Connect with us

ದಿನದ ಸುದ್ದಿ

ಪ್ರಜಾ ಪರಿವರ್ತನಾ ವೇದಿಕೆಯಿಂದ ಮಾ.14 ರಂದು ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ಕುರಿತು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ

Published

on

ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್‌ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ ಪರಿವರ್ತನಾ ವೇದಿಕೆಯು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು ಭಾಗವಹಿಸಬೇಕೆಂದು ವೇದಿಕೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಮಾನ್ಯರೆ,

ಭಾರತ ಸ್ವಾತಂತ್ರ್ಯ ಪಡೆದು ಸಂವಿಧಾನವನ್ನು ಒಪ್ಪಿ ಜಾರಿಗೊಳಿಸಿದ ದಿನದಿಂದಲೂ ಮೀಸಲಾತಿಯ ವಿರುದ್ಧ ಅಪಸ್ವರಗಳನ್ನು ಮುಂದುಮಾಡುವ ಪರಿಪಾಠವನ್ನು ನಿರಂತರವಾಗಿ ಚಾಲ್ತಿಯಲ್ಲಿ ಇಡಲಾಗಿದೆ. ಇತ್ತೀಚೆಗೆ ಭಾರತದಾದ್ಯಂತ ಮೀಸಲಾತಿಯನ್ನು ವಿರೋಧಿಸುತ್ತಿದ್ದವರು ಸಹ ತಮಗೂ ಮೀಸಲಾತಿಯನ್ನು ನೀಡಬೇಕೆಂದು ಉಗ್ರ ಹೋರಾಟಕ್ಕೆ ಮುಂದಾಗುತ್ತಿದ್ದಾರೆ.

ಕರ್ನಾಟಕದಲ್ಲಿ ಬಲಾಢ್ಯ ಸಮುದಾಯಗಳು ಮಾತ್ರವಲ್ಲದೆ, ಮೀಸಲಾತಿಯನ್ನು ಅನುಭವಿಸುತ್ತಿರುವ ಸಮುದಾಯಗಳೂ ಮೀಸಲಾತಿಯಲ್ಲಿ ತಮ್ಮನ್ನು ಒಂದು ಪ್ರವರ್ಗದಿಂದ ಮತ್ತೊಂದು ಪ್ರವರ್ಗಕಗಕೆ ಸ್ಥಳಾಂತರಿಸಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿವೆ. ಇದರಲ್ಲಿ ಧಾರ್ಮಿಕ ಮುಖಂಡರು, ಮಠಾಧೀಶರು, ಜನಪ್ರತಿನಿಧಿಗಳು ಮತ್ತು ಜಾತೀಯ ಸಮುದಾಯಗಳು ಒಗ್ಗಟ್ಟಾಗಿ ಬಲಪ್ರದರ್ಶನದಲ್ಲಿ ತೊಡಗಿವೆ.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲು ಅವಕಾಶವಿದೆ. ಅದಕ್ಕೆ ಸಂವಿಧಾನವೂ ಸಹ ಬೆಂಬಲವಾಗಿದೆ. ಆದರೆ ಮೀಸಲಾತಿಯ ಮೂಲ ಆಶಯಗಳು ಇದರಲ್ಲಿ ಕಣ್ಮರೆಯಾಗುತ್ತಿರುವುದು ದುರಂತವೇ ಸರಿ. ಇತ್ತೀಚೆಗಷ್ಟೇ ಮೇಲ್ವರ್ಗದಲ್ಲಿನ ಬಡವರಿಗೆ ಶೇ 10. ಮೀಸಲಾತಿಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಷಯ ಮಂಡಿಸಿ ಯಾವ ವಿರೋಧವೂ ಇಲ್ಲದಂತೆ ಸಂವಿಧಾನಕ್ಕೆ ತಿದ್ದುಪಡಿ ತಂದು ಜಾರಿಗೊಳಿಸಿದೆ. ಇದಕ್ಕೆ ಯಾವುದೇ ರೀತಿಯ ಹೋರಾಟ, ಹಕ್ಕೊತ್ತಾಯ, ಅಧ್ಯಯನ ಸಮಿತಿ ವರದಿ, ವೈಜ್ಞಾನಿಕ ಅಧ್ಯಯನ ಅಥವಾ ಸಾಮಾಜಿಕ ಒತ್ತಡಗಳಾಗಲಿ ಇರಲಿಲ್ಲ. ಆಳುವ ಸರ್ಕಾರದ ಹಿತಾಸಕ್ತಿ ಇದಾಗಿತ್ತು ಎಂಬುದನ್ನು ನೆನಪಿನಲ್ಲಿಡಬೇಕು.

ಮೀಸಲಾತಿಯು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ. ಅದು ಸಾಮಾಜಿಕ ಆರ್ಥಿಕ ಅಸಮಾನತೆ ಮತ್ತು ಅವಗಣನೆಗೆ ಒಳಪಟ್ಟಿರುವ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಸುವ ಒಂದು ಉಪಕ್ರಮ. ಜಾತಿಗ್ರಸ್ಥವಾಗಿರುವ ಸಮಾಜವನ್ನು ಜಾತಿರಹಿತವಾಗಿ ರೂಪಿಸುವ ಮಹತ್ವಾಕಾಂಕ್ಷೆಯ ತುಡಿತ ಮೀಸಲಾತಿಯ ಅಂತರಂಗದಲ್ಲಿದೆ.

ಈ ಮೂಲಕ ಪ್ರತಿಯೊಬ್ಬರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸುವ ಮೂಲಕ ಪ್ರಬುದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪ ಮೀಸಲಾತಿಯದ್ದಾಗಿದೆ, ಇಂಥ ಆಶಯಗಳನ್ನು ಗೊಂದಲಗೊಳಿಸಿ ಜಾತಿ– ಮತಗಳ ನಡುವೆ ದ್ವೇಷ, ವೈಷಮ್ಯಗಳನ್ನು ಹರಡಿ ಜಾತಿವ್ಯವಸ್ಥೆಯನ್ನು ಮತ್ತಷ್ಟು ಜಟಿಲಗೊಳಿಸುವ ಆಯುಧವನ್ನಾಗಿ ಮೀಸಲಾತಿಯನ್ನು ಬಳಸಲಾಗುತ್ತಿದೆ.

ಪ್ರಸ್ತುತ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟಗಳನ್ನು ನ್ಯಾಯಸಮ್ಮತ ಎಂದು ಭಾವಿಸಿದರೂ ಪ್ರಾಯೋಗಿಕವಾಗಿ ಅಸಂಬದ್ಧವಾಗಿದೆ ಎನ್ನುವುದು ವಾಸ್ತವ ಸತ್ಯ. ಇದು ಅನೇಕರಿಗೆ ಮನವರಿಕೆಯಾಗಿರುವ ಸಾಧ್ಯತೆಯಿದೆ. ಏಕೆಂದರೆ ಸರ್ವೋಚ್ಚ ನ್ಯಾಯಾಲಯವು ‘‘ಇಂದಿರಾ ಸಹಾನಿ’’ ಪ್ರಕರಣದಲ್ಲಿ ಮೀಸಲಾತಿಯ ಪ್ರಮಾಣ ಒಟ್ಟು ಶೇ. 50 ಮೀರಬಾರದು ಎಂಬ ನಿರ್ಬಂಧವನ್ನು ಹೇರಿದೆ.

ಅಗತ್ಯವಿದ್ದರೆ ಕೇಂದ್ರ ಸರ್ಕಾರ ಕ್ರಮಬದ್ಧವಾದ ರೀತಿಯಲ್ಲಿ ಶಾಸನಾತ್ಮಕವಾಗಿ ಮಿತಿಯನ್ನು ಮೀರಿ ಪ್ರಮಾಣವನ್ನು ಹೆಚ್ಚಳಗೊಳಿಸುವ ಅವಕಾಶ ಇದ್ದೇ ಇದೆ. ಸಂವಿಧಾನದ 340ನೇ ವಿಧಿಯನ್ವಯ ಸಮುದಾಯಗಳ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕ ವಿಧಿ ವಿಧಾನಗಳಿಂದ ದೃಢೀಕರಿಸಿ ನ್ಯಾಯಸಮ್ಮತವಾಗಿ ಅರ್ಹರಾದವರಿಗೆ ಮೀಸಲಾತಿಯನ್ನು ವಿಸ್ತರಿಸುವುದಕ್ಕೆ ಸಾಧ್ಯವಿದೆ.

ಇದು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರದ ಮಟ್ಟದಲ್ಲಿಯೇ ಇತ್ಯರ್ಥವಾಗಬೇಕಾದ ವಿಷಯ. ಅಂದರೆ ಸಂವಿಧಾನಾತ್ಮಕವಾಗಿ ಮೀಸಲಾತಿ ಪ್ರಮಾಣ ಹೆಚ್ಚಾದಲ್ಲಿ ಮಾತ್ರ ಮೀಸಲಾತಿಗಾಗಿ ನಡೆಸುತ್ತಿರುವ ಹಕ್ಕೊತ್ತಾಯಗಳು ಫಲಪ್ರದವಾಗುತ್ತವೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ ಆದರೆ ಈ ನಿಟ್ಟಿನಲ್ಲಿ ಯಾವುದೇ ಬಗೆಯ ಹೋರಾಟಗಳೂ ನಡೆಯುತ್ತಿಲ್ಲ.

ಮೀಸಲಾತಿ ವಿವಾದಗಳಿಲ್ಲನ ಮತ್ತೊಂದು ವಿರೋಧಾಭಾಸ ಏನೆಂದರೆ ಬಂಡವಾಳಶಾಹಿ ವ್ಯವಸ್ಥೆಯನ್ನು ಸದೃಢಗೊಳಿಸಿ ತೀವ್ರತರವಾಗಿ ಖಾಸಗೀಕರಣಕ್ಕೆ ಮುಕ್ತಗೊಳಿಸುತ್ತಿರುವುದು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಒಪ್ಪಿಸಿ ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲಾಗುತ್ತಿದೆ. ಈಗಾಗಲೇ ಶಿಕ್ಷಣ ಕ್ಷೇತ್ರವನ್ನು ಬಹುಪಾಲು ಖಾಸಗೀ ಬಂಡವಾಳಿಗರ ವ್ಯಾಪಾರೀ ಕ್ಷೇತ್ರವನ್ನಾಗಿಸುವುದು ಸೂರ್ಯ ಸ್ಪಷ್ಟವಾಗಿದೆ.

ಅಳಿದುಳಿದ ಸರ್ಕಾರಿ ವಲಯದಲ್ಲಿಯೂ ನೇಮಕಾತಿಗಳನ್ನು ಮಾಡದೆ ಗುತ್ತಿಗೆ ಹೊರಗುತ್ತಿಗೆ ಪದ್ಧತಿಯನ್ನು ಜಾರಿಗೊಳಸಿಲಾಗಿದೆ. ವಾಸ್ತವ ಸ್ಥಿತಿ ಹೀಗಿರುವಾಗ ಶಿಕ್ಷಣ ಮತ್ತು ಉದ್ಯೋಗಗಳಲ್ಲಿನ ಮೀಸಲಾತಿಗಾಗಿ ಹಂಬಲಿಸುವುದೇ ಬಹುದೊಡ್ಡ ವೈರುಧ್ಯವಾಗಿ ಪರಿಣಮಿಸಿದೆ. ಬೃಹದಾಕಾರದಲ್ಲಿ ವಿಸ್ತಾರವಾಗುತ್ತಿರುವ ಖಾಸಗೀ ಕ್ಷೇತ್ರದಲ್ಲಿ ಮೀಸಲಾತಿಯನ್ನು ಹೊಂದಬೇಕಾದ್ದು ಇಂದಿನ ಅಗತ್ಯ. ಮೀಸಲಾತಿ ಹೋರಾಟಗಳು ಅನಿವಾರ್ಯವಾಗಿ ಖಾಸಗೀ ಕ್ಷೇತ್ರದ ಮೀಸಲಾತಿಗಾಗಿ ಸಂಘಟಿತಗೊಳ್ಳಬೇಕಾದ ತುರ್ತು ಇಂದಿನದಾಗಿದೆ.

ಇದನ್ನೂ ಓದಿ | ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!

ಮೀಸಲಾತಿಯ ಹೆಚ್ಚಳ ಮತ್ತು ಖಾಸಗೀ ವಲಯವನ್ನು ಮೀಸಲಾತಿ ತೆಕ್ಕೆಗೆ ಸೇರಿಸಿಕೊಳ್ಳುವುದಕ್ಕಿಂತಲೂ ಬಹುದೊಡ್ಡ ವ್ಯಂಗ್ಯ ಮತ್ತೊಂದಿದೆ. ಅದೇನೆಂದರೆ ಸಂವಿಧಾನದತ್ತವಾಗಿಯೇ ಪರಿಶಿಷ್ಟಜಾತಿ– ಪರಿಶಿಷ್ಟವರ್ಗಗಳು ಹಿಂದುಳಿದ ವರ್ಗಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆಂದು ನಿಗಧಿಯಾಗಿದ್ದ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗಳಿಸದಿರುವುದು. ಈ ವರ್ಗಗಳಿಗೆಂದು ಶೇ. 50 ಮೀರದಂತೆ ಕರ್ನಾಟಕದಲ್ಲಿ ಒಟ್ಟು ಶೇ. 49.5 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದೆ.

ಆದರೆ ಇದರಲ್ಲಿ ಜಾರಿಯಾಗಿರುವ ಪ್ರಮಾಣವೆಂದರೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿ ಶೇ.12 ಜಾರಿಯಾಗಿದೆ ಇನ್ನೂ ಶೇ. 6 ಖಾಲಿಯಿದೆ. ಇತರೆ ಹಿಂದುಳಿದ ವರ್ಗಗಳಿಗೆ ಶೇ 5 ಜಾರಿಗೊಳಸಿದ್ದು ಖಾಲಿಯಿರುವ ಪ್ರಮಾಣ ಶೇ 22 ಇದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಜಾರಿಗೊಳಿಸಿರುವುದು ಶೇ 2.5 ಖಾಲಿಯಿರುವುದು ಶೇ 2 ಅಂದರೆ ಮೀಸಲಾತಿಯಲ್ಲಿ ಜಾರಿಯಾಗಿರುವ ಒಟ್ಟು ಪ್ರಮಾಣ ಕೇವಲ ಶೇ. 19.5 ಮಾತ್ರ. ಇನ್ನೂ ಶೇ 30ರಷ್ಟು ಮೀಸಲಾತಿಯೇ ಭರ್ತಿಯಾಗಿರುವುದಿಲ್ಲ. ಈ ಅಂತರ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ವಿಸ್ತಾರಗೊಳ್ಳುತ್ತದೆ.

ಈ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಧರ್ಮ, ಜಾತಿ, ಉಪಜಾತಿಗಳ ನಡುವೆ ಮೀಸಲಾತಿ ವಿಷಯವನ್ನು ನೆಪಮಾಡಿ ಅಸಹನೆಯನ್ನು ತುಂಬುತ್ತಿರುವುದು ಯಾವ ನ್ಯಾಯ? ಈ ರೀತಿಯ ಕಟುವಾಸ್ತವಗಳನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕಿದೆ. ನಮ್ಮ ನಡುವಿನ ಸಾಮಾಜಿಕ ಆರ್ಥಿಕ ರಾಜಕೀಯ ವಿದ್ಯಾಮಾನಗಳು ಮಾನವೀಯವಾದ ಮೌಲ್ಯಗಳನ್ನು ಕಳೆದುಕೊಂಡು ಸಮಯಕ್ಕೊಂದು ಸುಳ್ಳನ್ನು ಹೆಣೆದು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಿವೆ.

ಆಳುವ ಸರ್ಕಾರಗಳಿಗೆ ಇದೊಂದು ಅಸ್ತ್ರವಾಗಿ ಪರಿಣಮಿಸಿದೆ. ದೇಶದ ಜನತೆಯನ್ನು ಗೊಂದಲದಲ್ಲಿ ದೂಡಿ ಅತಂತ್ರಗೊಳಸಿ ವರ್ಣಾಶ್ರಮ ವ್ಯವಸ್ಥೆಯನ್ನು ಶಾಶ್ವತಗೊಳಿಸುವ ಹುನ್ನಾರದಲ್ಲಿವೆ. ಇನ್ನಾದರೂ ನಾವೆಲ್ಲ ಇದನ್ನು ಅರ್ಥಮಾಡಿಕೊಂಡು ಒಗ್ಗಟ್ಟಾಗಿ ಸಂವಾದ ಸಂಘರ್ಷವನ್ನು ಕಟ್ಟುವ ಮೂಲಕ ಆಳುವ ವ್ಯವಸ್ಥೆಯನ್ನು ಎಚ್ಚರಿಸಬೇಕಾಗಿದೆ.

’ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಿ; ಇಲ್ಲವಾದರೆ ಅಧಿಕಾರವನ್ನು ತ್ಯಜಿಸಿ‘ ಎಂದು ಕೇಳುವ ಸ್ಥಿತಿ ಬಂದಿದೆ. ಜನತಂತ್ರದಲ್ಲಿ ಜನರದ್ದೇ ಪರಮಾಧಿಕಾರ ಎಂಬ ಸತ್ಯವನ್ನು ಸಾಕಾರಗೊಳಿಸೋಣ. ಪ್ರಜಾಪ್ರಭುತ್ವವನ್ನು ಉಳಿಸೋಣ ಎಲ್ಲರೂ ಬನ್ನಿ; ನಿಮ್ಮವರನ್ನೇಲ್ಲ ಕರೆ ತನ್ನಿ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ.

ಪ್ರಜಾ ಪರಿವರ್ತನಾ ವೇದಿಕೆ, ಕರ್ನಾಟಕ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ6 days ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ6 days ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ6 days ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ6 days ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

ದಿನದ ಸುದ್ದಿ2 weeks ago

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ....

ದಿನದ ಸುದ್ದಿ2 weeks ago

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು...

ದಿನದ ಸುದ್ದಿ2 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

Trending