ದಿನದ ಸುದ್ದಿ
ರಾಜ್ಯ ಬಜೆಟ್-2021 ವಿಶ್ಲೇಷಣೆ | ಯಡ್ಡಿ ಬಜೆಟ್ – ಉತ್ಪ್ರೇಕ್ಷೆ, ತಾರತಮ್ಯ ಮತ್ತು ಸುಳ್ಳು ಅಂಕಿಅಂಶಗಳ ಕಣ್ಕಟ್ಟು..!
- ಶಿವಸುಂದರ್
ಆತ್ಮೀಯರೇ ,
ಬಜೆಟ್ಟಿನ ಬಗ್ಗೆ ಈಗಾಗಲೇ ಸಾಕಷ್ಟು ಅಭಿಪ್ರಾಯಗಳು ಬಂದಾಗಿವೆ. ಇತರ ಎಲ್ಲಾ ಕ್ಷೇತ್ರಗಳಿಗೂ ತೋರಿಕೆಯಲ್ಲಾದರೂ ಬಜೆಟ್ ಹೆಚ್ಚಳ ಮಾಡಿರುವ ಯಡ್ಡಿ ಸರ್ಕಾರ SCSP-STP ಯೋಜನೆಗಳಿಗೆ ಮಾತ್ರ ಕೋವಿಡ್ ಕಾರಣ ತೋರಿಸಿ ಈ ಬಾರಿ ಹೆಚ್ಚಳ ಮಾಡಲಾಗುವುದಿಲ್ಲವೆಂದು ಸ್ಪಷ್ಟವಾಗಿ ಘೋಷಿಸಿದೆ.
ಆದರೆ ಅದೇ ಸಮಯದಲ್ಲಿ ದಲಿತ-ಹಿಂದುಳಿದ ಸಮುದಾಯಗಳ ಎಲ್ಲಾ ಅಭಿವೃದ್ಧಿ ಮಂಡಳಿಗಳಿಗೆ ಒಟ್ಟಾರೆಯಾಗಿ 500 ಕೋಟಿಗಳನ್ನು ಮಾತ್ರ ನೀಡಿದ್ದರೆ, ಲಿಂಗಾಯತ ಹಾಗು ಒಕ್ಕಲಿಗ ಮಂಡಳಿಗಳಿಗೆ ತಲಾ 500 ಕೋಟಿ ಘೋಷಿಸಲಾಗಿದೆ.ಮಾತ್ರವಲ್ಲದೆ ಬಸವಕಲ್ಯಾಣದಲ್ಲಿಯೇ ಆಧುನಿಕ ಅನುಭವ ಮಂಟಪಕ್ಕೆ 500ಕೋಟಿ ನೀಡಲಾಗಿದೆ.
ಈ ಸರ್ಕಾರ ಯಾರದ್ದು ಎಂಬುದನ್ನು ಅರ್ಥಮಾಡಿಕೊಳ್ಳಲು ಬಜೆಟ್ ವೆಚ್ಚದಲ್ಲಿರುವ ಈ ಆದ್ಯತೆಗಳು ಮತ್ತು ತಾರತಮ್ಯಗಳು ಸಾಕು. ಆದರೆ ನಾನು ಈಗ ಹೇಳಲು ಹೊರಟಿರುವುದು ಅದಲ್ಲ. ಇಡೀ ಬಜೆಟ್ಟಿನಲ್ಲಿ ಘೋಷಿಸಲಾಗಿರುವ ಆದಾಯ ಮತ್ತು ಹಾಗು ಅದನ್ನು ಆಧರಿಸಿದ ವೆಚ್ಚಗಳ ಬುನಾದಿಯಲ್ಲೆ ಉತ್ಪ್ರೇಕ್ಷೆ ಮತ್ತು ಕಣ್ಣುಕಟ್ಟಿದೆ. ಇದೆ ಸುಳ್ಳಾದರೆ ಉಳಿದವು ಸುಳ್ಳೇ ಆಗಿರುತ್ತಲ್ಲವೇ?
ಉದಾಹರಣೆಗೆ: ರಾಜ್ಯದ 2021-22 ಸಾಲಿನ ವೆಚ್ಚವನ್ನು ರೂ. 2,46,207 ಕೋಟಿಯೆಂದು ನಿಗದಿ ಪಡಿಸಲಾಗಿದೆ. ಹಾಗು ರಾಜ್ಯದ ಸ್ವಂತ ಆದಾಯ 1,72,271 ಕೋಟಿ ಗಳಾಗಲಿದೆಎಂದು ಅಂದಾಜಿಸಲಾಗಿದೆ.
ಈ ಅಂದಾಜುಗಳನ್ನು ರಾಜ್ಯದ ಒಟ್ಟಾರೆ ರಾಜ್ಯ ಉತ್ಪನ್ನದ ಅಭಿವೃದ್ಧಿ ದರದ ಅಂದಾಜನ್ನು (Gross State Domestic Produce- GSDP) ಆಧರಿಸಿ ಮಾಡಲಾಗುತ್ತದೆ. GSDP ಯ ಅಂದಾಜು ಶೇ. 7ರಷ್ಟು ತೆರಿಗೆ ಸಂಗ್ರಹವಾಗಲಿದೆ ಎಂದು ಅಂದಾಜು ಮಾಡಲಾಗುತ್ತದೆ. ಕೇಂದ್ರದಲ್ಲಿ ಅದು 12-14% ಇರುತ್ತದೆ.
ಇದನ್ನೂ ಓದಿ |ರಾಜ್ಯ ಬಜೆಟ್ | 60 ಸಾವಿರ ಮಹಿಳೆಯರಿಗೆ ಉದ್ಯೋಗ : ಸಿಎಂ ಯಡಿಯೂರಪ್ಪ
ಸರ್ಕಾರದ ಪ್ರಕಾರ ರಾಜ್ಯದ GSDP ಯು 2019-20 ಕ್ಕೆ ಹೋಲಿಸಿದಲ್ಲಿ 2020-21ನೇ ಸಾಲಿನಲ್ಲಿ ಕೋವಿಡ್ ಕಾರಣಕ್ಕೆ ಶೇ. 2.6ರಷ್ಟು ಕುಸಿತವನ್ನು ಕಂಡಿದೆ. 2019-20 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದ GSDP ಯು 16,98,685 ಕೋಟಿ ರೂಪಾಯಿಗಳು. ಇದು ಕೋವಿಡ್ ಕಾರಣಕ್ಕೆ 2020-21ನೇ ಸಾಲಿನಲ್ಲಿ ಶೇ. 2.6 ರಷ್ಟು ಕಡಿಮೆಯಾಗಿದೆ ಎಂದರೆ 16,65,320 ಕೋಟಿ ರೂಪಾಯಿಗಳಾಗಬೇಕು. ಹೀಗಾಗಿ ಎಲ್ಲಾ ತೆರಿಗೆ ಸಂಗ್ರಹ ಅಂದಾಜುಗಳನ್ನು ಇದರ ಆಧಾರದಲ್ಲಿ ಮಾಡಬೇಕು.
ಆದರೆ ಬಜೆಟ್ ದಸ್ತಾವೇಜಿನ ಜೊತೆ ಕಡ್ಡಾಯವಾಗಿ ಒದಗಿಸಬೇಕಿರುವ Mid Term Fiscal Plan-MTFP ದಸ್ತಾವೇಜಿನಲ್ಲಿ ಸರ್ಕಾರವು :
“Government of India had communicated a figure of Rs.18,03,609 Crore as State’s GSDP for FY 2020-21 and it has also directed that the same amount be used for evaluation of states fiscal parameters”
ಅಂದರೆ ” ಭಾರತ ಸರ್ಕಾರವು ಕರ್ನಾಟಕದ 2020-21 ನೆ ಸಾಲಿಗೆ ರಾಜ್ಯದ GSDP ಯು 18,03,609 ಕೋಟಿ ಎಂದು ತಿಳಿಸಿದ್ದು ಎಲ್ಲಾ ವಿತ್ತೀಯ ಲೆಕ್ಕಾಚಾರಗಳಿಗೂ ಅದೇ ಅಂಕಿಅಂಶವನ್ನೇ ಬಳಸಬೇಕೆಂದು ಎಂದು ನಿರ್ದೇಶಿಸಿದೆ ” ಎಂದು ಹೇಳಿಕೊಂಡಿದೆ.
ಆದರೆ ಅವೆರಡರ ನಡುವಿನ ವ್ಯತ್ಯಾಸವನ್ನೇನು ಕೇಂದ್ರ ಸರ್ಕಾರ ಭರಿಸುತ್ತಿಲ್ಲ. ಅಷ್ಟೇ ಅಲ್ಲ. ಕೇಂದ್ರದಿಂದ ಸಿಗುವ GST ಪರಿಹಾರ, ಅನುದಾನ ಮತ್ತು ತೆರಿಗೆ ಪಾಲು ಎಲ್ಲವನ್ನು ಕರ್ನಾಟಕಕ್ಕೇ ಕಡಿಮೆ ಮಾಡಲಾಗಿದೆ. ಆದರೂ ಲೆಕ್ಕಾಚಾರವನ್ನು ಮಾತ್ರ ಇರುವುದಕ್ಕಿಂತ ಒಂದು ಲಕ್ಷ ಕೋಟಿ ಹೆಚ್ಚಿಗೆಸೇರಿಸಿ ಮಾಡಬೇಕೆಂದು ಆದೇಶಿಸಿದೆ!! ಹೀಗಾಗಿ ಬಜೆಟ್ಟಿನಲ್ಲಿ ಹೇಳಲಾಗಿರುವ ಪರಿಷ್ಕೃತ ಅಂದಾಜುಗಳಲ್ಲೇ ದೋಷವಿದೆ. ದೊಡ್ಡ ಸುಳ್ಳಿದೆ.
ಎರಡನೆಯದಾಗಿ, ಬಜೆಟ್ಟಿನ ಜೊತೆಗೆ ಒದಗಿಸಲಾಗಿರುವ MTFP – Mid Term Fiscal Plan -ಪ್ರಕಾರ ಹಾಗು 15ನೇ ಹಣಕಾಸು ಆಯೋಗದ ಅಂದಾಜಿನ ಪ್ರಕಾರ ೨೦೨೧-೨೨ ರ ಸಾಲಿನಲ್ಲಿ ಕರ್ನಾಟದ GSDP ಯು 17,02,227 ಕೋಟಿ ರೂ. ಗಳಿಗೆ ಇಳಿಯಲಿದೆ.
ಅಂದರೆ 2020-21 ನೇ ಸಾಲಿಗಿಂತ ಒಂದು ಲಕ್ಷ ಕೋಟಿ ಕಡಿಮೆಯಾಗಲಿದೆ. ಹಾಗಿದ್ದಲ್ಲಿ ಅದೇ ಪ್ರಮಾಣದಲ್ಲಿ ರಾಜ್ಯದ ಸ್ವಂತ ತೆರಿಗೆ ಸಂಗ್ರಹ ಮತ್ತು ಆದಾಯಗಳು ಕಡಿಮೆಯಾಗಬೇಕಲ್ಲವೇ? ಆದರೆ ಬಜೆಟ್ಟಿನ ಲೆಕ್ಕಾಚಾರದ ಪ್ರಕಾರ 2021-22 ನೇ ಸಾಲಿನಲ್ಲಿ ಸ್ವಂತ ತೆರಿಗೆ ರಾಜಸ್ವವು 1,24,202 ಕೋಟಿ ರು.ಗಳಾಗಲಿದೆಯಂತೆ!
ಆದರೆ ಹೆಚ್ಚು ಕಡಿಮೆ ಇಷ್ಟೇ GSDP ಇದ್ದ 2019-20ನೇ ಸಾಲಿನಲ್ಲಿ ಸ್ವಂತ ರಾಜಸ್ವವು 1,16, 860 ಕೋಟಿ ರೂಪಾಯಿಗಳು ಮಾತ್ರ…ಆದರೆ 2021-22ನೇ ಸಾಲಿನಲ್ಲಿ, ಇನ್ನು ಕೋವಿಡ್ ದಾಳಿಯಿಂದಾಗಿ ಭಾರತವು 2019ರ ಅಭಿವೃದ್ಧಿ ದರವನ್ನು ಸಾಧಿಸಲಾಗದು ಎಂಬುದು ಸ್ಪಷವಾಗಿರುವಾಗಲೂ, ಯಡ್ಡಿ ಸರ್ಕಾರ ಮಾತ್ರ ಅಂದಾಜು 8000 ಕೋಟಿ ರೂಪಾಯಿಗಳನ್ನು ಹೆಚ್ಚಿಗೆ ಸಂಗ್ರಹಿಸಲಿದೆಯೆಂದು ಅಂದಾಜಿಸಲಾಗಿದೆ!
ಇದಲ್ಲದೆ, 15ನೇ ಹಣಕಾಸು ಆಯೋಗದ ವರದಿ 2021-22ರಿಂದ ಜಾರಿಗೆ ಬರಲಿದ್ದು ಕರ್ನಾಟಕದ ಪಾಲು 30,000 ಕೋಟಿ ಕಡಿಮೆಯಾಗಲಿದೆ. ಅದನ್ನು ಈ ಬಜೆಟ್ ಲೆಕ್ಕಾಚಾರಗಳಲ್ಲಿ ಸಂಪೂರ್ಣವಾಗಿ ಲೆಕ್ಕಕ್ಕೆ ತೆಗೆದುಕೊಂಡಿಲ್ಲ.
ಜೊತೆಗೆ 2018 ರಿಂದಾಚೆಗೆ ಒಂದು ವರ್ಷವೂ ಕರ್ನಾಟಕಕ್ಕೇ ಸಂಪೂರ್ಣ GST ಪರಿಹಾರ ದೊರೆತಿಲ್ಲ. ಕಳೆದ ವರ್ಷವಂತೂ ಕೇವಲ ಶೇ. 53 ರಷ್ಟು ಪಾಲು ಮಾತ್ರ ಕರ್ನಾಟಕಕ್ಕೇ ಸಂದಿದೆ. ಈ ಎಲ್ಲಾ ಲೆಕ್ಕಾಚಾರಗಳ ಹಿನ್ನೆಲೆಯಲ್ಲಿ ನೋಡಿದಾಗ ಬಜೆಟ್ಟಿನಲ್ಲಿ ಸರ್ಕಾರ ಘೋಷಿರುವ ಸ್ವೀಕೃತಿಗಿಂತ ವಾಸ್ತವದಲ್ಲಿ ಶೇ. 20ರಷ್ಟು ಅಂದರೆ 40-50 ಸಾವಿರ ಕೋಟಿ ಹಣ ಕೊರತೆ ಬೀಳಲಿದೆ.
ಇದು ಬಜೆಟ್ಟಿನಲ್ಲಿ ತೋರಿಸಿರುವ ಕೊರತೆಯ ಜೊತೆ ಹೆಚ್ಚುವರಿಯಾಗಿ ಆಗಲಿರುವ ಕೊರತೆಯಾಗಿದೆ. ಹೀಗಾಗಿ ವೆಚ್ಚದಲ್ಲೂ ಅದೇ ಪ್ರಮಾಣದಲ್ಲೂ ಕೊರತೆ ಬೀಳಲಿದೆ. ಆಗ ಸರ್ಕಾರದ ಆದ್ಯತೆಗಳೇನಾಗಲಿದೆ ಎಂಬುದನ್ನು ಯಡ್ಡಿ ಸರ್ಕಾರ ಈಗಾಗಲೇ ಬಜೆಟ್ ಭಾಷಣದಲ್ಲಿ ಘೋಷಿಸಲಾದ ತಾರತಮ್ಯ ಮತ್ತು ಆದ್ಯತೆಗಳಲ್ಲಿ ಸ್ಪಷ್ಟಪಡಿಸಿದೆ. ಅಲ್ಲವೇ?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ24 hours agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ24 hours agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ1 day agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ1 day agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ
-
ದಿನದ ಸುದ್ದಿ24 hours agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

