Connect with us

ದಿನದ ಸುದ್ದಿ

ಹುಬ್ಬಳ್ಳಿ- ಧಾರವಾಡ ಬೈಪಾಸ್ ರಸ್ತೆಯಲ್ಲಿ ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ನಿತೇಶ ಪಾಟೀಲ

Published

on

ರಸ್ತೆ ಅಪಘಾತಗಳನ್ನು ತಪ್ಪಿಸಲು ಇಲಾಖೆಗಳು ಸಮನ್ವಯತೆಯಿಂದ ಕಾರ್ಯಮಾಡಬೇಕು : ಜಿಲ್ಲಾಧಿಕಾರಿ ನಿತೇಶ ಪಾಟೀಲ

ಸುದ್ದಿದಿನ,ಧಾರವಾಡ : ಕಳೆದ ಸಾಲಿಗೆ ಹೋಲಿಸಿದರೆ ಧಾರವಾಡ ಜಿಲ್ಲೆಯಲ್ಲಿ 2020 ನೇ ಸಾಲಿಗೆ ಕಡಿಮೆ ಪ್ರಮಾಣದಲ್ಲಿ ರಸ್ತೆ ಅಪಘಾತ ಪ್ರಕರಣಗಳು ದಾಖಲಾಗಿದ್ದು, ಸಾರಿಗೆ, ಪೊಲೀಸ್, ಲೊಕೋಪಯೋಗಿ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿದರೆ ರಸ್ತೆ ಅಪಘಾತಗಳು ಸಂಭವಿಸದಂತೆ ಸಂಪೂರ್ಣವಾಗಿ ನಿಯಂತ್ರಿಸಬಹುದು ಎಂದು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಭವನದಲ್ಲಿ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಇರುವ ರಾಷ್ಟ್ರೀಯ ಹೆದ್ದಾರಿ 4 ರಲ್ಲಿನ 30 ಕಿ.ಮೀ ರಸ್ತೆಯಲ್ಲಿನ ಅಪಘಾತಗಳನ್ನು ತಪ್ಪಿಸಲು ಸಂಚಾರಿ ನಿಯಮಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಪ್ರತಿ ಕಿ.ಮೀ.ಗೆ 60 ವೇಗದ ಮಿತಿ ಇದ್ದರೂ ಬಸ್, ಟ್ರಕ್, ಮಿನಿಬಸ್, ಕಾರ್ ಮುಂತಾದ ವಾಹನಗಳ ಚಾಲಕರು ನಿಯಮ ಪಾಲಿಸದೇ ವೇಗವಾಗಿ ವಾಹನ ಚಾಲನೆ, ವಾಹನಗಳ ಓವರ್‍ಟೆಕ್ ಮಾಡುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಅಪಘಾತ, ಸಾವು-ನೋವು ಆಗುತ್ತಿವೆ.

ರಸ್ತೆ ನಿರ್ವಾಹಕ ಗುತ್ತಿಗೆದಾರ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಬೈಪಾಸ್‍ನ 30 ಕಿ.ಮೀ ರಸ್ತೆ ಪರಿಶೀಲಿಸಿ ಮುಂದಿನ 72 ಗಂಟೆಗಳಲ್ಲಿ ಅಪಾಯಕಾರಿ ಸ್ಥಳ, ಸೇತುವೆ ತಿರುವು ಗುರುತಿಸಿ ಅಲ್ಲಿ ಕನಿಷ್ಠ 20 ಎಚ್ಚರಿಕೆ ಫಲಕ, ವೇಗದ ಮೀತಿ ಸೂಚಿಸುವ ಮತ್ತು ಸುರಕ್ಷತಾ ನಿಯಮಗಳ ಫಲಕಗಳನ್ನು ಅಳವಡಿಸಿ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.

ಹುಬ್ಬಳ್ಳಿ-ಧಾರವಾಡದ 30 ಕಿ.ಮೀ. ಬೈಪಾಸ್ ರಸ್ತೆಯ ಮಧ್ಯದಲ್ಲಿ ರಬ್ಬರ ಮತ್ತು ಫೈಬರ್ ಸಾಧನ ಬಳಸಿ, ರಸ್ತೆ ವಿಭಜಕಗಳನ್ನು ನಿರ್ಮಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರು. ರಸ್ತೆ ಅಗಲೀಕರಣ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದು, ಅನುಮತಿ ಬಂದ ತಕ್ಷಣ ಈ ಕುರಿತು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯ ಫುಟ್‍ಪಾತ್ ಅತಿಕ್ರಮಿಸಿ ಅನೇಕ ರೀತಿಯ ಅಂಗಡಿ, ವ್ಯಾಪಾರಗಳು ಅನಧಿಕೃತವಾಗಿ ನಡೆಯುತ್ತಿವೆ. ಟೊಲ್ ಪಕ್ಕದಲ್ಲಿಯೇ ಗುತ್ತಿಗೆದಾರರಿಗೆ ನೀಡಿರುವ ಜಾಗದಲ್ಲಿ ನಿಯಮ ಉಲ್ಲಂಘಿಸಿ ಅಂಗಡಿ ನಿರ್ಮಾಣ, ವಾಹನ ನಿಲುಗಡೆಗೆ ಸ್ಥಳಾವಕಾಶ ನೀಡಲಾಗಿದೆ. ಈ ಕುರಿತು ರಸ್ತೆ ನಿರ್ವಾಹಕ ಗುತ್ತಿಗೆದಾರ ಸಂಸ್ಥೆಗೆ ನೋಟೀಸ್ ನೀಡಿ ಮತ್ತು ಸೂಕ್ತ ಬಂದೋಬಸ್ತ್‍ನಲ್ಲಿ ಎಲ್ಲ ಅತಿಕ್ರಮಣಗಳನ್ನು ಶೀಘ್ರದಲ್ಲಿ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದರು.

ಇತ್ತೀಚಿಗೆ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಸುನೀಗಿದವರ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಮತ್ತು ಟಿಪ್ಪರ್ ವಾಹನದ ಚಾಲಕನ ಮೇಲೆ ಅಜಾಗರೂಕತೆಯ ವಾಹನ ಚಾಲನೆ ಸೇರಿದಂತೆ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಬಿ.ಆರ್.ಟಿ.ಎಸ್. ರಸ್ತೆಯಲ್ಲಿ ಖಾಸಗಿ ಹಾಗೂ ಕೆಲವು ಸರಕಾರಿ ಇಲಾಖೆ ವಾಹನಗಳು ಸಂಚರಿಸುತ್ತಿರುವುದು ಕಂಡು ಬರುತ್ತಿದೆ. ನಗರ ಪೊಲೀಸ್ ಆಯುಕ್ತರು ಬಿಆರ್‍ಟಿಎಸ್ ರಸ್ತೆಯಲ್ಲಿ ಬಿಆರ್‍ಟಿಎಸ್ ಬಸ್‍ಗಳನ್ನು ಹೊರತುಪಡಿಸಿ ಯಾವ ತುರ್ತು ವಾಹನಗಳು ಸಂಚರಿಸಬೇಕೆಂದು ನಿರ್ಧರಿಸಿ, ಅಧಿಸೂಚನೆ ಹೊರಡಿಸಬೇಕು. ಮತ್ತು ಅಧಿಸೂಚಿತವಲ್ಲದ ವಾಹನಗಳು ಸಂಚರಿಸಿದರೆ ತಕ್ಷಣ ದಂಡ ವಿಧಿಸಿ ಸೂಕ್ತ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಗೆ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ರಾಜ್ಯ ಕಾನೂನು, ಸುವ್ಯವಸ್ಥೆ ಹಾಗೂ ಸಂಚಾರಿ ವಿಭಾಗದ ಅಪರ ಪೊಲೀಸ್ ಮಹಾನಿರ್ದೇಶಕ ಪ್ರತಾಪರೆಡ್ಡಿ ಅವರು ಮಾತನಾಡಿ, ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ವಾಹನ ಹಾಗೂ ವಾಹನ ಚಾಲಕರಿಂದ ಕಾನೂನು ಹಾಗೂ ನಿಯಮಗಳ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು. ಅಪಾಯಕಾರಿ ರಸ್ತೆ, ತಿರುವು, ಸೇತುವೆಗಳ ಸಮೀಪದಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು. ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಿ, ಎಚ್ಚರಿಕೆ ಸಂದೇಶಗಳನ್ನು ಚಾಲಕರಿಗೆ ಎದ್ದು ಕಾಣುವಂತೆ ಅಳವಡಿಸಬೇಕು ಎಂದು ಹೇಳಿದರು.

ಉತ್ತರವಲಯದ ಪೊಲೀಸ್ ಮಹಾನಿರೀಕ್ಷಕ ರಾಘವೇಂದ್ರ ಸುಹಾಸ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ, ತಿರುವು, ಸೇತುವೆಗಳ, ಸುಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಬೇಕು. ರಸ್ತೆ ಸುರಕ್ಷತೆ ಹಾಗೂ ಎಚ್ಚರಿಕೆ ಸಂದೇಶದ ಫಲಕಗಳ ಅಳವಡಿಕೆ, ನಿರ್ವಹಣೆ ಕುರಿತು ಮೇಲುಸ್ತುವಾರಿ ಮಾಡಿ ನಿಗಾವಹಿಸಬೇಕು. ಗುತ್ತಿಗೆದಾರನ ನಿರ್ವಹಣೆ ಕುರಿತು ನಿಯಮಗಳ ಪಾಲನೆ ಆಗಿರುವುದನ್ನು ಪರಿಶೀಲಿಸಬೇಕೆಂದು ತಿಳಿಸಿದರು.

ನಗರ ಪೊಲೀಸ್ ಆಯುಕ್ತ ಲಾಬೂರಾಮ ಅವರು ಮಾತನಾಡಿ, ರಸ್ತೆ ಸುರಕ್ಷತಾ ಹಾಗೂ ಸಂಚಾರಿ ನಿಯಮಗಳ ಪಾಲನೆಗೆ ಆಧ್ಯತೆ ನೀಡಬೇಕು. ಹೆದ್ದಾರಿ ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಈಗಾಗಲೇ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಬೈಪಾಸ್, ಬಿಆರ್‍ಟಿಎಸ್ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳನ್ನು ಪರಿಶೀಲಿಸಿ, ಸೂಕ್ತ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ದೇಶಿಸಲಾಗಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ಕೃಷ್ಣಕಾಂತ ಮಾತನಾಡಿ, ವಾಹನಗಳ ಚಾಲಕರು ರಾತ್ರಿ ಸಂಚರಿಸುವಾಗ ಪ್ರಖರ ಬೆಳಕಿನ ಹೆಡ್‍ಲೈಟ್ ಬಳಸುತ್ತಾರೆ. ಇದರಿಂದಾಗಿ ಎದುರಿಗೆ ಬರುವ ವಾಹನಗಳಿಗೆ ದಾರಿ ಕಾಣದಾಗುತ್ತದೆ. ತಿರುವುಗಳಲ್ಲಿ ಮತ್ತು ನಿರ್ಧಿಷ್ಟಪಡಿಸಿದ ವೇಗದ ಮಿತಿ ಪಾಲಿಸದೇ ವೇಗವಾಗಿ ವಾಹನ ಚಲಾಯಿಸುತ್ತಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ವಾಹನಗಳ ನೋಂದಣಿ ಹಾಗೂ ಫಿಟ್‍ನೆಸ್ ಸರ್ಟಿಫಿಕೇಟ್ ಕೊಡುವಾಗ ಇವುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯ ಹಾಗೂ ಜಿಲ್ಲಾ ಪಂಚಾಯತ್ ಸಿಇಓ ಡಾ.ಬಿ. ಸುಶೀಲ ಅವರು ರಸ್ತೆ ಸುರಕ್ಷತೆ, ಅಪಘಾತಗಳ ನಿಯಂತ್ರಣ ಕುರಿತು ಸಭೆಯಲ್ಲಿ ಮಾತನಾಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಅಪ್ಪಯ್ಯ ನಾಲ್ವತ್ತವಾಡಮಠ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಡಿವೈಎಸ್‍ಪಿಗಳಾದ ಎಂ.ಬಿ. ಸಂಕದ, ರಾಮನಗೌಡ ಹಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಯಶವಂತ ಮದೀನಕರ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಎಸ್.ಬಿ. ಚೌಡನ್ನವರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ಆರ್.ಕೆ. ಮಠದ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಲ್. ಹಂಚಾಟೆ, ನೈಸ್ ಸಂಸ್ಥೆಯ ಪ್ರತಿನಿಧಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು, ರಸ್ತೆ ನಿರ್ವಹಣಾ ಗುತ್ತಿಗೆದಾರರು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending