗೆ ಅಕ್ಕಿ ಸರಬರಾಜು ಮಾಡುತ್ತಿದ್ದ ಮತ್ತೊಂದು ಬಿಲ್ ಹಾಕಿ ಕಳಿಸಲಾಗಿತ್ತು. ಈ ವಾಹನಕ್ಕೆ ಬಳ್ಳಾರಿಯ ಹವಂಬಾವಿ ಪ್ರದೇಶದಲ್ಲಿ ಕಳಸಾಗಣಿಕೆ ಪಡಿತರ ಅಕ್ಕಿಯನ್ನು ತುಂಬಿದ್ದಾರೆ. ಇದಕ್ಕೆ ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ಮಾತ್ರ ಇದೆ ಎನ್ನುವ ಆರೋಪ ಇದೆ.

ಮಧ್ಯರಾತ್ರಿದಿಂದ ಬೆಳಿಗ್ಗೆ 9 ಗಂಟೆಗೆ ಠಾಣೆಯಲ್ಲಿ ಲಾರಿ ವಾಹನವನ್ನು ಇಟ್ಟುಕೊಂಡು ಎಲ್ಲವೂ ಸರಿ ಇದ್ದಾವೆ ಎಂದು ಗಾಡಿಯನ್ನು ಬಿಟ್ಟು ಕಳಿಸಿರುವುದು ಎಷ್ಟರ ಮಟ್ಟಿಗೆ ಸರಿ ಎನ್ನುವ ಸಾರ್ವಜನಿಕ‌ ಪ್ರಶ್ನೆ.

ಈ ಠಾಣೆಗೆ ನೂತನವಾಗಿ ಬಂದಿರುವ ಪೊಲೀಸ್ ಅಧಿಕಾರಿ ತೋರಣಗಲ್ಲು, ಸಂಡೂರು, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿ ಬಳ್ಳಾರಿ ಎಪಿಎಂಸಿ ಠಾಣಿಗೆ ವರ್ಗಾವಣೆ ಆಗಿರುವ ರಫೀಕ್ ಅವರ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ ಸಾರ್ವಜನಿಕರು.

ಈಗಾಗಲೇ ಪಡಿತರ ಕಳಸಾಗಾಣಿಕೆ ದಂದೆ ನಡೆಯುತ್ತಿದ್ದು ಕಣ್ಣಿಗೆ ಕಂಡು ಕಾಣದಂತೆ ನಡೆಯುತ್ತದೆ ಇಂತಹ ಸಂದರ್ಭದಲ್ಲಿ ರಾಯಚೂರಿನಿಂದ ಛತ್ತೀಸ್ಗಢ ಗೆ ಬಿಲ್, ಬಳ್ಳಾರಿಯಲ್ಲಿ ಅಕ್ಕಿ, ಪೊಲೀಸ್ ಠಾಣೆಯಲ್ಲಿ ಗಾಡಿ,ಯಾವುದೇ ಪ್ರಕರಣ ಇಲ್ಲದೆ ಬಿಟ್ಟು ಕಳಿಸಿರುವುದು ಆಶ್ಚರ್ಯವಾಗಿದೆ. ಇನ್ನು ಈ ವಿಚಾರವಾಗಿ ಅಧಿಕಾರಿಗಳಿಗೆ ಕೇಳಿದರೆ ಇಲ್ಲ ನಮಗೆ ಗೊತ್ತಿಲ್ಲ ಎನ್ನುವ ಬೇಜವಾಬ್ದಾರಿ ಮಾತನಾಡುತ್ತಾರೆ.

ಲಾರಿ ಬಿಲ್ ಚೆಕ್ ಮಾಡಿದ್ದು ಯಾರು ?

