Connect with us

ದಿನದ ಸುದ್ದಿ

ಜನವರಿ 1 ರಂದು ಸುಕೋ ಬ್ಯಾಂಕ್ ‘ರಜತ ಸಂಭ್ರಮ’ : ಮೋಹಿತ್ ಮಸ್ಕಿ

Published

on

ಸುದ್ದಿದಿನ,ಬಳ್ಳಾರಿ: ಸುಕೋ ಬ್ಯಾಂಕ್ ಅಧ್ಯಕ್ಷರಾದ ಶ್ರೀ ಮೋಹಿತ್ ಮಸ್ಕಿ ಅವರು ಸುಕೋ ಬ್ಯಾಂಕ ಕ್ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಸುಕೋ ಬ್ಯಾಂಕ್’ ತನ್ನ ಇಪ್ಪತ್ತೈದು ವರ್ಷಗಳ ಸಾರ್ಥಕ ಸೇವೆಯನ್ನು ಸಲ್ಲಿಸಿ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಹಿನ್ನಲೆಯಲ್ಲಿ ಜನವರಿ 1, 2019 ರಿಂದ ವರ್ಷಪೂರ್ತಿ ತನ್ನ ಎಲ್ಲಾ ಶಾಖೆಗಳಲ್ಲಿ `ರಜತ ಸಂಭ್ರಮ’ವನ್ನು ಆಚರಿಸಲಿದೆ.

ಜನವರಿ 5ರ ಶನಿವಾರ ಬೆಳಗ್ಗೆ 6 ಗಂಟೆಗೆ `ರಜತ ಸಂಭ್ರಮ’ ಪ್ರಾರಂಭವಾಗಲಿದೆ. ರಜತ ಸಂಭ್ರಮ ಆಚರಣೆಯ ಅಂಗವಾಗಿ `ಸುಸ್ಥಿರ ಕೃಷಿ’ಗಾಗಿ ಮ್ಯಾರಥಾನ್ ಓಟ ಬೆಳಗ್ಗೆ 6 ಗಂಟೆಗೆ. ಮಧ್ಯಾಹ್ನ 12 ಗಂಟೆಗೆ ಬರಗೆದ್ದ ಕೃಷಿಕರ ಜೊತೆ ಜಿಲ್ಲಾ ಪಂಚಾಯಿತಿಯ `ನಜೀರ್‍ಸಾಬ್’ ಸಭಾಂಗಣದಲ್ಲಿ ಸಂವಾದ. `ಫುಡ್ ಟ್ಯಾಲೆಂಟ್ ಹಂಟ್ ಫಾರ್ ಸ್ಟಾರ್ಟ್‍ಅಪ್’ ಹಿನ್ನಲೆಯಲ್ಲಿ ಉತ್ತರ ಕರ್ನಾಟಕದ ಮರೆಯಾದ ಖಾದ್ಯಗಳು ಮತ್ತು ಸಿರಿಧಾನ್ಯ ಖಾದ್ಯಗಳ ತಯಾರಿಕೆ, ಪ್ರದರ್ಶನ ಮತ್ತು ಕಡ್ಢಾಯ ಮಾರಾಟವನ್ನು ಬಸವಭವನದಲ್ಲಿ ಸಂಜೆ 6 ಗಂಟೆಗೆ. ಸಭಾಂಗಣದಲ್ಲಿ `ಸುಕೃತ ಕೃಷಿ’ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು `ಸುಕೋ ಸಂಗೀತ ಸಂಭ್ರಮ’ ಜಿûೀ ಟಿ.ವಿ ಯ ಸರೆಗಮಪದಲ್ಲಿ ವಿಜೇತರಾದ ಖ್ಯಾತ ಬಾಲ ಕಲಾವಿದರಿಂದ ನಡೆಯಲಿದೆ.

ಸುಸ್ಥಿರ ಕೃಷಿಗಾಗಿ ಸಾವಿರದ ಓಟ:-`ಸುಸ್ಥಿರ ಕೃಷಿ’ಗಾಗಿ ಧ್ಯೇಯವಾಕ್ಯದ ಅಡಿ ನಡೆಯುವ ಮ್ಯಾರಥಾನ್, ಜನವರಿ 5ರ ಶನಿವಾರ, ಬೆಳಗ್ಗೆ 6:15 ಗಂಟೆಗೆ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಿಂದ ಪ್ರಾರಂಭ. ಗಡಿಗಿ ಚೆನ್ನಪ್ಪ ವೃತ್ತ, ರೈಲ್ವೆ ನಿಲ್ದಾಣ, ಎಚ್‍ಆರ್ ಗವಿಯಪ್ಪ ವೃತ್ತದಲ್ಲಿಯ ಶ್ರೀಬಸವೇಶ್ವರ ಪ್ರತಿಮೆ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ (ಓವರ್‍ಬ್ರಿಡ್ಜ್), ಬಸವನಕುಂಟೆ ಸರ್ಕಲ್, ವಾಲ್ಮೀಕಿ ವೃತ್ತ (ಎಸ್.ಪಿ. ಸರ್ಕಲ್) ಮೂಲಕ ಶ್ರೀಕನಕ ದುರ್ಗಮ್ಮ ದೇವಸ್ಥಾನದ ಆವರಣದಲ್ಲಿ ವಿರಾಮಗೊಳ್ಳಲಿದೆ.

ಕರ್ನಾಟಕದ ಕೃಷಿಸಾಧಕರು, ರೈತರು, ಸುಕೃತ ಕೃಷಿ ಪ್ರಶಸ್ತಿ ಪುರಸ್ಕøತರು, ಪ್ರಗತಿಪರರು, ಕೃಷಿ ತಜ್ಞರು, ವಿದ್ಯಾರ್ಥಿಗಳು ಮತ್ತು ನಗರವಾಸಿಗಳು ಸೇರಿ ಓಟದಲ್ಲಿ 1000ಕ್ಕೂ ಹೆಚ್ಚು ಜನ ಓಟಗಾರರು ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ. 14 ವರ್ಷ ಮೇಲ್ಪಟ್ಟವರು ಓಟದಲ್ಲಿ ಪಾಲ್ಗೊಳ್ಳಲು ಮುಕ್ತ ಅವಕಾಶ. ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ ರೂಪಾಯಿ 25,000, ದ್ವಿತೀಯ ರೂಪಾಯಿ 15,000 ಮತ್ತು ತೃತೀಯ ರೂಪಾಯಿ 10000 ಬಹುಮಾನ ನೀಡಲಾಗುತ್ತದೆ.

ಬರಗೆದ್ದ’ ಕೃಷಿಕರೊಂದಿಗೆ ಕೃಷಿ ಸಚಿವರ ಸಂವಾದ : ನಜೀರ್‍ಸಾಬ್ ಸಭಾಂಗಣ, ಜಿಲ್ಲಾ ಪಂಚಾಯಿತಿ, ಬಳ್ಳಾರಿ. ಸಮಯ : ಮಧ್ಯಾಹ್ನ 12 ಗಂಟೆಗೆ. ಬಳ್ಳಾರಿ ಜಿಲ್ಲಾ ಪಂಚಾಯಿತಿಯ ನಜೀರ್‍ಸಾಬ್ ಸಭಾಂಗಣದಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯಿಂದ `ಬರಗೆದ್ದ ಕೃಷಿಕರ ಜೊತೆ ಸಂವಾದ’. ಸುಕೋ ಬ್ಯಾಂಕ್ ಪ್ರಾಯೋಜಿತ `ಸುಕೃತ ಕೃಷಿ’ ಪ್ರಶಸ್ತಿ ಸಂಚಾಲನ ಸ್ವತಂತ್ರ ಸಮಿತಿಯು ಕರ್ನಾಟಕ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯದೇ, ಸ್ವಯಂ ಶ್ರಮ.ಹಾಗೂ ಛಲದಿಂದ ಕೃಷಿಯಲ್ಲಿ ಯಶಸ್ವನ್ನು ಸಾಧಿಸಿ, ನಾಡಿನ ಕೃಷಿಕರಿಗೆ ಮಾದರಿಯಾಗಿ, ಅನೇಕರಿಗೆ ಮಾರ್ಗದರ್ಶನ ನೀಡುತ್ತಿರುವ ಬರಗೆದ್ದ ಅನೇಕ ರೈತರನ್ನು ಭೇಟಿ ಮಾಡಿ, 45 ಸಾಧಕರನ್ನು ಗುರುತಿಸಿ, ಸಂವಾದಕ್ಕೆ ಆಯ್ಕೆ ಮಾಡಿದೆ.

ಈ ಸಾಧಕರು ಕೃಷಿಯನ್ನು ಆಯ್ಕೆ ಮಾಡಿಕೊಂಡಿದ್ದರ ಹಿನ್ನಲೆ, ಶ್ರಮ, ಗುರಿ ತಲುಪಿದ ಯೋಜನೆ (ಪ್ಲಾನಿಂಗ್), ಯಶಸ್ಸು, ಎದುರಿಸಿದ ಸವಾಲುಗಳು, ಗುರಿ ತಲುಪಿದಾಗ ಸಿಕ್ಕ ಸಮಾಧಾನ ಇನ್ನಿತರೆಗಳ ಬಗ್ಗೆ ಮನದಾಳದ ಮಾತುಗಳ ಮೂಲಕ ತಮ್ಮ ಅನುಭವವನ್ನು ಸಂವಾದದಲ್ಲಿ ಹಂಚಿಕೊಳ್ಳಲಿದ್ದಾರೆ. ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಈ ಸಾಧಕರ ಶ್ರಮ ಮತ್ತು ಸಾಧನೆಯನ್ನು ನಾಡಿಗೆ ಪರಿಚಯಿಸುವ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ `ಸುಕೋ ಬ್ಯಾಂಕ್’ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ಪರೋಕ್ಷವಾಗಿ ಸೇವೆ ಸಲ್ಲಿಸುತ್ತಿರುವುದು ಸಂತೋಷದ ವಿಷಯ. `ಫುಡ್ ಟ್ಯಾಲೆಂಟ್ ಹಂಟ್ ಫಾರ್ ಸ್ಟಾರ್ಟ್‍ಅಪ್’
(ಆಹಾರ ಪ್ರತಿಭಾನ್ವೇಷಣೆಯಿಂದ ಉದ್ದಿಮೆಯತ್ತ)
ಅಡುಗೆ ಮನೆಗೆ ಸೀಮಿತವಾಗಿದ್ದ ಆಹಾರ ತಯಾರಿಸುವ ಪ್ರತಿಭೆಗಳನ್ನು ಉದ್ಯಮಿಗಳನ್ನಾಗಿ ರೂಪಾಂತರ ಮಾಡುವಲ್ಲಿ `ಸುಕೋ ಬ್ಯಾಂಕ್’ ಉತ್ತರ ಕರ್ನಾಟಕದ ಮರೆತುಹೋದ ತಿಂಡಿಗಳು ಮತ್ತು `ಸಿರಿಧಾನ್ಯ’ ಖಾದ್ಯಗಳ ತಯಾರಿಕೆಯ ಸ್ಪರ್ಧೆ – ಪ್ರದರ್ಶನ ಮತ್ತು ಕಡ್ಢಾಯ ಮಾರಾಟ ಮೇಳವನ್ನು, ಬಸವಭವನದಲ್ಲಿ ಸಂಜೆ 6 ಗಂಟೆಗೆ ಏರ್ಪಡಿಸಿದೆ ಎಂದರು.‌

ಸುಕೋ ಬ್ಯಾಂಕ್ ಕಾರ್ಯನಿರ್ವಹಿಸುವ 11 ಜಿಲ್ಲೆಗಳಲ್ಲಿ ಎರೆಡು ವಿಭಾಗಗಳಲ್ಲಿ (ಉತ್ತರ ಕರ್ನಾಟಕದ ಮರೆತುಹೋದ ಖಾದ್ಯಗಳು ಮತ್ತು ಸಿರಿಧಾನ್ಯ ಖಾದ್ಯಗಳು) ಸ್ಪರ್ಧೆ ನಡೆಯಲಿದೆ. ಸ್ಪರ್ಧಾಳುಗಳು ಎರೆಡೂ ವಿಭಾಗಗಳಲ್ಲಿ ಸ್ಪರ್ಧಿಸಲು ಅವಕಾಶವಿದೆ. ಸ್ಪರ್ಧೆಯು ಮೊದಲ ಹಂತದಲ್ಲಿ ಜಿಲ್ಲಾ ಮಟ್ಟದಲ್ಲಿ ನಡೆದು, ಕೊನೆಯ ಸುತ್ತಿನಲ್ಲಿ ಮೆಗಾ ಫೈನಲ್ (ಬಳ್ಳಾರಿಯಲ್ಲಿ) ನಡೆಯಲಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡದವರು, ಮೆಗಾ ಫೈನಲ್‍ಗೆ ಆಯ್ಕೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ರೂಪಾಯಿ 10,000, ದ್ವಿತೀಯ ರೂಪಾಯಿ 7500 ಮತ್ತು ತೃತೀಯ ಬಹುಮಾನವಾಗಿ ರೂಪಾಯಿ 5000 ನೀಡಲಾಗುತ್ತದೆ. ಮೆಗಾ ಫೈನಲ್‍ನಲ್ಲಿ ಪ್ರಥಮ ಬಹುಮಾನ ರೂಪಾಯಿ 25,000, ದ್ವಿತೀಯ ಬಹುಮಾನ ರೂಪಾಯಿ 15,000 ಮತ್ತು ತೃತೀಯ ಬಹುಮಾನವಾಗಿ ರೂಪಾಯಿ 10,000. ಸ್ಪರ್ಧೆಯಲ್ಲಿ ಭಾಗವಹಿಸುವ ಆಸಕ್ತಿಯುಳ್ಳವರು ಹತ್ತಿರದ ಸುಕೋ ಬ್ಯಾಂಕ್ ಶಾಖೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬಹುದಾಗಿದೆ.

ಈ ಮೂಲಕ ಪ್ರತಿಭಾನ್ವಿತ ಅಡುಗೆ ತಯಾರಿಕರನ್ನು ಪ್ರೋತ್ಸಾಹಿಸಿ, ಉದ್ಯಮ ಕ್ಷೇತ್ರಕ್ಕೆ ಪರಿಚಯ ಮಾಡಿ, ಆಹಾರ ಉದ್ಯಮದಲ್ಲಿ ಭದ್ರವಾಗಿ ನೆಲೆಯೂರಲು ಅಗತ್ಯ ತಾಂತ್ರಿಕ ಮತ್ತು ಆಡಳಿತಾತ್ಮಕ ನೆರವು ನೀಡುವ ಜವಾಬ್ದಾರಿ `ಸುಕೋ ಬ್ಯಾಂಕ್’ನದ್ದು. ಒಂದರ್ಥದಲ್ಲಿ ಪ್ರತಿಭಾನ್ವೇಷಣೆಯ ಜೊತೆ ಜೊತೆಯಲ್ಲಿ ಉದ್ಯಮಿಗಳಾಗುವ ಹೊಸ ಕನಸನ್ನು ಮೂಡಿಸುವ ಜವಾಬ್ದಾರಿಯುತ ಪ್ರಯತ್ನ ಸುಕೋ ಬ್ಯಾಂಕ್‍ನದ್ದಾಗಿದೆ.
ಜಿಲ್ಲಾವಾರು ಮತ್ತು ಮೆಗಾ ಫೈನಲ್‍ನ ಎಲ್ಲಾ ಸ್ಪರ್ಧೆಗಳಲ್ಲೂ ಜನಪ್ರಿಯ ನಟ, ಸಿಹಿಕಹಿ ಚಂದ್ರು ಪ್ರಮುಖ ತೀರ್ಪುಗಾರರು. ಮತ್ತು ಸಮನ್ವಯ ತೀರ್ಪುಗಾರರಾಗಿ ಮರ್ಚೇಡು ಮಲ್ಲಿಕಾಜುನಗೌಡ ಅವರು ಕಾರ್ಯನಿರ್ವಹಿಸಲಿದ್ದಾರೆ.
`ಸುಕೃತ ಕೃಷಿ’ ಪ್ರಶಸ್ತಿ ಮತ್ತು ಸುಕೋ ಸಂಗೀತ

ಸಂಭ್ರಮ:- ಸುಕೃತ ಕೃಷಿ ಪ್ರಶಸ್ತಿ ಸಂಚಾಲನಾ ಸಮಿತಿ ಆಯ್ಕೆ ಮಾಡಿರುವ, ನಾಡಿನ ದಿಕ್ಸೂಚಿ ಆಗಿರುವ ಓರ್ವ ಕೃಷಿಕರು ಮತ್ತು ಓರ್ವ ಕೃಷಿ ತಂತ್ರಜ್ಞಾನ ಸಾಧಕರಿಗೆ ಬಸವಭವನದ ವೇದಿಕೆಯಲ್ಲಿ ಪ್ರಶಸ್ತಿ ಪ್ರದಾನ. ಪ್ರಶಸ್ತಿಯು ಒಂದು ಲಕ್ಷ ರೂಪಾಯಿ, ಪಾರಿತೋಷಕ ಮತ್ತು ಅಭಿನಂದನೆಯ ಪ್ರಶಂಸಾ ಪತ್ರವನ್ನು ಒಳಗೊಂಡಿರುತ್ತದೆ. ಈಬಾರಿಯ `ಸುಕೃತ ಕೃಷಿ’ ಪ್ರಶಸ್ತಿ ಪುರಸ್ಕøತರ ಹೆಸರುಗಳನ್ನು ಸುಕೃತ ಪ್ರಶಸ್ತಿ ಸಂಚಾಲನಾ ಸಮಿತಿ ಶೀಘ್ರದಲ್ಲೇ ಪ್ರಕಟಿಸಲಿದೆ. ಕೃಷಿ ಸಾಧಕರ ಕುರಿತು ಸಾಕ್ಷ್ಯಚಿತ್ರ ಮತ್ತು ಪುಸ್ತಕವನ್ನು ಪ್ರಕಟಿಸಲಾಗುತ್ತದೆ. ಕಳೆದ ಬಾರಿ ಸುಕೃತ ಕೃಷಿ ಪ್ರಶಸ್ತಿ ಸಂಚಾಲನಾ ಸಮಿತಿಯು ‘ಉತ್ತಮ ಕೃಷಿಕ’ ಪ್ರಶಸ್ತಿಯನ್ನು ಸಾಗರದ ಶ್ರೀ ಮುತ್ತಣ್ಣ ಪೂಜಾರ್ ಅವರಿಗೆ ‘ಉತ್ತಮ ಕೃಷಿ ತಂತ್ರಜ್ಞಾನ’ ಪ್ರಶಸ್ತಿಯನ್ನು ಶಿರಸಿಯ ಶ್ರೀ ಲಕ್ಷ್ಮೀ ನಾರಾಯಣ ಹೆಗಡೆ ಅವರಿಗೆ ಪ್ರದಾನ ಮಾಡಲಾಗಿತ್ತು. ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು. ಪ್ರತೀ ಸಲ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ಮಾತ್ರ ಸುಕೋ ಬ್ಯಾಂಕ್ ನಿರ್ಧರಿಸಲಿದ್ದು, ವಿಜೇತರನ್ನು ನಿರ್ಧರಿಸುವುದು ಹಾಗೂ ಅವರ ಬಗ್ಗೆ ಸಾಕ್ಷ್ಯ ಚಿತ್ರ, ಪುಸ್ತಕಗಳನ್ನು ಪ್ರಕಟಿಸುವುದು ಕೃಷಿ ಪ್ರಶಸ್ತಿ ಸಂಚಾಲನಾ ಸ್ವತಂತ್ರ ಸಮಿತಿಯ ಜವಾಬ್ದಾರಿಯಾಗಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಜಿ. ಟಿ.ವಿ.ಯ ಸರಿಗಮಪ ಸರಣಿಯಲ್ಲಿ ವಿಜೇತರಾದ ಬಾಲ ಕಲಾವಿದರಾದ ಶ್ರೀ ಜ್ಞಾನೇಶ್, ಕು. ಪ್ರಕೃತಿ ರೆಡ್ಡಿ ಹಾಗೂ ಶ್ರೀ ವಿಶ್ವ ಪ್ರಸಾದ್ ಅವರು ಸುಕೋ ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದು ಹೇಳಿದರು. ಮ್ಯಾನೇಜಿಂಗ್ ಡೈರೆಕ್ಟರ್ ಪರಿಮಾಳಚಾರ್ ಅಗ್ನಿಹೋತ್ರಿ, ಬೋರ್ಡ್ ಸೆಕ್ರೆಟರಿ ವೆಂಕಟೇಶ ರಾವ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

Published

on

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಮನ್ವಯದಲ್ಲಿ ಅಣಕು ಅಭ್ಯಾಸವು ನಡೆಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ15 hours ago

ನಾಳೆ ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆ ಅಣುಕು ಅಭ್ಯಾಸ

ಸುದ್ದಿದಿನ, ಹರಿಹರ :ಇದೇ 14 ರಂದು ಗುರುವಾರ (ನಾಳೆ) ಹರಿಹರ ರೈಲು ನಿಲ್ದಾಣದಲ್ಲಿ ವಾರ್ಷಿಕ ವಿಪತ್ತು ನಿರ್ವಹಣೆಯ ಅಣುಕು ಅಭ್ಯಾಸವನ್ನು ಬೆಳಗ್ಗೆ 8:30 ಕ್ಕೆ ನಡೆಸಲಿದೆ ಎಂದು...

ದಿನದ ಸುದ್ದಿ20 hours ago

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ...

ದಿನದ ಸುದ್ದಿ1 day ago

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ...

ದಿನದ ಸುದ್ದಿ2 days ago

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ...

ದಿನದ ಸುದ್ದಿ2 days ago

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ...

ಅಂಕಣ2 days ago

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ...

ದಿನದ ಸುದ್ದಿ3 days ago

ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ...

ದಿನದ ಸುದ್ದಿ3 days ago

ಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ ಮಹಿಳಾ ಕಾಲೇಜು ಹಾಗೂ ಹಳೆಬಿಸಲೇರಿ ಗ್ರಾಮದ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಹಳೆಬಿಸಲೇರಿ ಗ್ರಾಮದಲ್ಲಿ ಆಯೋಜಿಸಲಾದ 5ನೇ ದಿನದ ಸಂಜೆ...

ದಿನದ ಸುದ್ದಿ3 days ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ವತಿಯಿಂದ 2025–26ನೇ ಸಾಲಿನ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ದಿನಾಂಕ 09-05-2026ರಂದು ಬೆಳಿಗ್ಗೆ 11.30 ಗಂಟೆಗೆ...

ದಿನದ ಸುದ್ದಿ3 days ago

2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ,...

Trending