ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version