ದಿನದ ಸುದ್ದಿ
ಸ್ಟಾಕ್ ಮಾರ್ಕೇಟ್ 17.75 ಲಕ್ಷ ವಂಚನೆ, ಒಬ್ಬನ ಬಂಧನ ; 5 ಲಕ್ಷ ಜಪ್ತಿ !
- ಗಿರೀಶ್ ಕುಮಾರ್,ಬಳ್ಳಾರಿ
ಸುದ್ದಿದಿನ,ಬಳ್ಳಾರಿ:ಸೈಬರ್, ಆರ್ಥಿಕ, ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆ, ಬಳ್ಳಾರಿ ಕಾರ್ಯಚರಣೆ ಕರ್ನಾಟಕ ರಾಜ್ಯದ ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ವ್ಯಕ್ತಿಯಿಂದ ನಗದು ಹಣ ರೂಪಾಯಿ 5 ಲಕ್ಷ ಜಪ್ತಿ ಮಾಡಿರುವ ಘಟನೆ ಗಣಿನಾಡು ಬಳ್ಳಾರಿಯಲ್ಲಿ ನಡೆದಿದೆ.
ಕು. ಲಕ್ಷ್ಮೀ ವಿ.ಎಸ್ ತಂದೆ ವಿ. ಟಿ ಸತ್ಯನಾರಾಯಣ ವಾಸ: ಬಳ್ಳಾರಿ ರವರಿಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ವಾಸಿಯಾದ ರಂಜಿತ ಎಂಬುವವರು ಸ್ಟಾಕ್ ಮಾರ್ಕೆಟ್ನಲ್ಲಿ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ಹೇಳಿ ನಂಬಿಸಿ ಪಿರ್ಯಾದಿದಾರರಿಂದ ಹಣ ರೂ. 17,75,865 ಆನ್ಲೈನ್ ಮೂಲಕ ಹಾಕಿಸಿಕೊಂಡು ಮೋಸ ಮಾಡಿರುತ್ತಾನೆ. ಆದರೆ 5 ಲಕ್ಷ ಮಾತ್ರ ರಿಕವರಿ, ಉಳಿದ ಹಣ ಎಲ್ಲಿಗೆ ಹೋಗಿದೆ.
ಪೊಲೀಸ್ ಅಧೀಕ್ಷಕಿ ಡಾ: ಶೋಭಾರಾಣಿ ವಿ.ಜೆ ಅವರ ಬಳ್ಳಾರಿ ಮಾರ್ಗದರ್ಶನದಂತೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2, ನೇತೃತ್ವದಲ್ಲಿ, ಬಳ್ಳಾರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಡಿಎಸ್ಪಿ ಡಾ: ಸಂತೋಷ ಚೌವ್ಹಾಣ್ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಣೆ ಮಾಡಿಸಿ ತನಿಖೆ ಕೈಗೊಂಡು, ಪೊಲೀಸ್ ಸಬ್-ಇನ್ಸ್ಪೆಕ್ಟರ್ ವಲಿಬಾಷ ಮತ್ತು ಸಿಬ್ಬಂದಿಯ ತಿಪ್ಪೇರುದ್ರ ಎಎಸ್ಐ, ಸುರೇಶ, ಉಮಾಮಹೇಶ್ವರ, ಕೆ. ಯಲ್ಲೇಶ್, ಎನ್ ಚಂದ್ರಶೇಖರ ಅವರೊಂದಿಗೆ ಸೇರಿ ಆರೋಪಿ ರಂಜಿತ್ ಹೊಸಪೇಟೆ, ವಿಜಯನಗರ ಜಿಲ್ಲೆ ಪತ್ತೆಮಾಡಿ ಈತನನ್ನು ವಿಚಾರಣೆಗೊಳಪಡಿಸಿ ಆರೋಪಿತ ಪಡೆದಿದ್ದ ನಗದು ಹಣ ರೂಪಾಯಿ 5 ಲಕ್ಷ ಜಪ್ತು ಮಾಡಿದ್ದಾರೆ.
ಪೊಲೀಸ್ ಅಧೀಕ್ಷಕರು ಬಳ್ಳಾರಿ, ಈ ಕಾರ್ಯಚರಣೆ ಮಾಡಿದ ಬಳ್ಳಾರಿ ಸಿ.ಇ.ಎನ್. ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಅವರಿಗೆ ಶ್ಲಾಘಿಸಿರುತ್ತಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243