Connect with us

ದಿನದ ಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪೂರ್ವಭಾವಿ ಸಭೆ ಮಕ್ಕಳು ಅಂಕಗಳ ಬೆನ್ನತ್ತುವುದರೊಂದಿಗೆ ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ : ನೋಡಲ್ ಅಧಿಕಾರಿ ರಘುವೀರ ಬಿ.ಎಸ್

Published

on

ಸುದ್ದಿದಿನ,ದಾವಣಗೆರೆ : ಅಂಕಗಳ ಬೆನ್ನತ್ತುವುದರೊಂದಿಗೆ ನಮ್ಮ ಮಕ್ಕಳು ಕ್ರಿಯಾಶೀಲತೆ ಕಳೆದುಕೊಳ್ಳುವುದು ಬೇಡ, ಪರ್ಯಾಯ ಮಾರ್ಗದಲ್ಲಿ ಪರೀಕ್ಷೆ ಪಾಸು ಮಾಡಲು ಹೋದರೆ ಜೀವನದಲ್ಲಿ ಫೇಲ್ ಆಗುತ್ತಾರೆ. ಹಾಗಾಗಿ ಅಂಕಗಳಿಗಿಂತ ಗುಣಮಟ್ಟದ ಫಲಿತಾಂಶಕ್ಕೆ ಶ್ರಮಿಸೋಣ ಎಂದು ದಾವಣಗೆರೆ ಜಿಲ್ಲಾ ಎಸ್.ಎಸ್.ಎಲ್.ಸಿ ಪರೀಕ್ಷಾ ನೋಡಲ್ ಅಧಿಕಾರಿಗಳು ಹಾಗೂ ಧಾರವಾಡದ ಸಿಸ್ಲೆಪ್‍ನ ನಿರ್ದೇಶಕ ರಘುವೀರ ಬಿ.ಎಸ್ ಹೇಳಿದರು.

ಗುರುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮುಖ್ಯೋಪಾಧ್ಯಯರ ಸಂಘ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ನಡೆಯುವ ಪರೀಕ್ಷೆಗಳಲ್ಲಿ ಫಲಿತಾಂಶದ ಬಗ್ಗೆ ಎಲ್ಲರಿಗೂ ಹೆಚ್ಚಿನ ಆಸಕ್ತಿ ಇದೆ. ಅದರಂತೆ ಪರಿಶ್ರಮ ಪಟ್ಟರೆ ಒಳ್ಳೆಯ ಅವಕಾಶಗಳು ಸಿಗಲಿವೆ ಹಾಗಾಗಿ ಪರೀಕ್ಷೆಯ ಬಗ್ಗೆ ಭಯ ಇಟ್ಟುಕೊಳ್ಳದೆ, ಆತ್ಮಸ್ಥೆರ್ಯದಿಂದ ಮಕ್ಕಳು ಪರೀಕ್ಷೆ ಬರೆಯಲು ಪ್ರೇರೇಪಿಸಿ ಎಂದರು.

ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ ಮಾತನಾಡಿ, ಈ ಪರೀಕ್ಷೆ ಜಿಲ್ಲೆಯ 22226 ವಿದ್ಯಾರ್ಥಿಗಳ ಭವಿಷ್ಯ, ವಿಧ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾದ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಸುಗಮವಾಗಿ ನಡೆಯಲಿ, ಅತಿಯಾದ ಆತ್ಮವಿಶ್ವಾಸ ಬೇಡ, ಪರೀಕ್ಷೆಗಳ ಆರಂಭದಿಂದ ಅಂತ್ಯದವರೆಗೂ ಎಲ್ಲಾ ಅಧಿಕಾರಿಗಳು ಎಚ್ಚರದಿಂದಿರಬೇಕು.

ಈ ಹಿಂದಿನ ಎಲ್ಲಾ ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿದ ಹೆಗ್ಗಳಿಕೆ ನಮ್ಮ ಜಿಲ್ಲೆಗಿದೆ ಹಾಗಾಗಿ ಸರ್ಕಾರ ನೀಡುವ ಎಲ್ಲಾ ಆದೇಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರೀಕ್ಷೆಗಳು ಸುವ್ಯವಸ್ಥೆಯಿಂದ ನಡೆಯಲಿ ಎಂದು ಹೇಳಿದರು.
ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಪರೀಕ್ಷಾ ದಿನಗಳಂದು ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಮತ್ತು ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಪರೀಕ್ಷೆಯಲ್ಲಿ ಹಲವಾರು ಮಾರ್ಪಾಡುಗಳಾಗುತಿದ್ದು ಎಸ್.ಓ.ಪಿ ಗಳನ್ನು ಸರಿಯಾಗಿ ಪಾಲಿಸಿ. ಈ ಬಾರಿ ಪರೀಕ್ಷೆಯಲ್ಲಿ ಆರೋಗ್ಯ ಅಧಿಕಾರಿಗಳ ಪಾತ್ರವೂ ಹೆಚ್ಚಾಗಿದೆ, ಪರೀಕ್ಷೆ ನಡೆಯುವ ಮುನ್ನ ಹಾಗೂ ನಂತರ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು, ಎಲ್ಲರೂ ಒಗ್ಗಟ್ಟಿನಿಂದ ಮುಂಜಾಗೃತೆವಹಿಸಿ ಜಿಲ್ಲೆಗೆ ಒಳ್ಳೆಯ ಹೆಸರು ತರುವ ಪ್ರಯತ್ನ ಮಾಡುವ ಮಾಡೋಣ ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್ ಮಾತನಾಡಿ, ಕಳೆದೆರಡು ವರ್ಷಗಳಿಂದ ಕೋವಿಡ್ ನಿಂದಾಗಿ ನಮ್ಮ ಜಿಲ್ಲೆಯ ಫಲಿತಾಂಶದಲ್ಲಿ 16, 17 ನೇ ಸ್ಥಾನದಲ್ಲಿದೆ. ಶಿಕ್ಷಕರು ಮಕ್ಕಳಿಗೆ ಕೇವಲ ಪುಸ್ತಕದಲ್ಲಿರುವ ಪಠ್ಯಗಳನ್ನು ತಿಳಿಸುವುದರ ಜೊತೆಗೆ ಸಂವಹನ, ನಾಯಕತ್ವದ ಗುಣಗಳ ಬಗ್ಗೆ ಮಾರ್ಗದರ್ಶನವನ್ನು ತಿಳಿಸುವುದರೊಂದಿಗೆ ಜಿಲ್ಲೆಯಲ್ಲಿ ಶಿಕ್ಷಣದ ಶೇಕಡವಾರು ಪ್ರಗತಿ ಸಾಧಿಸಲು ಶ್ರಮಪಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗರಾಜ್ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಕೋವಿಡ್ ಒಂದನೆಯ, ಎರಡನೇ, ಮೂರನೇ ಅಲೆ ಹೀಗೆ ಬರೀ ಅಲೆಗಳನ್ನು ನೋಡುತ್ತಿದ್ದ ನಾವು ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದಲೂ ಒಂದೂ ಕೋವಿಡ್ ಪ್ರಕರಣ ಇಲ್ಲದಿರುವುದು ಹೆಮ್ಮೆಯ ವಿಷಯ, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಸಹಾಯಕರು/ಆಶಾ ಕಾರ್ಯಕರ್ತೆಯರನ್ನು (ಅಗತ್ಯ ಔಷಧಗಳೊಂದಿಗೆ) ನಿಯೋಜಿಸಲಾಗುವುದು.

ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ರೋಗ ಲಕ್ಷಣಗಳು ಇದ್ದರೆ ಪರೀಕ್ಷೆ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿಯಂತೆ ಎಸೆಸೆಲ್ಸಿ ಪರೀಕ್ಷೆಗೆ ಆರೋಗ್ಯ ಇಲಾಖೆಯ ಎಲ್ಲಾ ಸಹಕಾರ ನೀಡುತ್ತೇವೆ ಎಂದರು.

ಡಿ.ಡಿಪಿ.ಐ ಜಿ.ಆರ್ ತಿಪ್ಪೇಶಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಒಟ್ಟು 22,226 ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲಿದ್ದು, ಒಟ್ಟು 90 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳವರೆಗೆ ತೆರಳಲು ಕೆ.ಎಸ್.ಆರ್.ಟಿ.ಸಿ ಯವರು ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ ಜಿಲ್ಲೆಯಲ್ಲಿ ಉತ್ತಮವಾಗಿ ಪರೀಕ್ಷೆ ನಡೆಯಲು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಂತೆ ಎಲ್ಲಾ ಮುಂಜಾಗೃತ ಕ್ರಮ ವಹಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಎಸ್‍ಎಸ್‍ಎಲ್‍ಸಿ ಪರೀಕ್ಷಾ ವೀಕ್ಷಕ ಎಸ್.ವಿ.ಬಿ. ಪ್ರಸಾದ್, ಜಿಲ್ಲಾ ಪ್ರೌಢ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಹಾಲಪ್ಪ, ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥಯ್ಯ, ಡಿವೈಪಿಸಿಗಳು ಎಲ್ಲಾ ವಿಷಯದ ಪರಿವೀಕ್ಷಕರು ಹಾಗೂ ಎಪಿಸಿಗಳು, ಬಿಇಓಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending