Connect with us

ದಿನದ ಸುದ್ದಿ

ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗೇಟ್ ಗೆ ಡಿಕ್ಕಿ ಹೊಡೆದು ಟನ್ ಗಟ್ಟಲೇ ಹೆಚ್ಚಿನ ಕಬ್ಬಿಣ ಬಿಸಾಕಿ ಓಡಿ ಹೋಗಿದ್ದಾರೆ ಪ್ರಭಾವಿ ರಾಜಕೀಯ ನಾಯಕನ ಹಿಂಬಾಲಕರು ಎನ್ನುವ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಡಿಸಿ ನಗರದ ಹತ್ತಿರ ತುಂಗಭದ್ರಾ ಬೋರ್ಡ್ ಗೆ ಸಂಭಂದಿಸಿದ ಸೇತುವೆ ನಿರ್ಮಾಣ ಮಾಡಲು ಕಬ್ಬಿಣ ಹಾಕಿದ್ದರೆ ಅದನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ದುರ್ಘಟನ ನಡೆದಿತ್ತು. ಆದರೆ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಠಾಣೆಯ ಮುಂದೆ ಅಧಿಕಾರಿಗಳು ಕೇಸ್ ಮಾಡಲು ಸಿದ್ದರಾಗಿದ್ದರು, ಆದರೆ ಈ ಕಬ್ಬಿಣವನ್ನು ಪ್ರಭಾವಿ ರಾಜಕೀಯ ಹಿಂಬಾಲಕರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ವಿಚಾರ ಸುದ್ದಿಯಾಗುತ್ತೇ ರಾತ್ರೋರಾತ್ರಿ ಕಳ್ಳತನ ಮಾಡಿದ ವ್ಯಕ್ತಿ ವಾಟರ್ ಹೌಸ್ ನಲ್ಲಿ ಹಾಕಿ ಓಡಿ
ಹೋಗಿದ್ದಾರೆ.

ಮಹಾದೇವತತಾನ ಮಠದ ಎದುರುಗಡೆ ಇರುವ ವಾಟರ್ ಹೌಸ್ ನಲ್ಲಿ ರಾತ್ರಿ 1 ಗಂಟೆ 22 ನಿಮಿಷಕ್ಕೆ ಒಂದು ಲಾರಿ ಮತ್ತು ಕ್ರೇನ್ ಉಪಯೋಗಿ ಕೊಂಡು 10 ರಿಂದ 15 ನಿಮಿಷದ ಒಳಗೆ ಉಳಿಸಿ ಪರಾಯಿಯಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಇನ್ನು ಈ ಕಬ್ಬಿಣ ಹಾಕಲು ಬಂದವರಲ್ಲಿ ಈ ವ್ಯಕ್ತಿಗಳು ಮೈಮೇಲೆ ದಪ್ಪ ದಪ್ಪ ಬಂಗಾರದ ಆಭರಣಗಳನ್ನು ಹಾಕಿಕೊಂಡು ಕಾರುಗಳಲ್ಲಿ ಬಂದಿದ್ದಾರೆ. ಅಧಿಕಾರಿಗಳು ಹೇಳಿದ್ದಾರೆ ಯಾವ ಅಧಿಕಾರಿ ? ಎನ್ನುವ ಮಾಹಿತಿಯನ್ನು ಇಲ್ಲಿಯ ಸಿಬ್ಬಂದಿಗೆ ನೀಡದೇ ಕಾಲು ಕಿತ್ತಿದ್ದಾರೆ. ಈ ಲಾರಿ ಹಾಗೂ ಕ್ರೇನ್ ಬಂದಿರುವುದು ಮಹಾದೇವ ತಾತನ ಮಠದ ಹೊರಗಡೆ ಇರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅದರಲ್ಲಿ ತುಂಗಭದ್ರಾ ಬೋರ್ಡ್ ನಲ್ಲಿ ಕಳ್ಳತನ ಮಾಡಿದ ಕಬ್ಬಿಣವನ್ನು ಭಯದ ವಾತಾವರಣದಲ್ಲಿ ವಾಟರ್ ಬೋಸ್ಟ್ ನಲ್ಲಿ ಹಾಕು ಓಡಿಹೋಗಿದ್ದಾರೆ.

ವಾಟರ್ ಬೂಸ್ಟ್ ನ ಗೇಟ್ ಗೆ ಡಿಕ್ಕಿ ಹೊಡೆದು ಗೇಟ್ ಮುರಿದು ಮೂರು ತಾಸುಗಳಲ್ಲಿ ಇಳಿಸಬೇಕಾದ ಕಬ್ಬಿಣ ಬರಿ 10 ರಿಂದ 15 ನಿಮಿಷದಲ್ಲಿ ಬಿಸಾಕಿ ಓಡಿಹೋಗಿದ್ದಾರೆ. ಇನ್ನು ತುಂಗಭದ್ರಾ ಬೋರ್ಡ್ ಸಿಬ್ಬಂದಿಗೆ ಕೇಳಿದ್ರೇ ಇಲ್ಲ ನನಗೆ ಏನು ? ಗೊತ್ತಿಲ್ಲ ನಮ್ಮ ಅಧಿಕಾರಿ ಕೆಂಚಪ್ಪ ಕಬ್ಬಿಣ ಕಳ್ಳತನ ಅವರಿಗೆ ಗೊತ್ತಿದೆ ಎನ್ನುವ ಮಾಹಿತಿ ನೀಡಿದರು. ಆದರೆ ಕಬ್ಬಿಣಕ್ಕೆ ತುಂಗಭದ್ರಾ ಬೋರ್ಡ್ ಎನ್ನುವ ಬರಹವನ್ನು ಹಳದಿ ಬಣ್ಣದಿಂದ ಬರದ ವ್ಯಕ್ತಿ ನಾನು ಎಂದರು.

ಭರತ್ ರೆಡ್ಡಿ ಆಪ್ತ ಸಿಂಧನೂರಿನ ಶಶಿ

ಕಾಂಗ್ರೇಸ್ ಮುಖಂಡ ಶಶಿ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಎನ್ನುವ ಅಂಶ ದೊರೆತಿದೆ. ಇನ್ನು ಈ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡುವ ಅನ್ನ ಭಾಗ್ಯದ ಸಾರ್ವಜನಿಕರಿಗೆ ಉಚಿತವಾಗಿ ನೀಡಿದರೇ, ಶಶಿ ಎನ್ನುವ ಕಾಂಗ್ರೇಸ್ ಮುಖಂಡ ಶಶಿ ಅಕ್ಕಿ ದಂದೆಯಲ್ಲಿ ನಿಂತು ಶಾಸಕ ಹೆಸರು ಹೇಳಿಕೊಂಡು ಹಗಲು ದರೋಡೆ ಮಾಡುತ್ತಿದ್ದಾನೆ.

ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಏಕೆ ? ಮೌನರಾಗಿದ್ದಾರೆ ಅವರಿಗೆ ಶಾಸಕರ ಒತ್ತಡ ಇದೆಯೇ ?
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸಹಾಯಕ ‘ಲಕ್ಷ್ಮೀ ನಾರಾಯಣ ಶಾಸ್ತ್ರಿ’ ಸಹ ಈ ಕಬ್ಬಿಣ ಕಳ್ಳತನ ವ್ಯವಹಾರದಲ್ಲಿ ಭಾಗಿಯಾಗಿ ಶಶಿ ಎನ್ನುವ ಮುಖಂಡನಿಗೆ ಸಹಕಾರ ನೀಡುತ್ತಿದ್ದಾನೆ. ರಾತ್ರೋರಾತ್ರಿ ಕಬ್ಬಿಣವನ್ನು ಬಿಸಾಡಲು ಸಹ ಸಹಕಾರ ನೀಡಿದ್ದಾನೆ. ಇನ್ನು ಈ ವಿಚಾರವಾಗಿ ‘ಸುದ್ದಿದಿನ’ ವೆಬ್ ನಲ್ಲಿ ವಿಶೇಷ ವರದಿಗಾರರು ದೂರವಾಣಿ ಮೂಲಕ ಕರೆ ಮಾಡಿದ್ರೇ ಅವರು ಸ್ವೀಕರಿಸಲಿಲ್ಲ.

ಇನ್ನು ಗ್ಯಾಸ್ ವೆಲ್ಡರ್ ಬಶೀರ್ ನನ್ನು ನಾರಾ ಭರತ್ ರೆಡ್ಡಿ ಆಪ್ತ ಕಾಂಗ್ರೇಸ್ ಯುವ ಮುಖಂಡ ಕೊಳಗಲ್ಲು ಧರ್ಮರೆಡ್ಡಿ ಗ್ರಾಮೀಣ ಠಾಣೆಗೆ ಬಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ ಅವರನ್ನು ಬಿಟ್ಟು ಕಳಿಸಿ ಎನ್ನುವ ಮಾಹಿತಿಯ ಪೊಲೀಸ್ ಠಾಣೆಯ ಎಸ್.ಬಿ ( spacial Branch) ಅವರ ಮೂಲಕ ಹೋಗಿದ್ದಾರೆ. ಇನ್ನು ಪೋಲೀಸರು ಧರ್ಮರೆಡ್ಡಿ ಮತ್ತು ಬಶೀರ್ ಇಬ್ಬರು ನಿಲ್ಲಿಸಿ ಪೋಟೊ ತೆಗೆಸಿ ಪತ್ರ ಬರೆಸಿಕೊಂಡು,ಸಹಿ ಮಾಡಿಸಿ ಕಳಿಸಿದ್ದಾರೆ.

ಇನ್ನು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರ ಅವರು ತುಂಗಭದ್ರಾ ಬೋರ್ಡ್ ಅಧಿಕಾರಿ ಕೆಂಚಪ್ಪ ಹಾಗೂ ಸರ್ಕಾರಿ ಪಿಎ ಲಕ್ಷ್ಮೀ ನಾರಾಯಣಶಾಸ್ತ್ರಿ ವಿರುದ್ಧ ಯಾವ ? ರೀತಿಯ ಕ್ರಮ ತೆಗದುಕೊಳ್ಳುತ್ತಾರೋ ಕಾದು ನೋಡಬೇಕಿದೆ.

ಒಟ್ಟಾರೆಯಾಗಿ “ಸುದ್ದಿದಿನ” ವೆಬ್ ಪ್ರಕಟಿಸಿ ವರದಿಗೆ ಫಲಶೃತಿ ದೊರೆತಿದೆ. ಇನ್ನು ಈ ರಾಜಕೀಯ ವ್ಯಕ್ತಿಯ ಬೆಂಬಲಿಗರು ಯಾರು ? ಅವರ ವಿರುದ್ಧ ಕೇಸ್ ಮಾಡುತ್ತಾರೋ ಇಲ್ಲವೋ ಎನ್ನುವ ಅಂಶ ಪೊಲೀಸ್ ಇಲಾಖೆ ಉತ್ತರಿಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending