Connect with us

ದಿನದ ಸುದ್ದಿ

ಸಮೀಪಿಸುತ್ತಿದೆ ಎಸ್.ಎಸ್.ಎಲ್.ಸಿ ಪರೀಕ್ಷೆ ; ಹೆಚ್ಚಾಗುತ್ತಿದೆ ಅಂಕ ಗಳಿಕೆಯ ನಿರೀಕ್ಷೆ..?

Published

on

ಸಾಂದರ್ಭಿಕ ಚಿತ್ರ
  • ಕುಮಾರಸ್ವಾಮಿ.ವಿ.ಕೆ,ಮುಖ್ಯ ಶಿಕ್ಷಕರು,ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,ತೋಟಗೆರೆ, ಬೆಂಗಳೂರು ಉತ್ತರ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಈಗ ದಿನಗಣನೆ ಆರಂಭವಾಗಿದೆ. ನಿರಂತರ ಅಭ್ಯಾಸದಲ್ಲಿರುವ ವಿದ್ಯಾರ್ಥಿಗಳು ಕೆಲವೇ ದಿನಗಳಲ್ಲಿ ಪರೀಕ್ಷೆ ಬರೆದು ನಿರಾಳಗೊಳ್ಳಲಿದ್ದಾರೆ. ವರ್ಷಪೂರ್ತಿ ಅಭ್ಯಾಸ ಮಾಡಿದ ಪಾಠಗಳನ್ನು ಕೇವಲ ಮೂರು ಗಂಟೆಗಳ ಪರೀಕ್ಷೆಯಲ್ಲಿ ಬರಯುವುದು ಅತ್ಯಂತ ಸವಾಲಿನ ಕೆಲಸವೂ ಹೌದು. ಹೀಗಾಗಿ ಪರೀಕ್ಷೆ ಬರೆಯುತ್ತಿರುವ ಮಕ್ಕಳಿಗೆ ಇಲ್ಲೊಂದಿಷ್ಟು ಸೂಚನೆಗಳು.

ಪುನರ್ಮನನವಷ್ಟೇ ಬಾಕಿ

ವಿದ್ಯಾರ್ಥಿಗಳು ಈಗಾಗಲೇ ನಿರಂತರ ಅಭ್ಯಾಸದಲ್ಲಿ ತೊಡಗಿದ್ದು, ಪರೀಕ್ಷೆ ಬರೆಯಲು ಸಂಪೂರ್ಣವಾಗಿ ತಯಾರಿ ಮಾಡಿಕೊಂಡಿದ್ದಾರೆ. ಈ ಹಂತದಲ್ಲಿ ಎಲ್ಲವನ್ನೂ ಓದಲು ಸವiಯಾವಕಾಶ ಇಲ್ಲದಿರುವುದರಿಂದ ಈಗಾಗಲೇ ಮಕ್ಕಳು ಕಲಿತಿರುವ ವಿಷಯಗಳನ್ನು ಪುನರರ್ಮನನ ಮಾಡಬೇಕಿದೆ. ತಾವು ತಯಾರಿಸಿಟ್ಟುಕೊಂಡಿರುವ ಮುಖ್ಯಾಂಶಗಳು, ಟಿಪ್ಪಣಿಗಳು ಇತ್ಯಾದಿ ಅಧ್ಯಯನ ಸಾಮಗ್ರಿಗಳನ್ನು ದಿನಕ್ಕೊಮ್ಮೆ ಮೆಲುಕು ಹಾಕುವುದರಿಂದ ಪರೀಕ್ಷೆಗೆ ಸಾಕಷ್ಟು ಅನುಕೂಲವಾಗುತ್ತದೆ.

ಒತ್ತಡ ಬೇಡ

ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯನ್ನೂ ಸೇರಿ ವಿದ್ಯಾರ್ಥಿಗಳು ಈಗಾಗಲೇ ಸಾಕಷ್ಟು ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಎದುರಿಸಿಯಾಗಿದೆ. ಸದರಿ ಪರೀಕ್ಷೆಗಳಲ್ಲಿ ಮಕ್ಕಳಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದ ಸಾಕಷ್ಟು ನಿರ್ದೇಶನಗಳು ದೊರೆತಿರುತ್ತವೆ. ಆದ್ದರಿಂದ ಮಕ್ಕಳು ಯಾವುದೇ ಹಂತದಲ್ಲಿ ತಮ್ಮ ಮೇಲೆ ಒತ್ತಡ ಹಾಕಿಕೊಳ್ಳದೆ ನಿರಾತಂಕವಾಗಿದ್ದಾಗ ಮಾತ್ರ ಹೆಚ್ಚು ಅಂಕ ಗಳಿಸಲು ಸಾಧ್ಯ. ಅಲ್ಲದೇ ಹಿಂದಿನ ಪರೀಕ್ಷೆಗಳಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಇದು ಸಕಾಲವಾಗಿದೆ.

ಎರಡು ವರ್ಷಗಳ ಅಂತರ

ಹಾಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತಯಾರಿರುವ ವಿದ್ಯಾರ್ಥಿಗಳು ಶಾಲೆಗಳಲ್ಲಿ ನೇರ ಪರೀಕ್ಷೆ ಬರೆದು ಎರಡು ವರ್ಷಗಳಾಗಿವೆ. ಏಳನೇ ತರಗತಿಯ ಪರೀಕ್ಷೆ ಮುಗಿಸಿದ ನಂತರ ಕೊರೋನಾ ಕಾರಣದಿಂದ ಬಹುತೇಕ ಪರೀಕ್ಷೆಗಳು ಆನ್‌ಲೈನ್‌ನಲ್ಲೇ ನಡೆದಿವೆ. ಹೀಗಾಗಿ ಮಕ್ಕಳಿಗೆ ಸಹಜವಾಗಿಯೇ ಶೈಕ್ಷಣಿಕ ಅಂತರ ಕಾಡುತ್ತಿರುತ್ತದೆ. ಅದೂ ಅಲ್ಲದೇ ಬರವಣಿಗೆ ಶೈಲಿಯೂ ಬದಲಾಗಿರುತ್ತದೆ. ಹೀಗಾಗಿ ಮಕ್ಕಳು ಉಳಿದಿರುವ ಕಾಲಾವಧಿಯಲ್ಲಿ ಹೆಚ್ಚು ಬರವಣಿಗೆಗೆ ಮಹತ್ವ ಕೊಡಬೇಕಿದೆ.

ಪಠ್ಯ ಪುಸ್ತಕವೆಂಬ ಸ್ನೇಹಿತ

ಮಕ್ಕಳಲ್ಲಿ ಹತ್ತಾರು ರೀತಿಯ ಅಧ್ಯಯನ ಸಾಮಗ್ರಿಗಳು ಈಗಾಗಲೇ ಇರಬಹುದು ನಿಜ. ಆದರೆ ಎಲ್ಲಕ್ಕಿಂತ ಮಿಗಿಲಾಗಿ ಯಾವ ವಿದ್ಯಾರ್ಥಿಗಳು ಪಠ್ಯ ಪುಸ್ತಕದ ಓದಿಗೆ ಪ್ರಾಮುಖ್ಯತೆ ನೀಡುತ್ತಾರೋ, ಸಹಜವಾಗಿಯೇ ಅವರ ಅಂಕಗಳಿಕೆ ಹೆಚ್ಚಾಗುತ್ತದೆ. ಪರೀಕ್ಷೆಗೆ ಬರುವ ಯಾವುದೇ ಪ್ರಶ್ನೆಗಳು ಪಠ್ಯ ಪುಸ್ತಕವನ್ನು ಆಧರಿಸಿರುತ್ತವೆ. ಆದ್ದರಿಂದ ಮಕ್ಕಳು ಹೆಚ್ಚಾಗಿ ಪಠ್ಯ ಪುಸ್ತಕವನ್ನು ಒಳ್ಳೆಯ ಸ್ನೇಹಿತನಂತೆ ಬಳಸಿಕೊಳ್ಳಬೇಕಿದೆ.

ಇರುವ ಭಾಗ್ಯವ ನೆನೆದು ಬಾರನೆಂಬುದನು ಬಿಡು! :

ಬಹುತೇಕ ವಿದ್ಯಾರ್ಥಿಗಳು ಮಾಡುತ್ತಿರುವ ದೊಡ್ಡ ತಪ್ಪೇನೆಂದರೆ ಪ್ರಶ್ನೆ ಪತ್ರಿಕೆಯನ್ನು ಓದಿದಾಗ ತಮಗೆ ಗೊತ್ತಿಲ್ಲದಿರುವ ಯಾವುದೋ ಒಂದೆರಡು ಪ್ರಶ್ನೆಗಳ ಬಗ್ಗೆ ಗಾಬರಿಯಾಗಿ ಅದನ್ನೇ ಚಿಂತಿಸುತ್ತಾ ಕುಳಿತು, ಗೊತ್ತಿರುವ ಪ್ರಶ್ನೆಗಳ ಉತ್ತರವನ್ನೂ ಮರೆಯುತ್ತಿದ್ದಾರೆ. ಇದರಿಂದ ಅವರ ಅಂಕ ಗಳಿಕೆಯ ಮೇಲೆ ಋಣಾತ್ಮಕ ಪ್ರಭಾವ ಬೀರುವುದು ಖಚಿತ. ಆದ್ದರಿಂದ ಮೊದಲು ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯುವುದನ್ನು ರೂಢಿಸಿಕೊಳ್ಳಬೇಕಿದೆ.

ಹಳೆಯ ಪ್ರಶ್ನೆ ಪತ್ರಿಕೆಗಳ ವಿಮರ್ಶೆ

ವಿದ್ಯಾರ್ಥಿಗಳಿಗೆ ಅತೀ ಹೆಚ್ಚು ಸಹಾಯ ಮಾಡುವುದೇ ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳು. ಅದರಲ್ಲೂ ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಇದು ವರದಾನವೇ ಆಗಿದೆ. ಪ್ರೌಢ ಶಿಕ್ಷಣ ಮಂಡಳಿಯಲ್ಲಿರುವ ಲಭ್ಯವಿರುವ ಹಿಂದಿನ ಮೂರು ನಾಲ್ಕು ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಮಕ್ಕಳು ಅಭ್ಯಸಿಸಿದಾಗ ಅವರಿಗೆ ಪರೀಕ್ಷೆ ಬರೆಯಲು ಇನ್ನೂ ವಿಶ್ವಾಸ ಹೆಚ್ಚಾಗುತ್ತದೆ. ಅಲ್ಲದೇ ಗೊತ್ತಿಲ್ಲದಿರುವ ಸುಮರು ಪ್ರಶ್ನೆಗಳಿಗೆ ಉತ್ತರವೂ ಸಿಗುತ್ತದೆ.

ಶಿಕ್ಷಕರೊಂದಿಗೆ ಸಂಪರ್ಕ

ವಿದ್ಯಾರ್ಥಿಗಳು ಯಾವುದೇ ವಿಷಯವನ್ನು ಅಭ್ಯಸಿಸುವ ಮುನ್ನ ಸಂಬAಧಿಸಿದ ವಿಷಯ ಶಿಕ್ಷಕರೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಸ್ವಯಂ ಅಭ್ಯಾಸ ಮಾಡಿದಾಗ ಎಲ್ಲವೂ ಗೊಂದಲಮಯವಾಗಿ ಪರೀಕ್ಷೆಗೆ ತೊಡಕಾಗುವುದು ಖಚಿತ. ಆದ್ದರಿಂದ ತಮಗೆ ಏನೇ ಸಂದೇಹಗಳು ಬಂದಲ್ಲಿ ಕೂಡಲೇ ಅದನ್ನು ಶಿಕ್ಷಕರಿಂದ ಬಗೆಹರಿಸಿಕೊಂಡು ಮುಂದೆ ಸಾಗಬೇಕು.

ಬಿಡುವಿಲ್ಲದ ಓದು ಬೇಡ

ಹೆಚ್ಚು ಅಂಕಗಳಿಕೆ ನಿರೀಕ್ಷೆಯಲ್ಲಿರುವ ಮಕ್ಕಳು ಎರಡು – ಮೂರು ಗಂಟೆಗಳ ನಿರಂತರ ಅಭ್ಯಾಸದಲ್ಲಿ ತೊಡಗುವುದರಿಂದ ಅವರ ಸ್ಮರಣ ಶಕ್ತಿ ಕಡಿಮೆಯಾಗುವುದು ಖಚಿತ. ಆದ್ದರಿಂದ ಮಕ್ಕಳು ಕನಿಷ್ಠ ಅರ್ಧ ಗಂಟೆ ಓದಿ ನಂತರ ಹತ್ತರಿಂದ ಹದಿನೈದು ನಿಮಿಷಗಳ ಬ್ರೇಕೆ ಪಡೆದಾಗ ಓದಿದ ವಿಚಾರಗಳು ಮನಸ್ಸಿನಲ್ಲೇ ಉಳಿಯುತ್ತವೆ. ಓದುವಾಗ ಯಾವುದೇ ವಿಧಧ ಗದ್ದಲವಿರದ ಸ್ಥಳದ ಆಯ್ಕೆ ಅತಿ ಅಗತ್ಯ.

ಪರೀಕ್ಷೆಗೆ ಅಗತ್ಯವಾದ ಪ್ರಮುಖ ಸೂಚನೆಗಳು

  1. ಬರವಣಿಗೆ ಸ್ಫುಟವಾಗಿರಲಿ ಸಮಯದ ಹೊಂದಾಣಿಕೆ ಅತ್ಯಗತ್ಯ
  2. ಪ್ರಶ್ನೆ ಪತ್ರಿಕೆಯನ್ನು ಚೆನ್ನಾಗಿ ಓದಿ ನೋಂದಣಿ ಸಂಖ್ಯೆಯನ್ನು ತಪ್ಪಿಲ್ಲದೆ ಬರೆಯಿರಿ
  3. ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ಬರೆಯಿರಿ ಮರೆಯದೆ ಪ್ರವೇಶ ಪತ್ರವನ್ನು ಒಯ್ಯಿರಿ
  4. ಗೊತ್ತಿರುವ ಪ್ರಶ್ನೆಗಳಿಗೆ ಮೊದಲು ಉತ್ತರಿಸಿ ಪರೀಕ್ಷೆಗೆ ಬೇಕಾದ ಉಪಕರಣಗಳನ್ನು ಮರೆಯದೆ ತೆಗೆದುಕೊಂಡು ಹೋಗಿ
  5. ಪರೀಕ್ಷೆಗೆ ಮುನ್ನ ಅನಗತ್ಯ ಚರ್ಚೆ ಬೇಡ ಪರೀಕ್ಷೆಗೆ ಒಂದು ಗಂಟೆಗಿಂತ ಮುಂಚೆ ಓದುವುದನ್ನು ನಿಲ್ಲಿಸಿ
  6. ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರವನ್ನು ತಲುಪಿರಿ
  7. ವದಂತಿಗಳಿಗೆ ಕಿವಿ ಕೊಡಬೇಡಿ
  8. ಸಡಿಲವಾದ ಉಡುಪುಗಳನ್ನು ಧರಿಸಿ ಪರೀಕ್ಷೆಯನ್ನು ಒಂದು ಹಬ್ಬದಂತೆ ಸ್ವೀಕರಿಸಿ
  9. ಪರೀಕ್ಷೆ ಮುಗಿಯವರೆಗೂ ಮೊಬೈಲ್, ಟಿವಿ ವೀಕ್ಷಣೆಯಿಂದ ದೂರವಿರಿ ನಿಯಮಿತ ನಿದ್ದೆ, ಧ್ಯಾನ, ವ್ಯಾಯಾಮಗಳಂತಹ ಕ್ರಿಯೆ ನಿಮ್ಮ ಸ್ಮರಣಯನ್ನು ಹೆಚ್ಚು ಮಾಡುತ್ತದೆ.
  10. ಎಲ್ಲಾ ವಿಷಯದ ಪರೀಕ್ಷೆ ಮುಗಿಯುವವರೆಗೂ ಮಾದರಿ ಉತ್ತರಗಳ ಬಗ್ಗೆ ಚಿಂತಿಸದಿರಿ ಕೇವಲ ಅಂಕಗಳಿಗಾಗಿ ಅಲ್ಲ, ಉತ್ತಮ ಭವಿಷ್ಯಕ್ಕಾಗಿ ಪರೀಕ್ಷೆ ಬರೆಯಿರಿ.
  11. ಮುಖ್ಯಾಂಶಗಳಿಗೆ ಅಡಿಗೆರೆ ಹಾಕಿರಿ ಅಪರಿಚಿತರಿಗೆ ನಿಮ್ಮ ನೋಂದಣಿ ಸಂಖ್ಯೆಯನ್ನು ನೀಡದಿರಿ.
  12. ಕೊರೊನಾ ನಿಯಮಗಳನ್ನು ತಪ್ಪದೇ ಪಾಲಿಸಿ ಉತ್ತರ ಪತ್ರಿಕೆಯನ್ನು ಹಿಂತಿರುಗಿಸುವ ಮುನ್ನ ಗಮನವಿಟ್ಟು ಪರಿಶಿಲೀಸಿ.
  13. ಎಲ್ಲಾ ಪ್ರಶ್ನೆಗಳಿಗೂ ತಪ್ಪದೇ ಉತ್ತರಿಸಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಕರ ನಿರ್ದೇಶನದಂತೆ ಸಹಿ ಮಾಡಲು ಮರೆಯದಿರಿ
    ಓದುವ ಕೋಣೆ ಗಾಳಿ, ಬೆಳಕಿನಿಂದ ಕೂಡಿರಲಿ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ

(ಕುಮಾರಸ್ವಾಮಿ.ವಿ.ಕೆ
ಮುಖ್ಯ ಶಿಕ್ಷಕರು,
ಸಿದ್ಧಾರ್ಥ ಆಂಗ್ಲ ಪ್ರೌಢಶಾಲೆ,
ತೋಟಗೆರೆ, ಬೆಂಗಳೂರು ಉತ್ತರ
ಮೊ : ೯೧೧೩೯೦೬೧೨೦)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

Trending