ಗಣಿನಾಡು ಬಳ್ಳಾರಿ ನಗರದಲ್ಲಿ ಪೊಲೀಸರು ಲಾರಿ ಬಿಲ್ ಗಳು ಮದ್ಯರಾತ್ರಿ ಚೆಕ್ ಮಾಡಿದ್ದು ಯಾರು, ಸಾಧಾರಣ ಟೈಮ್ ನಲ್ಲಿ ಬಂದು ನೋಡಲು ಬರದೇ ಇರುವ ಅಧಿಕಾರಿಗಳು ಮದ್ಯ ರಾತ್ರಿ ಬಂದು ನೋಡಿರಬಹುದಾ. ಈಗಲೇ ರಫೀಕ್ ಅವರ ಮೇಲೆ ಕೆಲ ಸಿಬ್ಬಂದಿ ಮೇಲೆ ಆರೋಪ ಇವೆ. ಅಕ್ರಮ ಚಟವಟೆಕೆಗಳಿಗೆ ನಿರ್ದೇಶಕ ಕೀರ್ತಿ ಇದೇ ಲೋಕಾಯುಕ್ತ ಸಮಯದಲ್ಲಿ ಬಹುತೇಕ ಬಹಳ ಸಮಸ್ಯೆಗಳನ್ನು ಮಾಡಿದ್ದನ್ನು ನೊಂದವರು ತಿಳಿಸಿದ್ದಾರೆ.

“ಸಚಿವ ಸಂತೋಷ ಲಾಡ್ ಹೆಸರು ಹೇಳುವ ರಫೀಕ್”
ಠಾಣೆಯ ಅಧಿಕಾರಿ ರಫೀಕ್ ಪದೇ ಪದೇ ಸಚಿವ ಸಂತೋಷ್ ಲಾಡ್ ಹೆಸರು ಹೇಳಿಕೊಂಡು ಬಂದಿದ್ದಾನೆ ಎನ್ನುವ ಆರೋಪ ಸಹ ಇದೆ. ಈ ಅಕ್ರಮ ಅಕ್ಕಿ ಪಡಿತರದಲ್ಲಿ ಪೊಲೀಸ್ ಠಾಣೆಗೆ ಮಾಮೂಲು ಸಹ ಇದೆ ಎನ್ನುವ ಮಾಹಿತಿ ಸಹ ಇದೆ.

ಎಸ್ಪಿ ಅವರ ಕ್ರಮ ಯಾವಾಗ ?

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ಶೋಭಾರಾಣಿ ಅವರು ಯಾವ ? ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಜಿಲ್ಲೆಗೆ ಬಳ್ಳಾರಿ ಪೊಲೀಸ್ ವರಿಷ್ಟಾಧಿಕಾರಿ ಅಧಿಕಾರ ಸ್ವೀಕರಿದ ನಂತರ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬಿದ್ದಿದೆವೇ ಎನ್ನುವ ಅನುಮಾನ ಸಹ ಇದೆ ಎನ್ನುವ ಮಾತು ಸಾರ್ವಜನಿಕರಲ್ಲಿ ಕೇಳಿ ಬರುತ್ತಿದೆ.

ಒಟ್ಟಾರೆಯಾಗಿ ಸಿಎಂ ಸಿದ್ದರಾಮಯ್ಯ ಬಡವರಿಗೆ ನೀಡುವ ಪಡಿತರ ಅಕ್ಕಿ ಕಳ್ಳರ ಪಾಲಾಗುತ್ತಿದೆ, ಇನ್ನು ಪಡಿತರ ಅಕ್ಕಿಯ ವಿತರಕರು 1 ಕಿಲೋಗ್ರಾಂ ಗೆ 10 ರಿಂದ 12 ರೂಪಾಯಿ ಕೊಂಡುಕೊಳ್ಳುತ್ತಾರೆ ಎನ್ನುವ ಮಾಹಿತಿ ಸಹ ಇದೆ. ಇವರ ವಿರುದ್ಧ ಹಾಗೂ ಪಡಿತರ ಅಕ್ಕಿ ಮಾರಾಟ ಮಾಡುವ ಸಾರ್ವಜನಿಕರ ಮೇಲೆ ಕ್ರಮ ತೆಗೆದುಕೊಳ್ಳಬೇಕಿದೆ‌.

ಒಟ್ಟಾರೆಯಾಗಿ ಬಳ್ಳಾರಿ ಜಿಲ್ಲೆಯ ವಿವಿಧ ಠಾಣೆ ವ್ಯಾಪ್ತಿ ಅಧಿಕಾರಿಗಳಿಗೆ ಎಸ್ಪಿ ಅವರು ಯಾವ ರೀತಿ ಕ್ರಮ ತೆಗೆದುಕೊಳ್ಳುವರು ಕಾದು ನೋಡೊಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending