Connect with us

ದಿನದ ಸುದ್ದಿ

ಪ್ರಜಾ ಪರಿವರ್ತನಾ ವೇದಿಕೆಯಿಂದ ಮಾ.14 ರಂದು ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ಕುರಿತು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸಮಾವೇಶ

Published

on

ಸುದ್ದಿದಿನ,ಬೆಂಗಳೂರು : ನಗರದ ವಸಂತ ನಗರದಲ್ಲಿನ ಅಂಬೇಡ್ಕರ್‌ ಭವನದಲ್ಲಿ ಮಾರ್ಚ್ 14 ರಂದು ಭಾನುವಾರ ‘ಮೀಸಲಾತಿ ವಿವಾದ: ವಾಸ್ತವ ಸ್ಥಿತಿಗತಿಗಳು’ ವಿಷಯಕ್ಕೆ ಕುರಿತಂತೆ ರಾಜ್ಯಮಟ್ಟದ ಸಮಾವೇಶವನ್ನು ಪ್ರಜಾ ಪರಿವರ್ತನಾ ವೇದಿಕೆಯು ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಂಧುಗಳು ಭಾಗವಹಿಸಬೇಕೆಂದು ವೇದಿಕೆ ಪ್ರಕಟಣೆಯಲ್ಲಿ ಮನವಿ ಮಾಡಿದೆ.

ಮಾನ್ಯರೆ,

ಭಾರತ ಸ್ವಾತಂತ್ರ್ಯ ಪಡೆದು ಸಂವಿಧಾನವನ್ನು ಒಪ್ಪಿ ಜಾರಿಗೊಳಿಸಿದ ದಿನದಿಂದಲೂ ಮೀಸಲಾತಿಯ ವಿರುದ್ಧ ಅಪಸ್ವರಗಳನ್ನು ಮುಂದುಮಾಡುವ ಪರಿಪಾಠವನ್ನು ನಿರಂತರವಾಗಿ ಚಾಲ್ತಿಯಲ್ಲಿ ಇಡಲಾಗಿದೆ. ಇತ್ತೀಚೆಗೆ ಭಾರತದಾದ್ಯಂತ ಮೀಸಲಾತಿಯನ್ನು ವಿರೋಧಿಸುತ್ತಿದ್ದವರು ಸಹ ತಮಗೂ ಮೀಸಲಾತಿಯನ್ನು ನೀಡಬೇಕೆಂದು ಉಗ್ರ ಹೋರಾಟಕ್ಕೆ ಮುಂದಾಗುತ್ತಿದ್ದಾರೆ.

ಕರ್ನಾಟಕದಲ್ಲಿ ಬಲಾಢ್ಯ ಸಮುದಾಯಗಳು ಮಾತ್ರವಲ್ಲದೆ, ಮೀಸಲಾತಿಯನ್ನು ಅನುಭವಿಸುತ್ತಿರುವ ಸಮುದಾಯಗಳೂ ಮೀಸಲಾತಿಯಲ್ಲಿ ತಮ್ಮನ್ನು ಒಂದು ಪ್ರವರ್ಗದಿಂದ ಮತ್ತೊಂದು ಪ್ರವರ್ಗಕಗಕೆ ಸ್ಥಳಾಂತರಿಸಿ ಮೀಸಲಾತಿ ನೀಡುವಂತೆ ಒತ್ತಾಯಿಸುತ್ತಿವೆ. ಇದರಲ್ಲಿ ಧಾರ್ಮಿಕ ಮುಖಂಡರು, ಮಠಾಧೀಶರು, ಜನಪ್ರತಿನಿಧಿಗಳು ಮತ್ತು ಜಾತೀಯ ಸಮುದಾಯಗಳು ಒಗ್ಗಟ್ಟಾಗಿ ಬಲಪ್ರದರ್ಶನದಲ್ಲಿ ತೊಡಗಿವೆ.

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಲು ಅವಕಾಶವಿದೆ. ಅದಕ್ಕೆ ಸಂವಿಧಾನವೂ ಸಹ ಬೆಂಬಲವಾಗಿದೆ. ಆದರೆ ಮೀಸಲಾತಿಯ ಮೂಲ ಆಶಯಗಳು ಇದರಲ್ಲಿ ಕಣ್ಮರೆಯಾಗುತ್ತಿರುವುದು ದುರಂತವೇ ಸರಿ. ಇತ್ತೀಚೆಗಷ್ಟೇ ಮೇಲ್ವರ್ಗದಲ್ಲಿನ ಬಡವರಿಗೆ ಶೇ 10. ಮೀಸಲಾತಿಯನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ವಿಷಯ ಮಂಡಿಸಿ ಯಾವ ವಿರೋಧವೂ ಇಲ್ಲದಂತೆ ಸಂವಿಧಾನಕ್ಕೆ ತಿದ್ದುಪಡಿ ತಂದು ಜಾರಿಗೊಳಿಸಿದೆ. ಇದಕ್ಕೆ ಯಾವುದೇ ರೀತಿಯ ಹೋರಾಟ, ಹಕ್ಕೊತ್ತಾಯ, ಅಧ್ಯಯನ ಸಮಿತಿ ವರದಿ, ವೈಜ್ಞಾನಿಕ ಅಧ್ಯಯನ ಅಥವಾ ಸಾಮಾಜಿಕ ಒತ್ತಡಗಳಾಗಲಿ ಇರಲಿಲ್ಲ. ಆಳುವ ಸರ್ಕಾರದ ಹಿತಾಸಕ್ತಿ ಇದಾಗಿತ್ತು ಎಂಬುದನ್ನು ನೆನಪಿನಲ್ಲಿಡಬೇಕು.

ಮೀಸಲಾತಿಯು ಬಡತನ ನಿರ್ಮೂಲನಾ ಕಾರ್ಯಕ್ರಮವಲ್ಲ. ಅದು ಸಾಮಾಜಿಕ ಆರ್ಥಿಕ ಅಸಮಾನತೆ ಮತ್ತು ಅವಗಣನೆಗೆ ಒಳಪಟ್ಟಿರುವ ಸಮುದಾಯಗಳಿಗೆ ಪ್ರಾತಿನಿಧ್ಯ ಕಲ್ಪಸುವ ಒಂದು ಉಪಕ್ರಮ. ಜಾತಿಗ್ರಸ್ಥವಾಗಿರುವ ಸಮಾಜವನ್ನು ಜಾತಿರಹಿತವಾಗಿ ರೂಪಿಸುವ ಮಹತ್ವಾಕಾಂಕ್ಷೆಯ ತುಡಿತ ಮೀಸಲಾತಿಯ ಅಂತರಂಗದಲ್ಲಿದೆ.

ಈ ಮೂಲಕ ಪ್ರತಿಯೊಬ್ಬರನ್ನು ಜವಾಬ್ದಾರಿಯುತ ಪ್ರಜೆಗಳನ್ನಾಗಿಸುವ ಮೂಲಕ ಪ್ರಬುದ್ಧ ಭಾರತವನ್ನು ನಿರ್ಮಿಸುವ ಸಂಕಲ್ಪ ಮೀಸಲಾತಿಯದ್ದಾಗಿದೆ, ಇಂಥ ಆಶಯಗಳನ್ನು ಗೊಂದಲಗೊಳಿಸಿ ಜಾತಿ– ಮತಗಳ ನಡುವೆ ದ್ವೇಷ, ವೈಷಮ್ಯಗಳನ್ನು ಹರಡಿ ಜಾತಿವ್ಯವಸ್ಥೆಯನ್ನು ಮತ್ತಷ್ಟು ಜಟಿಲಗೊಳಿಸುವ ಆಯುಧವನ್ನಾಗಿ ಮೀಸಲಾತಿಯನ್ನು ಬಳಸಲಾಗುತ್ತಿದೆ.

ಪ್ರಸ್ತುತ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟಗಳನ್ನು ನ್ಯಾಯಸಮ್ಮತ ಎಂದು ಭಾವಿಸಿದರೂ ಪ್ರಾಯೋಗಿಕವಾಗಿ ಅಸಂಬದ್ಧವಾಗಿದೆ ಎನ್ನುವುದು ವಾಸ್ತವ ಸತ್ಯ. ಇದು ಅನೇಕರಿಗೆ ಮನವರಿಕೆಯಾಗಿರುವ ಸಾಧ್ಯತೆಯಿದೆ. ಏಕೆಂದರೆ ಸರ್ವೋಚ್ಚ ನ್ಯಾಯಾಲಯವು ‘‘ಇಂದಿರಾ ಸಹಾನಿ’’ ಪ್ರಕರಣದಲ್ಲಿ ಮೀಸಲಾತಿಯ ಪ್ರಮಾಣ ಒಟ್ಟು ಶೇ. 50 ಮೀರಬಾರದು ಎಂಬ ನಿರ್ಬಂಧವನ್ನು ಹೇರಿದೆ.

ಅಗತ್ಯವಿದ್ದರೆ ಕೇಂದ್ರ ಸರ್ಕಾರ ಕ್ರಮಬದ್ಧವಾದ ರೀತಿಯಲ್ಲಿ ಶಾಸನಾತ್ಮಕವಾಗಿ ಮಿತಿಯನ್ನು ಮೀರಿ ಪ್ರಮಾಣವನ್ನು ಹೆಚ್ಚಳಗೊಳಿಸುವ ಅವಕಾಶ ಇದ್ದೇ ಇದೆ. ಸಂವಿಧಾನದ 340ನೇ ವಿಧಿಯನ್ವಯ ಸಮುದಾಯಗಳ ಹಿಂದುಳಿದಿರುವಿಕೆಯನ್ನು ವೈಜ್ಞಾನಿಕ ವಿಧಿ ವಿಧಾನಗಳಿಂದ ದೃಢೀಕರಿಸಿ ನ್ಯಾಯಸಮ್ಮತವಾಗಿ ಅರ್ಹರಾದವರಿಗೆ ಮೀಸಲಾತಿಯನ್ನು ವಿಸ್ತರಿಸುವುದಕ್ಕೆ ಸಾಧ್ಯವಿದೆ.

ಇದು ಸಂವಿಧಾನ ತಿದ್ದುಪಡಿಯ ಮೂಲಕ ಕೇಂದ್ರದ ಮಟ್ಟದಲ್ಲಿಯೇ ಇತ್ಯರ್ಥವಾಗಬೇಕಾದ ವಿಷಯ. ಅಂದರೆ ಸಂವಿಧಾನಾತ್ಮಕವಾಗಿ ಮೀಸಲಾತಿ ಪ್ರಮಾಣ ಹೆಚ್ಚಾದಲ್ಲಿ ಮಾತ್ರ ಮೀಸಲಾತಿಗಾಗಿ ನಡೆಸುತ್ತಿರುವ ಹಕ್ಕೊತ್ತಾಯಗಳು ಫಲಪ್ರದವಾಗುತ್ತವೆ ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕಿದೆ ಆದರೆ ಈ ನಿಟ್ಟಿನಲ್ಲಿ ಯಾವುದೇ ಬಗೆಯ ಹೋರಾಟಗಳೂ ನಡೆಯುತ್ತಿಲ್ಲ.

ಮೀಸಲಾತಿ ವಿವಾದಗಳಿಲ್ಲನ ಮತ್ತೊಂದು ವಿರೋಧಾಭಾಸ ಏನೆಂದರೆ ಬಂಡವಾಳಶಾಹಿ ವ್ಯವಸ್ಥೆಯನ್ನು ಸದೃಢಗೊಳಿಸಿ ತೀವ್ರತರವಾಗಿ ಖಾಸಗೀಕರಣಕ್ಕೆ ಮುಕ್ತಗೊಳಿಸುತ್ತಿರುವುದು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗಿಯವರಿಗೆ ಒಪ್ಪಿಸಿ ಮೀಸಲಾತಿ ವ್ಯವಸ್ಥೆಗೆ ಅಂತ್ಯ ಹಾಡಲಾಗುತ್ತಿದೆ. ಈಗಾಗಲೇ ಶಿಕ್ಷಣ ಕ್ಷೇತ್ರವನ್ನು ಬಹುಪಾಲು ಖಾಸಗೀ ಬಂಡವಾಳಿಗರ ವ್ಯಾಪಾರೀ ಕ್ಷೇತ್ರವನ್ನಾಗಿಸುವುದು ಸೂರ್ಯ ಸ್ಪಷ್ಟವಾಗಿದೆ.

ಅಳಿದುಳಿದ ಸರ್ಕಾರಿ ವಲಯದಲ್ಲಿಯೂ ನೇಮಕಾತಿಗಳನ್ನು ಮಾಡದೆ ಗುತ್ತಿಗೆ ಹೊರಗುತ್ತಿಗೆ ಪದ್ಧತಿಯನ್ನು ಜಾರಿಗೊಳಸಿಲಾಗಿದೆ. ವಾಸ್ತವ ಸ್ಥಿತಿ ಹೀಗಿರುವಾಗ ಶಿಕ್ಷಣ ಮತ್ತು ಉದ್ಯೋಗಗಳಲ್ಲಿನ ಮೀಸಲಾತಿಗಾಗಿ ಹಂಬಲಿಸುವುದೇ ಬಹುದೊಡ್ಡ ವೈರುಧ್ಯವಾಗಿ ಪರಿಣಮಿಸಿದೆ. ಬೃಹದಾಕಾರದಲ್ಲಿ ವಿಸ್ತಾರವಾಗುತ್ತಿರುವ ಖಾಸಗೀ ಕ್ಷೇತ್ರದಲ್ಲಿ ಮೀಸಲಾತಿಯನ್ನು ಹೊಂದಬೇಕಾದ್ದು ಇಂದಿನ ಅಗತ್ಯ. ಮೀಸಲಾತಿ ಹೋರಾಟಗಳು ಅನಿವಾರ್ಯವಾಗಿ ಖಾಸಗೀ ಕ್ಷೇತ್ರದ ಮೀಸಲಾತಿಗಾಗಿ ಸಂಘಟಿತಗೊಳ್ಳಬೇಕಾದ ತುರ್ತು ಇಂದಿನದಾಗಿದೆ.

ಇದನ್ನೂ ಓದಿ | ಆತ್ಮನಿರ್ಭರ ಭಾರತದ ಆತ್ಮವಂಚಕ ಮುಖಗಳು..!

ಮೀಸಲಾತಿಯ ಹೆಚ್ಚಳ ಮತ್ತು ಖಾಸಗೀ ವಲಯವನ್ನು ಮೀಸಲಾತಿ ತೆಕ್ಕೆಗೆ ಸೇರಿಸಿಕೊಳ್ಳುವುದಕ್ಕಿಂತಲೂ ಬಹುದೊಡ್ಡ ವ್ಯಂಗ್ಯ ಮತ್ತೊಂದಿದೆ. ಅದೇನೆಂದರೆ ಸಂವಿಧಾನದತ್ತವಾಗಿಯೇ ಪರಿಶಿಷ್ಟಜಾತಿ– ಪರಿಶಿಷ್ಟವರ್ಗಗಳು ಹಿಂದುಳಿದ ವರ್ಗಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆಂದು ನಿಗಧಿಯಾಗಿದ್ದ ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗಳಿಸದಿರುವುದು. ಈ ವರ್ಗಗಳಿಗೆಂದು ಶೇ. 50 ಮೀರದಂತೆ ಕರ್ನಾಟಕದಲ್ಲಿ ಒಟ್ಟು ಶೇ. 49.5 ರಷ್ಟು ಮೀಸಲಾತಿಯನ್ನು ನಿಗದಿಪಡಿಸಿದೆ.

ಆದರೆ ಇದರಲ್ಲಿ ಜಾರಿಯಾಗಿರುವ ಪ್ರಮಾಣವೆಂದರೆ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆ ಸೇರಿ ಶೇ.12 ಜಾರಿಯಾಗಿದೆ ಇನ್ನೂ ಶೇ. 6 ಖಾಲಿಯಿದೆ. ಇತರೆ ಹಿಂದುಳಿದ ವರ್ಗಗಳಿಗೆ ಶೇ 5 ಜಾರಿಗೊಳಸಿದ್ದು ಖಾಲಿಯಿರುವ ಪ್ರಮಾಣ ಶೇ 22 ಇದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ ಜಾರಿಗೊಳಿಸಿರುವುದು ಶೇ 2.5 ಖಾಲಿಯಿರುವುದು ಶೇ 2 ಅಂದರೆ ಮೀಸಲಾತಿಯಲ್ಲಿ ಜಾರಿಯಾಗಿರುವ ಒಟ್ಟು ಪ್ರಮಾಣ ಕೇವಲ ಶೇ. 19.5 ಮಾತ್ರ. ಇನ್ನೂ ಶೇ 30ರಷ್ಟು ಮೀಸಲಾತಿಯೇ ಭರ್ತಿಯಾಗಿರುವುದಿಲ್ಲ. ಈ ಅಂತರ ರಾಷ್ಟ್ರಮಟ್ಟದಲ್ಲಿ ಮತ್ತಷ್ಟು ವಿಸ್ತಾರಗೊಳ್ಳುತ್ತದೆ.

ಈ ವಾಸ್ತವ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳದೆ ಧರ್ಮ, ಜಾತಿ, ಉಪಜಾತಿಗಳ ನಡುವೆ ಮೀಸಲಾತಿ ವಿಷಯವನ್ನು ನೆಪಮಾಡಿ ಅಸಹನೆಯನ್ನು ತುಂಬುತ್ತಿರುವುದು ಯಾವ ನ್ಯಾಯ? ಈ ರೀತಿಯ ಕಟುವಾಸ್ತವಗಳನ್ನು ನಾವೆಲ್ಲ ಅರ್ಥಮಾಡಿಕೊಳ್ಳಬೇಕಿದೆ. ನಮ್ಮ ನಡುವಿನ ಸಾಮಾಜಿಕ ಆರ್ಥಿಕ ರಾಜಕೀಯ ವಿದ್ಯಾಮಾನಗಳು ಮಾನವೀಯವಾದ ಮೌಲ್ಯಗಳನ್ನು ಕಳೆದುಕೊಂಡು ಸಮಯಕ್ಕೊಂದು ಸುಳ್ಳನ್ನು ಹೆಣೆದು ದಾರಿತಪ್ಪಿಸುವ ಕೆಲಸವನ್ನು ಮಾಡುತ್ತಿವೆ.

ಆಳುವ ಸರ್ಕಾರಗಳಿಗೆ ಇದೊಂದು ಅಸ್ತ್ರವಾಗಿ ಪರಿಣಮಿಸಿದೆ. ದೇಶದ ಜನತೆಯನ್ನು ಗೊಂದಲದಲ್ಲಿ ದೂಡಿ ಅತಂತ್ರಗೊಳಸಿ ವರ್ಣಾಶ್ರಮ ವ್ಯವಸ್ಥೆಯನ್ನು ಶಾಶ್ವತಗೊಳಿಸುವ ಹುನ್ನಾರದಲ್ಲಿವೆ. ಇನ್ನಾದರೂ ನಾವೆಲ್ಲ ಇದನ್ನು ಅರ್ಥಮಾಡಿಕೊಂಡು ಒಗ್ಗಟ್ಟಾಗಿ ಸಂವಾದ ಸಂಘರ್ಷವನ್ನು ಕಟ್ಟುವ ಮೂಲಕ ಆಳುವ ವ್ಯವಸ್ಥೆಯನ್ನು ಎಚ್ಚರಿಸಬೇಕಾಗಿದೆ.

’ಮೀಸಲಾತಿಯನ್ನು ಸಂಪೂರ್ಣವಾಗಿ ಜಾರಿಗೊಳಿಸಿ; ಇಲ್ಲವಾದರೆ ಅಧಿಕಾರವನ್ನು ತ್ಯಜಿಸಿ‘ ಎಂದು ಕೇಳುವ ಸ್ಥಿತಿ ಬಂದಿದೆ. ಜನತಂತ್ರದಲ್ಲಿ ಜನರದ್ದೇ ಪರಮಾಧಿಕಾರ ಎಂಬ ಸತ್ಯವನ್ನು ಸಾಕಾರಗೊಳಿಸೋಣ. ಪ್ರಜಾಪ್ರಭುತ್ವವನ್ನು ಉಳಿಸೋಣ ಎಲ್ಲರೂ ಬನ್ನಿ; ನಿಮ್ಮವರನ್ನೇಲ್ಲ ಕರೆ ತನ್ನಿ. ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯೋಣ.

ಪ್ರಜಾ ಪರಿವರ್ತನಾ ವೇದಿಕೆ, ಕರ್ನಾಟಕ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಿಡಿಯೋ | ಕೆಡಿ ಸೆಟ್ಟಲ್ಲಿ ಜೋಗಿ ಪ್ರೇಮ್‌ ಗೆ ಶಿಲ್ಪಾ ಶೆಟ್ಟಿ ಮಾಡಿದ್ದೇನು..?

Published

on

ಸುದ್ದಿದಿನ ಡೆಸ್ಕ್ : ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಕೇಕೆ ಹೊಡೆದಿರೋ ಘಟನೆ ನಡೆದಿದೆ. ಕೆಡಿ ಸಿನಿಮಾದ ಮೂಲಕ ಕನ್ನಡಕ್ಕೆ ಕಂಬ್ಯಾಕ್‌ ಮಾಡಿರೋ ಬಾಲಿವುಡ್‌ ಚೆಲುವೆ ಶಿಲ್ಪಾ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದರು.

ಕೊನೆಯ ದಿನ ಕಾವೇರಿ ನದಿ ತೀರದಲ್ಲಿ ಕೆಡಿ ಚಿತ್ರೀಕರಣ ನಡೆದಿದ್ದು,ಸತ್ಯವತಿ ಉರುಫ್‌ ಶಿಲ್ಪಾ ಶೆಟ್ಟಿ ಪೋರ್ಷನ್‌ ಶೂಟಿಂಗ್‌ ಕಂಪ್ಲೀಟ್‌ ಆಗಿದೆ. ತಮ್ಮ ಭಾಗದ ಚಿತ್ರೀಕರಣ ಮುಗಿದಿದ್ದೇ ತಡ ಪ್ಯಾಕಪ್‌ ಪ್ಯಾಕಪ್‌ ಅಂತ ಶಿಲ್ಪಾ ಕುಣಿದಾಡಿದ್ದಾರೆ. ಇದೇ ವೇಳೆ ತಮಾಷೆ ಮಾಡುತ್ತಾ ಶೋ ಮ್ಯಾನ್‌ ಪ್ರೇಮ್‌ ಕತ್ತು ಹಿಸುಕಿ ಇವರಿಗೆ ಹಸಿವೇ ಆಗಲ್ಲ ಅನ್ಸುತ್ತೆ. ವಿತೌಟ್‌ ಬ್ರೇಕ್‌ ಕೆಲಸ ಮಾಡ್ತಾರೆ ಅದಕ್ಕೆ ಪ್ರತಿಫಲವಾಗಿ ಸಿನಿಮಾ ಅದ್ಭುತವಾಗಿ ಬಂದಿದೆ ಎಂದಿದ್ದಾರೆ.

ಜೋಗಿ ಪ್ರೇಮ್‌ ಮಿಸ್ಟರ್‌ ಪರ್ಫೆಕ್ಷನಿಸ್ಟ್‌ ಎಂದಿರೋ ಶಿಲ್ಪಾ ಶೆಟ್ಟಿ, ಪ್ರೇಮ್‌ ಕಲ್ಪನೆಯಲ್ಲಿ ಅರಳಿರೋ ಸತ್ಯವತಿ ಪಾತ್ರ ನಂಗೆ ಬಹಳ ಹಿಡಿಸಿದೆ, ಕೆಡಿ ಮೇಲೆ ನಿರೀಕ್ಷೆ ಹೆಚ್ಚಿದೆ ಎಂತಲೂ ತಿಳಿಸಿದ್ದಾರೆ. ಇಡೀ ಕೆಡಿ ಟೀಮ್‌ ಜೊತೆ ಸಂತೋಷವಾಗಿ ಕಾಲ ಕಳೆದು ಮುಂಬೈಗೆ ವಾಪಾಸ್‌ ಆಗಿದ್ದಾರೆ. ಅಂದ್ಹಾಗೇ, ಕೊನೆಯ ದಿನ ಶೂಟಿಂಗ್‌ ಸೆಟ್‌ನಲ್ಲಿ ನಡೆದ ತರ್ಲೆ ತಮಾಷೆಯನ್ನ ವಿಡಿಯೋ ಮೂಲಕ ನಟಿ ಶಿಲ್ಪಾ ಶೆಟ್ಟಿ ತಮ್ಮ ಸೋಷಿಯಲ್‌ ಸೈಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ; ವಿಡಿಯೋ ನೋಡಿ

https://www.instagram.com/reel/C7l1UEfNIvA/?igsh=bDQ5NDVhMHpxYWc3

ಶಿಲ್ಪಾ ಶೆಟ್ಟಿ ಇತ್ತೀಚೆಗೆ ‘ಕೆಡಿ’ ಸಿನಿಮಾದ ಶೂಟಿಂಗ್ ಬಿಡುವಿನಲ್ಲಿ ನಂಜನಗೂಡಿನ ನಂಜುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರಿಗೆ ಪ್ರಾರ್ಥನೆ ಸಲ್ಲಿಸಿ, ದೇವಾಲಯದ ಆವರಣದಲ್ಲಿ ಕುಳಿತು ಅವರು ಧ್ಯಾನ ಮಾಡಿದ್ದರು. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದವು.

ಇದೀಗ ಕೆಡಿ ಕೊನೆಯ ದಿನದ ಶೂಟಿಂಗ್‌ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗ್ತಿದೆ. ‘ಪ್ರೀತ್ಸೋದ್ ತಪ್ಪಾ’, ‘ಆಟೋ ಶಂಕರ್’, ‘ಒಂದಾಗೋಣ ಬಾ’ ಚಿತ್ರಗಳಲ್ಲಿ ನಟಿಸಿ ಕನ್ನಡಿಗರ ಮನಗೆದ್ದ ಮಂಗಳೂರು ಚೆಲುವೆ ಇದೀಗ ಕೆಡಿ ಮೂಲಕ ಮತ್ತೊಮ್ಮೆ ಸ್ಯಾಂಡಲ್‌ವುಡ್‌ಗೆ ರೀಎಂಟ್ರಿ ಕೊಟ್ಟಿದ್ದಾರೆ.

19 ವರ್ಷಗಳ ನಂತರ ಮತ್ತೊಮ್ಮೆ ಕರುನಾಡಲ್ಲಿ ದಿಬ್ಬಣ ಹೊರಡಲಿದ್ದಾರೆ. ಕೆಜಿಎಫ್‌ ನಂತರ ಅಧೀರ ಸಂಜಯ್‌ ದತ್ತ್‌ ಮತ್ತೆ ಕನ್ನಡಕ್ಕೆ ಮರಳಿದ್ದಾರೆ.ಕ್ರೇಜಿಸ್ಟಾರ್‌ ರವಿಚಂದ್ರನ್, ರಮೇಶ್ ಅರವಿಂದ್ ಮುಂತಾದ ಕಲಾವಿದರು ಕೂಡ ಈ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜೂನ್. 1 ರಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಕೆರಿಯರ್ ಗೈಡ್‍ನೆಸ್, ಹೈಯರ್ ಎಜುಕೇಶನ್ ಮತ್ತು ಕೆರಿಯರ್ ಅಪಾರ್ಚುನಿಟಿಸ್‍ಗಾಗಿ ಜೂನ್ 1 ಮತ್ತು 3 ರಂದು ಎರಡು ದಿನಗಳ ಕಾರ್ಯಗಾರವನ್ನು ಆನ್‍ಲೈನ್ ವೆಮಿನಾರ್ ಮೂಲಕ ಆಯೋಜಿಸಲಾಗಿದೆ.

ಜೂನ್.1 ರಂದು ವೆಮಿನಾರ್ ನಂ. 25208106583 ಅಂಡ್ ಪಾಸ್ ವಾರ್ಡ್ qsSKG4Dsh84 ಮತ್ತು ಜೂನ್ 3 ರಂದು ವೆಮಿನಾರ್ ನಂ.25259292738 ಅಂಡ್ ಪಾಸ್ ವಾರ್ಡ್ upW2Vtrxh22 ಇದರೊಂದಿಗೆ ಪದವಿ ಪೂರ್ವ ವಿದ್ಯಾರ್ಥಿಗಳು ಭಾಗವಹಿಸಿ ಉನ್ನತ ವ್ಯಾಸಂಗ ಮತ್ತು ಉತ್ತಮ ಉದ್ಯೋಗಕ್ಕೆ ವಿವರವಾದ ಮಾಹಿತಿಯನ್ನು ಪಡೆಯಬಹುದು.

ಕಾರ್ಯಾಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ನಾಲ್ಕು ವಿಜ್ಞಾನಿಗಳು ಮೂಲ ವಿಜ್ಞಾನ, ಕೃಷಿ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದ ಬಗ್ಗೆ ಸಲಹೆಗಳನ್ನು ನೀಡಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಉಮೇಶ ಘಾಟಗೆ – 9743084194 & ಚಂದ್ರಶೇಖರಮೂರ್ತಿ – 9686449019 ಅಥವಾ ವೆಬ್ ಸೈಟ್; www.kstacademy.in ವೀಕ್ಷಿಸಬಹುದಾಗಿದೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ

Published

on

ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್‍ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.

ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.

ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.

ಪೂರಕ ದಾಖಲಾತಿ

ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್‍ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್‍ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್‍ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending