Connect with us

ದಿನದ ಸುದ್ದಿ

ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ

Published

on

  • ಗಿರೀಶ್ ಕುಮಾರ್ ಗೌಡ,ಬಳ್ಳಾರಿ

ಸುದ್ದಿದಿನಡೆಸ್ಕ್:ಗೇಟ್ ಗೆ ಡಿಕ್ಕಿ ಹೊಡೆದು ಟನ್ ಗಟ್ಟಲೇ ಹೆಚ್ಚಿನ ಕಬ್ಬಿಣ ಬಿಸಾಕಿ ಓಡಿ ಹೋಗಿದ್ದಾರೆ ಪ್ರಭಾವಿ ರಾಜಕೀಯ ನಾಯಕನ ಹಿಂಬಾಲಕರು ಎನ್ನುವ ಮಾಹಿತಿ ಲಭ್ಯವಾಗಿದೆ.

ಬಳ್ಳಾರಿ ಜಿಲ್ಲೆಯ ಬಳ್ಳಾರಿ ತಾಲೂಕಿನ ಡಿಸಿ ನಗರದ ಹತ್ತಿರ ತುಂಗಭದ್ರಾ ಬೋರ್ಡ್ ಗೆ ಸಂಭಂದಿಸಿದ ಸೇತುವೆ ನಿರ್ಮಾಣ ಮಾಡಲು ಕಬ್ಬಿಣ ಹಾಕಿದ್ದರೆ ಅದನ್ನು ರಾತ್ರೋರಾತ್ರಿ ಕಳ್ಳತನ ಮಾಡಿದ ದುರ್ಘಟನ ನಡೆದಿತ್ತು. ಆದರೆ ಭಾನುವಾರ ಬೆಳಿಗ್ಗೆಯಿಂದ ಸಂಜೆವರೆಗೆ ಠಾಣೆಯ ಮುಂದೆ ಅಧಿಕಾರಿಗಳು ಕೇಸ್ ಮಾಡಲು ಸಿದ್ದರಾಗಿದ್ದರು, ಆದರೆ ಈ ಕಬ್ಬಿಣವನ್ನು ಪ್ರಭಾವಿ ರಾಜಕೀಯ ಹಿಂಬಾಲಕರು ಕಳ್ಳತನ ಮಾಡಿಕೊಂಡು ಹೋಗಿದ್ದರು. ಈ ವಿಚಾರ ಸುದ್ದಿಯಾಗುತ್ತೇ ರಾತ್ರೋರಾತ್ರಿ ಕಳ್ಳತನ ಮಾಡಿದ ವ್ಯಕ್ತಿ ವಾಟರ್ ಹೌಸ್ ನಲ್ಲಿ ಹಾಕಿ ಓಡಿ
ಹೋಗಿದ್ದಾರೆ.

ಮಹಾದೇವತತಾನ ಮಠದ ಎದುರುಗಡೆ ಇರುವ ವಾಟರ್ ಹೌಸ್ ನಲ್ಲಿ ರಾತ್ರಿ 1 ಗಂಟೆ 22 ನಿಮಿಷಕ್ಕೆ ಒಂದು ಲಾರಿ ಮತ್ತು ಕ್ರೇನ್ ಉಪಯೋಗಿ ಕೊಂಡು 10 ರಿಂದ 15 ನಿಮಿಷದ ಒಳಗೆ ಉಳಿಸಿ ಪರಾಯಿಯಾಗಿದ್ದಾರೆ ಎನ್ನುವ ಮಾಹಿತಿಯನ್ನು ಸ್ಥಳೀಯ ಸಿಬ್ಬಂದಿಗಳು ತಿಳಿಸಿದ್ದಾರೆ.

ಇನ್ನು ಈ ಕಬ್ಬಿಣ ಹಾಕಲು ಬಂದವರಲ್ಲಿ ಈ ವ್ಯಕ್ತಿಗಳು ಮೈಮೇಲೆ ದಪ್ಪ ದಪ್ಪ ಬಂಗಾರದ ಆಭರಣಗಳನ್ನು ಹಾಕಿಕೊಂಡು ಕಾರುಗಳಲ್ಲಿ ಬಂದಿದ್ದಾರೆ. ಅಧಿಕಾರಿಗಳು ಹೇಳಿದ್ದಾರೆ ಯಾವ ಅಧಿಕಾರಿ ? ಎನ್ನುವ ಮಾಹಿತಿಯನ್ನು ಇಲ್ಲಿಯ ಸಿಬ್ಬಂದಿಗೆ ನೀಡದೇ ಕಾಲು ಕಿತ್ತಿದ್ದಾರೆ. ಈ ಲಾರಿ ಹಾಗೂ ಕ್ರೇನ್ ಬಂದಿರುವುದು ಮಹಾದೇವ ತಾತನ ಮಠದ ಹೊರಗಡೆ ಇರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಅದರಲ್ಲಿ ತುಂಗಭದ್ರಾ ಬೋರ್ಡ್ ನಲ್ಲಿ ಕಳ್ಳತನ ಮಾಡಿದ ಕಬ್ಬಿಣವನ್ನು ಭಯದ ವಾತಾವರಣದಲ್ಲಿ ವಾಟರ್ ಬೋಸ್ಟ್ ನಲ್ಲಿ ಹಾಕು ಓಡಿಹೋಗಿದ್ದಾರೆ.

ವಾಟರ್ ಬೂಸ್ಟ್ ನ ಗೇಟ್ ಗೆ ಡಿಕ್ಕಿ ಹೊಡೆದು ಗೇಟ್ ಮುರಿದು ಮೂರು ತಾಸುಗಳಲ್ಲಿ ಇಳಿಸಬೇಕಾದ ಕಬ್ಬಿಣ ಬರಿ 10 ರಿಂದ 15 ನಿಮಿಷದಲ್ಲಿ ಬಿಸಾಕಿ ಓಡಿಹೋಗಿದ್ದಾರೆ. ಇನ್ನು ತುಂಗಭದ್ರಾ ಬೋರ್ಡ್ ಸಿಬ್ಬಂದಿಗೆ ಕೇಳಿದ್ರೇ ಇಲ್ಲ ನನಗೆ ಏನು ? ಗೊತ್ತಿಲ್ಲ ನಮ್ಮ ಅಧಿಕಾರಿ ಕೆಂಚಪ್ಪ ಕಬ್ಬಿಣ ಕಳ್ಳತನ ಅವರಿಗೆ ಗೊತ್ತಿದೆ ಎನ್ನುವ ಮಾಹಿತಿ ನೀಡಿದರು. ಆದರೆ ಕಬ್ಬಿಣಕ್ಕೆ ತುಂಗಭದ್ರಾ ಬೋರ್ಡ್ ಎನ್ನುವ ಬರಹವನ್ನು ಹಳದಿ ಬಣ್ಣದಿಂದ ಬರದ ವ್ಯಕ್ತಿ ನಾನು ಎಂದರು.

ಭರತ್ ರೆಡ್ಡಿ ಆಪ್ತ ಸಿಂಧನೂರಿನ ಶಶಿ

ಕಾಂಗ್ರೇಸ್ ಮುಖಂಡ ಶಶಿ ಎನ್ನುವ ವ್ಯಕ್ತಿ ಕಾಂಗ್ರೆಸ್ ಪಕ್ಷದ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗ ಎನ್ನುವ ಅಂಶ ದೊರೆತಿದೆ. ಇನ್ನು ಈ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಸರ್ಕಾರ ನೀಡುವ ಅನ್ನ ಭಾಗ್ಯದ ಸಾರ್ವಜನಿಕರಿಗೆ ಉಚಿತವಾಗಿ ನೀಡಿದರೇ, ಶಶಿ ಎನ್ನುವ ಕಾಂಗ್ರೇಸ್ ಮುಖಂಡ ಶಶಿ ಅಕ್ಕಿ ದಂದೆಯಲ್ಲಿ ನಿಂತು ಶಾಸಕ ಹೆಸರು ಹೇಳಿಕೊಂಡು ಹಗಲು ದರೋಡೆ ಮಾಡುತ್ತಿದ್ದಾನೆ.

ಪೊಲೀಸ್ ಇಲಾಖೆ ಮತ್ತು ಆಹಾರ ಇಲಾಖೆ ಏಕೆ ? ಮೌನರಾಗಿದ್ದಾರೆ ಅವರಿಗೆ ಶಾಸಕರ ಒತ್ತಡ ಇದೆಯೇ ?
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸಹಾಯಕ ‘ಲಕ್ಷ್ಮೀ ನಾರಾಯಣ ಶಾಸ್ತ್ರಿ’ ಸಹ ಈ ಕಬ್ಬಿಣ ಕಳ್ಳತನ ವ್ಯವಹಾರದಲ್ಲಿ ಭಾಗಿಯಾಗಿ ಶಶಿ ಎನ್ನುವ ಮುಖಂಡನಿಗೆ ಸಹಕಾರ ನೀಡುತ್ತಿದ್ದಾನೆ. ರಾತ್ರೋರಾತ್ರಿ ಕಬ್ಬಿಣವನ್ನು ಬಿಸಾಡಲು ಸಹ ಸಹಕಾರ ನೀಡಿದ್ದಾನೆ. ಇನ್ನು ಈ ವಿಚಾರವಾಗಿ ‘ಸುದ್ದಿದಿನ’ ವೆಬ್ ನಲ್ಲಿ ವಿಶೇಷ ವರದಿಗಾರರು ದೂರವಾಣಿ ಮೂಲಕ ಕರೆ ಮಾಡಿದ್ರೇ ಅವರು ಸ್ವೀಕರಿಸಲಿಲ್ಲ.

ಇನ್ನು ಗ್ಯಾಸ್ ವೆಲ್ಡರ್ ಬಶೀರ್ ನನ್ನು ನಾರಾ ಭರತ್ ರೆಡ್ಡಿ ಆಪ್ತ ಕಾಂಗ್ರೇಸ್ ಯುವ ಮುಖಂಡ ಕೊಳಗಲ್ಲು ಧರ್ಮರೆಡ್ಡಿ ಗ್ರಾಮೀಣ ಠಾಣೆಗೆ ಬಂದು ಶಾಸಕ ನಾರಾ ಭರತ್ ರೆಡ್ಡಿ ಅವರು ಹೇಳಿದ್ದಾರೆ ಅವರನ್ನು ಬಿಟ್ಟು ಕಳಿಸಿ ಎನ್ನುವ ಮಾಹಿತಿಯ ಪೊಲೀಸ್ ಠಾಣೆಯ ಎಸ್.ಬಿ ( spacial Branch) ಅವರ ಮೂಲಕ ಹೋಗಿದ್ದಾರೆ. ಇನ್ನು ಪೋಲೀಸರು ಧರ್ಮರೆಡ್ಡಿ ಮತ್ತು ಬಶೀರ್ ಇಬ್ಬರು ನಿಲ್ಲಿಸಿ ಪೋಟೊ ತೆಗೆಸಿ ಪತ್ರ ಬರೆಸಿಕೊಂಡು,ಸಹಿ ಮಾಡಿಸಿ ಕಳಿಸಿದ್ದಾರೆ.

ಇನ್ನು ಜಿಲ್ಲಾಧಿಕಾರಿ ಪ್ರಶಾಂತ ಕುಮಾರ್ ಮಿಶ್ರ ಅವರು ತುಂಗಭದ್ರಾ ಬೋರ್ಡ್ ಅಧಿಕಾರಿ ಕೆಂಚಪ್ಪ ಹಾಗೂ ಸರ್ಕಾರಿ ಪಿಎ ಲಕ್ಷ್ಮೀ ನಾರಾಯಣಶಾಸ್ತ್ರಿ ವಿರುದ್ಧ ಯಾವ ? ರೀತಿಯ ಕ್ರಮ ತೆಗದುಕೊಳ್ಳುತ್ತಾರೋ ಕಾದು ನೋಡಬೇಕಿದೆ.

ಒಟ್ಟಾರೆಯಾಗಿ “ಸುದ್ದಿದಿನ” ವೆಬ್ ಪ್ರಕಟಿಸಿ ವರದಿಗೆ ಫಲಶೃತಿ ದೊರೆತಿದೆ. ಇನ್ನು ಈ ರಾಜಕೀಯ ವ್ಯಕ್ತಿಯ ಬೆಂಬಲಿಗರು ಯಾರು ? ಅವರ ವಿರುದ್ಧ ಕೇಸ್ ಮಾಡುತ್ತಾರೋ ಇಲ್ಲವೋ ಎನ್ನುವ ಅಂಶ ಪೊಲೀಸ್ ಇಲಾಖೆ ಉತ್ತರಿಬೇಕಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending