ದಿನದ ಸುದ್ದಿ

ಕಿಚ್ಚ ಸುದೀಪರಿಂದ ಕನ್ನಡ ಬಾವುಟಕ್ಕೆ ಅವಮಾನದ ಆರೋಪ; ಕ್ಷಮೆ ಕೇಳಲು ಸಂಘಟನೆಯ ಆಗ್ರಹ

Published

on

ಸುದ್ದಿದಿನ ಬೆಂಗಳೂರು: ಸ್ಯಾಂಡಲ್’ವುಡ್’ನಲ್ಲಿ ಸಕತ್ ಸದ್ದು ಕಿಚ್ಚ ಸುದೀಪ- ಶಿವ ರಾಜಕುಮಾರ್ ಅಭಿನಯದ ‘ದಿ ವಿಲನ್’ ಚಿತ್ರದಲ್ಲಿ ಕಿಚ್ಚ ಸುದೀಪ ಕನ್ನಡ ಬಾವುಟಕ್ಕೆ ಅ‌ವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಮುಂದಿನ ಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಆರೋಪಿಸಿ ಕನ್ನಡ ಸಂಘಟನೆಯೊಂದು ದೂರು ದಾಖಲಿಸಿದೆ.

ಕಳೆದ ತಿಂಗಳು ಬಿಡುಗಡೆಯಾಗಿ ಭಾರಿ ಸದ್ದು ಮಾಡಿದ್ದ ‘ದಿ ವಿಲನ್’ ಚಿತ್ರದಲ್ಲಿ ಕಿಚ್ಚ ಸುದೀಪ ಅವರು ಸೊಂಟಕ್ಕೆ ಕನ್ನಡ ಬಾವುಟ ಕಟ್ಟಿಕೊಂಡು ಕನ್ನಡಕ್ಕೆ ಅವಮಾನ ಮಾಡಲಾಗಿದೆ. ನಿರ್ದೇಶಕ ಪ್ರೇಮ ಮತ್ತು ಸುದೀಪ ಅವರು ಕ್ಷಮೆ ಕೇಳಬೇಕು ಎಂದು ಆರೋಪಿಸಿ ನಿರ್ದೇಶಕ ಪ್ರೇಮ ಮತ್ತು ಸುದೀಪ ವಿರುದ್ಧ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ದೂರು ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Trending

Exit mobile version