Connect with us

ದಿನದ ಸುದ್ದಿ

ಬಿದಿರು ಕೃಷಿಗೆ ಸಹಾಯಧನ : ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಎನ್‍ಎಫ್‍ಎಪಿ- ಬಂಬೂ ಮಿಷನ್ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡದ ರೈತರು ಬಿದಿರು ಕೃಷಿ ಮಾಡಲು ಪ್ರತಿ ಎಕರೆಗೆ ಪ್ರತಿ ವರ್ಷ 18,000 ರೂ. ಗಳಂತೆ 03 ವರ್ಷಗಳ ಕಾಲಾವಧಿಗೆ ಸಹಾಯಧನ ಒದಗಿಸುವ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ ರೈತರು ಜಮೀನು ಹೊಂದಿರುವ ಕುರಿತು ಆರ್.ಟಿ.ಸಿ/ ಅರಣ್ಯ ಹಕ್ಕು ಅಧಿನಿಯಮದಡಿ ಪಡೆದಿರುವ ಹಕ್ಕು ಪತ್ರ ಹೊಂದಿರಬೇಕು. ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಅರ್ಹ ರೈತರು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಕಛೇರಿಯಲ್ಲಿ ಫೆ.19 ರ ಒಳಗಾಗಿ ಸಂಬಂಧಿಸಿದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪರಿಶೀಲನೆಯೊಂದಿಗೆ ಕೇಂದ್ರ ಕಛೇರಿಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಜಿಲ್ಲಾಧಿಕಾರಿಗಳು ಭಾರತ ಸಂವಿಧಾನ ಅನುಚ್ಛೇಧ 275(1)ರಡಿ 2021-22ನೇ ಸಾಲಿನ ಬಿದಿರು ಕೃಷಿ ಅನುಷ್ಟಾನಗೊಳಿಸಲು ಅನುಮೋದನೆ ನೀಡಿರುತ್ತಾರೆ. ಅದರಂತೆ ಜಿಲ್ಲೆಯ ಪರಿಶಿಷ್ಟ ಪಂಗಡದ ಅರ್ಹ ಮತ್ತು ಆಸಕ್ತ ರೈತರು ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ-45, ಜಿಲ್ಲಾಡಳಿತ ಭವನ, ದಾವಣಗೆರೆ ಇವರಿಗೆ ಅಥವಾ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ದಾವಣಗೆರೆ, ಚನ್ನಗಿರಿ, ಜಗಳೂರು / ಸಹಾಯಕ ನಿರ್ದೇಶಕರು (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಹರಿಹರ ಮತ್ತು ಹೊನ್ನಾಳಿ ಇಲ್ಲಿ ಫೆ.19ರೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08192-263546ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

Published

on

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕ ಕಡಿತದಿಂದ ತೊಂದರೆಗೆ ಒಳಗಾಗಬಾರದು ಹಾಗೂ ಆನ್‌ಲೈನ್ ಪೇಮೆಂಟ್ ಬಳಸದವರ ಅನಕೂಲಕ್ಕಾಗಿ ಈ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ನಿರ್ಧರಿಸಿದ್ದು, ಸೆಪ್ಟೆಂಬರ್ 1ರಿಂದಲೇ ಈ ನಿಯಮ ಜಾರಿಯಾಗಿದೆ ಎಂದು ಹೇಳಿದೆ.

ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂಪಾಯಿ ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ. ಗೃಹ ಜ್ಯೋತಿಯೋಜನೆ ಅಡಿ ಶೂನ್ಯ ಬಿಲ್ ಪಡೆಯುತ್ತಿರುವ ಗ್ರಾಹಕರ ಹಿಂಬಾಕಿ ಶೂನ್ಯವಿದ್ದಲ್ಲಿ ಈ ಬಗ್ಗೆ ಚಿಂತಿಸಬೇಕಿಲ್ಲ ಎಂದು ಪ್ರಕಟಣೆ ಸ್ಪಷ್ಟಪಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ ತೆಗೆದುಕೊಳ್ಳಲು ಸೆಪ್ಟೆಂಬರ್ 17ಕ್ಕೆ ಸಂಪುಟ ಸಭೆ ನಡೆಯಲಿದೆ.

ಜಿಲ್ಲೆಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಬಗ್ಗೆ ವಿಶೇಷ ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಈ ಹಿಂದೆ 2014ರ ನವೆಂಬರ್ 28ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆದಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

Published

on

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ಅತ್ಯಂತ ಶ್ರದ್ದಾ ಭಕ್ತಿಯಿಂದ ಈ ಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ ಅದರಂತೆ ಬೆಂಗಳೂರು ಜನತೆ ಮನೆ ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶನ ಮೂರ್ತಿಗಳನ್ನು ಜಲ ಮೂಲಗಳಲ್ಲಿ ವಿಸರ್ಜಿಸಲು ಬೆಂಗಳೂರು ಮಹಾ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಇನ್ನೂ ಗಣೇಶ ಚತುರ್ಥಿ ವಿಶೇಷವಾಗಿ ನಾಡಿನ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿದಂತ್ತೆ ಅನೇಕ ಸಚಿವರು ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.

ಗಣೇಶ ಹಬ್ಬದ ಆಚರಣೆಯ ಸಂದರ್ಭದಲ್ಲಿ ಮದ್ಯಪಾನಾಸಕ್ತರು ಗಲಭೆಮಾಡುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳಡಿ ಇಂದಿನಿಂದ ಉಡುಪಿ ಜಿಲ್ಲೆಯಾದ್ಯಂತ ಹಾಗೂ ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಇದೇ 9 ಮತ್ತು ಸೆಪ್ಟೆಂಬರ್ 11 ರಂದು ಮಧ್ಯಾಹ್ನ 2 ರಿಂದ ಮದ್ಯರಾತ್ರಿ 12.00 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ನೈಸರ್ಗಿಕವಾಗಿ ತಯಾರಿಸಿದ ಮಣ್ಣಿನ ಗಣೇಶನ ವಿಗ್ರಹಗಳನ್ನು ಮಾತ್ರ ಬಳಸುವ ಮೂಲಕ ಕೆರೆ, ನದಿ ಮೂಲಗಳು ಕಲುಷಿತಗೊಳಿಸದಂತೆ ಕಾಪಾಡುವುದು ನಮ್ಮ ಕರ್ತವ್ಯ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending